ಕ್ರೈಂ

ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಭೀಕರ ಹತ್ಯೆ

ಸಮಗ್ರ ನ್ಯೂಸ್: ಹುಬ್ಬಳ್ಳಿಯಲ್ಲಿ ಸರಳವಾಸ್ತು ಖ್ಯಾತಿ ಚಂದ್ರಶೇಖರ್ ಗುರೂಜಿಯನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯ ಬರ್ಬರ ಹತ್ಯೆ ಮಾಡಲಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಗುರೂಜಿಯ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಭಕ್ತರಂತೆ ಬಂದ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳವಾಸ್ತು ಮೂಲಕ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಚಂದ್ರಶೇಖರ ಗುರೂಜಿ ಖ್ಯಾತರಾಗಿದ್ದರು. […]

ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಭೀಕರ ಹತ್ಯೆ Read More »

ಕಾರು ನಿಯಂತ್ರಣ ತಪ್ಪಿ ಮರವಂತೆ ಬೀಚ್ ಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮರವಂತೆ ಬೀಚ್​ನಲ್ಲಿ ಕೆಂಪು ಬಣ್ಣದ ಸ್ವಿಫ್ಟ್​ ಕಾರು ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ರೋಶನ್​ ಆಚಾರ್ಯ ಶವ ಪತ್ತೆಯಾಗಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ನಿಯಂತ್ರಣ ತಪ್ಪಿದ ಪರಿಣಾಮ ನಾಲ್ವರು ಪ್ರಯಾಣಿಸುತ್ತಿದ್ದ ಸ್ವಿಫ್ಟ್​ ಕಾರು ಮರವಂತೆ ಕಡಲಿಗೆ ಹಾರಿತ್ತು. ಕೋಟೇಶ್ವರ ಮೂಲದ ವಿರಾಜ್​ ಆಚಾರ್ಯ ಸೀಟ್​ ಬೆಲ್ಟ್​ ಧರಿಸಿದ್ದ ಪರಿಣಾಮ ಅವರ ಮೃತದೇಹ ಕಾರಿನಲ್ಲಿಯೇ ಪತ್ತೆಯಾಗಿತ್ತು. ಇದೇ ಕಾರಿನಲ್ಲಿದ್ದ ಕಾರ್ತಿಕ್​ ಹಾಗೂ ಸಂದೀಪ್​

ಕಾರು ನಿಯಂತ್ರಣ ತಪ್ಪಿ ಮರವಂತೆ ಬೀಚ್ ಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ Read More »

ಬಿ.ಸಿ.ರೋಡ್: ಕ್ಷುಲ್ಲಕ ಕಾರಣಕ್ಕೆ ಯುವಕನ ಹತ್ಯೆ

ಸಮಗ್ರ‌ನ್ಯೂಸ್: ಬಿ.ಸಿ.ರೋಡಿನ ಶಾಂತಿ ಅಂಗಡಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ತಂಡಗಳ ನಡುವೆ ನಿನ್ನೆ ತಡರಾತ್ರಿ ಉಂಟಾದ ಮಾತಿನ ಚಕಮಕಿ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯಗೊಂಡಿದೆ. ಕೊಲೆಯಾದವರನ್ನು ಬಿ.ಸಿ.ರೋಡ್ ಬಂಟ್ವಾಳದ ಬಿ ಮೂಡ ಗ್ರಾಮದ ಶಾಂತಿಯಂಗಡಿ ನಿವಾಸಿ ಅಬ್ದುಲ್ ಖಾದರ್ ಎಂಬವರ ಪುತ್ರ ಆಸೀಫ್‌ಎಂದು ಗುರುತಿಸಲಾಗಿದೆ. ಬಂಟ್ವಾಳದ ಮಾರಿಪಳ್ಳ ನಿವಾಸಿಗಳಾದ ಮಹಮ್ಮದ್ ನೌಫೆಲ್ ಮಾರಿಪಳ್ಳ ಹಾಗೂ ಮಹಮ್ಮದ್ ನೌಸೀರ ಮಾರಿಪಳ್ಳ ಕೊಲೆ ಆರೋಪಿಗಳು. ಬಿ.ಸಿ.ರೋಡಿನ ಬಸ್ ಡಿಪೋ ಬಳಿ ಬೈಕ್ ಹಾರ್ನ್ ವಿಚಾರದಲ್ಲಿ ಎರಡು ತಂಡಗಳ ನಡುವೆ ವಾಗ್ವಾದ ಉಂಟಾಗಿ

ಬಿ.ಸಿ.ರೋಡ್: ಕ್ಷುಲ್ಲಕ ಕಾರಣಕ್ಕೆ ಯುವಕನ ಹತ್ಯೆ Read More »

ಬೆಳ್ತಂಗಡಿ: ಸರ್ಕಾರಿ ಬಸ್ ನಲ್ಲಿ ಭಿನ್ನಕೋಮಿನ ಅಪ್ರಾಪ್ತ ಜೋಡಿ| ಕೊಕ್ಕಡದಲ್ಲಿ ಸಿಕ್ಕಿಬಿದ್ದವರು ಧರ್ಮಸ್ಥಳ ಪೊಲೀಸ್ ವಶ

ಸಮಗ್ರ ನ್ಯೂಸ್: ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಸರಕಾರಿ ಬಸ್ಸೊಂದರಲ್ಲಿ ಭಿನ್ನಕೋಮಿನ ಇಬ್ಬರು ಅಪ್ರಾಪ್ತ ಜೋಡಿಯನ್ನು ಸೋಮವಾರ ರಾತ್ರಿ ಕೊಕ್ಕಡದಲ್ಲಿ ಬಸ್ ತಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು ಪತ್ತೆಹಚ್ಚಿ ಧರ್ಮಸ್ಥಳ ಪೊಲೀಸರ ವಶಕ್ಕೆ ನೀಡಿದ್ದಾರೆ. ಬೆಂಗಳೂರು ಜಿಲ್ಲೆಯ ದೇವನಹಳ್ಳಿಯ ವ್ಯಾಪ್ತಿಯ ಅಪ್ರಾಪ್ತ ಒಂದೇ ಕಾಲೇಜಿನ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವ ಮುಸ್ಲಿಂ ವಿದ್ಯಾರ್ಥಿ ಹಾಗೂ ಹಿಂದೂ ವಿದ್ಯಾರ್ಥಿನಿ ಸೋಮವಾರ ಸಂಜೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಂದು ರಾತ್ರಿ ವಾಪಸ್ ಬಸ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಮಾಹಿತಿ ಪಡೆದ ಹಿಂದೂ ಸಂಘಟನೆಯ

ಬೆಳ್ತಂಗಡಿ: ಸರ್ಕಾರಿ ಬಸ್ ನಲ್ಲಿ ಭಿನ್ನಕೋಮಿನ ಅಪ್ರಾಪ್ತ ಜೋಡಿ| ಕೊಕ್ಕಡದಲ್ಲಿ ಸಿಕ್ಕಿಬಿದ್ದವರು ಧರ್ಮಸ್ಥಳ ಪೊಲೀಸ್ ವಶ Read More »

ಗೋವುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳಲ್ಲಿ; ಓರ್ವ ಎಸ್ಕೇಪ್

ಸಮಗ್ರ ನ್ಯೂಸ್ : ಗೋವುಗಳನ್ನು ಸಾಗಿಸುತ್ತಿದ್ದ ಕಳ್ಳರನ್ನು ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ಪತ್ತೆ ಹಿಡಿದ ಘಟನೆಯೊಂದು ಕಾರ್ಕಳದ ಹೆಬ್ರಿ ಕೆರೆಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಉಡುಪಿಯ ಮಲ್ಪೆ ಹೂಡೆಯಲ್ಲಿ ಅಕ್ರಮ ಕಸಾಯಿ ಖಾನೆ ನಡೆಸುತ್ತಿರುವ ಸಹೋದರರಾದ ಶಕೀಲ್ ಅಹಮದ್ ಮತ್ತು ಅಖಿಲ್ ಅಹಮದ್ ಬಂಧಿತ ಆರೋಪಿಗಳು. ರಾತ್ರಿ ವೇಳೆ ಮನೆಗಳಿಗೆ ನುಗ್ಗಿ ತಲ್ವಾರು ಹಿಡಿದು ದನ ಕದಿಯುತ್ತಿದ್ದ ಸಹೋದರರು ಬೇಳಂಜೆ ಗ್ರಾಮದ ಈಸ ಗದ್ದೆ ಎಂಬಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ಎರಡು ಜಾನುವಾರುಗಳನ್ನು

ಗೋವುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳಲ್ಲಿ; ಓರ್ವ ಎಸ್ಕೇಪ್ Read More »

ವಿಟ್ಲ: ಹಿಂದೂ ಯುವತಿಯನ್ನು‌ ಮದುವೆಯಾದ ಮುಸ್ಲಿಂ ಯುವಕ| ಸಂಘಟನೆಗಳಿಂದ ಲವ್ ಜಿಹಾದ್ ಆರೋಪ

ಸಮಗ್ರ ನ್ಯೂಸ್: ಅನ್ಯಕೋಮಿನ ಯುವಕನೋರ್ವ ಮೈಸೂರು ಮೂಲದ ಹಿಂದೂ ಯುವತಿಯನ್ನು ವಿವಾಹವಾದ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಟ್ಲ ನೀರಕಣಿ ಮಾರ್ನೆಮಿಗುಡ್ಡೆ ನಿವಾಸಿ ಉಬೈದ್(27) ಎಂಬ ಅನ್ಯಕೋಮಿನ ಯುವಕ ಮೈಸೂರು ಲೋಕನಾಯಕನ ನಗರದ ಸೌಂದರ್ಯ(24) ಎಂಬ ಹಿಂದೂ ಯುವತಿಯನ್ನು ಮದುವೆಯಾಗಿದ್ದಾನೆ. ಉಬೈದ್ ಮತ್ತು ಸೌಂದರ್ಯ ಮೈಸೂರಿನಲ್ಲಿ ರಿಜಿಸ್ಟರ್ ವಿವಾಹವಾಗಿದ್ದು, ಅವರ ಮದುವೆಯ ರಿಜಿಸ್ಟರ್ ಪತ್ರವು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಜೋಡಿ ಕೆಲ ದಿನ ಹಿಂದೆ ವಿಟ್ಲದಲ್ಲಿ ತಿರುಗಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಕೇರಳದಲ್ಲಿ ನಿಶ್ಚಿತಾರ್ಥವಾದ ಈ

ವಿಟ್ಲ: ಹಿಂದೂ ಯುವತಿಯನ್ನು‌ ಮದುವೆಯಾದ ಮುಸ್ಲಿಂ ಯುವಕ| ಸಂಘಟನೆಗಳಿಂದ ಲವ್ ಜಿಹಾದ್ ಆರೋಪ Read More »

ಪುತ್ತೂರು: ಭೀಕರ ರಸ್ತೆ ಅಪಘಾಗ ತಂದೆ ಸಾವು, ಮಗ ಗಂಭೀರ

ಸಮಗ್ರ ನ್ಯೂಸ್: ಓಮ್ನಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು, ಇನ್ನೊರ್ವ ಗಂಭೀರ ಗಾಯಗೊಂಡ ಘಟನೆ ಪುತ್ತೂರು ಸಮೀಪದ ಕುಂಬ್ರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಪಂಜಿಗುಡ್ಡೆ ನಿವಾಸಿ ರಘುರಾಮ ಶೆಟ್ಟಿ ಎಂದು ತಿಳಿದು ಬಂದಿದೆ. ರಘುರಾಮ ಶೆಟ್ಟಿಯವರು ತನ್ನ ಮಗನನ್ನು ಬೆಂಗಳೂರು ಬಸ್ ಗೆ ಬಿಡಲು ಮನೆಯಿಂದ ಬೈಕ್ ನಲ್ಲಿ ಬರುತ್ತಿದ್ದ ವೇಳೆ ವಿರುದ್ಧ ಡಿಕ್ಕಿನಿಂದ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಶೀನಪ್ಪ ಎಂಬವರು ಚಲಾಯಿಸುತ್ತಿದ್ದ ಮಾರುತಿ

ಪುತ್ತೂರು: ಭೀಕರ ರಸ್ತೆ ಅಪಘಾಗ ತಂದೆ ಸಾವು, ಮಗ ಗಂಭೀರ Read More »

ಜನಪ್ರಿಯ ಅಸ್ಸಾಮಿ ನಟ ಕಿಶೋರ್ ದಾಸ್ ನಿಧನ

ಸಮಗ್ರ ನ್ಯೂಸ್ : ಜನಪ್ರಿಯ ಅಸ್ಸಾಮಿ ನಟ ಕಿಶೋರ್ ದಾಸ್ ಅವರು 30 ವರ್ಷ ಪ್ರಾಯದ  ಯುವಕ ಇಹಲೋಕ ತ್ಯಜಿಸಿದ್ದಾರೆ. ಕಳೆದೊಂದು ವರ್ಷದಿಂದ ಕ್ಯಾನ್ಸರ್ ವಿರುದ್ಧ ಹೋರಾಡಿದ ಕಿಶೋರ್ ದಾಸ್ ಶನಿವಾರ ಮೃತಪಟ್ಟಿದ್ದಾರೆ. 300 ಕ್ಕೂ ಹೆಚ್ಚು ಮ್ಯೂಸಿಕ್ ವೀಡಿಯೊಗಳಲ್ಲಿ ನಟಿಸಿರುವ ನಟ ಕಿಶೋರ್ ದಾಸ್ ಮಾರ್ಚ್‌ನಿಂದ ಚಿಕಿತ್ಸೆ ಪಡೆಯುತ್ತಿದ್ದು, ಫಲಿಸದೆ ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾದರು.

ಜನಪ್ರಿಯ ಅಸ್ಸಾಮಿ ನಟ ಕಿಶೋರ್ ದಾಸ್ ನಿಧನ Read More »

ಅತಿಥಿಯಾಗಿ ವ್ಯಕ್ತಿಯ ಮನೆಗೆ ಬಂದಾತ ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ ಯಜಮಾನನಿಗೆ ಟ್ಯಾಪಿಂಗ್ ಕತ್ತಿಯಿಂದ ಇರಿದು ಪರಾರಿ

ಸಮಗ್ರ ನ್ಯೂಸ್ : ಅತಿಥಿಯಾಗಿ ವ್ಯಕ್ತಿಯ ಮನೆಗೆ ಬಂದಿದ್ದಾತ ಕ್ಷುಲ್ಲಕ ವಿಚಾರಕ್ಕೆ ಜಗಳ ತೆಗೆದು ಮನೆಯ ಯಜಮಾನನಿಗೆ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಯೊಂದು ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದ ತೋಟದ ಮಜಲು‌ ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ತೋಟದ ಮಜಲು ನಿವಾಸಿ ಲೂಕೋಸ್ ಎಂದು ಗುರುತಿಸಲಾಗಿದೆ. ಕೇರಳ ಮೂಲದ ಲೂಕೋಸ್ ಎಂಬವರು ಎಂಟು ವರ್ಷಗಳ ಹಿಂದೆ ಕೊಲ್ಲಮೊಗ್ರ ಗ್ರಾಮದ ತೋಟದ ಮಜಲು ಎಂಬಲ್ಲಿ ಜಾಗ ಖರೀದಿಸಿ ದಂಪತಿಗಳು ವಾಸವಾಗಿದ್ದರು. ಆದರೆ ಕಳೆದ ಎರಡು

ಅತಿಥಿಯಾಗಿ ವ್ಯಕ್ತಿಯ ಮನೆಗೆ ಬಂದಾತ ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ ಯಜಮಾನನಿಗೆ ಟ್ಯಾಪಿಂಗ್ ಕತ್ತಿಯಿಂದ ಇರಿದು ಪರಾರಿ Read More »

ಎರಡು ಲಾರಿಗಳ ನಡುವೆ ಭೀಕರ ಅಪಘಾತ; ಚಾಲಕರಿಬ್ಬರು ಸಾವು

ಸಮಗ್ರ ನ್ಯೂಸ್ : ಧಾರವಾಡ ಹೊರವಲಯದ ಯರಿಕೊಪ್ಪ ಬೈಪಾಸ್‌ನಲ್ಲಿ ಬೆಳಗ್ಗಿನ ವೇಳೆ ಎರಡು ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಚಾಲಕರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಲಾರಿ ಚಾಲಕರ ಮೃತದೇಹಗಳು ಛಿದ್ರ ಛಿದ್ರವಾಗಿದ್ದು, ಗುರುತು ಸಿಗುತ್ತಿಲ್ಲ. ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ‌ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎರಡು ಲಾರಿಗಳ ನಡುವೆ ಭೀಕರ ಅಪಘಾತ; ಚಾಲಕರಿಬ್ಬರು ಸಾವು Read More »