ಕ್ರೈಂ

ವಿಟ್ಲ: ಬಸ್ ನಿಲ್ದಾಣದಲ್ಲಿ ಆತಂಕ ಮೂಡಿಸಿದ ರಕ್ತದ ಕಲೆಗಳು….!!

ಸಮಗ್ರ ನ್ಯೂಸ್ : ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಬಾಗದ ತುಣುಕುಗಳು ಪತ್ತೆಯಾದ ಘಟನೆ ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ನಡೆದಿದೆ. ಬದನಾಜೆ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಭಾಗದ ತುಣುಕುಗಳು ಪತ್ತೆಯಾಗಿದ್ದು, ಈ ಘಟನೆ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದೆ. ಬಸ್ ನಿಲ್ದಾಣದಲ್ಲಿ ಯಾರನ್ನಾದರೂ ಹತ್ಯೆ ಮಾಡಲಾಗಿತ್ತೇ ಅಥವಾ ಅಪಘಾತದಿಂದ ಗಾಯಗೊಂಡವರು ಯಾರದರೂ ಬಸ್ ನಿಲ್ದಾಣದಲ್ಲಿ ಕುಳಿತು ಮತ್ತೆ ಆಸ್ಪತ್ರೆಗೆ ತೆರಳಿರಬಹುದೇ ಎಂಬ ಅನುಮಾನಗಳು ಸಾರ್ವಜನಿಕರಲ್ಲಿ ಸೃಷ್ಟಿಯಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು […]

ವಿಟ್ಲ: ಬಸ್ ನಿಲ್ದಾಣದಲ್ಲಿ ಆತಂಕ ಮೂಡಿಸಿದ ರಕ್ತದ ಕಲೆಗಳು….!! Read More »

ಬಂಟ್ವಾಳ: ಸ್ಟೀಲ್ ಪಾತ್ರೆಗಳ ಕಳವುಗೈದ ಆರೋಪಿ ಬಂಧನ

ಸಮಗ್ರ ನ್ಯೂಸ್ : ಮಣಿನಾಲ್ಕೂರು ಗ್ರಾಮದ ಅಂಗರಗಂಡಿ ಹಂಡೀರು ಎಂಬಲ್ಲಿ ಮನೆಯೊಂದರಿಂದ ಸ್ಟೀಲ್ ಪಾತ್ರೆಗಳು ಮತ್ತು ಮನೆಬಳಕೆಯ ಸಾಮಾಗ್ರಿಗಳನ್ನು ಕಳವುಗೈದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತನನ್ನು ಅಂಗರಗಂಡಿ ನಿವಾಸಿ ಪ್ರವೀಣ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ಪ್ರವೀಣ್‌ನ ಸಹೋದರ ಸತೀಶ್‌ ತಲೆಮರೆಸಿಕೊಂಡಿದ್ದಾನೆ. ಒಂಟಿ ಮಹಿಳೆ ವಾಸಿಸುತ್ತಿದ್ದ ಮನೆಯಲ್ಲಿ ಉಕ್ಕಿನ ಪಾತ್ರೆಗಳನ್ನು ತೊಳೆದು ಹೊರಗಿಟ್ಟಿದ್ದ ವೇಳೆ ಜೂನ್ 25ರಂದು ಆರೋಪಿಗಳು ಕಳವುಗೈದಿದ್ದರು. ಬಾಯ್ಲರ್‌ಗಳು, ಮೂರು ಸ್ಟೀಲ್ ಪಾತ್ರೆಗಳು ಹಾಗೂ ಎರಡು ಫೈಬರ್‍

ಬಂಟ್ವಾಳ: ಸ್ಟೀಲ್ ಪಾತ್ರೆಗಳ ಕಳವುಗೈದ ಆರೋಪಿ ಬಂಧನ Read More »

ಗಗನಚುಂಬಿ ಕಟ್ಟಡದ ತುದಿಯಲ್ಲಿ ಜೋಡಿಯೊಂದರ ಕಾಮಕೇಳಿ| ಇವರ ಸೆಕ್ಸ್ ವಿಡಿಯೋ ನೋಡಿ ನೆಟ್ಟಿಗರು ಗರಂ

ಸಮಗ್ರ ಡಿಜಿಟಲ್ ಡೆಸ್ಕ್: ಬ್ರಿಟನ್‌ನ ಅತಿ ಎತ್ತರದ ಕಟ್ಟಡ ದಿ ಶಾರ್ಡ್‌ನಲ್ಲಿ ತೆರೆದ ಸ್ಥಳದಲ್ಲಿ ದಂಪತಿ ಅಶ್ಲೀಲ ಕೃತ್ಯಗಳನ್ನು ಎಸಗಿದ್ದಾರೆ ಮತ್ತು ಘಟನೆಯ ವೀಡಿಯೊವನ್ನು ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಿದ್ದಾರೆ. ದಂಪತಿಯ ಈ ಕೃತ್ಯಕ್ಕೆ ಜನರು ಅಸಮಾಧಾನ ವ್ಯಕ್ತಪಡಿಸಿದ್ದು, ಅವರನ್ನು ನಿಷೇಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಅಲ್ಲದೇ ತಕ್ಷಣ ಬಂಧಿಸಬೇಕೆಂದು ನೆಟ್ಟಿಗರು ಆಗ್ರಹಿಸಿದ್ದಾರೆ. 1000 ಅಡಿ ಎತ್ತರದಲ್ಲಿ ಅಶ್ಲೀಲ ಕೃತ್ಯ: ಡೈಲಿ ಸ್ಟಾರ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ದಂಪತಿಗಳು ಅಶ್ಲೀಲ ಕೃತ್ಯಗಳನ್ನು ಮಾಡಿದ ಕಟ್ಟಡದ ಎತ್ತರ ಸುಮಾರು 1015 ಅಡಿಗಳು. ಶಾರ್ಡ್

ಗಗನಚುಂಬಿ ಕಟ್ಟಡದ ತುದಿಯಲ್ಲಿ ಜೋಡಿಯೊಂದರ ಕಾಮಕೇಳಿ| ಇವರ ಸೆಕ್ಸ್ ವಿಡಿಯೋ ನೋಡಿ ನೆಟ್ಟಿಗರು ಗರಂ Read More »

ಸುಳ್ಯ: ಮಗುವಿನೊಂದಿಗೆ ಕೆರೆಗೆ ಹಾರಿದ ಮಹಿಳೆ| ತಾಯಿ ಸಾವು, ಬದುಕುಳಿದ ಮಗು

ಸಮಗ್ರ ನ್ಯೂಸ್: ಮಗುವನ್ನು ಜತೆಗೆ ಕಟ್ಟಿಕೊಂಡು ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ನಡೆದಿದೆ‌. ಅದೃಷ್ಟವಶಾತ್ ಮಗು ಪೂರ್ವಿಕಾ ಅದೃಷ್ಟವಶಾತ್ ಬದುಕುಳಿದಿದ್ದು, ತಾಯಿ ಮೃತಪಟ್ಟಿದ್ದಾರೆ. ತಳೂರು ದಯಾನಂದ ಎಂಬವರ ಪತ್ನಿ ಗೀತಾ ಮೃತಪಟ್ಟ ಮಹಿಳೆ. ಇವರು ಎನ್.ಎಮ್.ಸಿ. ನಲ್ಲಿ ಕಛೇರಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮಗು ಕೆರೆಯೊಳಗೆ ಕಲ್ಲಿನ‍ ಸಹಾಯದಿಂದ ಬದುಕುಳಿದಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದಿರುವುದಾಗಿ ತಿಳಿದು ಬಂದಿದೆ. ಮನೆಯವರು ಹಾಗೂ ಸ್ಥಳೀಯರ ಸಹಕಾರದಿಂದ

ಸುಳ್ಯ: ಮಗುವಿನೊಂದಿಗೆ ಕೆರೆಗೆ ಹಾರಿದ ಮಹಿಳೆ| ತಾಯಿ ಸಾವು, ಬದುಕುಳಿದ ಮಗು Read More »

ಟೈಲರ್ ಕನ್ಹಯ್ಯಲಾಲ್ ಕೊಲೆ ಆರೋಪಿಗಳು ಅಂದರ್

ಸಮಗ್ರ ನ್ಯೂಸ್: ನೂಪುರ್ ಶರ್ಮಾ ಪರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದ ಟೈಲರ್ ಕನ್ಹಯ್ಯ ಲಾಲ್ ಎಂಬುವರನ್ನು ಹಾಡಹಗಲೇ ಹತ್ಯೆ ನಡೆಸಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವೀಡಿಯೋ ದೃಶ್ಯಾವಳಿ ಆಧರಿಸಿ, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ತನ್ನ ಅಂಗಡಿಯಲ್ಲಿ ಟೈಲರ್ ಅನ್ನು ಕೊಲೆ ಮಾಡಿದ ಹಂತಕರು ಚಿತ್ರೀಕರಿಸಿದ ಘಟನೆ ರಾಜಸ್ಥಾನದ ಉದಯಪುರ ನಗರದಲ್ಲಿ ಭಾರೀ ಉದ್ವಿಗ್ನತೆಗೆ ಕಾರಣವಾಗಿದೆ. ಇ ಹಿನ್ನಲೆಯಲ್ಲಿ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಲಾಗಿದೆ. ಉದಯ ಪುರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಸಾವಿರಾರು ಪೊಲೀಸರಿಂದ ಬಂಧೋಬಸ್ತ್ ಕೈಗೊಳ್ಳಲಾಗಿದೆ. ಟೈಲರ್

ಟೈಲರ್ ಕನ್ಹಯ್ಯಲಾಲ್ ಕೊಲೆ ಆರೋಪಿಗಳು ಅಂದರ್ Read More »

ಬಹುಭಾಷಾ ನಟಿ ಮೀನಾಗೆ ಪತಿವಿಯೋಗ| ಶ್ವಾಸಕೋಶದ ಸೋಂಕಿಗೆ ಬಲಿಯಾದ ವಿದ್ಯಾಸಾಗರ್

ಸಮಗ್ರ ನ್ಯೂಸ್: ಬಹುಭಾಷಾ ನಟಿ ಮೀನಾ ಪತಿ ವಿದ್ಯಾ ಸಾಗರ್ ವಿಧಿವಶರಾಗಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದರು. ಆದರೆ‌ ಮಂಗಳವಾರ ರಾತ್ರಿ ಮೀನಾ ಪತಿ ವಿದ್ಯಾ ಸಾಗರ್ ನಿಧನ ಹೊಂದಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ಅವರು ಬಳಲುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಟ್ವಿಟರ್‌ನಲ್ಲಿ ಹಲವಾರು ಗಣ್ಯರು ಮೀನಾಗೆ ಸಂತಾಪ ಸೂಚಿಸುತ್ತಿದ್ದಾರೆ. ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿ ನಟಿಸಿರುವ ಮೀನಾ ಬೆಂಗಳೂರು ಮೂಲದ ವಿದ್ಯಾ ಸಾಗರ್ ವಿವಾಹವಾಗಿದ್ದರು. ದಂಪತಿಗೆ ನೈನಿಕಾ ಎಂಬ ಮಗಳಿದ್ದಾಳೆ. ವಿದ್ಯಾ ಸಾಗರ್

ಬಹುಭಾಷಾ ನಟಿ ಮೀನಾಗೆ ಪತಿವಿಯೋಗ| ಶ್ವಾಸಕೋಶದ ಸೋಂಕಿಗೆ ಬಲಿಯಾದ ವಿದ್ಯಾಸಾಗರ್ Read More »

ನೂಪುರ್ ಶರ್ಮಾರನ್ನು ಬೆಂಬಲಿಸಿ ಪೋಸ್ಟ್ ಹಾಕಿದವರ ರುಂಡ ಚೆಂಡಾಡಿದ ದುಷ್ಕರ್ಮಿಗಳು| ಮೋದಿಯನ್ನೂ ಕೊಲ್ಲುವುದಾಗಿ ಬೆದರಿಕೆ

ಸಮಗ್ರ ನ್ಯೂಸ್: ನುಪೂರ್ ಶರ್ಮಾ ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಅಂಗಡಿ ಮಾಲೀಕನ ಶಿರಚ್ಛೇದ ಮಾಡಲಾಗಿದೆ. ವ್ಯಕ್ತಿಯನ್ನು ದುಷ್ಕರ್ಮಿಗಳು ಶಿರಶ್ಚೇಧ ಮಾಡಿದ್ದಾರೆ. ಉದಯಪುರ ನಗರದ ಮಾಲ್ಡಾಸ್ ಸ್ಟ್ರೀಟ್ ಪ್ರದೇಶದಲ್ಲಿ ಘಟನೆ ನಡೆದಿದೆ. ಶಿರಚ್ಛೇದನದ ಬಳಿಕ ದುಷ್ಕರ್ಮಿಗಳು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಶಿರಚ್ಛೇದನ ಮಾಡಿದ್ದಕ್ಕೆ ಹೆಮ್ಮೆಯಿದೆ ಎಂದು ದುಷ್ಕರ್ಮಿಗಳು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆನ್ನಲಾಗಿದೆ. ಉದಯಪುರದ ಧನ್ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತ ಕನ್ಹಯ್ಯಾ ಲಾಲ್ ಟೈಲರಿಂಗ್

ನೂಪುರ್ ಶರ್ಮಾರನ್ನು ಬೆಂಬಲಿಸಿ ಪೋಸ್ಟ್ ಹಾಕಿದವರ ರುಂಡ ಚೆಂಡಾಡಿದ ದುಷ್ಕರ್ಮಿಗಳು| ಮೋದಿಯನ್ನೂ ಕೊಲ್ಲುವುದಾಗಿ ಬೆದರಿಕೆ Read More »

ರೈಲು ದುರಂತ; 40ಕ್ಕೂ ಹೆಚ್ಚು ಮಂದಿ ಸಾವು, ಹಲವರಿಗೆ ಗಾಯ

ಸಮಗ್ರ ನ್ಯೂಸ್ : ಆಮೆರಿಕದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, 40 ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆಯೊಂದು ನಡೆದಿದೆ. ಮಿಸೌರಿಯ ಮೆಂಡನ್ ನಲ್ಲಿ ಸೋಮವಾರ ಮಧ್ಯಾಹ್ನ ಅಮ್ಟ್ರಾಕ್ ರೈಲು ಡಂಪ್ ಟ್ರಕ್ ಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ ಪರಿಣಾಮ 40 ಮಂದಿ ಸಾವನ್ನಪ್ಪಿದ್ದಾರೆ. ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಾಸ್ ಏಂಜಲೀಸ್ನಿಂದ ಚಿಕಾಗೋಗೆ 243 ಪ್ರಯಾಣಿಕರು ಮತ್ತು 12 ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದ

ರೈಲು ದುರಂತ; 40ಕ್ಕೂ ಹೆಚ್ಚು ಮಂದಿ ಸಾವು, ಹಲವರಿಗೆ ಗಾಯ Read More »

ಕೆರೆಯಲ್ಲಿ ಕುರಿಯನ್ನು ಸ್ನಾನ ಮಾಡಿಸಲು ಹೋಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ಸಮಗ್ರ ನ್ಯೂಸ್ : ತುಮಕೂರು ಹೋಬಳಿಯ ತಿಂಗಳೂರು ಗ್ರಾಮದ ತಿಮ್ಮಯ್ಯ (62) ಎಂಬವರು ಕೆರೆಯಲ್ಲಿ ಕುರಿಯ ಮೈ ತೊಳೆಯಲು ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆಯೊಂದು ಸೋಮವಾರ ಮಧ್ಯಾಹ್ನ ನಡೆದಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ನೀರಿನಲ್ಲಿ ಶೋಧ ಕಾರ್ಯ ನಡೆಸಿದರೂ ಮೃತದೇಹ ಸಿಗಲಿಲ್ಲ. ಕೊನೆಗೆ ಅಗ್ನಿಶಾಮಕ ಮತ್ತು ತುರ್ತುಸೇವಾ ಕಚೇರಿಗೆ ವಿಷಯ ತಿಳಿಸಿದರು. ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಶವವನ್ನು ಹೊರತೆಗೆದರು.

ಕೆರೆಯಲ್ಲಿ ಕುರಿಯನ್ನು ಸ್ನಾನ ಮಾಡಿಸಲು ಹೋಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು Read More »

ಬಿ.ಕಾಂ ವಿದ್ಯಾರ್ಥಿ ವಿಷ ಕುಡಿದು ಆತ್ಮಹತ್ಯೆ

ಸಮಗ್ರ ನ್ಯೂಸ್ : ಬಿ.ಕಾಂ ವಿದ್ಯಾರ್ಥಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬೆಂಗಳೂರು ಹೊರವಲಯ ತಾಲೂಕಿನ ಎಲೆಕ್ಟ್ರಾನ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆ ನಿನ್ನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪ್ರಶಾಂತ್ ವಿಷ ಸೇವಿಸಿ ಆತ್ಮಹತ್ಯೆಗೆ ಒಳಗಾದ ಬಿಕಾಂ ವಿದ್ಯಾರ್ಥಿ, ಪ್ರಶಾಂತ್ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದು, ಜಯನಗರದ ವಿಜಯ ಕಾಲೇಜಿನಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದನು. ಕಳೆದ ವಾರದಿಂದ ಕಾಲೇಜಿನಲ್ಲಿ ಯುವಕರ ಜೊತೆ ಗಲಾಟೆ ಮಾಡಿಕೊಂಡಿದ್ದರಂತೆ. ಕಾಲೇಜಿನ ವಿದ್ಯಾರ್ಥಿಗಳು ಮಾಹಿತಿ

ಬಿ.ಕಾಂ ವಿದ್ಯಾರ್ಥಿ ವಿಷ ಕುಡಿದು ಆತ್ಮಹತ್ಯೆ Read More »