ಕ್ರೈಂ

ರಸ್ತೆ ಅಪಘಾತ ದಲ್ಲಿ ವೈದ್ಯರು ಸಾವು

ಕೊಪ್ಪಳ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ನ ಮಂಗಳಪುರ ಬಳಿ ಗುರುವಾರ ನಡೆದ ಅಪಘಾತದಲ್ಲಿ ತಾಲ್ಲೂಕಿನ ಬೆಟಗೇರಿ ಗ್ರಾಮದ ಆರ್‌ಎಂಪಿ ವೈದ್ಯ ಕಲಿಗಣನಾಥ (65) ಮೃತಪಟ್ಟಿದ್ದಾರೆ. ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ನಜ್ಜುಗುಜ್ಜಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆ ಮೇಲೆಲ್ಲಾ ದಿನಬಳಕೆ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ಅಪಘಾತ ದಲ್ಲಿ ವೈದ್ಯರು ಸಾವು Read More »

ಎಂಟು ತಿಂಗಳಲ್ಲಿ ಒಂದೇ ಕುಟುಂಬದ ನಾಲ್ವರು ಬಲಿ

ಶಿವಮೊಗ್ಗ: ಕಳೆದ ಎಂಟು ತಿಂಗಳಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆಯೊಂದು ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯಲ್ಲಿ ನಡೆದಿದೆ. ಮೇಗರವಳ್ಳಿಯ ಕೆಪಿ ರಸ್ತೆಯ ಸಂಜೀವ ಅವರ ಕುಟುಂಬದಲ್ಲಿ ಸರಣಿ ಸಾವುಗಳು ಸಂಭವಿಸಿವೆ. ಇದರಿಂದ ಆ ಕುಟುಂಬದವರು ಕಂಗಾಲಾಗಿದ್ದಾರೆ. ಹೌದು, ಸಂಜೀವ ಅವರ ಪುತ್ರಿ ಅಂಗನವಾಡಿ ಕಾರ್ಯಕರ್ತೆ ಪದ್ಮಾವತಿ ಅನಾರೋಗ್ಯದ ಕಾರಣ ಬುಧವಾರ ಮೃತಪಟ್ಟಿದ್ದರು. ಎರಡು ತಿಂಗಳ ಹಿಂದೆ ಅವರ ಮೊದಲ ಪುತ್ರಿ ಪೂರ್ಣಿಮಾ ಸಾವನ್ನಪ್ಪಿದ್ದರು. ಈ ಮೊದಲು ಸಂಜೀವ ಅವರ ತಾಯಿ ಮೃತಪಟ್ಟಿದ್ದರು. ಗುರುವಾರ ಬೆಳಗಿನ ಜಾವ ಸಂಜೀವ

ಎಂಟು ತಿಂಗಳಲ್ಲಿ ಒಂದೇ ಕುಟುಂಬದ ನಾಲ್ವರು ಬಲಿ Read More »

ಫಾಝಿಲ್ ಹತ್ಯೆ‌ ಪ್ರಕರಣ| 14 ಮಂದಿ ಪೊಲೀಸರ ವಶಕ್ಕೆ| ಜನಸ್ತೋಮದ ಮಧ್ಯೆ ಅಂತ್ಯಸಂಸ್ಕಾರಕ್ಕೆ ಸಿದ್ದತೆ

ಸಮಗ್ರ ನ್ಯೂಸ್: ಸುರತ್ಕಲ್’ನಲ್ಲಿ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ 14 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಎರಡು ತಂಡಗಳನ್ನು ರಚಿಸಿಕೊಂಡು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಈಗಾಗಲೇ 14 ಮಂದಿಯನ್ನು ವಶಕ್ಕೆ ತೆಗೆದುಕೊಂಡು ಪೊಲೀಸರು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಇನ್ನೊಂದೆಡೆಯಲ್ಲಿ ಮಂಗಲಪೇಟೆಯ ಮಸೀದಿಯಲ್ಲಿ ಫಾಝಿಲ್ ಅಂತ್ಯ ಸಂಸ್ಕಾರಕ್ಕೆ ಸಿದ್ದತೆ ನಡೆಯುತ್ತಿದೆ. ಫಾಝಿಲ್ ಅಂತಿಮ ದರ್ಶನಕ್ಕೆ ನೂರಾರು ಜನ ಆಗಮಿಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಎಲ್ಲಡೆ ಹದ್ದಿನ ಕಣ್ಣು

ಫಾಝಿಲ್ ಹತ್ಯೆ‌ ಪ್ರಕರಣ| 14 ಮಂದಿ ಪೊಲೀಸರ ವಶಕ್ಕೆ| ಜನಸ್ತೋಮದ ಮಧ್ಯೆ ಅಂತ್ಯಸಂಸ್ಕಾರಕ್ಕೆ ಸಿದ್ದತೆ Read More »

ಪ್ರವೀಣ್ ಹತ್ಯೆ ‌ಪ್ರಕರಣ; ಮೂರನೇ ಆರೋಪಿ ಪೊಲೀಸ್ ವಶ

ಸಮಗ್ರ‌ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಕಳೆದ ಜುಲೈ 26ರಂದು ನಡೆದಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂಬಾತನನ್ನು ವಶಕ್ಕೆ ಪಡೆದಿದ್ದು, ಕಾಣಿಯೂರಿನಲ್ಲಿ ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಲಭಿಸಿದೆ. ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಬೆಳ್ಳಾರೆಯ ಶಫೀಕ್‌ (27) ಮತ್ತು ಸವಣೂರಿನ ಝಾಕೀರ್‌ (29) ಬಂಧಿತರು. ಈ ಪೈಕಿ ಓರ್ವನನ್ನು ಕೇರಳದಲ್ಲಿ

ಪ್ರವೀಣ್ ಹತ್ಯೆ ‌ಪ್ರಕರಣ; ಮೂರನೇ ಆರೋಪಿ ಪೊಲೀಸ್ ವಶ Read More »

ರಾಜಕೀಯ ಒತ್ತಡಕ್ಕೆ ಮಣಿದು‌ ಪೊಲೀಸರು ಅಮಾಯಕರನ್ನು ಬೇಟೆಯಾಡುತ್ತಿದ್ದಾರೆ – ಪಿಎಫ್ಐ ಆರೋಪ

ಸಮಗ್ರ ನ್ಯೂಸ್: ಸುಳ್ಯದಲ್ಲಿ ನಡೆದ ಪ್ರವೀಣ್ ಹತ್ಯೆಘಟನೆಗೆ ಸಂಬಂಧಿಸಿದಂತೆ ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ನಡೆಸುತ್ತಿರುವ ಬಂಧನ ಕಾರ್ಯಾಚರಣೆ ಖಂಡನಾರ್ಹವಾಗಿದೆ. ಬಿಜೆಪಿ ಸರಕಾರದ ಒತ್ತಡದಲ್ಲಿ ಪೊಲೀಸರು ಅಮಾಯಕರ ಬೇಟೆಯಾಡುವುದನ್ನು ಕೂಡಲೇ ನಿಲ್ಲಿಸಬೇಕೆಂದು ಪಾಪ್ಯುಲರ್ ಫ್ರಂಟ್‌ ಆರೋಪಿಸಿದೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಟಿ ನಡೆಸಿದ‌ ಪಿಎಫ್ಐ ಸಂಘಪರಿವಾರದ ಯಾವುದೇ ಕಾರ್ಯಕರ್ತರ ಹತ್ಯೆಗಳು ನಡೆದಾಗಲೂ ಬಿಜೆಪಿ ಸಂಸದರು, ಸಚಿವರು ಗೊಂದಲಕಾರಿ ಹೇಳಿಕೆಗಳನ್ನು ನೀಡುವುದು, ಪಾಪ್ಯುಲರ್ ಫ್ರಂಟ್ ಮೇಲೆ ಆರೋಪ ಹೊರಿಸುವುದು, ನಂತರ ಜಿಲ್ಲೆಯ ಪೊಲೀಸರುಅಮಾಯಕ ಮುಸ್ಲಿಮ್ ಯುವಕರನ್ನು ರಾತ್ರೋರಾತ್ರಿ ವಿಚಾರಣೆಯ ನೆಪದಲ್ಲಿ ಬಂಧಿಸಿ

ರಾಜಕೀಯ ಒತ್ತಡಕ್ಕೆ ಮಣಿದು‌ ಪೊಲೀಸರು ಅಮಾಯಕರನ್ನು ಬೇಟೆಯಾಡುತ್ತಿದ್ದಾರೆ – ಪಿಎಫ್ಐ ಆರೋಪ Read More »

ಫಾಝಿಲ್ ಹತ್ಯೆ ಪ್ರಕರಣ| ನಿಷೇದಾಜ್ಞೆ ಇರುವ ಪ್ರದೇಶಗಳಲ್ಲಿ ಶುಕ್ರವಾರದ ಪ್ರಾರ್ಥನೆ ನಡೆಸದಿರಲು ಪೊಲೀಸ್ ‌ಮನವಿ

ಸಮಗ್ರ ನ್ಯೂಸ್: ದೇಶವ್ಯಾಪಿ ಗಮನ ಸೆಳೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಗಳ ಬೆನ್ನಿಗೇ ನಗರ ಹೊರವಲಯದ ಸುರತ್ಕಲ್​​ನಲ್ಲಿ ಮತ್ತೊಬ್ಬ ಯುವಕನ ಕೊಲೆಯಾಗಿದೆ. ಈ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಇರುವ ಸೂಕ್ಷ್ಮ ಪ್ರದೇಶಗಳ ಮಸೀದಿಗಳಲ್ಲಿ ಇಂದು ಪ್ರಾರ್ಥನೆ ಬೇಡ ಎಂದು ಮುಸ್ಲಿಮರಿಗೆ ಪೊಲೀಸರು ಮನವಿ ಮಾಡುತ್ತಿದ್ದಾರೆ. ಮನೆಗಳಲ್ಲಿ ಅಥವಾ ನಿಷೇಧಾಜ್ಞೆ ಇಲ್ಲದ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಿ ಪ್ರಾರ್ಥನೆ ಮಾಡುವಂತೆ ಪೊಲೀಸರು ವಿನಂತಿಸಿದ್ದಾರೆ. ಫಾಜಿಲ್​ ಮಂಗಲಪೇಟೆ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರು ನಗರದ ಸುರತ್ಕಲ್​, ಮುಲ್ಕಿ ಪೊಲೀಸ್ ಠಾಣೆ, ಬಜ್ಪೆ,

ಫಾಝಿಲ್ ಹತ್ಯೆ ಪ್ರಕರಣ| ನಿಷೇದಾಜ್ಞೆ ಇರುವ ಪ್ರದೇಶಗಳಲ್ಲಿ ಶುಕ್ರವಾರದ ಪ್ರಾರ್ಥನೆ ನಡೆಸದಿರಲು ಪೊಲೀಸ್ ‌ಮನವಿ Read More »

ಮಂಗಳೂರು:ಕೊಲೆ ಕೃತ್ಯ ಹಿನ್ನಲೆ; ಜಿಲ್ಲೆಯ ಈ ಶಾಲಾ ಕಾಲೇಜುಗಳಿಗೆ ಇಂದು ರಜೆ

ಸಮಗ್ರ ನ್ಯೂಸ್: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಾದ ಎರಡು ದಿನಗಳಲ್ಲೇ ಮತ್ತೊಂದು ನೆತ್ತರು ಹರಿದಿದೆ. ಕಳೆದ ರಾತ್ರಿ ಸುರತ್ಕಲ್ ನಲ್ಲಿ ಮತ್ತೋರ್ವ ಯುವಕ ಫಾಜಿಲ್ ಹತ್ಯೆಯಾಗಿದ್ದು, ಕರಾವಳಿಯ ಜನತೆ ಬೆಚ್ಚಿ ಬೀಳುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ನಗರ‌ ಪೊಲೀಸ್‌ ಆಯುಕ್ತರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನು ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಬಜಪೆ, ಸುರತ್ಕಲ್‌, ಮೂಲ್ಕಿ, ಪಣಂಬೂರು ಪೊಲೀಸ್‌

ಮಂಗಳೂರು:ಕೊಲೆ ಕೃತ್ಯ ಹಿನ್ನಲೆ; ಜಿಲ್ಲೆಯ ಈ ಶಾಲಾ ಕಾಲೇಜುಗಳಿಗೆ ಇಂದು ರಜೆ Read More »

ಸುರತ್ಕಲ್ ನಲ್ಲಿ ಯುವಕನ ಕಗ್ಗೊಲೆ; ವೈಯಕ್ತಿಕ ದ್ವೇಷಕ್ಕೆ ಬಲಿಯಾದ ಫಾಝಿಲ್?

ಸಮಗ್ರ ನ್ಯೂಸ್: ಸುರತ್ಕಲ್ ಪೇಟೆಯಲ್ಲಿ ಮತ್ತೊಬ್ಬ ಯುವಕನ ಮೇಲೆ ತಲವಾರು ದಾಳಿ ನಡೆದಿದೆ. ಬಟ್ಟೆ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಯುವಕನನ್ನು ಭೀಕರವಾಗಿ ಕಡಿದು ಹಾಕಿದ್ದಾರೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಕಾಟಿಪಳ್ಳ ಮಂಗಳಪೇಟೆ ನಿವಾಸಿ ಫಾಜಿಲ್ (26) ಮೃತ ಯುವಕ. ಎರಡು ಮುಸ್ಲಿಂ ತಂಡಗಳ ನಡುವೆ ವೈಯಕ್ತಿಕ ದ್ವೇಷದಿಂದ ಈ ಕೊಲೆ ನಡೆದಿದೆ ಎಂದು ಹೇಳಲಾಗಿದೆ. ಸಂಬಂಧಿಕರಿಂದಲೇ ಈ ಕೃತ್ಯ ಸಂಭವಿಸಿದೆ ಎಂದು ಹೇಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಸುನ್ನಿ ಮುಸ್ಲಿಂ ಹುಡುಗಿಯನ್ನು ಷಿಯಾ ಮುಸ್ಲಿಂ

ಸುರತ್ಕಲ್ ನಲ್ಲಿ ಯುವಕನ ಕಗ್ಗೊಲೆ; ವೈಯಕ್ತಿಕ ದ್ವೇಷಕ್ಕೆ ಬಲಿಯಾದ ಫಾಝಿಲ್? Read More »

ಕರಾವಳಿಯಲ್ಲಿ ಮತ್ತೆ ಹರಿದ ನೆತ್ತರ ಕೋಡಿ| ಸುರತ್ಕಲ್ ನಲ್ಲಿ ಇಬ್ಬರು ಯುವಕರ ಮೇಲೆ ಮಾರಕದಾಳಿ; ಓರ್ವ ಕಗ್ಗೊಲೆ

ಸಮಗ್ರ ನ್ಯೂಸ್: ಸುರತ್ಕಲ್ ಪೇಟೆಯಲ್ಲಿ ಮತ್ತೊಬ್ಬ ಯುವಕನ ಮೇಲೆ ತಲವಾರು ದಾಳಿ ನಡೆದಿದೆ. ಬಟ್ಟೆ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಯುವಕನನ್ನು ಭೀಕರವಾಗಿ ಕಡಿದು ಹಾಕಿದ್ದಾರೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾನೆ ಎನ್ನುವ ಮಾಹಿತಿಗಳಿವೆ. ಕಾಟಿಪಳ್ಳ ಮಂಗಳಪೇಟೆ ನಿವಾಸಿ ಫಾಜಿಲ್ (26) ಮೃತ ಯುವಕ. ರಾತ್ರಿ ಎಂಟು ಗಂಟೆ ಸುಮಾರಿಗೆ ಘಟನೆ ನಡೆದಿದೆ.‌ ಹಳೆ ದ್ವೇಷಕ್ಕೆ ಕೃತ್ಯ ನಡೆದಿದೆಯೋ, ವೈಯಕ್ತಿಕ ದ್ವೇಷದಿಂದ ನಡೆದಿದೆಯೋ ಗೊತ್ತಿಲ್ಲ. ಮಾರಣಾಂತಿಕ ದಾಳಿ ನಡೆದ ಕೂಡಲೇ ಎಜೆ ಆಸ್ಪತ್ರೆಗೆ ತರಲಾಗಿತ್ತು. ಬಿಜೆಪಿ ಕಾರ್ಯಕರ್ತ ಪ್ರವೀಣ್

ಕರಾವಳಿಯಲ್ಲಿ ಮತ್ತೆ ಹರಿದ ನೆತ್ತರ ಕೋಡಿ| ಸುರತ್ಕಲ್ ನಲ್ಲಿ ಇಬ್ಬರು ಯುವಕರ ಮೇಲೆ ಮಾರಕದಾಳಿ; ಓರ್ವ ಕಗ್ಗೊಲೆ Read More »

ಮಂಗಳೂರು: ಮತ್ತೊಬ್ಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ| ಗಾಯಾಳು ಸಾವು

ಸಮಗ್ರ ನ್ಯೂಸ್: ಬೆಳ್ಳಾರೆಯಲ್ಲಿ ಪ್ರವೀಣ್ ಕೊಲೆಯ ಬೆನ್ನಲ್ಲೇ ಮಂಗಳೂರಿನ ಸುರತ್ಕಲ್ ಸಮೀಪ ಕೊಲೆ ಯತ್ನ ನಡೆದಿದೆ. ಅಂಗಡಿಗೆ ನುಗ್ಗಿ ಯುವಕನಿಗೆ ಹಿಗ್ಗಾಮುಗ್ಗಾ ದಾಳಿ ನಡೆಸಿದ್ದು, ಗಾಯಾಳು ಚಿಂತಾಜನಕ ಎನ್ನುವ ಮಾಹಿತಿ ಲಭ್ಯವಾಗಿದೆ. ಫಾಝಿಲ್ ಎಂಬಾತನ ಮೇಲೆ ಹಲ್ಲೆ ನಡೆದಿದೆ. ಇಂದು ಸಂಜೆ ವೇಳೆಯಲ್ಲಿ ಈ ಘಟನೆ ನಡೆದಿದ್ದು, ಯಾವ ಕಾರಣಕ್ಕೆ ಹಲ್ಲೆ ನಡೆದಿದೆ ಎಂದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಆದರೆ ಗಾಯಾಳು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಮಂಗಳೂರು: ಮತ್ತೊಬ್ಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ| ಗಾಯಾಳು ಸಾವು Read More »