ಕ್ರೈಂ

ಮಡಿಕೇರಿ: ನಿಯಂತ್ರಣ ತಪ್ಪಿದ ಬಸ್ ಚರಂಡಿಗೆ| 11 ಮಂದಿ ಗಂಭೀರ

ಸಮಗ್ರ ನ್ಯೂಸ್: ಮಡಿಕೇರಿಯಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್​ ನಡೆದಿದ್ದು, ಇಲ್ಲಿನ ಆನೆಕಾಡು ತಿರುವಿನಲ್ಲಿ ಘಟನೆ ಸಂಭವಿಸಿದೆ. ಸರ್ಕಾರಿ ಬಸ್​ನಲ್ಲಿ 40 ಮಂದಿ ಪ್ರಯಾಣ ನಡೆಸುತ್ತಿದ್ದು, 11 ಮಂದಿಗೆ ಗಂಭೀರ ಗಾಯಗಳಾಗಿದೆ. ಹಾಸನದಿಂದ ಮಡಿಕೇರಿಗೆ ಸರ್ಕಾರಿ ಬಸ್​ ತೆರಳುತ್ತಿದ್ದು, ಆನೆಕಾಡು ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿದೆ. ಬಸ್​ನಲ್ಲಿದ್ದ 11 ಮಂದಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಶಾಸಕ ಅಪ್ಪಚ್ಚು ರಂಜನ್​ ಭೇಟಿ ನೀಡಿದ್ಧಾರೆ.

ಮಡಿಕೇರಿ: ನಿಯಂತ್ರಣ ತಪ್ಪಿದ ಬಸ್ ಚರಂಡಿಗೆ| 11 ಮಂದಿ ಗಂಭೀರ Read More »

ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತುಸೀಳಿದ ಪತಿ

ಸಮಗ್ರ ನ್ಯೂಸ್: ಪತ್ನಿ ಜೀವನಾಂಶ ಕೋರಿ ಕೋರ್ಟ್‌ ಮೊರೆ ಹೋಗಿದ್ದಕ್ಕೆ ಆಕ್ರೋಶ ಪತಿ ಕೋರ್ಟ್‌ ಆವರಣದಲ್ಲೇ ಪತ್ನಿಯ ಕತ್ತು ಕೊಯ್ದು ಹಾಕಿದ ಘೋರ ಘಟನೆ ಹಾಸನದಲ್ಲಿ ಬೆಳಕಿಗೆ ಬಂದಿದೆ. ಪತ್ನಿ ಚೈತ್ರ ಕೋರ್ಟ್‌ ಆವರಣದ ಶೌಚಾಲಯಕ್ಕೆ ತೆರಳಿದ ವೇಳೆ ಹೊಂಚು ಹಾಕಿ ಕೂತಿದ್ದ ಪತಿ ಶಿವಕುಮಾರ್‌ ಚೈತ್ರಾಳ ಕತ್ತುಕೊಯ್ದು ಕೃತ್ಯವೆಸಗಿದ್ದಾನೆ. ಸಾವು ಬದುಕಿನ ಹೋರಾಡುತ್ತಿರುವ ಗಾಯಾಳು ಚೈತ್ರಳನ್ನು ಹೊಳೆನರಸೀಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಳೆನರಸೀಪುರ ಟೌನ್‌ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತುಸೀಳಿದ ಪತಿ Read More »

ಕಾಲೇಜ್ ಫೆಸ್ಟ್ ನಲ್ಲಿ ಗಲಾಟೆ| ನಮಾಝ್ ಮುಗಿಸಿ ಬಂದ ವಿದ್ಯಾರ್ಥಿ ಕೊಲೆಯಾದ

ಸಮಗ್ರ ನ್ಯೂಸ್: ವಿದ್ಯಾರ್ಥಿಯೊಬ್ಬನನ್ನ ತಾನು ವ್ಯಾಸಾಂಗ ಮಾಡ್ತಿದ್ದ ಕಾಲೇಜಿನ 50 ಮೀಟರ್ ಅಂತರದಲ್ಲೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 18 ವರ್ಷದ ಅರ್ಬಜ್ ಎಂಬ ವಿದ್ಯಾರ್ಥಿಯನ್ನ ಚಾಕು ಇರಿದು ಹತ್ಯೆ ಮಾಡಲಾಗಿದೆ. ಶುಕ್ರವಾರ(ಆ.12) ಮಧ್ಯಾಹ್ನ 2.30ರ ಸುಮಾರಿಗೆ ಇದೇ ಕಾಲೇಜಿನಿಂದ ಕೆಳಗೆ ಬಂದಿದ್ದ ವಿದ್ಯಾರ್ಥಿ ಇದ್ದಕ್ಕಿದ್ದಂತೆ ಚಾಕು ಇರಿತದಿಂದ ರಕ್ತ ಸ್ರಾವವಾಗಿ ಒದ್ದಾಡುತ್ತಿದ್ದ. ಆತನನ್ನ ನೋಡಿದ್ದ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ ಆಸ್ಪತ್ರೆಗೆ ಹೋಗುವ ನಡುವೆ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ

ಕಾಲೇಜ್ ಫೆಸ್ಟ್ ನಲ್ಲಿ ಗಲಾಟೆ| ನಮಾಝ್ ಮುಗಿಸಿ ಬಂದ ವಿದ್ಯಾರ್ಥಿ ಕೊಲೆಯಾದ Read More »

ಮಳೆಯಿಂದ ಬೆಳೆ ಹಾನಿ।ಮನನೊಂದು ರೈತ ಆತ್ಮಹತ್ಯೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ರೈತನೋರ್ವ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೊಪ್ಪ ತಾಲೂಕಿನ ಜಯಪುರ ಗ್ರಾಮದ ಗಣೇಶ್(38) ಮೃತಪಟ್ಟ ದುರ್ದೈವಿ. ಇವರು ಇವರು ಜಮೀನಿಗಾಗಿ ಬ್ಯಾಂಕ್ ನಿಂದ 2ಲಕ್ಷ ಹಾಗೂ 45 ಸಾವಿರ ಕೈಸಾಲ ಮಾಡಿದ್ದರು. ಅದರೆ ವಿಪರೀತ ಮಳೆಯಿಂದಾಗಿ ಬೆಳೆ ಹಾನಿಯಾಗಿದ್ದರಿಂದ ಮೈಲುತುತ್ತು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಳೆಯಿಂದ ಬೆಳೆ ಹಾನಿ।ಮನನೊಂದು ರೈತ ಆತ್ಮಹತ್ಯೆ Read More »

ಹನಿಟ್ರ್ಯಾಪ್ ಆರೋಪ; ಸ್ಯಾಂಡಲ್ ವುಡ್ ನಟ ಅರೆಸ್ಟ್

ಸಮಗ್ರ ನ್ಯೂಸ್: ಉದ್ಯಮಿಗೆ ಹನಿಟ್ರಾಪ್ ಆರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನ ಉದಯೋನ್ಮುಖ ನಟ ಯುವರಾಜ್ ನನ್ನು ಹುಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ನಟ ಯುವರಾಜ್ ಬೆಂಗಳೂರು ಮೂಲದ ಉದ್ಯಮಿಗೆ ಹನಿಟ್ರಾಪ್ ಮಾಡಿದ್ದ ಎನ್ನಲಾಗಿದ್ದು, ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ಆರೋಪಿ ನಾಯಕನಾಗಿದ್ದ. ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ನಟ ಯುವರಾಜ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ ಎನ್ನಲಾಗುತ್ತಿದೆ. ನಂತರ ಉದ್ಯಮಿಗೆ ಭೇಟಿಯಾಗಿದ್ದ ತಾವು ಕ್ರೈಂ

ಹನಿಟ್ರ್ಯಾಪ್ ಆರೋಪ; ಸ್ಯಾಂಡಲ್ ವುಡ್ ನಟ ಅರೆಸ್ಟ್ Read More »

ದರ್ಪ ತೋರಿದ ಪಿಎಸ್ಐ ಅಮಾನತುಗೊಳಿಸಿದ ಬಳ್ಳಾರಿ ಎಸ್ಪಿ

ಸಮಗ್ರ ನ್ಯೂಸ್: ಕುರುಗೋಡು ಪಿ ಎಸ್ ಐ ಆಗಿದ್ದ ಮಣಿಕಂಠ ಅವರನ್ನು ಬಳ್ಳಾರಿ ಎಸ್ ಪಿ ಸೈದುಲು ಅಡಾವತ್ ಅವರು ಅಮಾನತುಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಮೂರು ದಿನಗಳ ಹಿಂದೆ ಬ್ಯಾನರ್ ಹರಿದ ಪ್ರಕರಣಕ್ಕೆ ಸಂಬಂಧಿಸಿ ನಡೆದ ಸಾರ್ವಜನಿಕ ಸಭೆ ವೇಳೆ ಕಾನೂನು ಸುವ್ಯವಸ್ಥೆ ವಿಚಾರವಾಗಿ ಹೋದಾಗ ಸಾರ್ವಜನಿಕರ ಎದುರಲ್ಲೇ ವ್ಯಕ್ತಿಯೊಬ್ಬರ ಮೇಲೆ ಪಿ ಎಸ್ ಐ ಮಣಿಕಂಠ ಹಲ್ಲೆ ಮಾಡಿ ಅವಾಚ್ಯ ಶಬ್ದ ಗಳಿಂದ ನಿಂದಿಸಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋ ನಿನ್ನೆಯಿಂದ ವೈರಲ್ ಆಗಿತ್ತು. ದೂರು

ದರ್ಪ ತೋರಿದ ಪಿಎಸ್ಐ ಅಮಾನತುಗೊಳಿಸಿದ ಬಳ್ಳಾರಿ ಎಸ್ಪಿ Read More »

ಸೊಸೆಯ ತಲೆಯನ್ನೇ ಕತ್ತರಿಸಿ ಪೊಲೀಸ್ ಠಾಣೆಗೆ ತಂದ ಅತ್ತೆ

ಸಮಗ್ರ ನ್ಯೂಸ್: ಮಹಿಳೆಯೊಬ್ಬಳು ತನ್ನ ಸೊಸೆಯ ಕತ್ತರಿಸಿ, ಆ ತಲೆಯೊಂದಿಗೆ ಪೊಲೀಸ್ ಠಾಣೆಗೆ ಬಂದಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ಅಣ್ಣಮಯ್ಯ ಜಿಲ್ಲೆಯಲ್ಲಿ ನಡೆದಿದೆ. ಆಂಧ್ರದ ರಾಯಚೋಟಿ ಪುರಸಭಾ ವ್ಯಾಪ್ತಿಯ ಕೊತ್ತಕೋಟ ರಾಮಪುರಂ ನಿವಾಸಿ ಸುಬ್ಬಮ್ಮ ಎಂಬ ಮಹಿಳೆ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ತನ್ನ ಸೊಸೆ ವಸುಂಧರಾಳನ್ನು ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದು, ಶರಣಾಗಲು ಪೊಲೀಸ್ ಠಾಣೆಗೆ ಬಂದಿದ್ದಾಳೆ. ಅಣ್ಣಮಯ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರ್ಷವರ್ಧನ್ ರಾಜು ಪ್ರಕಾರ, ಆರೋಪಿಗಳು ಆಸ್ತಿ ವಿವಾದದಿಂದಾಗಿ ಸೊಸೆಯ ತಲೆ ಕತ್ತರಿಸಿ ಕೊಂದಿದ್ದಾರೆ. ಮೃತ ಮಹಿಳೆ

ಸೊಸೆಯ ತಲೆಯನ್ನೇ ಕತ್ತರಿಸಿ ಪೊಲೀಸ್ ಠಾಣೆಗೆ ತಂದ ಅತ್ತೆ Read More »

ಹಂತಕರ ಅಡಗುದಾಣಗಳಾಗುತ್ತಿವೆಯೇ ಕೇರಳದ ಮಸೀದಿಗಳು? ಹಣ, ಆಶ್ರಯ ನೀಡಿದವರಿಗೆ ಶಿಕ್ಷೆ ಏನು?

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ತನಿಖೆ ವೇಳೆ ಒಂದೊಂದೇ ಅಂಶಗಳು ಬೆಳಕಿಗೆ ಬರುತ್ತಿವೆ. ಈ ನಡುವೆ ಸದ್ದು ಮಾಡ್ತಿರೋದು ಹಂತಕರು ಮಸೀದಿಯಲ್ಲಿ ಅಡಗಿ ಕುಳಿತ ವಿಚಾರ. ಪ್ರವೀಣ್ ನೆಟ್ಟಾರುರವರನ್ನು ಹತ್ಯೆಗೈದ ಮೂವರು ಹಂತಕರು ಕೇರಳಕ್ಕೆ ಪರಾರಿಯಾಗಿ‌ ಅಡಗಿಕೊಳ್ಳಲು ಆಶ್ರಯ ಕೊಟ್ಟಿದ್ದು ಅಲ್ಲಿನ ಒಂದು ಮಸೀದಿ. ಹೀಗೆ ಮಸೀದಿಗೆ ತೆರಳಿ ಅಲ್ಲಿ ಅಡಗಿಕೊಳ್ಳಲು‌ ಮಸೀದಿಯ ಮುಖ್ಯಸ್ಥರು ಹೇಗೆ ಸಹಾಯ ಮಾಡಿದರೋ ಗೊತ್ತಿಲ್ಲ? ಆದರೆ‌ ಹಂತಕರೆಂದು ಗೊತ್ತಿದ್ದೂ ಅವರಿಗೆ ಸಹಾಯ‌ ಮಾಡಿದ್ದರೆ

ಹಂತಕರ ಅಡಗುದಾಣಗಳಾಗುತ್ತಿವೆಯೇ ಕೇರಳದ ಮಸೀದಿಗಳು? ಹಣ, ಆಶ್ರಯ ನೀಡಿದವರಿಗೆ ಶಿಕ್ಷೆ ಏನು? Read More »

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಇಬ್ಬರು ಮೃತ್ಯು

ಶಿವಮೊಗ್ಗ :ಶಿವಮೊಗ್ಗ ಹೊರವಲಯದ ಅಬ್ಬಲಗೆರೆ ಬಳಿ ಅಪಘಾತ ಸಂಭವಿಸಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆಯೊಂದು ವರದಿಯಾಗಿದೆ. ನ್ಯಾಮತಿ ಮೂಲದ ರಾಮ್ ಕುಮಾರ್ 22 ಹಾಗು ಮಲ್ಲಿಕಾರ್ಜುನ 30 ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಐಪಿಸಿ ಕಂಪನಿಯಲ್ಲಿ ಕಾರ್ಮಿಕ ರಾಗಿರುವ ಇವರಿಬ್ಬರು ರಾತ್ರಿ ಪಾಳಿ ಕೆಲಸ ಮಾಡಿ, ಮುಂಜಾನೆ ಶಿಫ್ಟ್ ಮುಗಿಸಿಕೊಂಡು ಮನೆಗೆ ವಾಪಸ್ಸಾಗಲು ಮುಂದಾಗಿದ್ದರು. ಬೈಕ್ ಚಲಾಯಿಸುತ್ತಿದ್ದವರು ನಿದ್ದೆಯ ಮಂಪರಿನಲ್ಲಿದ್ದರು. ಈ ವೇಳೆ ಅಬ್ಬಲಗೆರೆ ಬಳಿ ಡಿಸೇಲ್ ಖಾಲಿಯಾಗಿ ಲಾರಿಯೊಂದು ರಸ್ತೆ ಬದಿ ನಿಂತಿತ್ತು. ಬೈಕ್ ನಲ್ಲಿ ಬಂದವರಿಗೆ ತಕ್ಷಣಕ್ಕೆ

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಇಬ್ಬರು ಮೃತ್ಯು Read More »

ಮಂಗಳೂರು: ವಿದ್ಯಾರ್ಥಿಗಳ ಕೈಲಿದ್ದ ರಾಖಿ ತೆಗೆದು ಕಸದಬುಟ್ಟಿಗೆ ಎಸೆದ ಶಿಕ್ಷಕರು

ಸಮಗ್ರ ನ್ಯೂಸ್: ಮಕ್ಕಳ ಕೈಯ್ಯಲ್ಲಿದ್ದ ರಕ್ಷಾ ಬಂಧನದ ರಾಖಿ ಕಿತ್ತೆಸೆದ ಆರೋಪದ ಹಿನ್ನೆಲೆ ಪೋಷಕರು‌ ಮತ್ತು ಬಿಜೆಪಿ ಕಾರ್ಯಕರ್ತರಿಂದ ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿರುವ ಘಟನೆ ಮಂಗಳೂರು ಹೊರವಲಯದ ಕಾಟಿಪಳ್ಳದ ಖಾಸಗಿ ಶಾಲೆಯಲ್ಲಿ ನಡೆದಿದೆ. ಕಾಟಿಪಳ್ಳದ ಇನ್ಫೆಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಿನ್ನೆ ‌ರಕ್ಷಾಬಂಧನ ಹಿನ್ನೆಲೆ ಕೈಗೆ ರಾಖಿ ಕಟ್ಟಿಕೊಂಡು ಮಕ್ಕಳು ಹೋಗಿದ್ದರು, ಆದರೆ ರಾಖಿ ತೆಗೆಸಿ ಕೆಲ ಶಿಕ್ಷಕರು ಕಸದ ಬುಟ್ಟಿಗೆ ಎಸೆದಿದ್ದಾರೆ ಎಂದು ಆರೋಪ ಕೇಳಿ ಬರುತ್ತಿದೆ. ಈ ಹಿನ್ನೆಲೆ ಶಾಲೆಗೆ

ಮಂಗಳೂರು: ವಿದ್ಯಾರ್ಥಿಗಳ ಕೈಲಿದ್ದ ರಾಖಿ ತೆಗೆದು ಕಸದಬುಟ್ಟಿಗೆ ಎಸೆದ ಶಿಕ್ಷಕರು Read More »