ಕ್ರೈಂ

ಬೈಕ್ ಮತ್ತು ಕಾರು ಅಪಘಾತ; ಒಂದೇ ಕುಟುಂಬದ ಇಬ್ಬರು ಸಾವು

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಜಾಲಿಕೊಪ್ಪ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 11 ವರ್ಷದ ಬಾಲಕ‌ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಾಪ್ಪಿದ್ದಾರೆ. ಬೈಲಹೊಂಗಲ ತಾಲೂಕಿನ ಚಿವಟಗುಂಡಿ ಗ್ರಾಮದ ಸಂದೀಪ ಸಿದ್ದಪ್ಪ ಮಲ್ಲೂರ (11) ಸ್ಥಳದಲ್ಲೇ ಸಾವನ್ನಪ್ಪಿದ್ದು, ಶಿವಪ್ಪ ಬಸವಂತಗೌಡ ಮಲ್ಲೂರ (46) ಬೆಳಗಾವಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ತೀವ್ರ ಗಾಯಗೊಂಡಿರುವ ಮತ್ತೊಬ್ಬ ಸವಾರ ವೀರಣ್ಣ ಚನ್ನಬಸಪ್ಪ ಬಗನಾಳ […]

ಬೈಕ್ ಮತ್ತು ಕಾರು ಅಪಘಾತ; ಒಂದೇ ಕುಟುಂಬದ ಇಬ್ಬರು ಸಾವು Read More »

ಬೆಳಗಾವಿ: ಕಾಂಗ್ರೆಸ್ ನಾಯಕಿ ನವ್ಯಶ್ರೀ ಮೇಲೆ ಕೇಸ್ ದಾಖಲು| ಹೊಸತೊಂದು ಆಡಿಯೋ ರಿಲೀಸ್ ಮಾಡಿದ ನವ್ಯಶ್ರೀ

ಸಮಗ್ರ ನ್ಯೂಸ್: ಕಾಂಗ್ರೆಸ್ ಯುವ ಕಾರ್ಯಕರ್ತೆ ನವ್ಯಶ್ರೀ ವಿರುದ್ಧ ಕೇಸ್ ದಾಖಲಾಗಿರುವ ವಿಚಾರ ಸಂಬಂಧ ಇದೀಗ ನವ್ಯಶ್ರೀ ಆಡಿಯೋ ರಿಲೀಸ್ ಮಾಡಿದ್ದಾರೆ. ರಾಜಕುಮಾರ, ನವ್ಯಶ್ರೀ ಮತ್ತು ನವ್ಯಶ್ರೀ ಆಪ್ತ ತಿಲಕ್ ಜೊತೆಯಾಗಿ ಮಾತನಾಡಿರುವ ಆಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ರಿಲೀಸ್ ಮಾಡಿರುವ ಆಡಿಯೊ ಸಂಭಾಷಣೆಯಲ್ಲಿ, ನಾನು ಒಪ್ಪಿಕೊಂಡಿದ್ದೇನೆ, ಅವಳು ಒಪ್ಪಿಕೊಂಡಿದ್ದಾಳೆ ನನ್ನ ಹೆಂಡತಿಯನ್ನೂ ಒಪ್ಪಿಸುತ್ತೇನೆ. ನನ್ನ ಹೆಂಡತಿ ಮಕ್ಕಳ ಜೊತೆಗೆ ಮನೆಯಲ್ಲಿ ಇಟ್ಟುಕೊಳ್ಳುತ್ತೇನೆ. ಯಾವುದಕ್ಕೂ ತಲೆ ಕೆಡಿಸಿಕೊಳ್ಳಬೇಡಿ. ನನ್ನ ಮಗಳಿಗೂ ಹೇಳಿದ್ದೇನೆ ಏನೂ ತೊಂದರೆ ಇಲ್ಲಾ ಎಂದು ರಾಜಕುಮಾರ

ಬೆಳಗಾವಿ: ಕಾಂಗ್ರೆಸ್ ನಾಯಕಿ ನವ್ಯಶ್ರೀ ಮೇಲೆ ಕೇಸ್ ದಾಖಲು| ಹೊಸತೊಂದು ಆಡಿಯೋ ರಿಲೀಸ್ ಮಾಡಿದ ನವ್ಯಶ್ರೀ Read More »

ಸುಳ್ಯ: ಯುವಕನ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ| ಜೀವನ್ಮರಣ ಹೋರಾಟದಲ್ಲಿ ಗಾಯಾಳು

ಸಮಗ್ರ ನ್ಯೂಸ್: ಪರಿಚಯದ ಇಬ್ಬರು ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಉಂಟಾದ ಜಗಳದ ಬಳಿಕ ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥಪಡಿಸುವುದಾಗಿ ಕರೆಸಿಕೊಂಡ ತಂಡ, ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಸುಳ್ಯದ ಬೆಳ್ಳಾರೆಯ ಕಳಂಜ ಎಂಬಲ್ಲಿ ಕಳೆದ ರಾತ್ರಿ ನಡೆದಿದ್ದು, ಯುವಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಮಾರಣಾಂತಿಕ ಹಲ್ಲೆಯಿಂದ ಗಂಭೀರ ಗಾಯಗೊಂಡ ಮಸೂದ್ (19) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಅವರ ಮೆದುಳಿಗೆ ತೀವ್ರ ಹಾನಿ ಯಾಗಿರುವುದರಿಂದ ಮೆದುಳು ನಿಷ್ಕ್ರಿಯಗೊಂಡಿರುವ ಸಾಧ್ಯತೆ

ಸುಳ್ಯ: ಯುವಕನ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ| ಜೀವನ್ಮರಣ ಹೋರಾಟದಲ್ಲಿ ಗಾಯಾಳು Read More »

ದುಷ್ಕರ್ಮಿಗಳು ಯುವಕನ ಕತ್ತು ಕೊಯ್ದು ಪರಾರಿ

ಧಾರವಾಡ: ನಗರದ ಹೊರವಲಯದ ನುಗ್ಗಿಕೇರಿಯ ಗುಡ್ಡದ ಮೇಲೆ ಯುವಕನ ಕತ್ತು ಕೊಯ್ದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಸಂಭವಿಸಿದೆ. ಸುಮಾರು 25 ರಿಂದ 28 ವರ್ಷದ ಯುವಕನು ಬೈಕಿನಲ್ಲಿ ಬಂದಿದ್ದು, ಯಾರೋ ಆತನ ಕತ್ತನ್ನು ಕೊಯ್ದು ಪರಾರಿಯಾಗಿದ್ದು, ಗುಡ್ಡದಿಂದ ಕೆಳಗೆ ಬಂದು ರಸ್ತೆಯಲ್ಲಿ ಬಿದ್ದ ಯುವಕನು ತನ್ನ ಪ್ರಾಣವನ್ನು ಉಳಿಸುವಂತೆ ಗೋಗೆರೆಯುತ್ತಿದ್ದಾನೆ. ದಾರಿ ಹೋಕರು ಭಯದಿಂದ ಆತನ ಬಳಿ ನಿಂತಿದ್ದು, ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ದೌಡಾಯಿಸಿದ್ದು, ಗಂಭೀರ ಸ್ಥಿತಿಯಲ್ಲಿರುವ ಯುವಕನನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ದುಷ್ಕರ್ಮಿಗಳು ಯುವಕನ ಕತ್ತು ಕೊಯ್ದು ಪರಾರಿ Read More »

ಕಾರು ಮತ್ತು ಲಾರಿ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು

ಸಮಗ್ರ ನ್ಯೂಸ್ : ಕಾರು – ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಬಾಲಯ್ಯ ಕ್ಯಾಂಪ್ ಬಳಿ ಸೋಮವಾರ ಮುಂಜಾನೆ ( ಜು.18 ರಂದು) ನಡೆದಿದೆ. ಮೃತರನ್ನು ಮಧ್ಯಪ್ರದೇಶ ಮೂಲದ ಅಮರದೀಪ್‌ ಸೆಕ್ಸೇನಾ​ (35), ಪೂರ್ಣಿಮಾ ಸೆಕ್ಸೇನಾ (30) ಮಕ್ಕಳಾದ ಜಿತಿನ್​ (12) ಮತ್ತು ಮಾಹೀನ್​ (7) ಎಂದು ಗುರುತಿಸಲಾಗಿದೆ. ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾಗಿದ್ದು, ದುರ್ಘಟನೆ ಸಂಭವಿಸಿದೆ. ಮೃತ ನಾಲ್ವರು ಮೂಲದವರು ಎಂದು ಗುರುತಿಸಲಾಗಿದೆ. ಎರಡು

ಕಾರು ಮತ್ತು ಲಾರಿ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು Read More »

ಮಂಗಳೂರು: ವಿದ್ಯಾರ್ಥಿನಿಯ ಮಾನಭಂಗಕ್ಕೆ ಯತ್ನ| ಆರೋಪಿಯ ಬಂಧನ

ಸಮಗ್ರ ನ್ಯೂಸ್: ವಿಧ್ಯಾರ್ಥಿನಿಯೊಬ್ಬಳ ಮನೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಂಜಿಮೊಗರಿನ ಮುಸ್ತಫಾ (35) ಎಂದು ಗುರುತಿಸಲಾಗಿದೆ. ಆರೋಪಿಯು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರದ ತರಕಾರಿ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದು, ವಿಧ್ಯಾರ್ಥಿನಿಯ ನಂಬರ್ ಪಡೆದುಕೊಂಡ ಆರೋಪಿ ಆಕೆಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದಾನೆ. ಅಲ್ಲದೆ ಆರೋಪಿ ಜುಲೈ 8ರಂದು ರಾತ್ರಿ 8.30ಕ್ಕೆ ವಿದ್ಯಾರ್ಥಿನಿಯ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮಾನಭಂಗಕ್ಕೆ ಯತ್ನಿಸಿದ್ದಲ್ಲದೆ ಕೃತ್ಯವನ್ನು ಇತರರಿಗೆ ಹೇಳಿದರೆ

ಮಂಗಳೂರು: ವಿದ್ಯಾರ್ಥಿನಿಯ ಮಾನಭಂಗಕ್ಕೆ ಯತ್ನ| ಆರೋಪಿಯ ಬಂಧನ Read More »

3 ಅಂತಸ್ತಿನ ಮನೆಯ ಛಾವಣಿಯಿಂದ ಮಗುವನ್ನು ಎಸೆದ ಕೋತಿ; 4 ತಿಂಗಳ ಗಂಡು ಮಗು ಸಾವು

ಸಮಗ್ರ ನ್ಯೂಸ್: ಕೋತಿಯೊಂದು ಮೂರು ಅಂತಸ್ತಿನ ಮನೆಯ ಛಾವಣಿಯಿಂದ ಮಗುವನ್ನು ಎಸೆದ ಪರಿಣಾಮ ನಾಲ್ಕು ತಿಂಗಳ ಗಂಡು ಮಗು ಸಾವನ್ನಪ್ಪಿದ ಘಟನೆಯೊಂದು ಉತ್ತರ ಪ್ರದೇಶದ ಬರೇಲಿಯ ಗ್ರಾಮಾಂತರ ಪ್ರದೇಶದಲ್ಲಿ ನಡೆದಿದೆ. ಈ ಬಗ್ಗೆ ವರದಿಯಾಗಿದ್ದು, ತನಿಖೆ ನಡೆಸಲು ಅರಣ್ಯ ಇಲಾಖೆಯ ತಂಡವನ್ನು ಕಳುಹಿಸಲಾಗಿದೆ ಎಂದು ಬರೇಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಲಿತ್ ವರ್ಮಾ ತಿಳಿಸಿದ್ದಾರೆ. ಬರೇಲಿಯ ಡುಂಕಾ ಗ್ರಾಮದ ನಿವಾಸಿ ನಿರ್ದೇಶ್ ಉಪಾಧ್ಯಾಯ (25) ಅವರು ಶುಕ್ರವಾರ ಸಂಜೆ ತಮ್ಮ ಪತ್ನಿ ಮತ್ತು ನಾಲ್ಕು ತಿಂಗಳ ಮಗುವಿನೊಂದಿಗೆ

3 ಅಂತಸ್ತಿನ ಮನೆಯ ಛಾವಣಿಯಿಂದ ಮಗುವನ್ನು ಎಸೆದ ಕೋತಿ; 4 ತಿಂಗಳ ಗಂಡು ಮಗು ಸಾವು Read More »

ಬೈಕ್ ಅಪಘಾತ ದಲ್ಲಿ ಬೈಕ್ ಸವಾರ ಸಾವು ಮತ್ತೊರ್ವ ಗಂಭೀರ ಗಾಯ

ಬೆಂಗಳೂರು: ರಸ್ತೆ ಅಪಘಾತದಲ್ಲಿ ಬೈಕ್​ ಸವಾರ ಸಾವನ್ನಪ್ಪಿದ ಘಟನೆಯೊಂದು ಜೆಪಿ ನಗರ ಮೂರನೇ ಹಂತದ ಖಾಸಗಿ ಸ್ಕೂಲ್ ಬಳಿ ನಡೆದಿದೆ. ಕಾರ್ತಿಕ್ ಮೃತ ದುರ್ದೈವಿ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ವೇಗವಾಗಿ ಬಂದ ಎರಡು ಬೈಕ್​ಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಮತ್ತೋರ್ವ ಸವಾರ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಜಯನಗರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೈಕ್ ಅಪಘಾತ ದಲ್ಲಿ ಬೈಕ್ ಸವಾರ ಸಾವು ಮತ್ತೊರ್ವ ಗಂಭೀರ ಗಾಯ Read More »

ಕುಂದಾಪುರ: ಬೈಕ್ ಸ್ಕಿಡ್ ಆಗಿ ಇಬ್ಬರು ವಿದ್ಯಾರ್ಥಿಗಳು ದುರ್ಮರಣ

ಸಮಗ್ರ ನ್ಯೂಸ್: ಕುಂದಾಪುರದ ಕಂಬದಕೋಣೆ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕ್‌ ಸ್ಕಿಡ್‌ ಆಗಿ ಪಲ್ಟಿಯಾಗಿ ಉಡುಪಿಯ ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ. ಮೂಲತಃ ಆಂಧ್ರ ಪ್ರದೇಶದ ಆದಿತ್ಯ ರೆಡ್ಡಿ (18) ಮತ್ತು ಕರಣ್‌ ಕುಮಾರ್‌ ರೆಡ್ಡಿ (19) ಸಾವಿಗೀಡಾಗಿರುವ ದುರ್ದೈವಿಗಳು. ಇವರಿಬ್ಬರು ಉಡುಪಿಯಲ್ಲಿ ಕಾಲೇಜು ಕಲಿಯುತ್ತಿದ್ದರು. ಕುಂದಾಪುರದಿಂದ ಬೈಂದೂರು ಕಡೆಗೆ ಬೈಕಿನಲ್ಲಿ ಹೋಗುತ್ತಿರುವಾಗ ಕಂಬದಕೋಣೆಯ ಸೇತುವೆ ಬಳಿ ಅವರ ಬೈಕ್‌ ಸ್ಕಿಡ್‌ ಆಗಿ ಪಲ್ಟಿಯಾಗಿದೆ.

ಕುಂದಾಪುರ: ಬೈಕ್ ಸ್ಕಿಡ್ ಆಗಿ ಇಬ್ಬರು ವಿದ್ಯಾರ್ಥಿಗಳು ದುರ್ಮರಣ Read More »

ಮಂಗಳೂರು: ತಪ್ಪಿಸಿಕೊಳ್ಳಲೆತ್ನಿಸಿದ ಆರೋಪಿ ಮೇಲೆ ಫೈರಿಂಗ್

ಸಮಗ್ರ ನ್ಯೂಸ್: ಉಳ್ಳಾಲ ಪ್ರಕರಣವೊಂದರ ಮಹಜರಿಗೆ ತೆರಳುವ ವೇಳೆ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಓರ್ವನಿಗೆ ಪೊಲೀಸ್ ಸಿಬಂದಿ ಫೈರಿಂಗ್ ನಡೆಸಿರುವ ಘಟನೆ ಕೊಣಾಜೆ‌ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬಂದಿ ಗಾಯಗೊಂಡಿದ್ದಾರೆ. 14ಕ್ಕೂ ಅಧಿಕ ಪ್ರಕರಣ ಇರುವ ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್ ನಡೆದಿದೆ. ಫೈರಿಂಗ್ ವೇಳೆ ಉಳ್ಳಾಲ ಠಾಣಾ ಪೊಲೀಸ್ ಸಿಬಂದಿ ವಾಸುದೇವ ಹಾಗೂ ಅಕ್ಬರ್ ಎಂಬುವವರು ಗಾಯಗೊಂಡಿದ್ದಾರೆ. ಆರೋಪಿ ಮುಕ್ತರ್ ಹಲವು ವರ್ಷಗಳಿಂದ ಪೊಲೀಸರ ಕೈಗೆ

ಮಂಗಳೂರು: ತಪ್ಪಿಸಿಕೊಳ್ಳಲೆತ್ನಿಸಿದ ಆರೋಪಿ ಮೇಲೆ ಫೈರಿಂಗ್ Read More »