ಕ್ರೈಂ

ನಾಳೆ ದ.ಕ ಜಿಲ್ಲೆಯಲ್ಲಿ ಬಂದ್ ಇಲ್ಲ – ಸಂಘಟನೆಗಳ ಸ್ಪಷ್ಟನೆ

ಸಮಗ್ರ ನ್ಯೂಸ್: ಜಾಲತಾಣಗಳಲ್ಲಿ ದ.ಕ ಜಿಲ್ಲೆಯಾದ್ಯಂತ ‌ಬಂದ್ ಗೆ‌ ಕರೆ ಕೊಟ್ಟಿರುವ ಸುದ್ದಿಯೊಂದು ಹರಿದಾಡುತ್ತಿದ್ದು, ನಾಳೆ ಜಿಲ್ಲೆಯಲ್ಲಿ ಯಾವುದೇ ಬಂದ್ ಇರುವುದಿಲ್ಲ ಎಂದು ಭಜರಂಗದಳ ಮುಖಂಡ ಶರಣ್ ಪಂಪ್ವೆಲ್ ತಿಳಿಸಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿರುವ ಅವರು ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂದೇಶ ಸುಳ್ಳಾಗಿದ್ದು ಜನತೆ ಕಿವಿಗೊಡದಂತೆ ಮನವಿ‌ ಮಾಡಿದ್ದಾರೆ.

ನಾಳೆ ದ.ಕ ಜಿಲ್ಲೆಯಲ್ಲಿ ಬಂದ್ ಇಲ್ಲ – ಸಂಘಟನೆಗಳ ಸ್ಪಷ್ಟನೆ Read More »

“ಡೋಂಗಿ, ಡೋಂಗಿ” ಬಿಜೆಪಿ ನಾಯಕರ ವಿರುದ್ದ ಭುಗಿಲೆದ್ದ ಆಕ್ರೋಶ

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತರ ಆಕ್ರೋಶದ ಕಟ್ಟೆ ಓಡೆದು, ಪ್ರವೀಣ್ ನೆಟ್ಟಾರು ಅಂತಿಮ ದರ್ಶನದ ವೇಳೆ ‘ಬೇಕೇ ಬೇಕು ನ್ಯಾಯ ಬೇಕು’ ಎಂಬ ಒತ್ತಾಯ ಕೇಳಿಬಂದಿತು. ಬೆಳ್ಳಾರೆ ಪೇಟೆಯಲ್ಲಿ ಪ್ರವೀಣ್ ಮೃತದೇಹ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗಿದ್ದು.ಈ ವೇಳೆ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹಾಗೂ ಸಚಿವ ಅಂಗಾರ ಅವರನ್ನು ಸುತ್ತುವರೆದ ಕಾರ್ಯಕರ್ತರು ‘ಡೋಂಗಿ ಡೋಂಗಿ’ ಎಂದು ಧಿಕ್ಕಾರ ಕೂಗಿದರು. ಕಾರ್ಯಕರ್ತರ ಆಕ್ರೋಶಕ್ಕೆ ಕಂಗಾಲಾದ ಸಚಿವರು ಕುಳಿತಲ್ಲೇ ಕೈಕಟ್ಟಿ ಮೌನಕ್ಕೆ ಶರಣಾದರು. ಬಿಜೆಪಿ

“ಡೋಂಗಿ, ಡೋಂಗಿ” ಬಿಜೆಪಿ ನಾಯಕರ ವಿರುದ್ದ ಭುಗಿಲೆದ್ದ ಆಕ್ರೋಶ Read More »

ಬೆಳ್ಳಾರೆ ಉದ್ವಿಗ್ನ, ಪೊಲೀಸರಿಂದ ಲಾಠಿ‌ ಚಾರ್ಜ್

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಿಂದ ಬೆಳ್ಳಾರೆ ಪ್ರಕ್ಷುಬ್ದಗೊಂಡಿದ್ದು ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಈ ವೇಳೆ ಇಬ್ಬರು ಯುವಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಇದೇ ವೇಳೆ ಸಂಸದ ನಳಿನ್ ಕುಮಾರ್, ಸಚಿವ ಸುನಿಲ್ ಕುಮಾರ್, ಅಂಗಾರರಿಗೆ ಕಾರ್ಯಕರ್ತರು ಘೇರಾವ್ ಹಾಕಿದ್ದಾರೆ.

ಬೆಳ್ಳಾರೆ ಉದ್ವಿಗ್ನ, ಪೊಲೀಸರಿಂದ ಲಾಠಿ‌ ಚಾರ್ಜ್ Read More »

ಬೆಳ್ಳಾರೆ: ಪ್ರಭಾಕರ ಭಟ್ ಕಾರು‌ ಅಡ್ಡಗಟ್ಟಿದ ಕಾರ್ಯಕರ್ತರು

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಪಾರ್ಥಿವ ಶರೀರ ಬೆಳ್ಳಾರೆ ತಲುಪಿದ್ದು ಈ ವೇಳೆ ಪ್ರವೀಣ್ ಅಭಿಮಾನಿಗಳು ಬಿಜೆಪಿಗೆ ಹಾಗೂ ಬಿಜೆಪಿ ನಾಯಕರಿಗೆ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಪ್ರವೀಣ್ ನೆಟ್ಟಾರುರವರ ಅಂತಿಮ ದರ್ಶನಕ್ಕೆ ಬಂದ ಆರ್ ಎಸ್ ಎಸ್ ಮುಖಂಡ ಪ್ರಭಾಕರ ಭಟ್ ರವರ ಕಾರಿಗೆ ಹಿಂದೂ ಕಾರ್ಯಕರ್ತರು ತಡೆ ಒಡ್ಡಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹಾಗೂ ಸಚಿವ

ಬೆಳ್ಳಾರೆ: ಪ್ರಭಾಕರ ಭಟ್ ಕಾರು‌ ಅಡ್ಡಗಟ್ಟಿದ ಕಾರ್ಯಕರ್ತರು Read More »

ಪ್ರವೀಣ್ ಹತ್ಯೆ ಪ್ರಕರಣ: ಬಿಜೆಪಿ ದಿಕ್ಕಾರ ಕೂಗಿದ ಪ್ರವೀಣ್ ಅಭಿಮಾನಿಗಳು| ನ್ಯಾಯ ಬೇಕೆಂದು ಘೋಷಣೆ

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಪಾರ್ಥಿವ ಶರೀರ ಬೆಳ್ಳಾರೆ ತಲುಪಿದ್ದು ಈ ವೇಳೆ ಪ್ರವೀಣ್ ಅಭಿಮಾನಿಗಳು ಬಿಜೆಪಿಗೆ ಹಾಗೂ ಬಿಜೆಪಿ ನಾಯಕರಿಗೆ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನ್ಯಾಯ ಬೇಕು ಎಂದು ಒಕ್ಕೋರಲಿನ ಘೋಷಣೆ ಬೆಳ್ಳಾರೆಯಲ್ಲಿ ಮಾರ್ಧನಿಸುತ್ತಿದೆ. ಇದೇ ವೇಳೆ ನಿಂತಿಕಲ್ ನಲ್ಲಿ ಪಾರ್ಥಿವ ಶರೀರದ ಮೆರವಣಿಗೆಯನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಅನ್ಯಮತೀಯ ವ್ಯಕ್ತಿಯೊಬ್ಬನ ಬೈಕ್ ಅನ್ನು ಕಾರ್ಯಕರ್ತರು ಪುಡಿಗಟ್ಟಿದ್ದಾರೆ.

ಪ್ರವೀಣ್ ಹತ್ಯೆ ಪ್ರಕರಣ: ಬಿಜೆಪಿ ದಿಕ್ಕಾರ ಕೂಗಿದ ಪ್ರವೀಣ್ ಅಭಿಮಾನಿಗಳು| ನ್ಯಾಯ ಬೇಕೆಂದು ಘೋಷಣೆ Read More »

ಪ್ರವೀಣ್ ಹತ್ಯೆ ಖಂಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ| ಪೊಲೀಸರು ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಆಗ್ರಹ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹತ್ಯೆಯನ್ನು ಖಂಡಿಸಿದ್ದಾರೆ. ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಪೊಲೀಸರು ಪ್ರವೀಣ್ ನೆಟ್ಟಾರ್ ಹತ್ಯೆಗೆ ಕಾರಣರಾದ ಹಂತಕರನ್ನು ತಕ್ಷಣ ಕೊಲೆಗಡುಕರನ್ನು ಬಂಧಿಸಬೇಕು. ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು ಎಂದು ಆಗ್ರಹಿಸಿದರು. ಕೊಲೆಗಡುಕರ ಪಕ್ಷ, ಜಾತಿ, ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು ಎಂದು ಸರ್ಕಾರವನ್ನ ಒತ್ತಾಯಿಸಿದ್ದಾರೆ.

ಪ್ರವೀಣ್ ಹತ್ಯೆ ಖಂಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ| ಪೊಲೀಸರು ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಆಗ್ರಹ Read More »

ಪ್ರವೀಣ್ ಹತ್ಯೆ ಪ್ರಕರಣ; ಏಳು ಮಂದಿ ಶಂಕಿತರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಯುವ ಮುಖಂಡ‌ ಪ್ರವೀಣ್ ನೆಟ್ಟಾರು ‌ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಂಕಿತ ವ್ಯಕ್ತಿಗಳನ್ನು ಬೆಳ್ಳಾರೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 63/2022ರಂತೆ 302 ಜೊತೆಗೆ 34 ಐಪಿಸಿ ಅನ್ವಯ ಕೇಸು ದಾಖಲಿಸಿಕೊಳ್ಳಲಾಗಿದ್ದು ಇದೀಗ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಮೂವರ ವಿರುದ್ದ ಕೊಲೆ ಕೇಸು ದಾಖಲಾಗಿದೆ.

ಪ್ರವೀಣ್ ಹತ್ಯೆ ಪ್ರಕರಣ; ಏಳು ಮಂದಿ ಶಂಕಿತರು ಪೊಲೀಸ್ ವಶಕ್ಕೆ Read More »

ಪ್ರವೀಣ್ ಹತ್ಯೆ ಹಿನ್ನೆಲೆ: ಉದ್ವಿಗ್ನಗೊಂಡ ಕರಾವಳಿ| ಪುತ್ತೂರು, ಸುಳ್ಯ, ಕಡಬ ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿ

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಳಿಕ ದಕ್ಷಿಣ ಜಿಲ್ಲೆಯ ಪುತ್ತೂರು ಮತ್ತು ಕಡಬದಲ್ಲಿ ಬಿಗುವಿನ ವಾತಾವರಣವಿದೆ. ಪುತ್ತೂರಿನಲ್ಲಿ ಕೆಲವರು ಸರ್ಕಾರಿ ಬಸ್​ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.‌ ಪರಿಸ್ಥಿತಿ ಕೈ ಮೀರದಂತೆ ಮೂರೂ ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಮಂಗಳವಾರ ರಾತ್ರಿ ಕೆಲವು ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿದ್ದರು. ಈ ಘಟನೆಯ ನಂತರ ಸುಳ್ಯ, ಕಡಬ ಹಾಗು ಪುತ್ತೂರು ತಾಲೂಕುಗಳಲ್ಲಿ ಪರಿಸ್ಥಿತಿ ಬಿಗುವಿನಿಂದ

ಪ್ರವೀಣ್ ಹತ್ಯೆ ಹಿನ್ನೆಲೆ: ಉದ್ವಿಗ್ನಗೊಂಡ ಕರಾವಳಿ| ಪುತ್ತೂರು, ಸುಳ್ಯ, ಕಡಬ ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿ Read More »

ಪ್ರವೀಣ್ ಹತ್ಯೆ ಖಂಡಿಸಿ ಸುಳ್ಯ ಉದ್ವಿಗ್ನ; ಟಯರ್‌ಗೆ ಬೆಂಕಿ ಹಚ್ಚಿ‌ ಆಕ್ರೋಶ; ಪೊಲೀಸರೊಂದಿಗೆ ಮಾತಿನ ಚಕಮಕಿ

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ದ.ಕ ಜಿಲ್ಲೆ ಉದ್ವಿಗ್ನಗೊಂಡಿದ್ದು, ಬಿಗುವಿನ ವಾತಾವರಣ ಕಂಡುಬಂದಿದೆ. ಸುಳ್ಯದಲ್ಲಿ ಸಂಘಟನೆಗಳ ಕಾರ್ಯಕರ್ತರು ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿದೆ. ನಗರದಲ್ಲಿ ಎಲ್ಲಾ ಅಂಗಡಿಗಳನ್ನು ಮುಚ್ಚಿಸುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಮುಂಜಾಗ್ರತಾ ಕ್ರಮವಾಗಿ‌ ಶಾಲಾ ಕಾಲೇಜುಗಳಿಗೆ ರಜೆ ಸಾರಲಾಗಿದೆ.

ಪ್ರವೀಣ್ ಹತ್ಯೆ ಖಂಡಿಸಿ ಸುಳ್ಯ ಉದ್ವಿಗ್ನ; ಟಯರ್‌ಗೆ ಬೆಂಕಿ ಹಚ್ಚಿ‌ ಆಕ್ರೋಶ; ಪೊಲೀಸರೊಂದಿಗೆ ಮಾತಿನ ಚಕಮಕಿ Read More »

ಮಂಗಳೂರು: ಪ್ರವೀಣ್ ಹಂತಕರ ಪತ್ತೆಗೆ ಐದು ವಿಶೇಷ ತಂಡ ರಚನೆ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಹಂತಕರ ಪತ್ತೆಗೆ ಪೊಲೀಸರು ಐದು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಆರೋಪಿಗಳ ಬೆನ್ನು ಹತ್ತಿ ಕೇರಳ, ಮಡಿಕೇರಿ, ಹಾಸನಕ್ಕೆ ಪೊಲೀಸರು ಮೂರು ತಂಡಗಳು ತೆರಳಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರುಷಿಕೇಷ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಕೊಲೆ ಆರೋಪಿಗಳಿಗಾಗಿ ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿ ವಾಹನಗಳನ್ನು ತಲಾಶ್ ಮಾಡಲಾಗುತ್ತಿದೆ. ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಉದ್ವಿಗ್ನ

ಮಂಗಳೂರು: ಪ್ರವೀಣ್ ಹಂತಕರ ಪತ್ತೆಗೆ ಐದು ವಿಶೇಷ ತಂಡ ರಚನೆ Read More »