ಕ್ರೈಂ

ಮಂಗಳೂರು: ವಶಪಡಿಸಿಕೊಂಡ ಮೊಬೈಲ್ ತನಿಖೆ ವೇಳೆ ಬಯಲಾಯ್ತು‌ ಹಲವು ಅಶ್ಲೀಲ ವೀಡಿಯೋ| ಹಿಂದೂ ಮುಖಂಡ ಸಮಿತ್ ರಾಜ್ ಮೊಬೈಲ್ ನಲ್ಲಿ ಪ್ರಮುಖರ ಹಸಿಬಿಸಿ ದೃಶ್ಯಾವಳಿ!!

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಅಪಘಾತವೆಸಗಿದ ಖಾಸಗಿ ಬಸ್​ಗೆ ಕಲ್ಲು ತೂರಿ ಹಾನಿಗೊಳಿಸಿದ ಪ್ರಕರಣದಲ್ಲಿ ಸಮಿತ್ ರಾಜ್ ಧರೆಗುಡ್ಡೆರನ್ನು ಮೂಡಬಿದಿರೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಅವರ ಮೊಬೈಲ್ ವಶಕ್ಕೆ ಪಡೆಯಲಾಗಿತ್ತು. ಪೊಲೀಸರು ದತ್ತಾಂಶಗಳನ್ನು ಎಕ್ಸ್‌ಟ್ರಾಕ್ಟ್ ಮಾಡಿಸಲು ಕೋರ್ಟ್ ಮತ್ತು ಮೇಲಾಧಿಕಾರಿಗಳ ಅನುಮತಿ ಪಡೆದಿದ್ದರು. ಅದರಂತೆ ಮೊಬೈಲ್ ಡೇಟಾ ಎಕ್ಸ್‌ಟ್ರಾಕ್ಟ್​​ ವೇಳೆ ಸ್ವತಃ ಪೊಲೀಸರೇ ಬೆಚ್ಚಿ ಬಿದಿದ್ದಾರೆ. ಆ ಹಿಂದೂ ಮುಖಂಡನ ಮೊಬೈಲ್‌ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗ ತುಣುಕುಗಳು ಪತ್ತೆ ಆಗಿವೆ. ಆ ಅಶ್ಲೀಲ […]

ಮಂಗಳೂರು: ವಶಪಡಿಸಿಕೊಂಡ ಮೊಬೈಲ್ ತನಿಖೆ ವೇಳೆ ಬಯಲಾಯ್ತು‌ ಹಲವು ಅಶ್ಲೀಲ ವೀಡಿಯೋ| ಹಿಂದೂ ಮುಖಂಡ ಸಮಿತ್ ರಾಜ್ ಮೊಬೈಲ್ ನಲ್ಲಿ ಪ್ರಮುಖರ ಹಸಿಬಿಸಿ ದೃಶ್ಯಾವಳಿ!! Read More »

ಪುತ್ತೂರು: ಮದುವೆಯಾಗುವುದಾಗಿ ಲೈಂಗಿಕ ಸಂಪರ್ಕ ನಡೆಸಿ ವಂಚಿಸಿದ ಪ್ರಕರಣ| ಆರೋಪಿ ಕೃಷ್ಣ ಜೆ ರಾವ್ ಅರೆಸ್ಟ್

ಸಮಗ್ರ ನ್ಯೂಸ್: ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿ ಮಗು ಕರುಣಿಸಿದ ಯುವಕ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್‌ ರಾವ್ ಎಂಬವರ ಪುತ್ರ ಕೃಷ್ಣ ಜೆ ರಾವ್ ನಾಪತ್ತೆಯಾಗಿದ್ದು ಆತನನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ. ಮಂಗಳೂರಿನ ಎಸ್ಪಿ ಅವರು ತನಿಖೆಯನ್ನು ಚುರುಕು ಗೊಳಿಸಿದ್ದು, ಈಗ ಪೊಲೀಸರ ಶೀಘ್ರ ಕಾರ್ಯಾಚರಣೆಯಲ್ಲಿ ಆರೋಪಿ ಶ್ರೀಕೃಷ್ಣ ಜೆ.ರಾವ್‌ನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನಿಂದ ತೆರಳಿರುವ ಪೊಲೀಸರ ತಂಡವೊಂದು ಆರೋಪಿಯನ್ನು ಪತ್ತೆ ಮಾಡಿ ಅಲ್ಲಿಂದ ವಶಕ್ಕೆ

ಪುತ್ತೂರು: ಮದುವೆಯಾಗುವುದಾಗಿ ಲೈಂಗಿಕ ಸಂಪರ್ಕ ನಡೆಸಿ ವಂಚಿಸಿದ ಪ್ರಕರಣ| ಆರೋಪಿ ಕೃಷ್ಣ ಜೆ ರಾವ್ ಅರೆಸ್ಟ್ Read More »

ಮೃತದೇಹ ಹೂತು ಹಾಕಿರುವ ಕುರಿತು ಅನಾಮಧೇಯ ಪತ್ರ| ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದ್ದ ಅಪರಾಧ ಕೃತ್ಯಗಳ ಮೃತದೇಹಗಳನ್ನು ವಿಲೇವಾರಿ ಮಾಡಿರುವ ಮಾಹಿತಿ ಕುರಿತಂತೆ ಬಂದ ಅನಾಮಧೇಯ ಪತ್ರಕ್ಕೆ ಸಂಬಂಧಿಸಿದಂತೆ ಇದೀಗ ನ್ಯಾಯಾಲಯದ ಅನುಮತಿಯೊಂದಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದಿನಿಂದ ಹಲವಾರು ಅಪರಾಧ ಕೃತ್ಯಗಳು ನಡೆದಿದ್ದು, ದೂರುದಾರರಿಗೆ ಜೀವಬೆದರಿಕೆ ಒಡ್ಡಿ, ಸದ್ರಿ ಅಪರಾದ ಕೃತ್ಯಗಳ ಮೃತದೇಹಗಳನ್ನು ದೂರುದಾರರ ಮೂಲಕ ರಹಸ್ಯವಾಗಿ ವಿಲೇವಾರಿ ಮಾಡಿಸಿರುತ್ತಾರೆ. ಈ ರೀತಿಯಲ್ಲಿ ಹಲವಾರು ಮೃತದೇಹಗಳನ್ನು ದೂರುದಾರರು ವಿಲೇವಾರಿ ಮಾಡಿದ್ದು, ಪ್ರಸ್ತುತ ದೂರುದಾರರಿಗೆ

ಮೃತದೇಹ ಹೂತು ಹಾಕಿರುವ ಕುರಿತು ಅನಾಮಧೇಯ ಪತ್ರ| ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಆರೋಪಿಗಳಿಗೆ ಆಶ್ರಯ ನೀಡಿದ್ದಾತ ಕೊಡಗಿನ ವ್ಯಕ್ತಿ ಕೇರಳದಲ್ಲಿ ಎನ್ಐಎ ವಶಕ್ಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೊಡಗಿನ ಸೋಮವಾರಪೇಟೆ ತಾಲೂಕಿನ ಅಬ್ದುಲ್ ರೆಹಮಾನ್ ಕಲ್ಕಂದೂರು ಎಂಬಾತನನ್ನು ಎನ್ ಐ ಎ ಅಧಿಕಾರಿಗಳು ಕೇರಳದ ವಿಮಾನ ನಿಲ್ದಾಣದಲ್ಲಿ ಬಂಧಿಸಿದಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ವಿದೇಶಕ್ಕೆ ತೆರಳಿ ಕತಾರ್ ನ ದೋಹಾದಲ್ಲಿ ತಲೆಮರೆಸಿಕೊಂಡಿದ್ದ. ತಲೆಮರೆಸಿಕೊಂಡಿದ್ದ ಎಲ್ಲಾ ಆರೋಪಿಗಳಿಗಾಗಿ ಲುಕ್ ಔಟ್ ನೋಟೀಸ್ ಕೂಡ ಜಾರಿ ಮಾಡಲಾಗಿತ್ತು. ಅಬ್ದುಲ್ ರೆಹಮಾನ್ ಕಲ್ಕಂದೂರ್ ಹಾಗೂ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಆರೋಪಿಗಳಿಗೆ ಆಶ್ರಯ ನೀಡಿದ್ದಾತ ಕೊಡಗಿನ ವ್ಯಕ್ತಿ ಕೇರಳದಲ್ಲಿ ಎನ್ಐಎ ವಶಕ್ಕೆ Read More »

ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೆರಡು ಬಲಿ

ಸಮಗ್ರ ನ್ಯೂಸ್: ಕಳೆದ ಕೆಲ ವಾರಗಳಿಂದ ಹೃದಯಾಘಾತದ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಿದ್ದು, ಶುಕ್ರವಾರವೂ ಇಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಒಂದೂವರೆ ತಿಂಗಳ ಅವಧಿಯಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಹಾಸನ ತಾಲ್ಲೂಕಿನ ಚಿಟ್ನಳ್ಳಿ ಗ್ರಾಮದ 21 ವರ್ಷದ ಯುವಕ ಮದನ್, ತಾಯಿ ಜೊತೆ ಚನ್ನಪಟ್ಟಣದಲ್ಲಿ ವಾಸವಿದ್ದನು. ಕಳೆದ ಎರಡು ದಿನಗಳಿಂದ ಚಿಕ್ಕಕೊಂಡಗುಳ ಗ್ರಾಮದ ಭಾವನ ಮನೆಗೆ ಬಂದಿದ್ದ ಮದನ್, ನಿನ್ನೆ ರಾತ್ರಿ ದಿಢೀರ್ ಎದೆನೋವಿನಿಂದ ಬಳಲಿದ್ದು, ಮನೆಯಲ್ಲಿಯೇ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಆಸ್ಪತ್ರೆಗೆ

ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೆರಡು ಬಲಿ Read More »

ಧರ್ಮಸ್ಥಳ‌ ಗ್ರಾಮದಲ್ಲಿ ನಡೆದ ಕೊಲೆಗಳ‌ ಕುರಿತು ದ.ಕ ಎಸ್ಪಿಗೆ ಪತ್ರ ಬರೆದ ಅನಾಮಧೇಯ ವ್ಯಕ್ತಿ| 6 ಪುಟಗಳ ಸುಧೀರ್ಘ ಪತ್ರದಲ್ಲಿದೆ ಬೆಚ್ಚಿಬೀಳಿಸುವ ಸಂಗತಿ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ವಕೀಲರ ಮೂಲಕ ಹೇಳಿಕೆ ನೀಡುತ್ತಿದ್ದ ಪಾಪ ಪ್ರಜ್ಞೆ ಕಾಡಿದ್ದ ಅನಾಮಧೇಯ ವ್ಯಕ್ತಿ ಜುಲೈ 3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಗೆ ಬಂದು ದೂರು ನೀಡಿರುವುದಾಗಿ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್ ದೇಶಪಾಂಡೆ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ಬಹಿರಂಗ ಪಡಿಸಿದ್ದಾರೆ. ಈ ಪ್ರಕರಣದ ಬಗ್ಗೆ ಎಸ್‌ಪಿ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್‌ ಠಾಣೆಗೆ ಸದ್ರಿ ವ್ಯಕ್ತಿಯಿಂದ ದೂರು ಸಲ್ಲಿಕೆಯಾಗಿದ್ದು

ಧರ್ಮಸ್ಥಳ‌ ಗ್ರಾಮದಲ್ಲಿ ನಡೆದ ಕೊಲೆಗಳ‌ ಕುರಿತು ದ.ಕ ಎಸ್ಪಿಗೆ ಪತ್ರ ಬರೆದ ಅನಾಮಧೇಯ ವ್ಯಕ್ತಿ| 6 ಪುಟಗಳ ಸುಧೀರ್ಘ ಪತ್ರದಲ್ಲಿದೆ ಬೆಚ್ಚಿಬೀಳಿಸುವ ಸಂಗತಿ Read More »

ಉಡುಪಿ ಮೂಲಕ ಹತ್ತು ದೇಶಗಳಿಗೆ ಡ್ರಗ್ಸ್ ಸರಬರಾಜು| ಬೃಹತ್ ಜಾಲ ಪತ್ತೆ ಮಾಡಿದ ಮಾದಕ ವಸ್ತು ನಿಗ್ರಹ ದಳ

ಸಮಗ್ರ ನ್ಯೂಸ್: ಉಡುಪಿ ಸೇರಿದಂತೆ ದೇಶದ ಹಲವು ನಗರಗಳ ಮೂಲಕ 10 ಕ್ಕೂ ಹೆಚ್ಚು ದೇಶಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಬೃಹತ್ ಮಾದಕ ವಸ್ತು ಜಾಲವನ್ನು ಮಾದಕ ವಸ್ತು ನಿಗ್ರಹ ದಳ ಬಯಲಿಗೆಳೆದಿದೆ. ಈ ಸಂಬಂಧ 10 ಮಂದಿಯನ್ನು ಬಂಧಿಸಿದ್ದು, ಬೃಹತ್ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಉಡುಪಿಯಲ್ಲೇ ಆರೋಪಿಗಳು ಕಾಲ್ ಸೆಂಟರ್ ಸ್ಥಾಪಿಸಿ ಡ್ರಗ್ಸ್ ವ್ಯವಹಾರ ನಡೆಸುತ್ತಿತ್ತು ಎನ್ನಲಾಗಿದೆ. ಉಡುಪಿ ಸೇರಿ ದೇಶದ 4 ಊರುಗಳ ಮೂಲಕ ಈ ಕಾರ್ಯಾಚರಣೆ ನಡೆಯುತ್ತಿತ್ತು. ದೆಹಲಿ, ಜೈಪುರ, ಉಡುಪಿ, ರೂರ್ಕಿಯಲ್ಲಿ

ಉಡುಪಿ ಮೂಲಕ ಹತ್ತು ದೇಶಗಳಿಗೆ ಡ್ರಗ್ಸ್ ಸರಬರಾಜು| ಬೃಹತ್ ಜಾಲ ಪತ್ತೆ ಮಾಡಿದ ಮಾದಕ ವಸ್ತು ನಿಗ್ರಹ ದಳ Read More »

ತೆಲಂಗಾಣ: ರಾಸಾಯನಿಕ ಕಾರ್ಖಾನೆ ರಿಯಾಕ್ಟರ್ ಸ್ಫೋಟ| ಸಾವಿನ ಸಂಖ್ಯೆ 34ಕ್ಕೆ ಏರಿಕೆ

ಸಮಗ್ರ ನ್ಯೂಸ್: ತೆಲಂಗಾಣ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮಂಗಳವಾರ ಸಾವನ್ನಪ್ಪಿದವರ ಸಂಖ್ಯೆ 34 ಕ್ಕೆ ಏರಿದೆ. ಆರಂಭದಲ್ಲಿ 12 ಜನ ಸಾವನ್ನಪ್ಪಿದ್ದರು. ಅವಶೇಷಗಳನ್ನು ತೆಗೆದುಹಾಕುವಾಗ ಹಲವಾರು ಶವಗಳು ಅವಶೇಷಗಳ ಅಡಿಯಲ್ಲಿ ಪತ್ತೆಯಾಗಿವೆ. 31 ಶವಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ ಮತ್ತು ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾರೆ. ಸ್ಫೋಟದ ಪರಿಣಾಮವಾಗಿ ಕೈಗಾರಿಕಾ ಶೆಡ್ ಸಂಪೂರ್ಣವಾಗಿ ನಾಶವಾಗಿದೆ. ಸ್ಫೋಟದ ತೀವ್ರತೆಗೆ ಕೆಲವು ಕಾರ್ಮಿಕರು ಗಾಳಿಯಲ್ಲಿ ಮೇಲಕ್ಕೆ ಎಸೆಯಲ್ಪಟ್ಟು ಸುಮಾರು 100 ಮೀಟರ್ ದೂರದಲ್ಲಿ ಕೆಳಗೆ ಬಿದ್ದಿದ್ದಾರೆ. ಸ್ಫೋಟದ ಕಾರಣವನ್ನು

ತೆಲಂಗಾಣ: ರಾಸಾಯನಿಕ ಕಾರ್ಖಾನೆ ರಿಯಾಕ್ಟರ್ ಸ್ಫೋಟ| ಸಾವಿನ ಸಂಖ್ಯೆ 34ಕ್ಕೆ ಏರಿಕೆ Read More »

ಹಾಸನದಲ್ಲಿ ಮುಂದುವರಿದ ಹೃದಯಾಘಾತ ಪ್ರಕರಣ| ಒಂದೇ ದಿನ 3 ಮಂದಿ ಸಾವು

ಸಮಗ್ರ ನ್ಯೂಸ್: ಹಾಸನದಲ್ಲಿ ಮಾತ್ರ ಈ ಒಂದು ಹೃದಯಾಘಾತದಿಂದ ಸಾವನಪುತ್ತಿರುವವರ ಪ್ರಕರಣಗಳು ಜನರಲ್ಲಿ ಆತಂಕ ಹೆಚ್ಚಿಸಿದೆ ಏಕೆಂದರೆ ಕಳೆದ 40 ದಿನಗಳಲ್ಲಿ ಇಂದಿನವರೆಗೆ ಒಟ್ಟು 21 ಜನರು ಈ ಒಂದು ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಹಾಸನದಲ್ಲಿ ಹೃದಯಾಘಾತದಿಂದ ಮರಣ ಮೃದಂಗ ಮುಂದುವರೆದಿದ್ದು ಕಳೆದ 40 ದಿನಗಳಲ್ಲಿ ಇದುವರೆಗೂ 21 ಜನರು ಹೃದಯಘಾತದಿಂದ ಸಾವನಪ್ಪಿದ್ದಾರೆ. ಇದೀಗ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಮಹಿಳೆ ಒಬ್ಬರು ಮನೆಯಲ್ಲಿಯೇ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಜೆಪಿ ನಗರದ ಲೇಪಾಕ್ಷಿ

ಹಾಸನದಲ್ಲಿ ಮುಂದುವರಿದ ಹೃದಯಾಘಾತ ಪ್ರಕರಣ| ಒಂದೇ ದಿನ 3 ಮಂದಿ ಸಾವು Read More »

ಪುತ್ತೂರು: ಕೂರತ್ ಉರೂಸ್ ನಲ್ಲಿ ನೂಕುನುಗ್ಗಲು| ಹಲವರು ಅಸ್ವಸ್ಥ

ಸಮಗ್ರ ನ್ಯೂಸ್: ಮಸೀದಿಯ ಉರೂಸ್ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ ಹಲವರು ಅಸ್ವಸ್ಥಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರಿನ ಕೂರತ್ ತಂಙಳ್ ಉರೂಸ್ ಕಾರ್ಯಕ್ರಮದಲ್ಲಿ ನಡೆದಿದೆ.ಅಸ್ವಸ್ಥಗೊಂಡವರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೂನ್ 26ರಿಂದ 29ರವರೆಗೆ ಕಡಬ ತಾಲೂಕಿನ ಕಾಣಿಯೂರಿನ ಕೂರತ್ ತಂಙಳ್ ಉರೂಸ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಉರೂಸ್ ಮುಬಾರಕ್‌ನ ಕೊನೆಯ ದಿನವಾದ ಭಾನುವಾರ ನಿರೀಕ್ಷೆಗೂ ಮೀರಿ ಜನರು ಸೇರಿದ್ದರು. ಇಂದು (ಜೂ.29) ಅನ್ನದಾನ ಕಾರ್ಯಕ್ರಮಕ್ಕೆ ಸುಮಾರು 30-40 ಸಾವಿರ ಭಕ್ತರು ಆಗಮಿಸುವ ನಿರೀಕ್ಷೆಯಿತ್ತು.

ಪುತ್ತೂರು: ಕೂರತ್ ಉರೂಸ್ ನಲ್ಲಿ ನೂಕುನುಗ್ಗಲು| ಹಲವರು ಅಸ್ವಸ್ಥ Read More »