ಕ್ರೈಂ

ಟ್ರಕ್ ಮತ್ತು ಪೋಲಿಸ್ ವಾಹನ ಡಿಕ್ಕಿ; ಎರಡು ಪೋಲಿಸ್ ಕಾನ್ಸ್ ಟೇಬಲ್ ಸಾವು

ಉತ್ತರಪ್ರದೇಶ: ಟ್ರಕ್‌ ಮತ್ತು ಪೊಲೀಸ್‌ ವಾಹನ ಡಿಕ್ಕಿ ಹೊಡೆದು, ಇಬ್ಬರು ಪೊಲೀಸ್‌ ಕಾನ್ಸ್‌ಟೇಬಲ್‌ ಸಾವನ್ನಪ್ಪಿದ ಘಟನೆಯೊಂದು ಉತ್ತರಪ್ರದೇಶದ ಸುಲ್ತಾನ್‌ಪುರ ನಗರದ ಬಳಿ ನಡೆದಿದೆ. ಮೃತರನ್ನು ಪೊಲೀಸ್‌ ಕಾನ್ಸ್ ಟೇಬಲ್‌ಗಳಾದ ಮೊಯಿನ್‌ ಖಾನ್‌, ಅರುಣ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಅಪಘಾತಕ್ಕೆ ವೇಗವಾಗಿ ವಾಹನ ಚಾಲನೆ ಕಾರಣವಾಗಿರುವ ಶಂಕೆ ವ್ಯಕ್ತವಾಗಿದೆ.

ಟ್ರಕ್ ಮತ್ತು ಪೋಲಿಸ್ ವಾಹನ ಡಿಕ್ಕಿ; ಎರಡು ಪೋಲಿಸ್ ಕಾನ್ಸ್ ಟೇಬಲ್ ಸಾವು Read More »

ಗ್ರಾಮ ಪಂಚಾಯತಿ ಸದಸ್ಯ ರೆಸಾರ್ಟ್ ನಲ್ಲಿ ಅನುಮಾನಾಸ್ಪದ ಸಾವು

ಮೈಸೂರು: ಗ್ರಾಮ ಪಂಚಾಯತಿ ಸದಸ್ಯ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆಯೊಂದು ಮೈಸೂರಿನ ಆರ್‌.ಟಿ.ನಗರದ ಸುಭಿಕ್ಷ ಗಾರ್ಡನ್ಸ್​ನಲ್ಲಿ ನಡೆದಿದೆ. ಸತೀಶ್ (34) ಮೃತ ಗ್ರಾಮ ಪಂಚಾಯತಿ ಸದಸ್ಯ. ಕೆ.ಆರ್.ನಗರ ತಾಲೂಕಿನ ಹಳಿಯೂರು ಗ್ರಾಮ ಪಂಚಾಯತಿ ಅಧ್ಯಕ್ಷರ ಚುನಾವಣೆ ಹಿನ್ನೆಲೆ 11ಕ್ಕೂ ಹೆಚ್ಚು ಸದಸ್ಯರು ರೆಸಾರ್ಟ್‌ಗೆ ಬಂದಿದ್ದರು. ಜವರೇಗೌಡ ಕೊಪ್ಪಲಿನ ನಿವಾಸಿಯಾಗಿರುವ ಸತೀಶ್​ ಕೂಡ ರೆಸಾರ್ಟ್​ಗೆ ಬಂದಿದ್ದರು. ಸತೀಶ್ ಕಾಂಗ್ರೆಸ್ ಪಕ್ಷ ಬೆಂಬಲದಿಂದ ಗೆದ್ದಿದ್ದರು. ಜೆಡಿಎಸ್‌ನಿಂದ ಗೆದ್ದಿದ್ದ ದಿನೇಶ್ ಅಧ್ಯಕ್ಷರಾಗಲು 11 ಸದಸ್ಯರನ್ನು ಪ್ರವಾಸ ಕಳುಹಿಸಿದ್ದರು. ಈ ಸದಸ್ಯರು ಕಳೆದ 20

ಗ್ರಾಮ ಪಂಚಾಯತಿ ಸದಸ್ಯ ರೆಸಾರ್ಟ್ ನಲ್ಲಿ ಅನುಮಾನಾಸ್ಪದ ಸಾವು Read More »

ಗಂಡ ಹೆಂಡತಿ ಜಗಳ ; ಗಂಡನ ಸಾವಿನಲ್ಲಿ ಅಂತ್ಯ

ನೆಲಮಂಗಲ: ರಸ್ತೆಯಲ್ಲಿ ಕೆಟ್ಟುನಿಂತ ಕ್ಯಾಂಟರ್ ವಾಹನಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ವೀವರ್ಸ್ ಕಾಲೋನಿಯ ಗೋಪಿ ವೆಂಕಟೇಶ್ವರ ರಸ್ತೆಯಲ್ಲಿ ನಡೆದಿದೆ. ತಡರಾತ್ರಿ ಪತಿ ಪತ್ನಿ ಜಗಳ ನಡುವೆ ಪತಿಯ ಸಾವಿನಲ್ಲಿ ಅಂತ್ಯಗೊಂಡಿದೆ. ರಾಯಚೂರು ಮೂಲದ 42 ವರ್ಷ ಸಿದ್ಧಯ್ಯ ಮೃತ ದುರ್ದೈವಿ. ಈತ ನೆಲಮಂಗಲದ ಕುವೆಂಪು ನಗರದಲ್ಲಿ ವಾಸ, ಚಾಲಕನಾಗಿ ಕೆಲಸ ನಿರ್ವಹಣೆ ಮಾಡಿಕೊಂಡಿದ್ದನು. ತಡರಾತ್ರಿ ಮದ್ಯಸೇವಿಸಿ ಪತ್ನಿಯೊಂದಿಗೆ ಜಗಳ ಮಾಡಿಕೊಂಡಿದ್ದ ಎಂದು ಹೇಳಲಾಗಿದೆ. ಇದರಿಂದ ಬೆಳಗಿನ ಜಾವ 4 ಗಂಟೆಗೆ ಆತ್ಮಹತ್ಯೆ ಮಾಡಿಕೊಂಡಿರುವುದು

ಗಂಡ ಹೆಂಡತಿ ಜಗಳ ; ಗಂಡನ ಸಾವಿನಲ್ಲಿ ಅಂತ್ಯ Read More »

ಮಡಿಕೇರಿ: ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡ ಹತ್ತನೇ ತರಗತಿ ವಿದ್ಯಾರ್ಥಿನಿ

ಸಮಗ್ರ ನ್ಯೂಸ್: ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿಯ ಸುಂಟಿಕೊಪ್ಪ ಗ್ರಾಮದ ಸಮೀಪದ ಎಮ್ಮೆಗುಂಡಿ ಎಂಬಲ್ಲಿ ನಡೆದಿದೆ. ಸುಂಟಿಕೊಪ್ಪ ಗ್ರಾಮದ ಸಮೀಪದ ಎಮ್ಮೆಗುಂಡಿ ತೋಟದ ಕಾರ್ಮಿಕ ಅಣ್ಣು ಅವರ ಪುತ್ರಿ ಹರ್ಷಿತಾ (16) ಮೃತ ವಿದ್ಯಾರ್ಥಿನಿ. ಈಕೆ ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಹರ್ಷಿತಾ ನಿನ್ನೆ ಶಾಲೆಗೆ ಹೋಗದೇ ಓದಿಕೊಳ್ಳಲೆಂದು ತೋಟದ ಲೈನ್ ಮನೆಯಲ್ಲಿ ಉಳಿದುಕೊಂಡಿದ್ದಳು ಎನ್ನಲಾಗಿದೆ. ಮನೆಯವರು ಕೆಲಸಕ್ಕೆ ಹೋಗಿದ್ದು, ಸಂಜೆ ಹಿಂತಿರುಗಿ ಬಂದು

ಮಡಿಕೇರಿ: ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡ ಹತ್ತನೇ ತರಗತಿ ವಿದ್ಯಾರ್ಥಿನಿ Read More »

ಮಾದಕ ವ್ಯಸನಿ ಪುತ್ರನ ಕತ್ತರಿಸಿ‌ ಕೊಂದ ತಂದೆ

ಸಮಗ್ರ ನ್ಯೂಸ್: ಮಾದಕ ವ್ಯಸನಿಯಾಗಿದ್ದ ಪುತ್ರನನ್ನು ಕೊಲೆ ಮಾಡಿ ತುಂಡು ತುಂಡಾಗಿ ಕತ್ತರಿಸಿ ಚೆಲ್ಲಿದ್ದ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಗುಜರಾತಿನ ಅಹ್ಮದಾಬಾದ್ ನಿವಾಸಿ ನೀಲೇಶ್ ಜೋಶಿ(65) ಬಂಧಿತ ಆರೋಪಿ. ಈತನ ಪುತ್ರ ಸ್ವಯಂ ಜೋಶಿ(21) ಕೊಲೆಯಾದ ದುರ್ದೈವಿ. ಮಾದಕ ವ್ಯಸನದ ದಾಸನಾಗಿದ್ದ ಸ್ವಯಂ ಜೋಶಿ ಮದ್ಯ ಸೇವಿಸಲು ಹಣ ಕೊಡುವಂತೆ ಪೀಡಿಸಿದಾಗ ಕೋಪಗೊಂಡ ತಂದೆ ರುಬ್ಬು ಗುಂಡಿನಿಂದ ಹೊಡೆದು ಮಗನನ್ನು ಹತ್ಯೆ ಮಾಡಿದ್ದಾನೆ. ನಂತರ ಎಲೆಕ್ಟ್ರಿಕ್ ಕಟರ್ ನಿಂದ ತುಂಡಾಗಿ ದೇಹವನ್ನು ಕತ್ತರಿಸಿ ಚೀಲದಲ್ಲಿ ತುಂಬಿ ಬೇರೆ

ಮಾದಕ ವ್ಯಸನಿ ಪುತ್ರನ ಕತ್ತರಿಸಿ‌ ಕೊಂದ ತಂದೆ Read More »

ಮಂಗಳೂರು: ಪಬ್ ನಲ್ಲಿ ಕಾಲೇಜು ವಿದ್ಯಾರ್ಥಿಗಳ ಮೋಜು ಮಸ್ತಿ| ಕುಡಿದು ತೂರಾಟದಲ್ಲಿ ತೊಡಗಿದ್ದ ಯುವಕ-ಯುವತಿಯರು!

ಸಮಗ್ರ ನ್ಯೂಸ್: ಪಬ್ ನಲ್ಲಿ ಕುಡಿದು ಮೋಜು ಮಸ್ತಿಯಲ್ಲಿ ತೊಡಗಿದ್ದ ಕಾಲೇಜು ವಿದ್ಯಾರ್ಥಿ – ವಿದ್ಯಾರ್ಥಿನಿಯರ ಗುಂಪನ್ನು ತಡೆದ ಬಜರಂಗದಳದ ಕಾರ್ಯಕರ್ತರು ಪಾರ್ಟಿಯಿಂದ ಹೊರ ಕಳುಹಿಸಿರುವ ಘಟನೆ ಜು.25ರ ತಡರಾತ್ರಿ ನಡೆದಿದೆ. ಮಂಗಳೂರಿನ ಬಲ್ಮಠದಲ್ಲಿರುವ ರಿ-ಸೈಕಲ್ ದಿ ಲಾಂಜ್ ಪಬ್ ನಲ್ಲಿ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ ಪದವಿ ವಿದ್ಯಾರ್ಥಿಗಳು ಪಾರ್ಟಿ ನಡೆಸುತ್ತಿದ್ದರು ಎನ್ನಲಾಗಿದೆ. ಕಾಲೇಜು ಫೇರ್ ವೆಲ್ ನೆಪದಲ್ಲಿ ಪಬ್ ನಲ್ಲಿ ಪಾರ್ಟಿಯನ್ನು ಆಯೋಜಿಸಲಾಗಿತ್ತು. ಈ ವೇಳೆ ವಿದ್ಯಾರ್ಥಿ – ವಿದ್ಯಾರ್ಥಿನಿಯರು ಕುಡಿತ, ಮೋಜು –

ಮಂಗಳೂರು: ಪಬ್ ನಲ್ಲಿ ಕಾಲೇಜು ವಿದ್ಯಾರ್ಥಿಗಳ ಮೋಜು ಮಸ್ತಿ| ಕುಡಿದು ತೂರಾಟದಲ್ಲಿ ತೊಡಗಿದ್ದ ಯುವಕ-ಯುವತಿಯರು! Read More »

ಅಪ್ರಾಪ್ತ ಬಾಲಕ ನಾಪತ್ತೆ; ಜೊತೆಗೆ ಎದುರು ಮನೆ ಆಂಟಿ ಕೂಡಾ ಕಾಣೆ

ಸಮಗ್ರ ನ್ಯೂಸ್: ಆ ಊರಿನಲ್ಲೊಂದು ಕಾಲೋನಿ ಇದೆ. ಆ ಕಾಲೋನಿಯಿಂದ ಇತ್ತೀಚೆಗೆ 15 ವರ್ಷದ ಬಾಲಕ ನಾಪತ್ತೆಯಾಗಿದ್ದ. ಇದರಿಂದ ಪೋಷಕರು ಸುತ್ತಮುತ್ತ ಹುಡುಕಾಡುವಂತಾಯಿತು. ಸ್ನೇಹಿತರ ಮನೆಯಲ್ಲಿ ಇದ್ದಾರಾ ಎಂದೂ ವಿಚಾರಿಸಿದರು. ಆದರೆ ಎಲ್ಲೂ ಪತ್ತೆಯಾಗಲಿಲ್ಲ. ಆದರೆ ಕುತೂಹಲಕಾರಿ ಬೆಳವಣಿಗೆಯಲ್ಲಿ ಬಾಲಕನ ಮನೆಯ ಎದುರು ವಾಸವಿದ್ದ 29 ವರ್ಷದ ವಿವಾಹಿತ ಯುವ ಮಹಿಳೆ ಕೂಡ ನಾಪತ್ತೆಯಾಗಿದ್ದಾರೆ ಎಂಬ ಸಂಗತಿ ಬಹಿರಂಗವಾಯಿತು. ಇದರಿಂದ ಬಾಲಕನ ಪೋಷಕರಲ್ಲಿ ಟೆನ್ಷನ್ ಶುರುವಾಗಿದೆ. ಆಕೆ ತಮ್ಮ ಹುಡುಗನನ್ನು ಕಿಡ್ನಾಪ್ ಮಾಡಿದ್ದಾಳೆ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.

ಅಪ್ರಾಪ್ತ ಬಾಲಕ ನಾಪತ್ತೆ; ಜೊತೆಗೆ ಎದುರು ಮನೆ ಆಂಟಿ ಕೂಡಾ ಕಾಣೆ Read More »

ಉದ್ಯಮಿ ಮನೆಯಲ್ಲಿ ಒಂದು ಗಂಟೆಗಳ ಕಾಲ ಪಟಾಕಿ ಸ್ಫೋಟ; 6 ಮಂದಿ ಸಾವು 8ಮಂದಿಗೆ ಗಾಯ

ಬಿಹಾರ: ಉದ್ಯಮಿಯ ಮನೆಯಲ್ಲಿ ಪಟಾಕಿ ಸ್ಫೋಟಗೊಂಡ ಪರಿಣಾಮ 6 ಮಂದಿ ಮೃತಪಟ್ಟು, 8 ಮಂದಿ ಗಾಯಗೊಂಡ ಘಟನೆಯೊಂದು ಬಿಹಾರದ ಸರನ್ ಜಿಲ್ಲೆಯ ಖುದಾಯಿ ಬಾಗ್ ಗ್ರಾಮದಲ್ಲಿ ನಡೆದಿದೆ. ಸುಮಾರು ಒಂದು ಗಂಟೆಯವರೆಗೆ ನಿರಂತರವಾಗಿ ಪಟಾಕಿ ಸ್ಫೋಟಗೊಂಡಿದೆ ಎಂದು ಹೇಳಲಾಗಿದ್ದು, ಇದರಿಂದ ಉದ್ಯಮಿ ಶಬೀರ್ ಹುಸೇನ್ ಮನೆ ನದಿಯ ತಟದಲ್ಲಿದ್ದು , ಸ್ಫೋಟದಿಂದಾಗಿ ಮನೆಯ ಬಹುತೇಕ ಭಾಗ ಕುಸಿದು ಹೋಗಿದೆ ಎಂದು ಪೊಲೀಸರು ತಿಳಿಸಿದ್ದಾರೆ . ಭಾರೀ ಸಂಖ್ಯೆಯ ಪಟಾಕಿಗಳನ್ನು ಮನೆಯೊಳಗೆ ಇಡಲಾಗಿತ್ತು. ಅದು ಸ್ಫೋಟಿಸಲು ಪ್ರಾರಂಭವಾದಾಗಿನಿಂದ ಸುಮಾರು

ಉದ್ಯಮಿ ಮನೆಯಲ್ಲಿ ಒಂದು ಗಂಟೆಗಳ ಕಾಲ ಪಟಾಕಿ ಸ್ಫೋಟ; 6 ಮಂದಿ ಸಾವು 8ಮಂದಿಗೆ ಗಾಯ Read More »

ಕಾರ್ಕಳ: ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ತಾ.ಕಚೇರಿ ಸಿಬ್ಬಂದಿ

ಸಮಗ್ರ ನ್ಯೂಸ್ : ಕಾರ್ಕಳ ತಾಲೂಕು ಕಚೇರಿ ಸಿಬ್ಬಂದಿ ಸುಶ್ಮಿತಾ (24) ಎಂಬವರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಡ್ಕೊ ಕಾಲನಿ ನಿವಾಸಿಯಾಗಿದ್ದ ಸುಶ್ಮಿತಾ ನಿನ್ನೆ ಬಾವಿಗೆ ಹಾರಿ ಸಾವಿಗೆ ಶರಣಾಗಿದ್ದಾರೆ. ಮೃತರು ತಂದೆ, ತಾಯಿ, ಓರ್ವ ಸಹೋದರಿಯನ್ನು ಅಗಲಿದ್ದಾರೆ. ಕಚೇರಿಯಲ್ಲಿ ಉತ್ತಮ ಸಿಬ್ಬಂದಿ ಎಂಬ ಹೆಸರು ಸಂಪಾದಿಸಿದ್ದ ಈಕೆ ಶಾಲಾ ಕಾಲೇಜಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದರು. ಪ್ರತಿಭೆ ಆಧಾರದಲ್ಲಿ ಸರಕಾರಿ ನೌಕರಿ ಪಡೆದುಕೊಂಡಿದ್ದರು. ಆತ್ಮಹತ್ಯೆಯ ನಿಖರ ಕಾರಣ ತಿಳಿದುಬಂದಿಲ್ಲ.

ಕಾರ್ಕಳ: ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ತಾ.ಕಚೇರಿ ಸಿಬ್ಬಂದಿ Read More »

ಮಂಗಳೂರು: ಕಲ್ಲಿನ ಕೋರೆಗೆ ಈಜಲು ತೆರಳಿದ ಯುವಕ ನೀರಲ್ಲಿ ಮುಳುಗಿ‌ ಸಾವು

ಸಮಗ್ರ ನ್ಯೂಸ್: ಕಲ್ಲಿನ ಕೋರೆಗೆ ಈಜಲು ಇಳಿದ ಯುವಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾದ ಘಟನೆ ರವಿವಾರ ಮಂಗಳೂರಿನ ಮಲ್ಲೂರು ಸಮೀಪದ ಉಳಾಯಿಬೆಟ್ಟು ಬದ್ರಿಯ ನಗರದಲ್ಲಿ ನಡೆದಿದೆ. ಜೋಕಟ್ಟೆಯ ನಿವಾಸಿ ಆದಂ ಎಂಬವರ ಪುತ್ರ ಮುಹಮ್ಮದ್ ಶಿಯಾಝ್ (19) ಮೃತ ಯುವಕ ಎಂದು ಪ್ರಕರಣ ದಾಖಲಿಸಿರುವ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ತಿಳಿಸಿದ್ದಾರೆ. ರವಿವಾರ ಬೆಳಗ್ಗೆ ಶಿಯಾಝ್ ಉಳಾಯಿಬೆಟ್ಟುವಿನಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಸಂಜೆಯ ವೇಳೆಗೆ ತನ್ನ ಸ್ನೇಹಿತರೊಂದಿಗೆ ಬದ್ರಿಯಾ ನಗರದ ಪೆರ್ಮುಂಕಿ ಕಾಯರ ಪದವುನಲ್ಲಿರುವ ಕಲ್ಲಿನ

ಮಂಗಳೂರು: ಕಲ್ಲಿನ ಕೋರೆಗೆ ಈಜಲು ತೆರಳಿದ ಯುವಕ ನೀರಲ್ಲಿ ಮುಳುಗಿ‌ ಸಾವು Read More »