ಕ್ರೈಂ

ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಮಂಗಳೂರು ಮೂಲದ ಪೈಲಟ್ ಕ್ಲೈವ್ ಕುಂದರ್

ಸಮಗ್ರ ನ್ಯೂಸ್: ಅಹಮದಾಬಾದ್‌ನ ಮೇಘನಿ ನಗರದ ವಸತಿ ಪ್ರದೇಶಕ್ಕೆ ಅಪ್ಪಳಿಸಿದ ದುರದೃಷ್ಟಕರ ಏರ್ ಇಂಡಿಯಾ ವಿಮಾನ AI 171 ವಿಮಾನದಲ್ಲಿದ್ದ ಸಿಬ್ಬಂದಿಯಲ್ಲಿ ಮಂಗಳೂರು ಮೂಲದ ಮತ್ತು ಮುಂಬೈ ನಿವಾಸಿಯಾದ ಮೊದಲ ಅಧಿಕಾರಿ ಕ್ಲೈವ್ ಕುಂದರ್ ಕೂಡ ಇದ್ದರು ಎನ್ನಲಾಗಿದೆ. ಇವರಿದ್ದ ಬೋಯಿಂಗ್ 787 ಡ್ರೀಮ್‌ಲೈನರ್ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1:38 ಕ್ಕೆ ಹೊರಟಿತ್ತು. 1100 ಗಂಟೆಗಳ ಹಾರಾಟದ ಅನುಭವ ಹೊಂದಿದ್ದ ಕ್ಲೈವ್, 8200 ಗಂಟೆಗಳಿಗೂ ಹೆಚ್ಚು ಹಾರಾಟದ ಲೈನ್ ತರಬೇತಿ ಕ್ಯಾಪ್ಟನ್ […]

ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಮಂಗಳೂರು ಮೂಲದ ಪೈಲಟ್ ಕ್ಲೈವ್ ಕುಂದರ್ Read More »

ಅಹಮದಾಬಾದ್ ವಿಮಾನ ದುರಂತ| ಎಲ್ಲಾ 242 ಮಂದಿ ಪ್ರಯಾಣಿಕರು ದುರ್ಮರಣ

ಸಮಗ್ರ ನ್ಯೂಸ್: ಅಹಮದಾಬಾದ್ ನಿಂದ ಲಂಡನ್ ಗೆ ಹಾರುತ್ತಿದ್ದ ಏರ್ ಇಂಡಿಯಾ ವಿಮಾನ AI 171 ಗುರುವಾರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಪತನಗೊಂಡಿತು. 232 ಪ್ರಯಾಣಿಕರಿದ್ದ ಪ್ರಯಾಣಿಕ ವಿಮಾನವು ಮೇಘನಿನಗರ ಬಳಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಪತನಗೊಂಡಿದ್ದು, ಆ ಪ್ರದೇಶದಲ್ಲಿ ಭೀತಿ ಮೂಡಿಸಿದೆ. ಅಪಘಾತದಲ್ಲಿ 242 ಮಂದಿಯೂ ಸಾವನ್ನಪ್ಪಿದ್ದಾರೆ ಎಂಬುದಾಗಿ ವರದಿಯಾಗಿದೆ. ಅಪಘಾತದ ಸ್ಥಳದಿಂದ ದಟ್ಟವಾದ ಹೊಗೆ ವಸ್ತ್ರಾಪುರದವರೆಗೂ ಗೋಚರಿಸಿತು. ಅಗ್ನಿಶಾಮಕ ದಳ ಸೇರಿದಂತೆ ತುರ್ತು ಪ್ರತಿಕ್ರಿಯೆ ತಂಡಗಳು ತಕ್ಷಣ ಸ್ಥಳಕ್ಕೆ

ಅಹಮದಾಬಾದ್ ವಿಮಾನ ದುರಂತ| ಎಲ್ಲಾ 242 ಮಂದಿ ಪ್ರಯಾಣಿಕರು ದುರ್ಮರಣ Read More »

ಅಹ್ಮದಾಬಾದ್: ಪತನಗೊಂಡು ಕಾಲೇಜು ಹಾಸ್ಟೆಲ್ ಗೆ ಅಪ್ಪಳಿಸಿದ ವಿಮಾನ| 30 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ

ಸಮಗ್ರ ನ್ಯೂಸ್: ಗುಜರಾತ್‌ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿಇಂದು ಮಧ್ಯಾಹ್ನ ವಿಮಾನ ದುರಂತ ನಡೆದಿದ್ದು, 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನವಾಗಿದೆ. ಪತನಗೊಂಡ ವಿಮಾನವು ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ಗೆ ಅಪ್ಪಳಿಸಿದ್ದು, ಮಧ್ಯಾಹ್ನ ಊಟಕ್ಕೆ ಬಂದಿದ್ದ 30 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೇಘನಿ ನಗರ ಪ್ರದೇಶದಲ್ಲಿರುವ ಬಿಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲಿಗೆ ಪತನಗೊಂಡ ವಿಮಾನ ನುಗ್ಗಿದ್ದು, ಹಾಸ್ಟೆಲ್‌ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವಿಮಾನ ಹಾಸ್ಟೆಲ್‌ಗೆ ನುಗ್ಗುತ್ತಿದ್ದಂತೆ ಕೆಲ ವಿದ್ಯಾರ್ಥಿಗಳು ಕಟ್ಟಡದಿಂದ

ಅಹ್ಮದಾಬಾದ್: ಪತನಗೊಂಡು ಕಾಲೇಜು ಹಾಸ್ಟೆಲ್ ಗೆ ಅಪ್ಪಳಿಸಿದ ವಿಮಾನ| 30 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ Read More »

ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ| 130 ಮಂದಿ ಪ್ರಯಾಣಿಕರು ಬಲಿ!?

ಸಮಗ್ರ ನ್ಯೂಸ್: ಗುಜರಾತ್ ನಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಅಹ್ಮದಾಬಾದ್ ಏರ್ಪೋರ್ಟ್ ಬಳಿಯೇ ವಿಮಾನ ಒಂದು ಪತನವಾಗಿದೆ. ಟೇಕಾಫ್ ಆಗುವಾಗ ವಿಮಾನ ತಾಂತ್ರಿಕ ದೋಷದಿಂದ ಪತನವಾಗಿದೆ ಎಂದು ತಿಳಿದುಬಂದಿದೆ. ಅಹಮದಾಬಾದ್ ನಿಂದ ಏರ್ ಇಂಡಿಯಾನಾ ವಿಮಾನ ಲಂಡನ್ ಗೆ ತೆರಳುತ್ತಿದ್ದ ವಿಮಾನ ಟೇಕಾಪ್ ಆದ ಕೆಲವೇ ಕ್ಷಣದಲ್ಲಿ ಪತನವಾಗಿದೆ. ಗಾಯಾಳುಗಳನ್ನು ಅಹ್ಮದಾಬಾದ್ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಏರ್ಪೋರ್ಟ್ ಬಳಿ ವಿಮಾನ ಹೊತ್ತಿ ಉರಿಯುತ್ತಿದೆ. ವಿಮಾನದಲ್ಲಿ 133 ಪ್ರಯಾಣಿಕರು ಇರುವ ಮಾಹಿತಿ ಇದೆ. ವಿಮಾನದಲ್ಲಿ ಸಿಬ್ಬಂದಿಗಳು

ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ| 130 ಮಂದಿ ಪ್ರಯಾಣಿಕರು ಬಲಿ!? Read More »

ಮೈಸೂರು: ಲವ್, ಸೆಕ್ಸ್ ಆ್ಯಂಡ್ ದೋಖಾ| ಪಂಜ ಮೂಲದ ವೈದ್ಯನ ವಿರುದ್ಧ ದೂರು

ಸಮಗ್ರ ನ್ಯೂಸ್: ವಿವಾಹವಾಗುವುದಾಗಿ ನಂಬಿಸಿ ಸರಸವಾಡಿದ ಆರೋಪದ ಮೇಲೆ‌ ಸುಳ್ಯ ತಾಲೂಕಿನ ‌ಪಂಜ ಮೂಲದ ವೈದ್ಯರೊಬ್ಬರ ವಿರುದ್ಧ ಮೈಸೂರಿನ ಯುವತಿಯೊಬ್ಬರು ದೂರು ದಾಖಲಿಸಿರುವ ಘಟನೆ ನಡೆದಿದೆ. ಯುವತಿ ವೈದ್ಯರಿಗೆ ಫೇಸ್ಬುಕ್‌ ಮೂಲಕ ಪರಿಚಯವಾಗಿದ್ದು, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ನಂತರ ರಿಜಿಸ್ಟರ್ಡ್‌ ವಿವಾಹವಾಗಿದ್ದು, ಇದೀಗ ಪತ್ನಿಯಾಗಿ ಸ್ವೀಕರಿಸಲು ನಿರಾಕರಿಸಿ ವಂಚನೆ ಮಾಡಿದ್ದಾರೆ ಎನ್ನುವ ಆರೋಪದ ಮೇರೆಗೆ ದೂರು ದಾಖಲು ಮಾಡಲಾಗಿದೆ. ಪಂಜ ಮೂಲದ ಡಾ.ಆದರ್ಶ್‌ ಅವರು ಫೇಸ್ಬುಕ್‌ ಮೂಲಕ ತನ್ನನ್ನು ಪರಿಚಯಿಸಿ, ವಿವಾಹದ ಭರವಸೆ ನೀಡಿ

ಮೈಸೂರು: ಲವ್, ಸೆಕ್ಸ್ ಆ್ಯಂಡ್ ದೋಖಾ| ಪಂಜ ಮೂಲದ ವೈದ್ಯನ ವಿರುದ್ಧ ದೂರು Read More »

ಕಡಬ: ನದಿಯಲ್ಲಿ ಮುಳುಗಿ ಯುವಕ ಸಾವು

ಸಮಗ್ರ ನ್ಯೂಸ್: ಕಡಬ ತಾಲ್ಲೂಕಿನ ಇಚ್ಲಂಪಾಡಿ ಗ್ರಾಮದ ಗುಂಡ್ಯಹೊಳೆ ಸೇತುವೆ ಬಳಿ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಇಚ್ಲಂಪಾಡಿ ಗ್ರಾಮದ ಕೆಡೆಂಬೇಲು ನಿವಾಸಿ ಜಯಾನಂದ ಶೆಟ್ಟಿ ಅವರ ಪುತ್ರ ಚೇತನ್ ಶೆಟ್ಟಿ (21) ಮೃತಪಟ್ಟವರು. ಚೇತನ್ ಮಂಗಳೂರಿನಲ್ಲಿ ವೈದ್ಯಕೀಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದು, ಈ ದಿನ ರಜೆಯ ನಿಮಿತ್ತ ಮನೆಯಲ್ಲೇ ಇದ್ದರು. ಬೆಳಿಗ್ಗೆ ಕ್ರಿಕೆಟ್ ಆಡಲು ಹೊರಟ ಚೇತನ್ ಶೆಟ್ಟಿ, ಮಧ್ಯಾಹ್ನದ ವೇಳೆಗೆ ಸ್ನೇಹಿತರ ಜೊತೆ ಇಚ್ಲಂಪಾಡಿ ಸೇತುವೆ ಬಳಿ ಇರುವ ನೂಜಿಬಾಳ್ತಿಲ

ಕಡಬ: ನದಿಯಲ್ಲಿ ಮುಳುಗಿ ಯುವಕ ಸಾವು Read More »

RCB ಸಂಭ್ರಮಾಚರಣೆ ವೇಳೆ ಸೂತಕ| ಕಾಲ್ತುಲಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆ

ಸಮಗ್ರ ನ್ಯೂಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆಯು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ದುರಂತದಲ್ಲಿ ಕೊನೆಗೊಂಡಿದೆ. ನೆಚ್ಚಿನ ತಂಡದ ವಿಜಯೋತ್ಸವದಲ್ಲಿ ಪಾಲ್ಗೊಳ್ಳಲು ಮತ್ತು ಆಟಗಾರರನ್ನು ಕಣ್ತುಂಬಿಕೊಳ್ಳಲು ಆಗಮಿಸಿದ್ದ ಅಪಾರ ಸಂಖ್ಯೆಯ ಅಭಿಮಾನಿಗಳ ನಡುವೆ ಉಂಟಾದ ತೀವ್ರ ನೂಕುನುಗ್ಗಲಿನಿಂದಾಗಿ ಓರ್ವ ಮಹಿಳೆ ಸಹಿತ 11 ಮಂದಿ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ನಗರದ ವಿವಿಧೆಡೆಯಿಂದ ಸಾವಿರಾರು ಯುವಕ-ಯುವತಿಯರು ಕ್ರೀಡಾಂಗಣದತ್ತ ಧಾವಿಸಿದ್ದರು. ಕ್ರೀಡಾಂಗಣದ ಗೇಟ್ ನಂಬರ್ 18, 19, ಮತ್ತು 20

RCB ಸಂಭ್ರಮಾಚರಣೆ ವೇಳೆ ಸೂತಕ| ಕಾಲ್ತುಲಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆ Read More »

ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ| ಇಬ್ಬರು ಸಾವು; ಹಲವರಿಗೆ ಗಾಯ

ಸಮಗ್ರ ನ್ಯೂಸ್: 18ನೇ ಆವೃತ್ತಿಯ ಐಪಿಎಲ್ (IPL) ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ನಗರಕ್ಕೆ ಬಂದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡೆಯಲಿದೆ. ಈ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿ ಇಬ್ಬರು ಆರ್​ಸಿಬಿ ಅಭಿಮಾನಿ ಮೃತಪಟ್ಟಿದ್ದಾರೆ.​ ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ​ಲೇಡಿ ಕರ್ಜನ್ ಆಸ್ಪತ್ರೆ

ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ| ಇಬ್ಬರು ಸಾವು; ಹಲವರಿಗೆ ಗಾಯ Read More »

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ| ಮತ್ತೋರ್ವ ಆರೋಪಿ ದಸ್ತಗಿರಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ. ಮೇ 1ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಜೊತೆ ಸೇರಿಕೊಂಡು ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಗಳು ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಬಜಪೆ ನಿವಾಸಿ ಅಬ್ದುಲ್ ರಜಾಕ್ (59)

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ| ಮತ್ತೋರ್ವ ಆರೋಪಿ ದಸ್ತಗಿರಿ Read More »

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ| ಮತ್ತಿಬ್ಬರನ್ನು ವಶಕ್ಕೆ ಪಡೆದ ಖಾಕಿ

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಜೂ. 3ರ ಮಂಗಳವಾರ ನಡೆದಿದೆ. ತೆಂಕಬೆಳ್ಳೂರು ನಿವಾಸಿ ಅಭಿನ್ ರೈ(32) ಹಾಗೂ ಬಡಗಬೆಳ್ಳೂರು ನಿವಾಸಿ ತೇಜಾಕ್ಷ(24) ಬಂಧಿತ ಆರೋಪಿಗಳು. ಪೊಲೀಸರು ಈ ಹಿಂದೆ ‌ಐವರು ಆರೋಪಿಗಳನ್ನು ಬಂಧಿಸಿದ್ದು, ಪ್ರಸ್ತುತ ಅವರೆಲ್ಲರೂ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ| ಮತ್ತಿಬ್ಬರನ್ನು ವಶಕ್ಕೆ ಪಡೆದ ಖಾಕಿ Read More »