ಪ್ರವೀಣ್ ಹತ್ಯೆ ಪ್ರಕರಣ| ಮತ್ತಿಬ್ಬರು ಆರೋಪಿಗಳು ಅರೆಸ್ಟ್
ಸಮಗ್ರ ನ್ಯೂಸ್: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಾಲ್(28) ಹಾಗೂ ಸುಳ್ಯ ನಾವೂರು ಮಹಾಮ್ಮಾಯಿ ದೇವಸ್ಥಾನದ ಬಳಿಯ ನಿವಾಸಿ ಆಬಿದ್(22) ಎಂದು ಗುರುತಿಸಲಾಗಿದೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ. ಎಲ್ಲಾ ಆರೋಪಿಗಳ ಮಾಹಿತಿ ಲಭ್ಯವಾಗಿದ್ದು, ಉಳಿದವರು ಸದ್ಯದಲ್ಲೇ ಬಂಧನವಾಗಲಿದ್ದಾರೆ ಎಂದು ಎಸ್.ಪಿ ಋಷಿಕೇಶ್ ಸೊನಾವಣೆ ತಿಳಿಸಿದ್ದಾರೆ.
ಪ್ರವೀಣ್ ಹತ್ಯೆ ಪ್ರಕರಣ| ಮತ್ತಿಬ್ಬರು ಆರೋಪಿಗಳು ಅರೆಸ್ಟ್ Read More »










