ಕ್ರೈಂ

ಗಾಯಕಿ‌ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು| ವಿಚ್ಛೇದನಕ್ಕೆ ಅರ್ಜಿ

ಸಮಗ್ರ ನ್ಯೂಸ್: ಪುತ್ತೂರಿನ ಖ್ಯಾತ ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಇದೀಗ ವಿಚ್ಚೇಧನಕ್ಕೆ ಪುತ್ತೂರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಅಖಿಲಾ ಪಜಿಮಣ್ಣು ಪುತ್ತೂರಿನ ಪಜಿಮಣ್ಣು ಎನ್ನುವ ಗ್ರಾಮದ ನಿವಾಸಿಯಾಗಿದ್ದು, ಕನ್ನಡ ಕೋಗಿಲೆ 1 ಹಾಗೂ 2ನೇ ಆವೃತ್ತಿಯಲ್ಲಿ ರನ್ನರ್ ಅಪ್ ಆಗಿರುವ ಅಖಿಲಾ ಪಜಿಮಣ್ಣು ತಮ್ಮ ಸುಮಧುರ ಕಂಠದಿಂದ ಎಲ್ಲರ ಮನೆ ಮಾತಾಗಿದ್ದಾರೆ. ಇದೀಗ ಅವರ ಬಾಳಲ್ಲಿ ಬಿರುಗಾಳಿ ಎದ್ದಿದ್ದು ಅಖಿಲಾ ಪಜಿಮಣ್ಣು ಮತ್ತು ಆಕೆಯ ಪತಿ ಟಿ.ಆರ್. ಧನರಾಜ್ […]

ಗಾಯಕಿ‌ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು| ವಿಚ್ಛೇದನಕ್ಕೆ ಅರ್ಜಿ Read More »

ಸುಹಾಸ್ ಶೆಟ್ಟಿ, ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ| ಪೊಲೀಸರ ವಿರುದ್ಧ NHRC ತನಿಖೆಗೆ ಆದೇಶ

ಸಮಗ್ರ ನ್ಯೂಸ್: ಕಳೆದ ತಿಂಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆಯಾಗಿತ್ತು. ಅದಾದ ನಂತರ ಕೆಲವೇ ದಿನಗಳಲ್ಲಿ ರೆಹಿಮಾನ್ ಎನ್ನುವ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಹೀಗಾಗಿ ಈ ಪ್ರಕರಣಗಳಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಮಧ್ಯಪ್ರವೇಶಿಸಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪೋಲೀಸರ ವಿರುದ್ಧ ತನಿಖೆ ನಡೆಸಿ 2 ವಾರದಲ್ಲಿ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತನಿಖಾ ವಿಭಾಗದ ಡಿಜಿಗೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ

ಸುಹಾಸ್ ಶೆಟ್ಟಿ, ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ| ಪೊಲೀಸರ ವಿರುದ್ಧ NHRC ತನಿಖೆಗೆ ಆದೇಶ Read More »

ಕಿಟಕಿ‌ ಬದಿಯ ಸೀಟಿಗಾಗಿ ಜಗಳ| ಯುವಕನಿಗೆ ಚೂರಿ ಇರಿತ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿದಾಗಿನಿಂದಲೂ, ಪುರುಷರಿಗೆ ಬಸ್ನಲ್ಲಿ ಕುಳಿತುಕೊಳ್ಳಲು ಸೀಟ್ ಸಿಗುವುದೇ ಅಪರೂಪ ಅಂತದರಲ್ಲಿ ಇದೀಗ ಬಸ್ ನಲ್ಲಿ ಕಿಟಕಿ ಪಕ್ಕ ಸೀಟ್ ಗಾಗಿ ಯುವಕರ ಮಧ್ಯ ಗಲಾಟೆ ನಡೆದು ಓರ್ವ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪಂಚಬಾಳೇಕುಂದ್ರಿ ಗ್ರಾಮದಿಂದ ಸಿಬಿಟಿಗೆ ಬರುತ್ತಿದ್ದ ಬಸ್​ನಲ್ಲಿ ಕಿಟಕಿ ಪಕ್ಕದ ಸೀಟ್​ಗಾಗಿ ಯುವಕರ ಮಧ್ಯೆ ಗಲಾಟೆ ನಡೆದಿದ್ದು, ಓರ್ವ ಯುವಕನಿಗೆ ಚಾಕು ಇರಿಯಲಾಗಿದೆ.ಗ್ರಾಮದ ಮಜ್ಜು ಸನದಿ(20) ಎಂಬ ಯುವಕ ಎದೆ ಭಾಗಕ್ಕೆ

ಕಿಟಕಿ‌ ಬದಿಯ ಸೀಟಿಗಾಗಿ ಜಗಳ| ಯುವಕನಿಗೆ ಚೂರಿ ಇರಿತ Read More »

ಪುತ್ತೂರು: ಬಾಡಿಗೆಗೆಂದು ತೆಗೆದುಕೊಂಡು ಹೋದ ಲಾರಿಯನ್ನೇ ಅಡವಿಟ್ಟ ಚಾಲಕ

ಸಮಗ್ರ ನ್ಯೂಸ್: ಲಾರಿಯನ್ನು ಬಾಡಿಗೆ ಓಡಿಸಲು ನೀಡಿದರೆ ಡ್ರೈವರ್ ಮಾತ್ರ ಅದನ್ನು ತೆಗೆದುಕೊಂಡು ಹೋಗಿ ಅಡವಿಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಇದೀಗ ಈ ಬಗ್ಗೆ ವಿಚಾರಿಸಲು ಹೋದ ಮಾಲಕನಿಗೆ ಜೀವ ಬೆದರಿಕೆ ಹಾಕಿರುವುದಾಗಿ ಸೋಮವಾರ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ನಿವಾಸಿ ಫರ್ವೀಝ್ ಎಂ. ಎಂಬವರು ದೂರು ನೀಡಿದ್ದು, ಲಾರಿ ಚಾಲಕ ಅಸಾಸುದ್ದೀನ್ ಫೈರೋಝ್ ಮತ್ತು ಮಂಗಳೂರಿನ ಕಿರಣ್ ಪ್ರಕರಣದ ಆರೋಪಿಗಳು ಎಂದು ತಿಳಿದುಬಂದಿದೆ. ಕಳೆದ ಮಾರ್ಚ್‌ನಲ್ಲಿ ಲಾರಿ ಮಾಲೀಕರು

ಪುತ್ತೂರು: ಬಾಡಿಗೆಗೆಂದು ತೆಗೆದುಕೊಂಡು ಹೋದ ಲಾರಿಯನ್ನೇ ಅಡವಿಟ್ಟ ಚಾಲಕ Read More »

ಮಂಗಳೂರು: ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಯುವಕರಿಬ್ಬರು ಸಾವು

ಸಮಗ್ರ ನ್ಯೂಸ್: ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಮಂಗಳೂರು ಹೊರವಲಯದ ಜಪ್ಪಿನಮೊಗರು ಬಳಿ ನಡೆದಿದೆ. ಮೃತರನ್ನು ಕೊಂಚಾಡಿಯ ಓಂಶ್ರೀ (24) ಮತ್ತು ಮಲ್ಲಿಕಟ್ಟೆಯ ಅಮನ್ ರಾವ್ (23) ಎಂದು ಗುರುತಿಸಲಾಗಿದೆ ಓಂಶ್ರೀ ಅವರು ದ.ಕ. ಜಿಲ್ಲಾ ಎನ್‌ಎಸ್‌ಯುಐ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪಘಾತವಾದ ಕಾರಿನಲ್ಲಿ ನಾಲ್ಕೈದು ಮಂದಿ ಪ್ರಯಾಣಿಸುತ್ತಿದ್ದು, ಕಾರನ್ನು ಅಮನ್ ರಾವ್ ಚಲಾಯಿಸುತ್ತಿದ್ದರು ಎನ್ನಲಾಗಿದೆ. ತಲಪಾಡಿ ಕಡೆಯಿಂದ ಪಂಪ್‌ವೆಲ್ ಕಡೆಗೆ ಬರುತ್ತಿದ್ದ

ಮಂಗಳೂರು: ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಯುವಕರಿಬ್ಬರು ಸಾವು Read More »

ಮಂಗಳೂರು: ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಯುವವೈದ್ಯ ಸಾವು

ಸಮಗ್ರ ನ್ಯೂಸ್: ಮಂಗಳೂರು ನಗರದ ನಂತೂರಿನ ತಾರೆತೋಟ ಬಳಿ ಸೋಮವಾರ ರಾತ್ರಿ ಕಾರೊಂದು ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ, ಸ್ಕಿಡ್ ಆಗಿ ಡಿವೈಡರ್ ಬಡಿದು ಸಂಭವಿಸಿದ ಅಪಘಾತದಲ್ಲಿ ಕಾರು ಚಲಾಯಿಸುತ್ತಿದ್ದ ಫಿಸಿಯೋಥೆರಪಿ ವೈದ್ಯರೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೂಲತಃ ಕೇರಳದ ಆಲಪ್ಪುಝ ನಿವಾಸಿ ಡಾ.ಮುಹಮ್ಮದ್ ಅಮಲ್ (29) ಮೃತಪಟ್ಟವರು ಎಂದು ತಿಳಿದು ಬಂದಿದೆ. ದೇರಳಕಟ್ಟೆ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಮುಗಿಸಿ ಅಲ್ಲಿಯೇ ಡ್ಯೂಟಿಗೆ ಸೇರಿದ್ದ ಡಾ.ಮುಹಮ್ಮದ್ ಅಮಲ್ ನಿನ್ನೆ ರಾತ್ರಿ 11:45ರ ಸುಮಾರಿಗೆ

ಮಂಗಳೂರು: ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಯುವವೈದ್ಯ ಸಾವು Read More »

ಮಂಗಳೂರು: ಮಗುವನ್ನು ಬಲಿಪಡೆದ ಸೇದಿ ಬಿಸಾಡಿದ ಬೀಡಿ

ಸಮಗ್ರ ನ್ಯೂಸ್: : ತಂದೆ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿದ ಮಗು ದಾರುಣ ಸಾವಿಗೀಡಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಡ್ಯಾರ್‌ನಲ್ಲಿ ವಾಸಿಸುತ್ತಿದ್ದ ಬಿಹಾರ ಮೂಲದ ದಂಪತಿ ಪುತ್ರ ಅನೀಶ್‌ ಎಂಬ ಮಗು ಮೃತಪಟ್ಟಿದೆ. ಬೀಡಿ ತುಂಡು ಗಂಟಲಲ್ಲಿ ಸಿಲುಕಿಕೊಂಡು ಅಸ್ವಸ್ಥಗೊಂಡಿದ್ದ ಮಗು ಚಿಕಿತ್ಸೆ ಫಲಿಸದೇ ವೆನ್ಲಾಕ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಮನೆಯ ನೆಲದಲ್ಲಿ ಬಿದ್ದಿದ್ದ ಬೀಡಿ ತುಂಡನ್ನು ಮಗು ನುಂಗಿತ್ತು. ಸ್ವಲ್ಪ ಹೊತ್ತಲ್ಲೇ ಅಸ್ವಸ್ಥಗೊಂಡ ಮಗುವನ್ನು ಮನೆಯವರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಗು ಕೊನೆಯುಸಿರೆಳೆದಿದೆ.ಘಟನೆಗೆ

ಮಂಗಳೂರು: ಮಗುವನ್ನು ಬಲಿಪಡೆದ ಸೇದಿ ಬಿಸಾಡಿದ ಬೀಡಿ Read More »

ಪುತ್ತೂರು: ಏಳು ತಿಂಗಳ ಗರ್ಭಿಣಿ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಪುತ್ತೂರು ನಗರದ ಚಿಕ್ಕಪುತ್ತೂರಿನಲ್ಲಿ ಜೂ. 15ರ ರಾತ್ರಿ ವರದಿಯಾಗಿದೆ. ಚಿಕ್ಕಪುತ್ತೂರಿನ ನಿವಾಸಿ, ಪುತ್ತಿಲ ಪರಿವಾರದ ಮುಖಂಡ ಚಿಂತನ್ ಅವರ ಪತ್ನಿ ರೇಶ್ಮಾ (28) ಮೃತ ದುರ್ದೈವಿ. ಏಳು ತಿಂಗಳ ಗರ್ಭಿಣಿಯಾಗಿದ್ದ ರೇಶ್ಮಾ ಅವರು, ತಾವು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಸುರತ್ಕಲ್ ಮೂಲದ ರೇಶ್ಮಾ ಅವರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಓರ್ವ

ಪುತ್ತೂರು: ಏಳು ತಿಂಗಳ ಗರ್ಭಿಣಿ ಆತ್ಮಹತ್ಯೆಗೆ ಶರಣು Read More »

ಮಂಗಳೂರು: ಅಪಾರ್ಟ್ಮೆಂಟ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು

ಸಮಗ್ರ ನ್ಯೂಸ್: ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಂಗಳೂರು ಬಳಿಯ ಕುತ್ತಾರಿನಲ್ಲಿ ನಡೆದಿದೆ. ಕುತ್ತಾರು ಪ್ರದೇಶದ ಬಹುಮಹಡಿ ಕಟ್ಟಡದಲ್ಲಿ ಈ ಘಟನೆ ಸಂಭವಿಸಿದೆ. ಕಟ್ಟಡದಿಂದ ಬಿದ್ದು ವೈದ್ಯ ದಂಪತಿಯ ಪುತ್ರಿ ಹಿಬಾ ಐಮನ್ (15) ಸಾವನ್ನಪ್ಪಿದ್ದಾಳೆ. ನಿನ್ನೆ ರಾತ್ರಿ ಬಟ್ಟೆ ಒಣಗಿಸಲೆಂದು ಹೋಗಿದ್ದ ಹಿಬಾ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾಳೆ. ವೈದ್ಯ ದಂಪತಿ ಡಾ.ಮುಮ್ತಾಜ್ ಅಹ್ಮದ್ ದಂಪತಿ ಅಪಾರ್ಟ್ ಮೆಂಟ್ ನ 12ನೇ ಮಹಡಿಯಲ್ಲಿ ವಾಸವಾಗಿದ್ದರು. ಮಂಗಳೂರಿನ ಉಳ್ಳಾಲ ಪೊಲೀಸ್

ಮಂಗಳೂರು: ಅಪಾರ್ಟ್ಮೆಂಟ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು Read More »

ಸೆಕ್ಸ್ ಸ್ಕ್ಯಾಂಡಲ್ ಗೆ ಯುವಕ ಬಲಿ| ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ದುರ್ದೈವಿ

ಸಮಗ್ರ ನ್ಯೂಸ್: ಯುವಕನೊಬ್ಬ ಕಾಡಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ ಸಾವಿಗೂ ಮುಂಚೆ ಮಾಡಿರುವ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೈಸ್ಕೂಲ್ ವಿದ್ಯಾರ್ಥಿಗಳನ್ನು ಕೆಲವರು ತಮ್ಮ ಕಾಮ ತೃಷೆಗೆ ಬಳಸಿಕೊಳ್ಳುತ್ತಿರುವ ಬಗ್ಗೆ ಯುವಕ ವಿಡಿಯೋದಲ್ಲಿ ದೂರಿದ್ದಾನೆ. ಸಿದ್ದಾಪುರ ತಾಲೂಕಿನ ಗಡಿಯಲ್ಲಿರುವ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಿಕ್ಕ ತೌಡತ್ತಿ ಗ್ರಾಮದ ಸಂತೋಷ ಗಣಪತಿ ನಾಯ್ಕ(26) ತಾಲೂಕಿನ ಕಾಳೇನಳ್ಳಿ ಸಮೀಪದ ಕಾಡಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಚನಮಾಂವನ ಚರಣ,

ಸೆಕ್ಸ್ ಸ್ಕ್ಯಾಂಡಲ್ ಗೆ ಯುವಕ ಬಲಿ| ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ದುರ್ದೈವಿ Read More »