ಕ್ರೈಂ

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರ| ಪ್ರಕರಣ ಬೇಧಿಸುವವರೆಗೆ ದಣಿವಿಲ್ಲದೇ ಕ್ರಮ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಸಮಗ್ರ ನ್ಯೂಸ್: ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಲೆ ಪ್ರಕರಣವನ್ನು ಬೇಧಿಸುವವರೆಗೆ ಅಕ್ಷರಶ: ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಇಂದು ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರವೀಣ್ ತಮ್ಮ ಕುಟುಂಬಕ್ಕೆ ಆಧಾರವಾಗಿದ್ದು, ಚಿಕ್ಕ ಅಂಗಡಿಯೇ ಆದಾಯದ ಮೂಲವಾಗಿತ್ತು. ಸರ್ಕಾರದ ವತಿಯಿಂದ ಪರಿಹಾರ ನಿಧಿಯಿಂದ 25 ಲಕ್ಷ ಪರಿಹಾರ ಹಾಗೂ ಭಾರತೀಯ […]

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರ| ಪ್ರಕರಣ ಬೇಧಿಸುವವರೆಗೆ ದಣಿವಿಲ್ಲದೇ ಕ್ರಮ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ* Read More »

ಪ್ರತಿಭಟನೆ ಹಿನ್ನಲೆ; ಪುತ್ತೂರು ಉಪವಿಭಾಗದಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ

ಸಮಗ್ರ ನ್ಯೂಸ್: ಪ್ರವೀಣ್​ ಹತ್ಯೆ ಖಂಡಿಸಿ, ಭಾರಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮದ್ಯಮಾರಾಟ ಬಂದ್ ಮಾಡಲು ಆದೇಶಿಸಲಾಗಿದೆ. ನಾಳೆ (ಜುಲೈ 29) ಮಧ್ಯರಾತ್ರಿ 12 ಗಂಟೆವರೆಗೆ ಮದ್ಯದ ಅಂಗಡಿಗಳನ್ನು ಮುಚ್ಚಲು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಪುತ್ತೂರು ಉಪವಿಭಾಗ ವ್ಯಾಪ್ತಿಯಾಗಿರುವ ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ ವ್ಯಾಪ್ತಿಗೆ ಆದೇಶ ಜಾರಿಯಾಗಿದೆ.

ಪ್ರತಿಭಟನೆ ಹಿನ್ನಲೆ; ಪುತ್ತೂರು ಉಪವಿಭಾಗದಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ Read More »

ಪ್ರವೀಣ್ ನೆಟ್ಟಾರು ಹತ್ಯೆ| ಸುಳ್ಯ ತಾಲೂಕು ಮತ್ತೆ ಉದ್ವಿಗ್ನ

ಸಮಗ್ರ ನ್ಯೂಸ್: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿರುವ ನಡುವೆಯೇ ತಾಲೂಕಿನಾದ್ಯಂತ ಮತ್ತೆ ಆಕ್ರೋಶ ಭುಗಿಲೆದ್ದಿದೆ. ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಕೆಲವೆಡೆ ಟಯರ್ ಗೆ ಬೆಂಕಿ ಇಟ್ಟು ಆಕ್ರೋಶ ಹೊರಹಾಕಿದ್ದಾರೆ. ತಾಲೂಕಿನ ಪ್ರಮುಖ ವಾಣಿಜ್ಯ ಕೇಂದ್ರ ಗುತ್ತಿಗಾರುನಲ್ಲಿ ಶಂಕಿತ ಆರೋಪಿ ಶಪೀಕ್ ಕೆಲಸ ಮಾಡುತ್ತಿದ್ದ ಅಂಗಡಿಗೆ ದಾಳಿ ನಡೆಸಿದ ಕಾರ್ಯಕರ್ತರು ಅಂಗಡಿಗೆ ಹಾನಿ‌ ನಡೆಸಿದ್ದಾರೆ. ಸುಳ್ಯ ನಗರದಲ್ಲೂ ಆತಂಕ ಮನೆ ಮಾಡಿದ್ದು, ಕೆಲವೆಡೆ

ಪ್ರವೀಣ್ ನೆಟ್ಟಾರು ಹತ್ಯೆ| ಸುಳ್ಯ ತಾಲೂಕು ಮತ್ತೆ ಉದ್ವಿಗ್ನ Read More »

ಬೈಕ್ ಅಪಘಾತ; ಕಾಲೇಜು ಉಪನ್ಯಾಸಕ ಸಾವು

ಅಂಕೋಲಾ: ಸವಾರನ ನಿಯಂತ್ರಣ ತಪ್ಪಿ ಬೈಕ್‌ ಉರುಳಿದ ಬಿದ್ದ ಪರಿಣಾಮ ಕಾಲೇಜ್ ಉಪನ್ಯಾಸಕ ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ತಾಲೂಕಿನ ರಾ.ಹೆ.66ರ ಬೆಳೆಸೆಯಲ್ಲಿ ಗುರುವಾರ ನಡೆದಿದೆ. ತಾಲೂಕಿನ ವಾಸರೆಕುದ್ರಿಗೆಯ ನಿವಾಸಿ ಅರವಿಂದ್ ಬೀರಾ ಆಗೇರ (49) ಮೃತಪಟ್ಟ ದುರ್ದೈವಿ. ಅರವಿಂದ್ ಅಂಕೋಲಾ ಪಟ್ಟಣದ ಪಿ.ಎಂ.ಪದವಿ ಪೂರ್ವ ಕಾಲೇಜಿನಲ್ಲಿ ಸಮಾಜ ವಿಷಯದ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮುಂಜಾನೆ ವಾಸರೆ ಕುದ್ರಿಗೆಯಿಂದ ಕಾಲೇಜಿಗೆ ಬರುತ್ತಿರುವ ವೇಳೆ ಬೈಕ್ ಸ್ಕಿಡ್ ಆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಸರ್ಕಾರಿ ಆಸ್ಪತ್ರೆಗೆ ಸಾಗಿಸುತ್ತಿರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಬೈಕ್ ಅಪಘಾತ; ಕಾಲೇಜು ಉಪನ್ಯಾಸಕ ಸಾವು Read More »

ಎರಡೇ ದಿನಗಳಲ್ಲಿ ಪ್ರವೀಣ್ ಕೊಲೆಗೆ ಸ್ಕೆಚ್ ಹಾಕಿದವರ ಬಂಧನ

ಸಮಗ್ರ ನ್ಯೂಸ್: ಹಿಂದೂ ಯುವ ಮುಖಂಡ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಳ್ಳಾರೆಯ ಶಫೀಕ್ ಹಾಗೂ ಸವಣೂರು ಮೂಲದ ಝಾಕಿರ್ ಎಂದು ಗುರುತಿಸಲಾಗಿದೆ. ಬಂಧಿತ ವ್ಯಕ್ತಿಗಳು ಪ್ರವೀಣ್ ಹತ್ಯೆಗೆ ಸ್ಕೆಚ್ ಹಾಕಿಕೊಟ್ಟವರು ಎಂದು ಹೇಳಲಾಗಿದೆ. ಅಕ್ಷಯ ಚಿಕನ್‌ ಸೆಂಟರ್‌ ನಲ್ಲಿ ಕೆಲಸ ಮಾಡುತ್ತಿರುವ ಮಧು ರಾಯನ್‌ ಅವರು ನೀಡಿದ ದೂರಿನಂತೆ ಕೃತ್ಯವೆಸಗಿದ ಮೂವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಲಾಗಿತ್ತು. ಎರಡೇ ದಿನದೊಳಗೆ ಪ್ರಮುಖರೆಂದು ಹೇಳಲಾಗುತ್ತಿರುವ ಶಂಕಿತರನ್ನು ಬಂಧಿಸಿದ್ದಾರೆ. ಬೆಳ್ಳಾರೆಯಲ್ಲಿ ಎಡಿಜಿಪಿ‌

ಎರಡೇ ದಿನಗಳಲ್ಲಿ ಪ್ರವೀಣ್ ಕೊಲೆಗೆ ಸ್ಕೆಚ್ ಹಾಕಿದವರ ಬಂಧನ Read More »

ಪ್ರವೀಣ್ ಹತ್ಯೆ ಪ್ರಕರಣ|ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜಾಕಿರ್ ಹಾಗೂ ಮೊಹಮ್ಮದ್ ಶಪೀಕ್ ಎಂದು ಗುರುತಿಸಲಾಗಿದೆ. ಬೆಳ್ಳಾರೆಯಲ್ಲಿ ಪೊಲೀಸ್ ವರಿಷ್ಟಾಧಿಕಾರಿ ಅಲೋಕ್ ಕುಮಾರ್ ಈ ವಿಷಯ ತಿಳಿಸಿದ್ದಾರೆ. ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಕಾಸರಗೋಡಿನಲ್ಲಿ‌ ಆರೋಪಿಗಳನ್ನು ಬಂಧಿಸಲಾಗಿದ್ದು ಇವರು ಬೆಳ್ಳಾರೆ ಹಾಗೂ ಸವಣೂರು ಮೂಲದವರು ಎಂದು ಹೇಳಲಾಗಿದೆ. ಇದುವರೆಗೆ 21 ಜನರನ್ನು ಅರೆಸ್ಟ್ ಮಾಡಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಕ್ರಿಮಿನಲ್ ಹಿನ್ನೆಲೆ ಇರುವ

ಪ್ರವೀಣ್ ಹತ್ಯೆ ಪ್ರಕರಣ|ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ ಪೊಲೀಸರು Read More »

ಪ್ರವೀಣ್ ಹತ್ಯೆ ಪ್ರಕರಣ| ಆಪ್ತನ ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ರೂವಾರಿಯೆಂದು ಪ್ರವೀಣ್ ಸ್ನೇಹಿತನನ್ನೇ ಬಂಧಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಹತ್ಯೆಯ ಬಳಿಕ ಆರೋಪಿಗಳು ಕೇರಳದತ್ತ ಕಾಲ್ಕಿತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೇರಳ ನೋಂದಾಯಿತ ಬೈಕ್ ನಲ್ಲಿ ಬಂದ ಮೂರು ಮಂದಿಯ ತಂಡ ಹತ್ಯೆ ನಡೆಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕರ್ನಾಟಕ- ಕೇರಳ ಪೊಲೀಸರು ಸಂಘಟಿತರಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರವೀಣ್ ಹತ್ಯೆ ಪ್ರಕರಣ| ಆಪ್ತನ ಬಂಧಿಸಿದ ಪೊಲೀಸರು Read More »

ಪ್ರವೀಣ್ ಹತ್ಯೆ ಪ್ರಕರಣ| ಪ್ರಮುಖ ಆರೋಪಿಯ ಬಂಧನ?

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೋರ್ವನನ್ನು ಬಂಧಿಸಲಾಗಿದೆ ಎಂದು ಹೇಳಲಾಗುತ್ತಿದೆ. ಬೆಳ್ಳಾರೆ ಪೊಲೀಸರು ‌ಶಂಕಿತ ಆರೋಪಿಯನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದ್ದಾರೆ. ಬಂಧಿತನನ್ನು ಬೆಳ್ಳಾರೆ ಮೂಲದ ಬೀಡು ನಿವಾಸಿ ಎಂದು ಹೇಳಲಾಗಿದೆ. ಆದರೆ‌ ಪೊಲೀಸರು ಈ ಕುರಿತು ಯಾವುದೇ‌ ಸ್ಪಷ್ಟನೆ ನೀಡಿಲ್ಲ.

ಪ್ರವೀಣ್ ಹತ್ಯೆ ಪ್ರಕರಣ| ಪ್ರಮುಖ ಆರೋಪಿಯ ಬಂಧನ? Read More »

ಮನೆಯ ಕನಸನ್ನು ನುಚ್ಚುನೂರುಗೊಳಿಸಿದ ದುಷ್ಕರ್ಮಿಗಳು| ಗೃಹನಿರ್ಮಾಣಕ್ಕೆ ಮಾಡಿದ ಜಾಗದಲ್ಲೇ ಹೊತ್ತಿ‌ಉರಿದ ಪ್ರವೀಣ್ ಚಿತೆ|

ಸಮಗ್ರ ನ್ಯೂಸ್: ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಪ್ರವೀಣ್‌ ಅವರ ಅಂತ್ಯಕ್ರಿಯೆಯನ್ನು ಅವರ ಸ್ವಗ್ರಾಮ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ನೆಟ್ಟಾರುವಿನಲ್ಲಿ ನೆರವೇರಿಸಲಾಗಿದೆ. ಈ ವೇಳೆ ನೆರೆದಿದ್ದ ಸಾವಿರಾರು ಮಂದಿ ತಮ್ಮ ಅಂತಿಮ ನಮನ ಸಲ್ಲಿಸಿದ್ದಾರೆ. ಮೂರು ವರ್ಷಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಪ್ರವೀಣ್‌ ನೆಟ್ಟಾರು, ಸುಂದರವಾದ ಮನೆಯೊಂದನ್ನು ಕಟ್ಟಿಸಿಕೊಳ್ಳಲು ಚಿಂತನೆ ನಡೆಸಿದ್ದು, ಇದಕ್ಕಾಗಿ ತಮ್ಮ ಜಾಗವನ್ನು ಸಮತಟ್ಟುಗೊಳಿಸಿದ್ದರು ಎನ್ನಲಾಗಿದೆ. ಇದೀಗ ಅದೇ ಜಾಗದಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಪ್ರವೀಣ್‌ ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು,

ಮನೆಯ ಕನಸನ್ನು ನುಚ್ಚುನೂರುಗೊಳಿಸಿದ ದುಷ್ಕರ್ಮಿಗಳು| ಗೃಹನಿರ್ಮಾಣಕ್ಕೆ ಮಾಡಿದ ಜಾಗದಲ್ಲೇ ಹೊತ್ತಿ‌ಉರಿದ ಪ್ರವೀಣ್ ಚಿತೆ| Read More »

ಪ್ರವೀಣ್ ಕೊಲೆ ಹಿಂದೆ ಎರಡು ಮೂರು ಕಾರಣಗಳಿವೆ – ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ

ಸಮಗ್ರ ನ್ಯೂಸ್:ಹಿಂದೂ‌ ಕಾರ್ಯಕರ್ತ ಪ್ರವೀಣ್ ಹತ್ಯೆಯ ತನಿಖೆ ಪ್ರಗತಿಯಲ್ಲಿದ್ದು ಹತ್ಯೆಗೆ 2- 3 ಕಾರಣಗಳು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂಬ ಸ್ಫೋಟಕ ಮಾಹಿತಿಯನ್ನು ರಾಜ್ಯದ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ನೀಡಿದ್ದಾರೆ. ಬೆಳ್ಳಾರೆಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು 15ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಹತ್ಯೆಯ ಬಗ್ಗೆ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಪ್ರಕರಣದ ಕುರಿತಾಗಿ ಮುಖ್ಯಮಂತ್ರಿಗಳು ಗೃಹಸಚಿವರು ನಿನ್ನೆಯಿಂದ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ನಿನ್ನೆ ಮತ್ತು ಇಂದು ಹಿರಿಯ

ಪ್ರವೀಣ್ ಕೊಲೆ ಹಿಂದೆ ಎರಡು ಮೂರು ಕಾರಣಗಳಿವೆ – ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ Read More »