ಕ್ರೈಂ

ಕಾಣಿಯೂರು: ಗೌರಿಹೊಳೆಗೆ ಬಿದ್ದ ಮಾರುತಿ 800| ಕಾರು ಪತ್ತೆಯಾದ್ರೂ ಅದರಲ್ಲಿದ್ದವರು ಎಲ್ಲಿ ಹೋದರು?

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800 ಕಾರೊಂದು ಉಕ್ಕಿ ಹರಿಯುತ್ತಿರುವ ಹೊಳೆಗೆ ಬಿದ್ದ ಘಟನೆ ಶನಿವಾರ ತಡರಾತ್ರಿ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ನಾಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ವಿಟ್ಲದ ಕುಂಡಡ್ಕ ನಿವಾಸಿ ಧನುಷ್ (26) ಹಾಗೂ ಮಂಜೇಶ್ವರ ನಿವಾಸಿ ಧನುಷ್(21) ಎಂಬವರು ಗುತ್ತಿಗಾರಿನಲ್ಲಿ ಮರದ ಕೆಲಸ ಮಾಡುತ್ತಿದ್ದು, ಶನಿವಾರ ತಡರಾತ್ರಿ ವಿಟ್ಲದಿಂದ ಗುತ್ತಿಗಾರಿಗೆ ತೆರಳುತ್ತಿದ್ದ ವೇಳೆ ಮಂಜೇಶ್ವರ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ […]

ಕಾಣಿಯೂರು: ಗೌರಿಹೊಳೆಗೆ ಬಿದ್ದ ಮಾರುತಿ 800| ಕಾರು ಪತ್ತೆಯಾದ್ರೂ ಅದರಲ್ಲಿದ್ದವರು ಎಲ್ಲಿ ಹೋದರು? Read More »

ಕಳ್ಳನೆಂದು ಭಾವಿಸಿ ವ್ಯಕ್ತಿ ಯೊಬ್ಬನ ಬರ್ಬರವಾಗಿ ಹತ್ಯೆಗೈದ ಸೆಕ್ಯೂರಿಟಿ ಗಾರ್ಡ್

ಬೆಂಗಳೂರು: ಸೆಕ್ಯೂರಿಟಿ ಗಾರ್ಡ್ ಒಬ್ಬರು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆಯೊಂದು ಬೆಂಗಳೂರಿನ ಹೆಚ್ ಎ ಎಲ್ ನಲ್ಲಿ ನಡೆದಿದೆ. ಮಾರತ್ ಹಳ್ಳಿ ಬಳಿಯ ವಂಶಿ ಸಿಟಾಡೆಲ್ ಅಪಾರ್ಟ್ ಮೆಂಟ್ ಗೆ ಅಪರಿಚಿತ ವ್ಯಕ್ತಿಯೊಬ್ಬ ಬಂದಿದ್ದ. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಬಂದ ವ್ಯಕ್ತಿಯನ್ನು ಕಂಡು ಸೆಕ್ಯೂರಿಟಿ ಗಾರ್ಡ್ ಶ್ಯಾಮನಾಥ್ ಆತನನ್ನು ಪ್ರಶ್ನೆ ಮಾಡಿದ್ದಾರೆ. ಎಷ್ಟೇ ಕೇಳಿದರೂ ವ್ಯಕ್ತಿ ಬಾಯಿಬಿಡದೇ ಸುಮ್ಮನಾಗಿದ್ದ. ಬಳಿಕ ಮನೆಯೊಳಗೆ ನುಗ್ಗಲು ಯತ್ನಿಸಿದ್ದ. ಆತ ಕಳ್ಳನೆ ಇರಬೇಕು ಎಂದು ಭಾವಿಸಿ ಪಕ್ಕದಲ್ಲಿಯೇ ಇದ್ದ ರಾಡ್

ಕಳ್ಳನೆಂದು ಭಾವಿಸಿ ವ್ಯಕ್ತಿ ಯೊಬ್ಬನ ಬರ್ಬರವಾಗಿ ಹತ್ಯೆಗೈದ ಸೆಕ್ಯೂರಿಟಿ ಗಾರ್ಡ್ Read More »

ಕಾಣಿಯೂರು: ಸೇತುವೆಯಿಂದ ಕೆಳಗುರುಳಿ ನೀರು ಪಾಲಾದ ಕಾರು| 50 ಮೀಟರ್ ದೂರದಲ್ಲಿ ಪತ್ತೆ

ಸಮಗ್ರ ನ್ಯೂಸ್: ಮಂಜೇಶ್ವರ – ಪುತ್ತೂರು- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದು ನೀರು ಪಾಲಾಗಿದ್ದು, 50 ಮೀಟರ್ ದೂರದಲ್ಲಿ ಪತ್ತೆಯಾಗಿದೆ. ಬೈತಡ್ಕ ಮಸೀದಿಯ ಸಮೀಪವೇ ಇರುವ ಸೇತುವೆಗೆ ಕಾರೊಂದು ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಈ ಘಟನೆ ಬೈತಡ್ಕ ಮಸೀದಿಯ ಸಿಸಿ ಕೆಮರಾದಲ್ಲಿ ದೃಶ್ಯ ಸೆರೆಯಾಗಿದೆ. ಘಟನೆ ಕುರಿತಂತೆ ಸ್ಥಳೀಯರು ಪರಿಶೀಲನೆ ನಡೆಸುತ್ತಿದ್ದು ವಿಟ್ಲ‌ ಕುಂಡಡ್ಕ ಮೂಲದ ಮೂವರು ನೀರುಪಾಲಾಗಿದ್ದಾರೆ ಎಂದು ಹೇಳಲಾಗಿದೆ.

ಕಾಣಿಯೂರು: ಸೇತುವೆಯಿಂದ ಕೆಳಗುರುಳಿ ನೀರು ಪಾಲಾದ ಕಾರು| 50 ಮೀಟರ್ ದೂರದಲ್ಲಿ ಪತ್ತೆ Read More »

ಮಂಗಳೂರು: ಮಾದಕದ್ರವ್ಯ ಮಾರಾಟ ಹಿನ್ನಲೆ; 12 ಕಾಲೇಜು ವಿದ್ಯಾರ್ಥಿಗಳು ಅರೆಸ್ಟ್

ಸಮಗ್ರ ನ್ಯೂಸ್: ನಗರದಲ್ಲಿ ಸಾರ್ವಜನಿಕರಿಗೆ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 12 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಾನೂಫ್ ಅಬ್ದುಲ್ ಗಫೂರ್(21), ಮೊಹಮ್ಮದ್ ರಸೀನ್(22), ಗೋಕುಲ ಕೃಷ್ಣನ್(22), ಶಾರೂನ್ ಆನಂದ(19), ಅನಂತು ಕೆ.ಪಿ(18), ಅಮಲ್(21), ಅಭಿಷೇಕ(21), ನಿದಾಲ್(21), ಶಾಹೀದ್ ಎಂ.ಟಿ.ಪಿ(22), ಫಹಾದ್ ಹಬೀಬ್(22), ಮೊಹಮ್ಮದ್ ರಿಶಿನ್(22), ರಿಜಿನ್ ರಿಯಾಜ್(22) ಬಂಧಿತರು. ಬಂಧಿತ ವಿದ್ಯಾರ್ಥಿಗಳೆಲ್ಲರೂ ಕೇರಳ ರಾಜ್ಯದವರಾಗಿದ್ದಾರೆ. ಆರೋಪಿಗಳ ಪೈಕಿ 9 ಮಂದಿ ವಿದ್ಯಾರ್ಥಿಗಳು ಯೇನೆಪೋಯ ಕಾಲೇಜಿನ ಪದವಿ ವಿದ್ಯಾರ್ಥಿಗಳಾಗಿದ್ದು, 3

ಮಂಗಳೂರು: ಮಾದಕದ್ರವ್ಯ ಮಾರಾಟ ಹಿನ್ನಲೆ; 12 ಕಾಲೇಜು ವಿದ್ಯಾರ್ಥಿಗಳು ಅರೆಸ್ಟ್ Read More »

ನದಿಗೆ ಉರುಳಿದ ಕಾರು; 9 ಮಂದಿ ಜಲಸಮಾಧಿ

ಸಮಗ್ರ ನ್ಯೂಸ್: ಕಾರು ನದಿಗೆ ಉರುಳಿದ ಪರಿಣಾಮ 9 ಮಂದಿ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಉತ್ತರಾಖಂಡ್‌ ನ ರಾಮ್‌ ನಗರ್‌ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಕಾರಿನಲ್ಲಿ ಒಬ್ಬ ಮಹಿಳೆ ಹಾಗೂ ಮಗು ಸೇರಿದಂತೆ 11 ಮಂದಿ ಪ್ರಯಾಣಿಸುತ್ತಿದ್ದ ಕಾರು ನದಿಗೆ ಉರುಳಿದ್ದು, ಮೃತಪಟ್ಟವರೆಲ್ಲರೂ ಪಂಜಾಬ್‌ ಮೂಲದವರು ಎಂದು ತಿಳಿದು ಬಂದಿದೆ. ಶುಕ್ರವಾರ ಮುಂಜಾನೆ 5 ಗಂಟೆ ಸುಮಾರಿಗೆ ಕಾರು ನದಿಗೆ ಉರುಳಿದೆ. ಕಾರು ವೇಗವಾಗಿ ಚಲಿಸುತ್ತಿದ್ದು, ನದಿಯಲ್ಲಿ ಬಿದ್ದರೂ ಚಲಿಸುತ್ತಿದ್ದು, ನದಿ ಹರಿವಿನ ನಡುವೆ

ನದಿಗೆ ಉರುಳಿದ ಕಾರು; 9 ಮಂದಿ ಜಲಸಮಾಧಿ Read More »

ಸುರತ್ಕಲ್: ಓಮ್ನಿ ಮೇಲೆ ಲಾರಿ ಪಲ್ಟಿ; ಓಮ್ನಿ ಚಾಲಕ ಮೃತ್ಯು

ಸಮಗ್ರ ನ್ಯೂಸ್: ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಗಂಭೀರ ಗಾಯಗೊಂಡಿದ್ದ ಓಮ್ನಿ ಚಾಲಕ ಮೃತಪಟ್ಟಿರುವ ಘಟನೆ ಸುರತ್ಕಲ್ ನ ಹೊನ್ನಕಟ್ಟೆ ಜಂಕ್ಷನ್ ನಲ್ಲಿ ಸಂಭವಿಸಿದೆ. ಮೃತರನ್ನು ಗೋಕುಲ ನಗರ ನಿವಾಸಿ ಲೋಕೇಶ್ ಕುಲಾಲ್ (38) ಎಂದು ಗುರುತಿಸಲಾಗಿದೆ. ಅಪಘಾತದ ಪರಿಣಾಮ ಓಮಿನಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಲಾರಿ ಚಾಲಕನ ಅಜಾಗರೂಕತೆಯೇ ಅವಘಡಕ್ಕೆ ಸಂಭವಿಸಿದೆ ಎನ್ನಲಾಗಿದ್ದು, ಸುರತ್ಕಲ್ ಉತ್ತರ ಟ್ರಾಫಿಕ್ ಪೊಲೀಸರು ಆಗಮಿಸಿ ಸ್ಕ್ರೈನ್ ಸಹಾಯದಿಂದ ಲಾರಿಯನ್ನು ಎತ್ತಿ ಓಮಿನಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ

ಸುರತ್ಕಲ್: ಓಮ್ನಿ ಮೇಲೆ ಲಾರಿ ಪಲ್ಟಿ; ಓಮ್ನಿ ಚಾಲಕ ಮೃತ್ಯು Read More »

ಬಾಂಗ್ಲಾದಲ್ಲಿ ಕೊಲೆ, ಬೆಂಗ್ಳೂರಲ್ಲಿ ಸೆರೆ| ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ

ಸಮಗ್ರ ನ್ಯೂಸ್: ಬಾಂಗ್ಲಾದೇಶದಲ್ಲಿ ಕೊಲೆ ಮಾಡಿ‌ ಬೆಂಗಳೂರಿನ ಬೊಮ್ಮನಹಳ್ಳಿಗೆ ಬಂದು ನೆಲೆಸಿದ್ದ ಆರೋಪಿಯನ್ನು ಬಾಂಗ್ಲಾ ಪೊಲೀಸರು ಬಂಧಿಸಿದ್ದಾರೆ‌. ಫೈಜಲ್ ಅಹಮದ್ ಬಂಧಿತ ಆರೋಪಿ‌. ಉಗ್ರ ಸಂಘಟನೆ ಅಲ್ ಖೈದಾ ಜತೆಗೂ ಆರೋಪಿ ಸಂಪರ್ಕ ಹೊಂದಿದ್ದ ಎಂದು ಶಂಕಿಸಲಾಗಿದೆ. ಬಾಂಗ್ಲಾ ಮತ್ತು ಕೋಲ್ಕತ್ತಾ ಪೊಲೀಸರ ವಿಶೇಷ ತಂಡ ಕಾರ್ಯಾಚರಣೆ ನಡೆಸಿ, ಜುಲೈ 1ರಂದು ನಗರದ ಬೊಮ್ಮನಹಳ್ಳಿಯಲ್ಲಿ ಆರೋಪಿಯನ್ನ ಬಂಧಿಸಿದ್ದಾರೆ. ಕ್ಯಾಬ್ ಚಾಲಕನಾಗಿ ಕೆಲಸ ಮಾಡ್ತಿದ್ದ ಆರೋಪಿ ಫೈಜಲ್ 2015ರ ಮೇ.12ರಂದು ಬಾಂಗ್ಲಾದ ಸಿಲೆಟ್​ನಲ್ಲಿ ಕೊಲೆ‌ ಮಾಡಿ‌ ತಲೆ‌ಮರೆಸಿಕೊಂಡಿದ್ದ. ವಿಜ್ಞಾನ

ಬಾಂಗ್ಲಾದಲ್ಲಿ ಕೊಲೆ, ಬೆಂಗ್ಳೂರಲ್ಲಿ ಸೆರೆ| ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ Read More »

ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ| ನಟ ಶ್ರೀಜಿತ್‌ ರವಿ ಫೋಕ್ಸೋ ಕಾಯ್ದೆಯಡಿ ಅರೆಸ್ಟ್

ಸಮಗ್ರ ನ್ಯೂಸ್: ಮಲೆಯಾಳಂನ ಖ್ಯಾತ ನಟ ಶ್ರೀಜಿತ್ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕವಾಗಿ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಮಾಡಿದ ಆರೋಪದ ಮೇಲೆ ಶ್ರೀಜಿತ್ ರವಿ ಅವರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಜುಲೈ 4 ರಂದು ಅಯ್ಯಂತೊಳೆ ಎಸ್‌ಎನ್‌ ಪಾರ್ಕ್‌ನಲ್ಲಿ ಈ ಘಟನೆ ನಡೆದಿದೆ.ಸದ್ಯ ಶ್ರೀಜಿತ್‌ ರವಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ಅವರನ್ನು ಬಂಧಿಸಲಾಗಿದೆ ಎಂದು ತ್ರಿಶೂರ್ ಪಶ್ಚಿಮ ವಿಭಾಗದ ಪೊಲೀಸರು ತಿಳಿಸಿದ್ದಾರೆ. ಇಬ್ಬರು ಅಪ್ರಾಪ್ತ ಬಾಲಕಿಯರು ನಿಂತಿದ್ದ ವೇಳೆ ತನ್ನ ಕಾರಿನಲ್ಲಿ ಕುಳಿತಿದ್ದ

ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ| ನಟ ಶ್ರೀಜಿತ್‌ ರವಿ ಫೋಕ್ಸೋ ಕಾಯ್ದೆಯಡಿ ಅರೆಸ್ಟ್ Read More »

ಕೆಎಸ್ಆರ್ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ| ಮೂವರು ಸ್ಥಳದಲ್ಲೇ ಸಾವು

ಸಮಗ್ರ‌ ನ್ಯೂಸ್: ಕೆಎಸ್ ಆರ್‌ಟಿಸಿ ಬಸ್ಸು ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಮತ್ತಿಹಳ್ಳಿ ಬಳಿ ನಡೆದಿದೆ. ಕಾರು ಮತ್ತು ಬಸ್ಸು ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದು, ಉಳಿದ ಇಬ್ಬರಿಬ್ಬರಿಗೆ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರಿನ ತಿಪಟೂರು ತಾಲೂಕಿನ ಮತ್ತಿಹಳ್ಳಿಯಲ್ಲಿ ಘಟನೆ ನಡೆದಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ಬರುತ್ತಿದ್ದ KSRTC ಬಸ್ಸು ಮತ್ತು ತುಮಕೂರಿನಿಂದ ಅರಸೀಕೆರೆಗೆ ಹೋಗುತ್ತಿದ್ದ ಕಾರು ಎಂದು ಗುರುತಿಸಲಾಗಿದೆ.

ಕೆಎಸ್ಆರ್ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ| ಮೂವರು ಸ್ಥಳದಲ್ಲೇ ಸಾವು Read More »

ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ಬುರ್ಖಾ ಸಿಲುಕಿ ಮಹಿಳೆ ಸಾವು

ಸಮಗ್ರ ನ್ಯೂಸ್: ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ತಾವು ಧರಿಸಿದ್ದ ಬಟ್ಟೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಆಕಸ್ಮಿಕ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ರಾಬರ್ಟ್ ಸನ್ ಪೇಟೆಯ ತಹಶೀಲ್ದಾರ್ ಕಚೇರಿ ಬಳಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಕೌಸರ್ (37) ಮೃತಪಟ್ಟ ಮಹಿಳೆ. ಕಬ್ಬಿನ ಹಾಲು ತೆಗೆಯುವ ವೇಳೆ ಮಹಿಳೆ ಧರಿಸಿದ್ದ ಬುರ್ಕಾ ಯಂತ್ರಕ್ಕೆ ಸಿಲುಕಿದ ಪರಿಣಾಮ ಕುತ್ತಿಗೆ ಬಿಗಿದು ಸಾವು ಸಂಭವಿಸಿದೆ. ರಾಬರ್ಟ್‌ ಸನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ಬುರ್ಖಾ ಸಿಲುಕಿ ಮಹಿಳೆ ಸಾವು Read More »