ಕ್ರೈಂ

ಮಸೂದ್ ಹತ್ಯೆ ಪ್ರಕರಣ; ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ

ಸಮಗ್ರ ನ್ಯೂಸ್: ಗುಂಪಿನಿಂದ ಹಲ್ಲೆಗೊಳಗಾಗಿ ಸಾವಿಗೀಡಾದ ಬೆಳ್ಳಾರೆ ಠಾಣೆ ವ್ಯಾಪ್ತಿಯ ಕಳಂಜದ ಮಸೂದ್‌ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಎಲ್ಲಾ ಆರೋಪಿಗಳ ನ್ಯಾಯಾಂಗ ಕಸ್ಟಡಿಯನ್ನು ಆ. 29ರ ವರೆಗೆ ವಿಸ್ತರಿಸಿ ಸುಳ್ಯ ನಾಯಾಲಯ ಆದೇಶ ನೀಡಿದೆ. ಆರೋಪಿಗಳಾದ ಅಭಿಲಾಷ್‌, ಸುನಿಲ್‌ ಕೆ., ಸುಧೀರ್‌, ಶಿವಪ್ರಸಾದ್‌, ರಂಜಿತ್‌ ಬಿ., ಸದಾಶಿವ ಪೂಜಾರಿ, ರಂಜಿತ್‌, ಭಾಸ್ಕರ ಕೆ.ಎಂ. ಅವರ ಮೇಲೆ ಪ್ರಕರಣ ದಾಖಲಾಗಿದ್ದು, ನ್ಯಾಯಾಂಗ ಕಸ್ಟಡಿಯಲ್ಲಿದ್ದರು. ಮಂಗಳವಾರ ಕಸ್ಟಡಿಯ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮತ್ತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಮಸೂದ್ ಹತ್ಯೆ ಪ್ರಕರಣ; ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ Read More »

ಸಂಬಂಧಿಕರ ಮನೆಗೆಂದು ಹೊರಟ ಯುವತಿ ನಾಪತ್ತೆ

ಸಮಗ್ರ ನ್ಯೂಸ್: ಸಂಬಂಧಿಕರ ಮನೆಗೆ ಹೋಗಿ ಬರುವುದಾಗಿ ಮನೆಯಿಂದ ಹೊರಟ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರೈತಗಲ್ಲಿಯಲ್ಲಿ ನಡೆದಿದೆ. ಮೂಲತಃ ಬೆಂಗಳೂರಿನ ಆನೇಕಲ್ ತಾಲೂಕಿನ ಜಿಗಣಿ ಗ್ರಾಮದ ನಿವಾಸಿ ಜ್ಯೋತಿ ಹಿಕ್ಕಡಿ(20) ನಾಪತ್ತೆಯಾದ ಯುವತಿ ಎಂದು ತಿಳಿದು ಬಂದಿದೆ. ವಿಜಯಪುರ ಜಿಲ್ಲೆಯ ಮಾದಾಪಟ್ಟಣದಲ್ಲಿ ಜ್ಯೋತಿ ಅವರ ತಂದೆ ಶ್ರೀಶೈಲ ಹಿಕ್ಕಡಿ ವಾಸವಾಗಿದ್ದರು. ಕಳೆದ ಹದಿನೈದು ದಿನಗಳ ಹಿಂದೆಯಷ್ಟೇ ಬೆಳಗಾವಿ‌ ನಗರದ ರೈತ ಗಲ್ಲಿಯಲ್ಲಿ ತಮ್ಮ ಸಂಬಂಧಿಕರ‌ ಮನೆಗೆ ಬಂದಿದ್ದ ಯುವತಿ, ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದಾರೆ

ಸಂಬಂಧಿಕರ ಮನೆಗೆಂದು ಹೊರಟ ಯುವತಿ ನಾಪತ್ತೆ Read More »

ಹುಟ್ಟುಹಬ್ಬದ ಪಾರ್ಟಿಯಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ| ಪಾನೀಯದಲ್ಲಿ ಅಮಲು ಪದಾರ್ಥ ನೀಡಿ ಕೃತ್ಯ

ಸಮಗ್ರ ನ್ಯೂಸ್: ಹುಟ್ಟುಹಬ್ಬದ ಪಾರ್ಟಿಯಲ್ಲಿ ಯುವತಿಗೆ ನಿದ್ರಾಜನಕ ಬೆರೆಸಿದ ಪಾನೀಯ ಕುಡಿಸಿದ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣ ಗಾಝಿಯಾಬಾದ್ ಜಿಲ್ಲೆಯ ಮೋದಿ ನಗರದಲ್ಲಿ ನಡೆದಿದೆ. ಆರೋಪಿಗಳಾದ ಶೇಖರ್, ಕೃಷ್ಣ ಮತ್ತು ಅರ್ಜುನ್ ಎಂಬವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಯುವತಿ ರವಿವಾರ ರಾತ್ರಿ ಹುಟ್ಟುಹಬ್ಬದ ಪಾರ್ಟಿಯೊಂದಕ್ಕೆ ಹೋಗಿದ್ದಾಗ ಆಕೆಗೆ ನಿದ್ರಾಜನಕ ಬೆರೆಸಿದ ಪಾನೀಯ ನೀಡಲಾಗಿದೆ. ಬಳಿಕ ವ್ಯಕ್ತಿಯೊಬ್ಬ ಆಕೆಯನ್ನು ಕೊಠಡಿಗೆ ಕರೆದೊಯ್ದು ತನ್ನ ಸ್ನೇಹಿತರನ್ನೂ ಕರೆದು ಒಬ್ಬರ ಬಳಿಕ ಮತ್ತೊಬ್ಬರಂತೆ

ಹುಟ್ಟುಹಬ್ಬದ ಪಾರ್ಟಿಯಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ| ಪಾನೀಯದಲ್ಲಿ ಅಮಲು ಪದಾರ್ಥ ನೀಡಿ ಕೃತ್ಯ Read More »

ಪುತ್ತೂರು: ಕಾರಲ್ಲಿ ಅನುಮಾನಾಸ್ಪದ ಓಡಾಟ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿ ಪೊಲೀಸ್ ವಶ

ಸಮಗ್ರ ನ್ಯೂಸ್: ಮುಸ್ಲಿಂ ವ್ಯಕ್ತಿಯೊಬ್ಬ ಆಂಧ್ರಪ್ರದೇಶ ನೋಂದಣಿಯ ಕಾರ್ ಒಂದರಲ್ಲಿ ಇಂದು ಮುಂಜಾನೆಯಿಂದಲೇ ಅನುಮಾನಸ್ಪದವಾಗಿ ತಿರುಗಾಡಿಕೊಂಡಿದ್ದ ಘಟನೆ ಪುತ್ತೂರು ತಾಲೂಕಿನ ಎರಕ್ಕಳದಲ್ಲಿ ನಡೆದಿದ್ದು ಪುತ್ತೂರು ಗ್ರಾಮಾಂತರ ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದಾರೆ. ಇಂದು ಮುಂಜಾನೆಯಿಂದಲೇ ಎರಕ್ಕಳ ಪರಿಸರದಲ್ಲಿ ವಿಳಾಸ ಹುಡುಕುವ ನೆಪದಲ್ಲಿ ಓಡಾಡಿಕೊಂಡಿದ್ದು ಮೊಬೈಲ್ ಫೋನ್ ಒಂದನ್ನು ಖಾಲಿ ಜಾಗಕ್ಕೆ ಬಿದ್ದಿರುತ್ತದೆ. ವ್ಯಕ್ತಿಯ ಈ ನಡವಳಿಕೆ ಗಮನಿಸಿ ಅನುಮಾನಗೊಂಡು ಪೊಲೀಸರು ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮೇಲ್ನೋಟಕ್ಕೆ ಅನೈತಿಕ ಚಟುವಟಿಕೆಗಾಗಿ ಬಂದಿರುವ ಶಂಕೆ ವ್ಯಕ್ತವಾಗಿದೆ.

ಪುತ್ತೂರು: ಕಾರಲ್ಲಿ ಅನುಮಾನಾಸ್ಪದ ಓಡಾಟ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿ ಪೊಲೀಸ್ ವಶ Read More »

ಮಡಿಕೇರಿ: ಬಾಡಿಗೆ ಮನೆ ಸಿಗದಿರುವುದಕ್ಕೆ ದಯಾಮರಣಕ್ಕೆ ಅರ್ಜಿ ಸಲ್ಲಿಸಿದ ಮಂಗಳಮುಖಿ

ಸಮಗ್ರ ನ್ಯೂಸ್: ಬಾಡಿಗೆ ಮನೆ ಸಿಗದಿರುವುದಕ್ಕೆ ನೊಂದ ಮಂಗಳಮುಖಿ ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತನಗೆ ಯಾರೂ ಬಾಡಿಗೆ ಮನೆ ಕೊಡುತ್ತಿಲ್ಲ. ಹೀಗಾಗಿ ದಯಾಮರಣಕ್ಕೆ ಅನುಮತಿ ನೀಡಬೇಕು ಎಂದು ಕೊಡಗು ಜಿಲ್ಲಾಧಿಕಾರಿಗೆ ಮಂಗಳಮುಖಿ ಮನವಿ ಮಾಡಿದ್ದಾರೆ. ವಿಡಿಯೋ ಮೂಲಕ ತಮ್ಮ ಸಮಸ್ಯೆ ಹೇಳಿಕೊಂಡಿರುವ ಮಂಗಳಮುಖಿ, ನನಗೆ ಮನೆ ಬಾಡಿಗೆ ಕೊಡಲು ನಿರಾಕರಿಸಲಾಗುತ್ತಿದೆ. ಮನೆ ಖಾಲಿ ಇದ್ದರೂ ಕೂಡ ಇಲ್ಲವೆಂದು ಹೇಳಲಾಗುತ್ತಿದೆ. ಹಲವು ಬಾರಿ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಲಾಡ್ಜ್ ಗಳಲ್ಲಿ ದುಬಾರಿ ಹಣ ಕೊಡಬೇಕು. ಖರ್ಚು, ವೆಚ್ಚ

ಮಡಿಕೇರಿ: ಬಾಡಿಗೆ ಮನೆ ಸಿಗದಿರುವುದಕ್ಕೆ ದಯಾಮರಣಕ್ಕೆ ಅರ್ಜಿ ಸಲ್ಲಿಸಿದ ಮಂಗಳಮುಖಿ Read More »

ತೈಲ ಟ್ಯಾಂಕರ್ ಮತ್ತು ಬಸ್ ನಡುವೆ ಡಿಕ್ಕಿ| 20 ಪ್ರಯಾಣಿಕರು ಸಜೀವ ದಹನ

ಸಮಗ್ರ ನ್ಯೂಸ್: ಪ್ರಯಾಣಿಕರನ್ನು ಹೇರಿದ್ದ ಬಸ್ ಮತ್ತು ತೈಲ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 20 ಜನರು ಸಜೀವ ದಹನವಾಗಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ. ಲಾಹೋರ್‌ನಿಂದ ಸುಮಾರು 350 ಕಿ.ಮೀ ದೂರದಲ್ಲಿರುವ ಮುಲ್ತಾನ್‌ನಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಿಂದ ಹಲವು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಅತಿ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಲಾಹೋರ್‌ನಿಂದ ಕರಾಚಿಗೆ ಹೋಗುತ್ತಿದ್ದ ಬಸ್ ಮತ್ತು ತೈಲ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದ್ದು, 20 ಜನರು ಮೃತಪಟ್ಟಿದ್ದಾರೆ. ಡಿಕ್ಕಿಯ

ತೈಲ ಟ್ಯಾಂಕರ್ ಮತ್ತು ಬಸ್ ನಡುವೆ ಡಿಕ್ಕಿ| 20 ಪ್ರಯಾಣಿಕರು ಸಜೀವ ದಹನ Read More »

ಚಲನಚಿತ್ರ ವಿಮರ್ಶಕ ಕೌಶಿಕ್ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಕಾಲಿವುಡ್‌ನ ಪ್ರಸಿದ್ಧ ಚಲನಚಿತ್ರ ವಿಮರ್ಶಕ ಮತ್ತು ಟ್ರ್ಯಾಕರ್ ಕೌಶಿಕ್ ಹೃದಯಾಘಾತದಿಂದ ನಿಧನರಾಗಿದ್ದಾರೆ. 36ವರ್ಷಕ್ಕೇ ಕೌಶಿಕ್ ಮರಣ ಕಾಲಿವುಡ್‌ನಲ್ಲಿ ತೀವ್ರ ವಿಷಾದವನ್ನುಂಟುಮಾಡಿದೆ. ಕೌಶಿಕ್ ಸಾವಿನ ಬಗ್ಗೆ ಸಹ ವಿಮರ್ಶಕರು ಮತ್ತು ಚಿತ್ರರಂಗದ ಗಣ್ಯರು ತೀವ್ರ ಆಘಾತ ವ್ಯಕ್ತಪಡಿಸಿ, ಸಂತಾಪ ಸೂಚಿಸಿದ್ದಾರೆ. ಕೌಶಿಕ್ ಅವರ ನಿಧನದ ಸುದ್ದಿಯು ಹೊಸ ಚಲನಚಿತ್ರಗಳ ವಿಮರ್ಶೆಗಾಗಿ ಅವರನ್ನು ಬಹಳ ಕಾಲದಿಂದ ಅನುಸರಿಸುತ್ತಿದ್ದ ಟ್ವಿಟರ್ ಬಳಕೆದಾರರಿಗೆ ಆಘಾತವಾಗಿದೆ. “ಸೀತಾರಾಮಂ” ಚಿತ್ರಕ್ಕೆ ಸಂಬಂಧಿಸಿದಂತೆ 7 ಗಂಟೆಗಳ ಹಿಂದೆ ಟ್ವೀಟ್ ಅನ್ನು ಸಹ ಅಪ್ಲೋಡ್ ಮಾಡಿದ್ದಾರೆ.

ಚಲನಚಿತ್ರ ವಿಮರ್ಶಕ ಕೌಶಿಕ್ ಹೃದಯಾಘಾತದಿಂದ ಸಾವು Read More »

ಶಿವಮೊಗ್ಗ ಚೂರಿ ಇರಿತ ಪ್ರಕರಣ| ಆರೋಪಿ ಮೇಲೆ ಪೊಲೀಸ್ ಪೈರಿಂಗ್

ಸಮಗ್ರ ನ್ಯೂಸ್: ಪ್ರೇಮ್ ಸಿಂಗ್ ಎಂಬಾತನಿಗೆ ಆತನ ಮನೆ ಮುಂದೆ ಚೂರಿ ಇರಿತವಾಗಿದ್ದು , ಪ್ರಕರಣದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಉಪ್ಪಾರ ಕೇರಿಯಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪ್ರೇಮ್ ಗೆ ಚೂರಿ ಇರಿದು ಬೈಕ್ ಬಿಟ್ಟು ಪರಾರಿಯಾಗಿದ್ದರು. ಆ ಪ್ರಕರಣದ ಆರೋಪಿ ಎನ್ನಲಾದ ಜಬೀಉಲ್ಲಾ ಎಂಬಾತನ ಕಾಲಿಗೆ ಪೊಲೀಸರು ತಡರಾತ್ರಿ ಫೈರಿಂಗ್ ಮಾಡಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯಲ್ಲಿರುವ ನಮೋ ಶಂಕರ ಲೇಔಟ್ ನಲ್ಲಿ ಜಬೀವುಲ್ಲಾ ಬಂಧನಕ್ಕೆ ತೆರಳಿದ್ದ ಪೊಲೀಸರು ಆತನ ಮೇಲೆ

ಶಿವಮೊಗ್ಗ ಚೂರಿ ಇರಿತ ಪ್ರಕರಣ| ಆರೋಪಿ ಮೇಲೆ ಪೊಲೀಸ್ ಪೈರಿಂಗ್ Read More »

ಶಿವಮೊಗ್ಗದಲ್ಲಿ ಭುಗಿಲೆದ್ದ ಪ್ಲೆಕ್ಸ್ ತೆರವು ವಿವಾದ।ಹಿಂದೂ ಯುವಕನಿಗೆ ಚೂರಿ ಇರಿತ

ಸಮಗ್ರ ನ್ಯೂಸ್: ಶಿವಮೊಗ್ಗ ನಗರದಲ್ಲಿ ಸಾವರ್ಕರ್ ಫ್ಲೆಕ್ಸ್ ತೆರವು ವಿವಾದ ಭುಗಿಲೆದ್ದಿದೆ. ಈ ಕಾರಣದಿಂದಾಗಿಯೇ ಇಂದಿನಿಂದ ಮೂರು ದಿನ ನಗರದಾಧ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಮತ್ತೊಂದೆಡೆ ನಗರದ ಉಪ್ಪಾರಕೇರಿಯಲ್ಲಿ 20 ವರ್ಷದ ಪ್ರೇಮ್ ಸಿಂಗ್ ಎಂಬಾತನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿಯಲಾಗಿದೆ. ಅವರನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಯುವಕನಿಗೆ ಚೂರಿ ಇರಿದು ಬೈಕ್ ಬಿಟ್ಟು ಪರಾರಿಯಾಗಿದ್ದಾರೆ. ಇರಿತಕ್ಕೊಳಗಾದ ಯುವಕನನ್ನು ಪ್ರೇಮ್ ಸಿಂಗ್ ಎಂದು ಗುರುತಿಸಲಾಗಿದೆ. ಪ್ರೇಮ್

ಶಿವಮೊಗ್ಗದಲ್ಲಿ ಭುಗಿಲೆದ್ದ ಪ್ಲೆಕ್ಸ್ ತೆರವು ವಿವಾದ।ಹಿಂದೂ ಯುವಕನಿಗೆ ಚೂರಿ ಇರಿತ Read More »

ಕಡಬ; ದ್ವಜಾರೋಹಣದ ವೇಳೆ ಕುಸಿದು ಬಿದ್ದು, ನಿವೃತ್ತ ಸೈನಿಕ ಮೃತ್ಯು

ಕಡಬ: ಧ್ವಜಾರೋಹಣದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡ ನಿವೃತ್ತ ಸೈನಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆಯೊಂದು ಕಡಬದಲ್ಲಿ ನಡೆದಿದೆ. ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ಧ್ವಜ ವಂದನೆಯ ಮಾಹಿತಿ ನೀಡಿ ಧ್ವಜಾರೋಹಣಕ್ಕೆ ಸಿದ್ದವಾಗುತ್ತಿದ್ದ ವೇಳೆ ಗಂಗಾಧರ ಗೌಡ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಡಬ; ದ್ವಜಾರೋಹಣದ ವೇಳೆ ಕುಸಿದು ಬಿದ್ದು, ನಿವೃತ್ತ ಸೈನಿಕ ಮೃತ್ಯು Read More »