ಪ್ರತಿಭಟನೆ ಹಿನ್ನಲೆ; ಪುತ್ತೂರು ಉಪವಿಭಾಗದಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ
ಸಮಗ್ರ ನ್ಯೂಸ್: ಪ್ರವೀಣ್ ಹತ್ಯೆ ಖಂಡಿಸಿ, ಭಾರಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮದ್ಯಮಾರಾಟ ಬಂದ್ ಮಾಡಲು ಆದೇಶಿಸಲಾಗಿದೆ. ನಾಳೆ (ಜುಲೈ 29) ಮಧ್ಯರಾತ್ರಿ 12 ಗಂಟೆವರೆಗೆ ಮದ್ಯದ ಅಂಗಡಿಗಳನ್ನು ಮುಚ್ಚಲು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಪುತ್ತೂರು ಉಪವಿಭಾಗ ವ್ಯಾಪ್ತಿಯಾಗಿರುವ ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ ವ್ಯಾಪ್ತಿಗೆ ಆದೇಶ ಜಾರಿಯಾಗಿದೆ.
ಪ್ರತಿಭಟನೆ ಹಿನ್ನಲೆ; ಪುತ್ತೂರು ಉಪವಿಭಾಗದಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ Read More »







