ಕ್ರೈಂ

ಕೊಲೆಯಾದ ಮಸೂದ್ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್ಡಿಕೆ; 5 ಲಕ್ಷ ನೆರವು ನೀಡಿಕೆ

ಸಮಗ್ರ ನ್ಯೂಸ್: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಇತ್ತೀಚೆಗೆ ದುಷ್ಕರ್ಮಿಗಳಿಂದ ಕೊಲೆಯಾದ ಯುವಕ ಮಸೂದ್ ಅವರ ಕಳಂಜದ ನಿವಾಸಕ್ಕೆ ತೆರಳಿದರು. ಈ ವೇಳೆ ಮನೆಯವರಿಗೆ ಸಾಂತ್ವನ ಹೇಳಿದ ಅವರು 5 ಲಕ್ಷ ಅರ್ಥಿಕ ನೆರವು ನೀಡಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್, ಭೋಜೆಗೌಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜೆಡಿಎಸ್ ಮುಖಂಡರು ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿದ್ದರು.

ಕೊಲೆಯಾದ ಮಸೂದ್ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್ಡಿಕೆ; 5 ಲಕ್ಷ ನೆರವು ನೀಡಿಕೆ Read More »

ಮೃತ ಪ್ರವೀಣ್ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್ಡಿಕೆ| ಸಾಂತ್ವನದೊಂದಿಗೆ 5 ಲಕ್ಷ ಚೆಕ್ ವಿತರಣೆ| ಎನ್ಐಎ ಗೆ ಕೇಸ್ ಹಸ್ತಾಂತರವೇ ಮೂರ್ಖತನ

ಸಮಗ್ರ ನ್ಯೂಸ್: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ‌ನೆಟ್ಟಾರು ಅವರ ನಿವಾಸಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಭೇಟಿ ನೀಡಿದರು. ಈ ವೇಳೆ ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳಿದ ಮಾಜಿ ಸಿಎಂ ಕುಮಾರಸ್ವಾಮಿ 5 ಲಕ್ಷ ರೂಪಾಯಿಗಳ ಚೆಕ್ ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಪ್ರವೀಣ್ ಪತ್ನಿ ಮತ್ತು ಅವರ ತಾಯಿ ಹೆಸರಲ್ಲಿ 5 ಲಕ್ಷ ಚೆಕ್ ನೀಡಿದ್ದಾರೆ. ಮೃತ ಮಸೂದ್ ಕುಟುಂಬಕ್ಕೂ ಶಾಂತಿ ಸಿಗಬೇಕು. ಆರೋಪಿಗಳನ್ನು ಎನ್ ಕೌಂಟರ್ ಮಾಡಬೇಕು. ಆಗ ನಮಗೆ

ಮೃತ ಪ್ರವೀಣ್ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್ಡಿಕೆ| ಸಾಂತ್ವನದೊಂದಿಗೆ 5 ಲಕ್ಷ ಚೆಕ್ ವಿತರಣೆ| ಎನ್ಐಎ ಗೆ ಕೇಸ್ ಹಸ್ತಾಂತರವೇ ಮೂರ್ಖತನ Read More »

ಫಾಝಿಲ್ ಹಂತಕರ ಬಗ್ಗೆ ಸಿಕ್ತಾ ಸ್ಪೋಟಕ ಸುಳಿವು? ನಾಲ್ವರಿಂದ ಕೃತ್ಯ‌ ನಡೆದಿರುವ ಬಗ್ಗೆ ಸಿಸಿಬಿಗೆ ಮಾಹಿತಿ

ಸಮಗ್ರ ನ್ಯೂಸ್: ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ಮೊಹಮ್ಮದ್ ಫಾಜಿಲ್ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರಿಗೆ ಸ್ಫೋಟಕ ಸುಳಿವು ಸಿಕ್ಕಿರುವ ಮಾಹಿತಿ ಲಭ್ಯವಾಗಿದೆ. ಕೃತ್ಯದಲ್ಲಿ ಭಾಗಿಯಾದ ಹಂತಕರ ಸುಳಿವು ಪೊಲೀಸರಿಗೆ ಲಭ್ಯವಾಗಿದೆ. ಶೀಘ್ರದಲ್ಲೇ ಸಿಸಿಬಿ ಪೊಲೀಸರು ಹಂತಕರನ್ನು ಬಂಧಿಸುವ ಬಗ್ಗೆ ಮಾಹಿತಿಗಳು ಲಭ್ಯವಾಗಿವೆ. ಆದರೆ ಇದುವರೆಗೆ ಪೊಲೊ ಯಾವುದೇ ಸ್ಪಷ್ಟನೆ ನೀಡಿಲ್ಲ.

ಫಾಝಿಲ್ ಹಂತಕರ ಬಗ್ಗೆ ಸಿಕ್ತಾ ಸ್ಪೋಟಕ ಸುಳಿವು? ನಾಲ್ವರಿಂದ ಕೃತ್ಯ‌ ನಡೆದಿರುವ ಬಗ್ಗೆ ಸಿಸಿಬಿಗೆ ಮಾಹಿತಿ Read More »

ಪ್ರವೀಣ್ ಹಂತಕರಿಗೆ ರಾಜಧಾನಿ ನಂಟು? ರಾತ್ರೋರಾತ್ರಿ ಬೆಂಗಳೂರಿನ ಇಬ್ಬರನ್ನು ಎತ್ತಾಕೊಂಡು ಬಂದ ಸುಳ್ಯ ಪೊಲೀಸರು!

ಸಮಗ್ರ ನ್ಯೂಸ್: ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್​​ ನೆಟ್ಟಾರ್​​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿ ಇಬ್ಬರು ಆರೋಪಿಗಳನ್ನು ಸುಳ್ಯ ಪೋಲಿಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಕೆ.ಜಿ ಹಳ್ಳಿಯಲ್ಲಿ ಅಡಗಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ಮಧ್ಯರಾತ್ರಿ ಅಪರೇಷನ್ ನಡೆಸಿ ವಶಕ್ಕೆ ಪಡೆದ ತಂಡ, ವಶಕ್ಕೆ ಪಡೆದು ಮಂಗಳೂರಿಗೆ ಕರೆದೊಯ್ಯಲಾಗಿದೆ. ನಿನ್ನೆ ಬೆಳಗ್ಗೆ ಬೆಂಗಳೂರಿಗೆ ಬಂದಿದ್ದ ಸ್ಪೆಷಲ್ ಟೀಂ ನಿನ್ನೆ ಬೆಳಗ್ಗೆಯಿಂದಲೂ ಕಾರ್ಯಾಚರಣೆ ನಡೆಸಿದ್ದರು. ಶಂಕಿತರು ಇದ್ದ ಮನೆ ಸುತ್ತುವರೆದು ರಾತ್ರಿ ವಶಕ್ಕೆ ಪಡೆಯಲಾಗಿದ್ದು, ಇಬ್ಬರನ್ನೂ ಮಂಗಳೂರಿಗೆ ಕರೆದೊಯ್ದಿದ್ದಾರೆ. HRBR

ಪ್ರವೀಣ್ ಹಂತಕರಿಗೆ ರಾಜಧಾನಿ ನಂಟು? ರಾತ್ರೋರಾತ್ರಿ ಬೆಂಗಳೂರಿನ ಇಬ್ಬರನ್ನು ಎತ್ತಾಕೊಂಡು ಬಂದ ಸುಳ್ಯ ಪೊಲೀಸರು! Read More »

ಮಂಗಳೂರು: ಇಯರ್ ಫೋನ್ ಎಫೆಕ್ಟ್ |ರೈಲು ಢಿಕ್ಕಿ ಹೊಡೆದು ಯುವಕ ಸಾವು

ಮಂಗಳೂರು: ರೈಲು ಢಿಕ್ಕಿ ಹೊಡೆದು ಯುವಕ ಸಾವನ್ನಪ್ಪಿರುವ ಘಟನೆ ಎಕ್ಕೂರು ಬ್ರಿಡ್ಜ್ ಕೆಳಗಡೆ ರೈಲ್ವೇ ಹಳಿಯಲ್ಲಿ ನಡೆದಿದೆ. ಯುವಕನ ಕಿವಿಯಲ್ಲಿ ಇಯರ್ ಫೋನ್ ಇದ್ದು, ರೈಲು ಬರುವ ಸದ್ದು ಕೇಳದೆ ಢಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ. ಇನ್ನು ಈ ಬಗ್ಗೆ ರೈಲ್ವೇ ಪೊಲೀಸರಿಂದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಗಳೂರು: ಇಯರ್ ಫೋನ್ ಎಫೆಕ್ಟ್ |ರೈಲು ಢಿಕ್ಕಿ ಹೊಡೆದು ಯುವಕ ಸಾವು Read More »

ಪ್ರವೀಣ್ ನೆಟ್ಟಾರು ಹತ್ಯೆಯ ಸ್ಪೋಟಕ‌ ಸತ್ಯ ಬಯಲು|‌ ಬಾಡಿಗೆ ಮನೆಯಲ್ಲೇ ಕುಳಿತು ಹತ್ಯೆಗೆ ಸಂಚು ರೂಪಿಸಿದ್ದ ಹಂತಕರು

ಸಮಗ್ರ ನ್ಯೂಸ್: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ಬೆನ್ನಟ್ಟಿದ ಸ್ಫೋಟಕ ಸತ್ಯವೊಂದು ಬಯಲಾಗಿದೆ. ಪೊಲೀಸರ ಒಂದು ಟೀಮ್ ಕರ್ನಾಟಕದಲ್ಲಿ, ಮತ್ತೊಂದು ಟೀಮ್ ಕೇರಳದಲ್ಲಿ, ಮತ್ತೊಂದು ಟೀಮ್ ಟೆಕ್ನಿಕಲ್ ಸಾಕ್ಷ್ಯ ಕಲೆ ಹಾಕುತ್ತಿದೆ. ಇನ್ನೊಂದು ತಂಡ ಆರೋಪಿಗಳಿಂದ ಸತ್ಯ ಹೊರಹಾಕಿಸುವ ಪ್ರಯತ್ನದಲ್ಲಿದೆ. ಸದ್ಯ ಈಗ ಪೊಲೀಸರ ತನಿಖೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಪೂರ್ವನಿಯೋಜಿತ ಕೃತ್ಯ ಎನ್ನುವುದು ದೃಢಪಟ್ಟಿದೆ. ಹಾಗೂ ಹತ್ಯೆಗೆ ಯಾವ ರೀತಿ ಸಂಚು ರೂಪಿಸಲಾಗಿತ್ತು ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ

ಪ್ರವೀಣ್ ನೆಟ್ಟಾರು ಹತ್ಯೆಯ ಸ್ಪೋಟಕ‌ ಸತ್ಯ ಬಯಲು|‌ ಬಾಡಿಗೆ ಮನೆಯಲ್ಲೇ ಕುಳಿತು ಹತ್ಯೆಗೆ ಸಂಚು ರೂಪಿಸಿದ್ದ ಹಂತಕರು Read More »

ಮಂಗಳೂರು: ಪತ್ತೆಯಾಯ್ತಾ ಫಾಝಿಲ್ ಹತ್ಯೆಗೆ ಬಳಸಿದ್ದ ಕಾರು?

ಸಮಗ್ರ ನ್ಯೂಸ್: ಸುರತ್ಕಲ್‌ ನಲ್ಲಿ ನಡೆದ ಫಾಜಿಲ್‌ ಹತ್ಯೆಗೆ ಬಳಸಿದ ಇಯಾನ್ ಕಾರು ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. ರವಿವಾರ ಇನ್ನಾ ಗ್ರಾಮದ ಸ್ಥಳೀಯರು ಕಾರನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕಾರು ಕಳೆದ ಮೂರು ದಿನದಿಂದ ಇನ್ನಾ ಗ್ರಾಮದ ಉಕ್ಕುಡ ಎಂಬಲ್ಲಿ ನಿಂತಿತ್ತು. ಇಂದು ಮಂಗಳೂರು ಪೊಲೀಸರಿಗೆ ಸ್ಥಳೀಯರು ಮೆಸೇಜ್‌ ಮಾಡಿ ಮಾಹಿತಿ ನೀಡಿದ್ದಾರೆ. ಮಂಗಳೂರು ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಇದು ಫಾಝಿಲ್ ಕೊಲೆ ಕೃತ್ಯದಲ್ಲಿ ಬಳಸಿದ ಕಾರು ಎಂದು

ಮಂಗಳೂರು: ಪತ್ತೆಯಾಯ್ತಾ ಫಾಝಿಲ್ ಹತ್ಯೆಗೆ ಬಳಸಿದ್ದ ಕಾರು? Read More »

ಸುಳ್ಯ: ಅಕ್ರಮವಾಗಿ ಮರದ ದಿಮ್ಮಿ ಸಾಗಾಟ| ನಾಲ್ಕು ಮಂದಿಯ ವಿರುದ್ದ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಪರವಾನಿಗೆ ಇಲ್ಲದೆ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ನಾಲ್ವರ ವಿರುದ್ಧ ಸುಳ್ಯ ಅರಣ್ಯ ಇಲಾಖೆ ಸಿಬ್ಬಂದಿಯು ಪ್ರಕರಣ ದಾಖಲಿಸಿಕೊಂಡಿದ್ದು, ಕೃತ್ಯಕ್ಕೆ ಬಳಸಿದ ವಾಹನ ಹಾಗೂ ಮರದ ದಿಮ್ಮಿಗಳನ್ನು ವಶಪಡಿಸಿಕೊಂಡಿದ್ದಾರೆ. ಪರವಾನಿಗೆ ಇಲ್ಲದೆ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಮಹಮ್ಮದ್ ಶಫೀಕ್ ಅಡ್ಕಾರ್, ಸುಂದರ್ ಅಡ್ಕಾರ್, ಫೈಝಲ್ ಅಡ್ಕಾರ್ ಎಂಬುವವರನ್ನು ವಶಕ್ಕೆ ಪಡೆದಿದ್ದು, ಈ ಮೂವರ ಹೇಳಿಕೆಯ ಆಧಾರದ ಮೇರೆಗೆ ಪ್ರಮುಖ ಆರೋಪಿ ಅಬ್ದುಲ್ ಮಜೀದ್ ನಡುವಡ್ಕ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ಸುಳ್ಯದ

ಸುಳ್ಯ: ಅಕ್ರಮವಾಗಿ ಮರದ ದಿಮ್ಮಿ ಸಾಗಾಟ| ನಾಲ್ಕು ಮಂದಿಯ ವಿರುದ್ದ ಪ್ರಕರಣ ದಾಖಲು Read More »

ಫಾಝಿಲ್ ಹತ್ಯೆ ಪ್ರಕರಣ| ಕೃತ್ಯಕ್ಕೆ ಬಳಸಿದ್ದ ಕಾರು‌ ಮತ್ತು ಚಾಲಕ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಮಂಗಳೂರಿನ ಸುರತ್ಕಲ್ ನ ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಕೊಲೆಗೆ ಬಳಸಿದ್ದ ಕಾರು ಮತ್ತು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫಾಜಿಲ್ ಮೇಲೆ ದಾಳಿ ವೇಳೆ ಬಳಸಿದ್ದ ಕಾರು ಮತ್ತು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರು ಚಾಲಕ ಅಜಿತ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸುರತ್ಕಲ್ ನಲ್ಲಿ ಗುರುವಾರ ರಾತ್ರಿ ಫಾಝಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಘಟನೆ ಸಂಬಂಧ ಇದೀಗ ಹಂತಕರು ಬಳಸಿದ್ದ ಕಾರು

ಫಾಝಿಲ್ ಹತ್ಯೆ ಪ್ರಕರಣ| ಕೃತ್ಯಕ್ಕೆ ಬಳಸಿದ್ದ ಕಾರು‌ ಮತ್ತು ಚಾಲಕ ಪೊಲೀಸ್ ವಶಕ್ಕೆ Read More »

ಪ್ರವೀಣ್ ಆರೋಪಿಗಳು ಮತ್ತೆ ಪೊಲೀಸ್ ಕಸ್ಟಡಿಗೆ; 5 ದಿನ ವಿಚಾರಣೆಗಾಗಿ ಗೌಪ್ಯ ಸ್ಥಳಕ್ಕೆ ಆರೋಪಿಗಳು

ಸಮಗ್ರ ನ್ಯೂಸ್: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಇಬ್ಬರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದ್ದು, ಗೌಪ್ಯ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಝಾಕಿರ್ ಸವಣೂರು ಹಾಗೂ ಶಫೀಕ್ ಬೆಳ್ಳಾರೆ ಎಂಬುವವರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈ ವೇಳೆ ನ್ಯಾಯಾಲಯ ಆರೋಪಿಗಳನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಕಸ್ಟಡಿಗೆ ಪಡೆದ ಪೊಲೀಸರು ಇದೀಗ ಆರೋಪಿಗಳನ್ನು ಗೌಪ್ಯ ಸ್ಥಳಕ್ಕೆ ಕರೆದೊಯ್ದು

ಪ್ರವೀಣ್ ಆರೋಪಿಗಳು ಮತ್ತೆ ಪೊಲೀಸ್ ಕಸ್ಟಡಿಗೆ; 5 ದಿನ ವಿಚಾರಣೆಗಾಗಿ ಗೌಪ್ಯ ಸ್ಥಳಕ್ಕೆ ಆರೋಪಿಗಳು Read More »