ಕ್ರೈಂ

ಬೆಳ್ತಂಗಡಿ: ಕಾಡಾನೆ ತಿವಿದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಆನೆ ತಿವಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ಸೌತಡ್ಕದ ಗುಂಡಿ ಎಂಬಲ್ಲಿ ನಡೆದಿದೆ. ಇಲ್ಲಿನ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂಬವರು ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಆನೆಯು ಸೊಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಅವರು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಸೌತಡ್ಕದ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂದು ತಿಳಿದುಬಂದಿದೆ. ಬೆಳ್ಳಂಬೆಳ್ಳಗೆ ಎರಡು ಆನೆಗಳು ಗೇರು ಪ್ಲಾಂಟೇಶನ್ ನಲ್ಲಿ ತಿರುಗಾಡುತ್ತಿದ್ದು ಕಂಡುಬಂದಿದೆ. ಸ್ಥಳಕ್ಕೆ […]

ಬೆಳ್ತಂಗಡಿ: ಕಾಡಾನೆ ತಿವಿದು ವ್ಯಕ್ತಿ ಸಾವು Read More »

ಕಾರ್ಕಳ ಶಾಸಕ, ಮಾಜಿ ಸಚಿವ ವಿ.ಸುನೀಲ್ ಕುಮಾರ್ ಗೆ ಪಿತೃವಿಯೋಗ

ಸಮಗ್ರ ನ್ಯೂಸ್: ಬಿಜೆಪಿ ಶಾಸಕ ಸುನಿಲ್ ಕುಮಾರ್‌ಗೆ ಪಿತೃ ವಿಯೋಗವಾಗಿದೆ. ಅವರ ತಂದೆ ಕೆ.ಎಂ. ವಾಸುದೇವ (87) ಅವರು ಮುಂಜಾನೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗಷ್ಟೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ತೀವ್ರ ನಿಗಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ವಿವಿಧ ಹುದ್ದೆಗಳನ್ನು

ಕಾರ್ಕಳ ಶಾಸಕ, ಮಾಜಿ ಸಚಿವ ವಿ.ಸುನೀಲ್ ಕುಮಾರ್ ಗೆ ಪಿತೃವಿಯೋಗ Read More »

ಬೆಂಗಳೂರು ಕಾಲ್ತುಳಿತಕ್ಕೆ‌ RCB, ವಿರಾಟ್ ಕೊಹ್ಲಿಯೇ ಕಾರಣ| ಕರ್ನಾಟಕ ಸರ್ಕಾರದಿಂದ ವರದಿ

ಸಮಗ್ರ ನ್ಯೂಸ್: 11 ಜನರ ಸಾವಿಗೆ ಕಾರಣವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಅವರಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಕಾರಣ ಎಂದು ಕರ್ನಾಟಕ ಸರ್ಕಾರದ ವರದಿ ಹೇಳುತ್ತಿದೆ. ಬೆಂಗಳೂರು ಕಾಲ್ತುಳಿತಕ್ಕೆ ಕರ್ನಾಟಕ ಸರ್ಕಾರ ಆರ್‌ಸಿಬಿಯನ್ನು ದೂಷಿಸಿದ್ದು, ಇದೇ ವರದಿಯಲ್ಲಿ ವಿರಾಟ್ ಕೊಹ್ಲಿ ಹೆಸರನ್ನೂ ಉಲ್ಲೇಖಿಸಲಾಗಿದೆ. ಕ್ರೀಡಾಂಗಣದಲ್ಲಿ ವಿಜಯೋತ್ಸವದಲ್ಲಿ ಪಾಲ್ಗೊಳ್ಳುವಂತೆ ಅಭಿಮಾನಿಗಳನ್ವು ಆಹ್ವಾನಿಸಲಾಗಿತ್ತು. ಆದರೆ ಇದಕ್ಕೆ ತಂಡದ ಆಡಳಿತ ಮಂಡಳಿ ರಾಜ್ಯ ಸರ್ಕಾರವನ್ನಾಗಲೀ ಅಥವಾ ಪೊಲೀಸ್

ಬೆಂಗಳೂರು ಕಾಲ್ತುಳಿತಕ್ಕೆ‌ RCB, ವಿರಾಟ್ ಕೊಹ್ಲಿಯೇ ಕಾರಣ| ಕರ್ನಾಟಕ ಸರ್ಕಾರದಿಂದ ವರದಿ Read More »

ಧರ್ಮಸ್ಥಳ: ಸಾಕ್ಷಿದಾರ ಬಂದು ಗಂಟೆಗಟ್ಟಲೆ ಕಾದು ಕುಳಿತರೂ ಪೊಲೀಸರು ಬರಲಿಲ್ಲ| ಅನುಮಾನ ಹುಟ್ಟಿಸಿದ ಪೊಲೀಸರ ನಡೆ| ಎಸ್ಪಿ ನೀಡಿದ ಸ್ಪಷ್ಟನೆ ಏನು ಗೊತ್ತಾ?

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ನ್ಯಾಯಾಲಯ ದಲ್ಲಿ ಹೇಳಿಕೆ ನೀಡಿದ್ದ ಸಾಕ್ಷಿ ದೂರುದಾರ ಬುಧವಾರ ತಾನು ಹೂತು ಹಾಕಿದ್ದ ಮೃತದೇಹಗಳ ಬಗ್ಗೆ ಮಾಹಿತಿ ನೀಡಲು ತನ್ನ ವಕೀಲರೊಂದಿಗೆ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸಮೀಪ ಬಂದರೂ ಪೊಲೀಸರು ಸ್ಥಳ ಮಹಜರಿಗಾಗಿ ಬರಲಿಲ್ಲ. ಬುಧವಾರ ಮಧ್ಯಾಹ್ನ ಮೂರು ಗಂಟೆಯ ಸುಮಾರಿಗೆ ಬಂದ ಇವರು ನಾಲ್ಕು ಗಂಟೆಯ ಸುಮಾರಿಗೆ ಹಿಂತಿರುಗಿದ್ದಾರೆ. ಕಾರಿನಲ್ಲಿದ್ದ ವಕೀಲರು, ಸಾಕ್ಷಿ ದೂರುದಾರ ಕಾರಿನಿಂದ ಇಳಿಯದೆ ಮುಚ್ಚಿದ್ದ ವಾಹನದಲ್ಲಿಯೇ ಸುಮಾರು ಒಂದು ಗಂಟೆಯ

ಧರ್ಮಸ್ಥಳ: ಸಾಕ್ಷಿದಾರ ಬಂದು ಗಂಟೆಗಟ್ಟಲೆ ಕಾದು ಕುಳಿತರೂ ಪೊಲೀಸರು ಬರಲಿಲ್ಲ| ಅನುಮಾನ ಹುಟ್ಟಿಸಿದ ಪೊಲೀಸರ ನಡೆ| ಎಸ್ಪಿ ನೀಡಿದ ಸ್ಪಷ್ಟನೆ ಏನು ಗೊತ್ತಾ? Read More »

ಧರ್ಮಸ್ಥಳ: ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಕೇಸು ದಾಖಲು

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರುವ ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ ಯುಟ್ಯೂಬ‌ರ್ ಸಮೀ‌ರ್ ಎಂ.ಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ ಸಾಕ್ಷಿ ದೂರುದಾರರ ಬಗ್ಗೆ ಹಾಗೂ ಪ್ರಕರಣದ ಬಗ್ಗೆ ಇತರ ಹೆಚ್ಚಿನ

ಧರ್ಮಸ್ಥಳ: ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಕೇಸು ದಾಖಲು Read More »

ಬೆಂಗಳೂರು: ಶೀಲ ಶಂಕಿಸಿ ಪತಿಯಿಂದ ಪತ್ನಿಗೆ ಚೂರಿ ಇರಿತ| ಗಂಭೀರ ಸ್ಥಿತಿಯಲ್ಲಿ ‘ಅಮೃತಧಾರೆ’ ಧಾರಾವಾಹಿ ನಟಿ

ಸಮಗ್ರ ನ್ಯೂಸ್: ಬೆಳ್ಳಬೆಳಗ್ಗೆ ಕಿರುತೆರೆ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿಗೆ ಚಾಕು ಇರಿತ ಪ್ರಕರಣ ವರದಿಯಾಗಿದೆ. ಶೀಲ ಶಂಕಿಸಿ ಪತಿಯಿಂದಲೇ ನಟಿ ಚಾಕು ಇರಿತಕ್ಕೆ ಒಳಗಾಗಿದ್ದಾಳೆ. ಮಂಜುಳಾ ಅಲಿಯಾಸ್‌ ಶ್ರುತಿ ಚಾಕು ಇರಿತಕ್ಕೆ ಒಳಗಾದ ಕಿರುತೆರೆ ನಟಿ ಎಂದು ಗುರುತಿಸಲಾಗಿದೆ. ಕನ್ನಡದಲ್ಲಿ ಅಮೃತಧಾರೆ, ಸೇರಿದಂತೆ ಹಲವು ಸೀರಿಯಲ್ ಗಳಲ್ಲಿ ಶ್ರುತಿ ನಟಿಸಿದ್ದಾರೆ. ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್ ನಲ್ಲಿ ಘಟನೆ ನಡೆದಿದೆ. ಕಳೆದ ಜುಲೈ 4 ರಂದು ನಡೆದಿರುವ ಘಟನೆ ತಡವಾಗಿ

ಬೆಂಗಳೂರು: ಶೀಲ ಶಂಕಿಸಿ ಪತಿಯಿಂದ ಪತ್ನಿಗೆ ಚೂರಿ ಇರಿತ| ಗಂಭೀರ ಸ್ಥಿತಿಯಲ್ಲಿ ‘ಅಮೃತಧಾರೆ’ ಧಾರಾವಾಹಿ ನಟಿ Read More »

ಸುರತ್ಕಲ್: ಹೃದಯಾಘಾತಕ್ಕೆ ವಿದ್ಯಾರ್ಥಿ ಬಲಿ

ಸಮಗ್ರ ನ್ಯೂಸ್: ಸೋಮವಾರ(ಜು.೭) ಮಧ್ಯಾಹ್ನ ಸುರತ್ಕಲ್‌ನ ಕೃಷ್ಣಾಪುರ ಹಿಲ್‌ಸೈಡ್ ಬಳಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಮೃತರನ್ನು ಹಿಲ್‌ಸೈಡ್ ನಿವಾಸಿ ಅಸ್ಗರ್ ಅಲಿ ಅವರ ಪುತ್ರ ಅಫ್ತಾಬ್ (18) ಎಂದು ಗುರುತಿಸಲಾಗಿದೆ. ಈತ ಸುರತ್ಕಲ್‌ನಲ್ಲಿ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ. ವರದಿಯ ಪ್ರಕಾರ, ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಫ್ತಾಬ್ ಮನೆಯಲ್ಲಿ ಸ್ನಾನ ಮಾಡಲು ಹೋಗುತ್ತಿದ್ದಾಗ ಹೃದಯಾಘಾತದಿಂದ ಹಠಾತ್ತನೆ ಕುಸಿದು ಬಿದ್ದಿದ್ದಾನೆ. ಅಸ್ಗರ್ ಅಲಿಯ ನಾಲ್ವರು ಮಕ್ಕಳಲ್ಲಿ ಅಫ್ತಾಬ್

ಸುರತ್ಕಲ್: ಹೃದಯಾಘಾತಕ್ಕೆ ವಿದ್ಯಾರ್ಥಿ ಬಲಿ Read More »

ರಾಜ್ಯದಲ್ಲಿ ಒಂದೇ ದಿನ 11ಮಂದಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಠಾತ್ ಹೃದಯಾಘಾತ ಪ್ರಕರಣಗಳು ಮುಂದುವರಿದಿದ್ದು ನಿನ್ನೆ ಜು.7ರಂದು ಬರೋಬ್ಬರಿ 11 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತುಮಕೂರಿನಲ್ಲಿ ಹೃದಯಾಘಾತಕ್ಕೆ ಮೂವರು ಬಲಿಯಾಗಿದ್ದಾರೆ. ತುಮಕೂರಿನ ಹನುಮಂತಪುರದ ನಿವಾಸಿಗಳಾದ ಜಯಂತ್ (31) ಹಾಗೂ ಶ್ರೀಧರ್ (52) ಸೋಮವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಜಯಂತ್‌ಗೆ ಮನೆಯಲ್ಲಿ ಮಲಗಿದ್ದಾಗ ಎದೆ ನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಶ್ರೀಧರ್ ಟೀ ಕುಡಿದು ಮನೆಯಲ್ಲಿ ಕುಳಿತಿದ್ದಾಗ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕು

ರಾಜ್ಯದಲ್ಲಿ ಒಂದೇ ದಿನ 11ಮಂದಿ ಹೃದಯಾಘಾತದಿಂದ ಸಾವು Read More »

ಬಂಟ್ವಾಳ: ಮದುವೆ ನಿರಾಕರಿಸಿದ ಪ್ರಿಯತಮೆಯ ಇರಿದು ನೇಣಿಗೆ ಶರಣಾದ ಯುವಕ

ಸಮಗ್ರ ನ್ಯೂಸ್: ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಗೆ ಚಾಕುವಿನಿಂದ ಇರಿದು, ಆಕೆ ಮೃತಪಟ್ಟಳೆಂದು ಭಾವಿಸಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘೋರ ಘಟನೆ ಫರಂಗಿಪೇಟೆಯ ಸುಜೀರ್ ಮಲ್ಲಿ ಎಂಬಲ್ಲಿ ಇಂದು(ಜೂ.7) ನಡೆದಿದೆ. ಫರಂಗಿಪೇಟೆ ನಿವಾಸಿ ಕುಮಾರಿ ದಿವ್ಯಾ ಯಾನೆ ದೀಕ್ಷಿತಾ (26) ಹಲ್ಲೆಗೊಳಗಾದ ಯುವತಿಯಾಗಿದ್ದು, ಕೋಡ್ಮನ್ ಗ್ರಾಮದ ನಿವಾಸಿ ಸುಧೀರ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ದಿವ್ಯಾ ಮತ್ತು ಸುಧೀರ್ ಕಳೆದ ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಇತ್ತೀಚಿನ ಕೆಲವು ತಿಂಗಳುಗಳಿಂದ ಇಬ್ಬರ ನಡುವೆ ಮನಸ್ತಾಪ

ಬಂಟ್ವಾಳ: ಮದುವೆ ನಿರಾಕರಿಸಿದ ಪ್ರಿಯತಮೆಯ ಇರಿದು ನೇಣಿಗೆ ಶರಣಾದ ಯುವಕ Read More »

ರೇಣುಕಾ‌ಸ್ವಾಮಿ ಕೊಲೆ ಪ್ರಕರಣದ ರೀತಿಯ ಘಟನೆ| 17ವರ್ಷದ ಬಾಲಕಿ ಅರೆಸ್ಟ್

ಸಮಗ್ರ ನ್ಯೂಸ್: ಮಾಜಿ ಪ್ರಿಯಸಿಗೆ ಯುವಕನೊಬ್ಬ ಅಶ್ಲೀಲ ಮೆಸೇಜ್ ಕಳಿಸಿದ್ದಾನೆಂದು ಆತನನ್ನು ಕಿಡ್ನ್ಯಾಪ್ ಮಾಡಿ ನಿರ್ಜನ ಪ್ರದೇಶಕ್ಕೆ ಕರೆದೋಯ್ದು ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಂಧಿತ ಎಲ್ಲಾ ಆರೋಪಿಗಳನ್ನು ಜಾಮಿನಿನ ಮೇಲೆ ಬಿಡುಗಡೆ ಮಾಡಿದ್ದು, ಇನ್ನು 17 ವರ್ಷದ ಬಾಲಕಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ 17 ವರ್ಷದ ಬಾಲಕಿಯನ್ನು ಅರೆಸ್ಟ್ ಮಾಡಿದ್ದಾರೆ.

ರೇಣುಕಾ‌ಸ್ವಾಮಿ ಕೊಲೆ ಪ್ರಕರಣದ ರೀತಿಯ ಘಟನೆ| 17ವರ್ಷದ ಬಾಲಕಿ ಅರೆಸ್ಟ್ Read More »