ಕ್ರೈಂ

ಬೈಕ್ ಮತ್ತು ಲಾರಿ ನಡುವೆ ಅಪಘಾತ; ಮೂವರು ಸಾವು

ಮೈಸೂರು:  ಬೈಕ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟ ಘಟನೆಯೊಂದು ಎಚ್.ಡಿ.ಕೋಟೆ ತಾಲೂಕಿನ ಭೀಮನಹಳ್ಳಿ ಬಳಿ ಮಂಗಳವಾರ ನಡೆದಿದೆ. ಮೃತರನ್ನು ಚಿಕ್ಕಲೇಗೋವಡಪುರ ನಿವಾಸಿಗಳಾದ ಸಣ್ಣಸ್ವಾಮಿ, ಪ್ರಭು, ಮಹೇಶ ಎಂದು ಗುರುತಿಸಲಾಗಿದೆ. ಹುಣಸೂರಿನಿಂದ ಎಚ್.ಡಿ.ಕೋಟೆ ಕಡೆಗೆ ಬೈಕಿನಲ್ಲಿ ಮೂವರು ಬರುತ್ತಿದ್ದರು ಎಂದು ಹೇಳಲಾಗುತ್ತಿದೆ. ಬೈಕ್ ನಲ್ಲಿದ್ದ ಮೂವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ. ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ದೇಹಗಳನ್ನು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

ಬೈಕ್ ಮತ್ತು ಲಾರಿ ನಡುವೆ ಅಪಘಾತ; ಮೂವರು ಸಾವು Read More »

ಸ್ಕೇಟಿಂಗ್ ಮೂಲಕ ಕಾಶ್ಮೀರ ಕ್ಕೆ ತೆರಳುತ್ತಿದ್ದ ಕೇರಳದ ಯುವಕ ರಸ್ತೆ ಅಪಘಾತ ದಲ್ಲಿ ಬಲಿ

ಬೆಂಗಳೂರು: ಸ್ಕೇಟಿಂಗ್ ಬಗ್ಗೆ ಜಾಗೃತಿ ಮೂಡಿಸಲು ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಸ್ಕೇಟಿಂಗ್ ಮೂಲಕ ತೆರಳುತ್ತಿದ್ದ ಕೇರಳದ ಯುವಕ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಕೇರಳದ ಅನಾಸ್ ಹಜಾಸ್(31) ಮೇ 29ರಂದು ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಪ್ರವಾಸ ಹೊರಟಿದ್ದರು. ಸ್ಕೇಟಿಂಗ್ ಮೂಲಕವೇ 3,700 ಕಿ.ಮೀ. ದೂರ ಕ್ರಮಿಸುವುದು ಅವರ ಗುರಿಯಾಗಿತ್ತು. ಹರಿಯಾಣ ತಲುಪಿದ್ದ ಅನಾಸ್, ಅಲ್ಲಿನ ಕಾಲ್ಕಾದಲ್ಲಿ ನಡೆದ ಟ್ರಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸ್ಕೇಟಿಂಗ್ ಮೂಲಕ ತೆರಳುತ್ತಿದ್ದ ಅವರಿಗೆ ಟ್ರಕ್ ಬಡಿದಿತ್ತು. ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಸ್ಕೇಟಿಂಗ್ ಮೂಲಕ ಕಾಶ್ಮೀರ ಕ್ಕೆ ತೆರಳುತ್ತಿದ್ದ ಕೇರಳದ ಯುವಕ ರಸ್ತೆ ಅಪಘಾತ ದಲ್ಲಿ ಬಲಿ Read More »

ಸುಳ್ಯ:ಪ್ರವೀಣ್ ಹತ್ಯೆಯಾಗಿ ವಾರಕಳೆದರೂ ಪತ್ತೆಯಾಗದ ಪ್ರಮುಖ ಹಂತಕರು| ತನಿಖಾ ಅಖಾಡಕ್ಕೆ ಜಿಗಿದ ಎನ್ಐಎ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಬೆಳ್ಳಾರೆಯಲ್ಲಿ ಜು.26ರಂದು ರಾತ್ರಿ ನಡೆದಿದ್ದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಬಂಧಿತರಾಗಿರುವ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಓರ್ವ ಆರೋಪಿಯ ಪೊಲೀಸ್ ಕಸ್ಟಡಿ ಅವಧಿಯನ್ನು 5 ದಿನ ವಿಸ್ತರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರಂಭದಲ್ಲಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳಾದ ಸವಣೂರಿನ ಝಾಕಿರ್ ಮತ್ತು ಬೆಳ್ಳಾರೆ ಪೇಟೆ ನಿವಾಸಿ ಶಫೀಕ್‌ನನ್ನು ಆ.2ರಂದು ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಬೆಳ್ಳಾರೆ ಪೊಲೀಸರು ಆರೋಪಿ ಶಫೀಕ್‌ ನ್ನು ಮತ್ತೆ ತಮ್ಮ

ಸುಳ್ಯ:ಪ್ರವೀಣ್ ಹತ್ಯೆಯಾಗಿ ವಾರಕಳೆದರೂ ಪತ್ತೆಯಾಗದ ಪ್ರಮುಖ ಹಂತಕರು| ತನಿಖಾ ಅಖಾಡಕ್ಕೆ ಜಿಗಿದ ಎನ್ಐಎ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಮತ್ತಿಬ್ಬರು ಆರೋಪಿಗಳಿಗೆ ಎಸ್ಡಿಪಿಐ ಲಿಂಕ್

ಸಮಗ್ರ ನ್ಯೂಸ್: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಬಂಧಿಸಿರುವ ಝಾಕೀರ್ ಹಾಗೂ ಶಫೀಕ್ ಸದ್ಯ ಪೊಲೀಸ್ ಕಸ್ಟಡಿಯಲ್ಲಿದ್ದು ಆ.3ರಂದು ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇನ್ನಿಬ್ಬರು ಆರೋಪಿಗಳಾದ ಅಬ್ದುಲ್ ಹ್ಯಾರಿಸ್, ಶೇಕ್ ಸದ್ದಾಂ ಹುಸೇನ್ ಜೊತಗೆ ಝಾಕೀರ್ ಗೆ ಆ.12ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ನು ಪೊಲೀಸರ ಕೋರಿಕೆಯ ಮೇರೆಗೆ ಶಫೀಕ್ ನನ್ನು ಆ. 06ರ ತನಕ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಆರೋಪಿಗಳಾದ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಮತ್ತಿಬ್ಬರು ಆರೋಪಿಗಳಿಗೆ ಎಸ್ಡಿಪಿಐ ಲಿಂಕ್ Read More »

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ; ಹಲವು ಪ್ರಯಾಣಿಕರಿಗೆ ಗಾಯ

ಮೂಡಬಿದಿರೆ:  ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ರಸ್ತೆ ಬದಿಗೆ ಉರುಳಿ ಬಿದ್ದ ಘಟನೆಯೊಂದು ಇಲ್ಲಿ‌ನ ಬನ್ನಡ್ಕದ ರಾಘವೇಂದ್ರ ಮಠದ ಬಳಿ ಬುಧವಾರ ಬೆಳಗ್ಗೆ ನಡೆದಿದೆ. ಮಂಗಳೂರಿನಿಂದ ಮೂಡುಬಿದಿರೆ ಮಾರ್ಗವಾಗಿ ಕಾರ್ಕಳ ಕಡೆಗೆ ಹೋಗುತಿದ್ದ ಖಾಸಗಿ ಬಸ್ ಬನ್ನಡ್ಕದ ರಾಘವೇಂದ್ರ ಮಠದ ಮುಂಭಾಗಕ್ಕೆ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಪಿಯಾಗಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ; ಹಲವು ಪ್ರಯಾಣಿಕರಿಗೆ ಗಾಯ Read More »

ಮಂಗಳೂರು: ಬಿಜೆಪಿ ಕಾರ್ಯಕರ್ತನ ಮೇಲೆ ತಲವಾರು ದಾಳಿ ಯತ್ನ| ವದಂತಿ ಹಬ್ಬಿಸಿದಾತನ ಮೇಲೆ ಕ್ರಮ – ಕಮಿಷನರ್

ಸಮಗ್ರ ನ್ಯೂಸ್: ವ್ಯಕ್ತಿಯೋರ್ವ ತನ್ನನ್ನು ಯಾರೋ ಬೆನ್ನಟ್ಟಿ ತಲವಾರು ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ವದಂತಿ ಹಬ್ಬಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ವದಂತಿ ಹಬ್ಬಿಸಿದ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಉಚ್ಚಿಲ ನಿವಾಸಿ ಕಿಶೋರ್ ವದಂತಿ ಹಬ್ಬಿಸಿದ ವ್ಯಕ್ತಿಯಾಗಿದ್ದು, ಈತ ಇಂದು ಬೆಳಗ್ಗೆ ಕೆ.ಸಿ.ನಗರ ಮುಳ್ಳುಗುಡ್ಡೆ ಎಂಬಲ್ಲಿ ತನ್ನನ್ನು ಬೆನ್ನಟ್ಟಿ ತಲವಾರು ದಾಳಿ ಯತ್ನ ನಡೆದಿದೆ ಎಂದು ವದಂತಿ ಹಬ್ಬಿಸಿದ್ದ.

ಮಂಗಳೂರು: ಬಿಜೆಪಿ ಕಾರ್ಯಕರ್ತನ ಮೇಲೆ ತಲವಾರು ದಾಳಿ ಯತ್ನ| ವದಂತಿ ಹಬ್ಬಿಸಿದಾತನ ಮೇಲೆ ಕ್ರಮ – ಕಮಿಷನರ್ Read More »

ಮಂಗಳೂರಿನಿಂದ ಕೊಟ್ಟಿಗೆಹಾರಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ

ಸಮಗ್ರ ನ್ಯೂಸ್: ಮಂಗಳೂರಿನಿಂದ ಕೊಟ್ಟಿಗೆಹಾರಕ್ಕೆ ತೆರಳುತ್ತಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಮೂಡಬಿದಿರೆಯ ಬನ್ನಡ್ಕದ ಎಸ್ ಕೆಎಫ್ ಬಳಿಯಲ್ಲಿ ನಡೆದಿದೆ. ಇಂದು ಬೆಳಗ್ಗೆ 7 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಕೆಕೆಬಿ ಹೆಸರಿನ ಬಸ್ ಮಗುಚಿ ಬಿದ್ದ ಬಸ್ ಆಗಿದ್ದು, ಚಾಲಕ ಹಾಗೂ ಓರ್ವ ಮಹಿಳಾ ಪ್ರಯಾಣಿಕಳಿಕೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಬನ್ನಡ್ಕದ ಎಸ್ ಕೆ ಎಫ್ ಬಳಿ ಎದುರಿನಿಂದ ಬರುತ್ತಿದ್ದ ಆಟೋಗೆ ದಾರಿ ಕೊಡುವ ವೇಳೆ ಏಕಾಏಕಿ ಚಾಲಕನ ನಿಯಂತ್ರಣ

ಮಂಗಳೂರಿನಿಂದ ಕೊಟ್ಟಿಗೆಹಾರಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ Read More »

ಸುರತ್ಕಲ್: ಫಾಝಿಲ್ ಹಂತಕರು ಖಾಕಿ ಬಲೆಗೆ|6 ಮಂದಿ ಆರೋಪಿಗಳು ಅಂದರ್| ಕೊಲೆಯ ಹಿಂದಿದೆ ರೋಚಕ ಕಹಾನಿ

ಸಮಗ್ರ ನ್ಯೂಸ್: ಸುರತ್ಕಲ್‌ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣವನ್ನು ಕೊನೆಗೂ ಭೇದಿಸಿದ ಮಂಗಳೂರು ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಮತ್ತಷ್ಟು ಜನರ ಹತ್ಯೆಗೆ ಪಟ್ಟಿ ಸಿದ್ಧಪಡಿಸಿದ್ದರು ಎಂಬ ಆಘಾತಕಾರಿ ವಿಷಯ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಅಜಿತ್(31) ಸುಹಾಸ್ ಶೆಟ್ಟಿ (29) ಮಹೋನ್ (26) ಗಿರಿಧರ್ (23) ಅಭಿಷೇಕ್ (21) ಶ್ರೀನಿವಾಸ್ (23) ದೀಕ್ಷಿತ್ (21) ಬಂಧಿತ ಆರೋಪಿಗಳು . ಪ್ರಕರಣದಲ್ಲಿ ಮತ್ತಷ್ಟು ಜನರು ಭಾಗಿಯಾಗಿದ್ದು ಅವರ ಬಂಧನಕ್ಕೆ ಬಲೆ ಬೀಸಲಾಗಿದೆ. ಬಂಧಿತರೆಲ್ಲರೂ ಅಪರಾಧ ಹಿನ್ನೆಲೆಯುಳ್ಳವರಾಗಿದ್ದು,

ಸುರತ್ಕಲ್: ಫಾಝಿಲ್ ಹಂತಕರು ಖಾಕಿ ಬಲೆಗೆ|6 ಮಂದಿ ಆರೋಪಿಗಳು ಅಂದರ್| ಕೊಲೆಯ ಹಿಂದಿದೆ ರೋಚಕ ಕಹಾನಿ Read More »

ಖಾಸಗಿ ಬಸ್ ಮತ್ತು ಓಮ್ನಿ ಡಿಕ್ಕಿ; ನಾಲ್ವರು ಸಾವು,ಮೂವರಿಗೆ ಗಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಸಮೀಪ ಖಾಸಗಿ ಬಸ್ ಮತ್ತು ಓಮ್ನಿ ನಡುವೆ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಾಳಗುಪ್ಪ ಸಮೀಪದ ಬಳೆಗಾರು ಬಳಿ ಅಪಘಾತ ಸಂಭವಿಸಿದೆ. ಮೃತಪಟ್ಟವರು ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲದವರು. ಜೋಗ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆಯಲ್ಲಿ ಎದುರಿನಿಂದ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಸಾಗರ ಗ್ರಾಮಾಂತರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಬಸ್ ಚಾಲಕ

ಖಾಸಗಿ ಬಸ್ ಮತ್ತು ಓಮ್ನಿ ಡಿಕ್ಕಿ; ನಾಲ್ವರು ಸಾವು,ಮೂವರಿಗೆ ಗಾಯ Read More »

ಮೃತದೇಹ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಪಲ್ಟಿ

ತೀರ್ಥಹಳ್ಳಿ: ಆಗುಂಬೆ ಸಮೀಪದ ನೇರಲಕೊಡಿಗೆ ಗ್ರಾಮದ ಸಮೀಪ ಸೋಮವಾರ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಭಾವೀಕೆರೆ ನಿವಾಸಿ ರಾಮನಾಯ್ಕ (68) ಅವರು ಮಂಗಳೂರಿನ ವೆನ್‌ಲಾಕ್‌ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಮೃತದೇಹ ಸಾಗಿಸುತ್ತಿದ್ದಾಗ ಘಟನೆ ನಡೆದಿದೆ. ಆಂಬುಲೆನ್ಸ್‌ನಲ್ಲಿದ್ದ ರಾಮಾನಾಯ್ಕ ಅವರ ಮಗಳು, ಸಂಬಂಧಿಕರು ಹಾಗೂ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮೃತದೇಹ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಪಲ್ಟಿ Read More »