ಕ್ರೈಂ

ಮಂಗಳೂರು: ಮಹಡಿಯಿಂದ ಬಿದ್ದು ಬಾಲಕಿ ಸಾವು

ಸಮಗ್ರ ನ್ಯೂಸ್: ಬಾಲಕಿಯೊಬ್ಬಳು ಐದನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು, ಮೃತಪಟ್ಟ ಘಟನೆ ಮಂಗಳೂರಿನ ಕಂಕನಾಡಿಯಲ್ಲಿ ನಡೆದಿದೆ. ಮಹಮ್ಮದ್ ಇಂತಯಾಜ್ ಅವರ ಪುತ್ರಿ ಸೆಹರ್ ಇಂತಿಯಾಜ್ (15) ಮೃತಪಟ್ಟ ಬಾಲಕಿ. ಮನೆಯ ಬಾಲ್ಕನಿಯ ಸೈಡ್ ಕರ್ಟನ್ ಅನ್ನು ಕುರ್ಚಿಯ ಮೇಲೆ ಹತ್ತಿ ಸರಿಪಡಿಸುವಾಗ ಆಯತಪ್ಪಿ ಕೆಳಗೆ ಬಿದ್ದು ಪ್ರಜ್ಞಾಹೀನಳಾಗಿದ್ದಳು. ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಗಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ. ಈಕೆ ಬಿಜೈ ಲೂರ್ಡ್ಸ್ ಸೆಂಟ್ರಲ್ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದಳು. ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಮಹಡಿಯಿಂದ ಬಿದ್ದು ಬಾಲಕಿ ಸಾವು Read More »

ಸುಬ್ರಹ್ಮಣ್ಯ: ಒಂದೂವರೆ ತಿಂಗಳ ಬಳಿಕ ಗೋಕಳ್ಳತನ ಆರೋಪಿಯ ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪಾರ್ಕಿಂಗ್ ಸ್ಥಳದಲ್ಲಿದ್ದ ದನವನ್ನು ಕಾರಿನಲ್ಲಿ ಬಂದು ದನವನ್ನು ಕದಿಯಲು ಪ್ರಯತ್ನ ಮಾಡಿದ್ದ ಅಪರಿಚಿತ ಗುಂಪನ್ನು ಸುಬ್ರಹ್ಮಣ್ಯ ಪೊಲೀಸರು ಕೊನೆಗೂ ಪತ್ತೆ ಹಚ್ಚಿ ಓರ್ವನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಆರೋಪಿಯು ತನ್ನ ಸಹಚರರೊಂದಿಗೆ ಇನ್ನೋವಾ ಕಾರಿನಲ್ಲಿ ಆಗಮಿಸಿ ದನವನ್ನು ಕಳ್ಳತನಗೈಯುವ ವಿಫಲ ಯತ್ನದ ವೀಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ಒಂದೂವರೆ

ಸುಬ್ರಹ್ಮಣ್ಯ: ಒಂದೂವರೆ ತಿಂಗಳ ಬಳಿಕ ಗೋಕಳ್ಳತನ ಆರೋಪಿಯ ಬಂಧಿಸಿದ ಪೊಲೀಸರು Read More »

ದ.ಸಂ.ಸಮಿತಿ ಸಂಚಾಲಕನ ಕೊಚ್ಚಿ ಕೊಲೆ| ಬೆಚ್ಚಿಬಿದ್ದ ತುಮಕೂರು

ಸಮಗ್ರ ನ್ಯೂಸ್: ಇಬ್ಬರು ದಲಿತ ಯುವಕರ ಕೊಲೆ ಮಾಸುವ ಮುನ್ನವೇ ಹಾಡಹಗಲೇ ದಲಿತ ಮುಖಂಡರೊಬ್ಬರನ್ನು ಗುಬ್ಬಿ ಪಟ್ಟಣದಲ್ಲಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಇಂದು (ಬುಧವಾರ) ಮಧ್ಯಾಹ್ನ 1 ಗಂಟೆ ಸುಮಾರಿಗೆ ನಡೆದಿದೆ. ಕೊಲೆಯಾದ ವ್ಯಕ್ತಿ ಗುಬ್ಬಿ ತಾಲೂಕು ದ.ಸಂ.ಸ. ಸಂಚಾಲಕ ನರಸಿಂಹಮೂರ್ತಿ(ಕುರಿಮೂರ್ತಿ) ಎಂದು ತಿಳಿದು ಬಂದಿದೆ. ಗುಬ್ಬಿ ಪಟ್ಟಣದ ಬಿ.ಹಚ್.ರಸ್ತೆಯ ಟೀ ಅಂಗಡಿ ಮುಂದೆ ಕುಳಿತ್ತಿದ್ದ ನರಸಿಂಹಮೂರ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಗುಂಪು ಪರಾರಿಯಾಗಿದ್ದು, ಹಲ್ಲೆಯ ತೀವ್ರತೆಗೆ ನರಸಿಂಹಮೂರ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ

ದ.ಸಂ.ಸಮಿತಿ ಸಂಚಾಲಕನ ಕೊಚ್ಚಿ ಕೊಲೆ| ಬೆಚ್ಚಿಬಿದ್ದ ತುಮಕೂರು Read More »

ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ| ಆರೋಪಿಯ ಬಂಧನ

ಸಮಗ್ರ ನ್ಯೂಸ್: ಹಸುವಿನ ಮೇಲೆ ಅತ್ಯಾಚಾರವೆಸಗಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಅಯೋದ್ಯೆ ಸಮೀಪದ ಇಲ್ಲಿನ ಶಿವಕರ ಗ್ರಾಮದ ನಿವಾಸಿ ಶಹಾಬುದ್ದೀನ್. ಜೂನ್ 7 ರಂದು ಈ ಘಟನೆ ನಡೆದಿತ್ತು. ಕೆಲವರು ಶಾಹಬುದ್ದೀನ್‌ನನ್ನು ಹಸುವಿನ ಜೊತೆ ಆಕ್ಷೇಪಾರ್ಹ ಭಂಗಿಯಲ್ಲಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈತನ ವಿಡಿಯೋ ಮಾಡಿ ಪೊಲೀಸರಿಗೆ ಕಳುಹಿಸಿದಾಗ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಈ ಹಿಂದೆಯೂ ದೇಶದ ಕೆಲವು ಭಾಗಗಳಲ್ಲಿ ಇಂತಹ ಅಪರಾಧಗಳು ನಡೆದ ಪ್ರಕರಣಗಳು ಬೆಳಕಿಗೆ ಬಂದಿವೆ.

ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ| ಆರೋಪಿಯ ಬಂಧನ Read More »

ಓವರ್ ಟೇಕ್ ಮಾಡುವಾಗ ಬೈಕ್ ಸ್ಕಿಡ್| ಯುವಕ ಸಾವು

ಸಮಗ್ರ ನ್ಯೂಸ್: ಓವರ್‌ಟೇಕ್‌ ಮಾಡುವ ಭರದಲ್ಲಿ ಬೈಕ್‌ ಸ್ಕಿಡ್‌ ಆಗಿ ಸವಾರ ಮೃತಪಟ್ಟ ಘಟನೆ ಗಂಜಿಮಠ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗುರುಪುರ ಕೈಕಂಬ ಎಂಬಲ್ಲಿ‌ ನಡೆದಿದೆ. ಮೃತ ಯುವಕನನ್ನು ಕೆರೆಕಾಡಿನ ಪ್ರವೀಣ್ ಎಂದು ಗುರುತಿಸಲಾಗಿದೆ.ಮೂಡುಬಿದಿರೆಯಿಂದ ಕೈಕಂಬದ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಈತ ಇನ್ನೊಂದು ಬೈಕ್ ನ್ನು ಓವರ್‌ಟೇಕ್‌ ಮಾಡುವ ಭರದಲ್ಲಿ ಬೈಕ್‌ ಸ್ಕಿಡ್‌ ಕಾರಿನಡಿಗೆ ಬಿದ್ದಿದ್ದಾರೆ. ಪರಿಣಾಮವಾಗಿ ಪ್ರವೀಣ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಓವರ್ ಟೇಕ್ ಮಾಡುವಾಗ ಬೈಕ್ ಸ್ಕಿಡ್| ಯುವಕ ಸಾವು Read More »

ಗುಂಡ್ಯ: ಬಸ್ ಮೇಲೆ ಬಿದ್ದ ಮರ; ಅದೃಷ್ಟವಶಾತ್ ತಪ್ಪಿದ ಅಪಾಯ

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಬಸ್ ಮೇಲೆ ಮರವೊಂದು ಉರುಳಿಬಿದ್ದ ಘಟನೆ ಗುಂಡ್ಯ – ಕುಕ್ಕೆ ಸುಬ್ರಹ್ಮಣ್ಯ ರಸ್ತೆಯ ಅನಿಲ ಬಳಿ ನಡೆದಿದೆ. ಅದೃಷ್ಟವಶಾತ್ ಸಂಭಾವ್ಯ ಅಪಾಯ ತಪ್ಪಿದ್ದು, ಪ್ರಯಾಣಿಕರು ಬಚಾವಾಗಿದ್ದಾರೆ. ಈ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಗಾಳಿ ಕಾರಣದಿಂದ ಈ ಘಟನೆ ಸಂಭವಿಸಿದೆ. ಅಪಾಯಕಾರಿ ಮರಗಳನ್ನು ತೆರವುಗೊಳಿಸದ ಅರಣ್ಯ ಇಲಾಖೆಯ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ. ಈ ರಸ್ತೆಯಲ್ಲಿ ಆಗಾಗ ರಸ್ತೆ ಬದಿಯ ಮರಗಳು ಬೀಳುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಇನ್ನೂ ಎಚ್ಚೆತ್ತುಕೊಳ್ಳಲಿಲ್ಲ, ಈಗಾಗಲೇ ಅಪಾಯಕಾರಿ ಮರಗಳೆಂದು

ಗುಂಡ್ಯ: ಬಸ್ ಮೇಲೆ ಬಿದ್ದ ಮರ; ಅದೃಷ್ಟವಶಾತ್ ತಪ್ಪಿದ ಅಪಾಯ Read More »

ತಾಯಿಗೆ ಚಾಕುವಿನಿಂದ ಇರಿದು ಪ್ರಿಯಕರನ ಜೊತೆ ಅಪ್ರಾಪ್ತ ಮಗಳು ಪರಾರಿ

ಸಮಗ್ರ ನ್ಯೂಸ್: ತನ್ನ ತಾಯಿಯನ್ನೇ ಚಾಕುವಿನಿಂದ ಇರಿದು ಅಪ್ತಾಪ್ತೆಯೊಬ್ಬಳು ತನ್ನ ಪ್ರೇಮಿಯೊಂದಿಗೆ ಪರಾರಿಯಾಗಿರುವ ಘಟನೆ ಧಾರವಾಡ ನಗರದಲ್ಲಿ ನಡೆದಿದೆ. ಕಳೆದ ರಾತ್ರಿ ಪ್ರಿಯಕರನ ಜೊತೆ ಸೇರಿ ತಾಯಿಗೆ ಇರಿದು ಬಾಲಕಿ ಪರಾರಿಯಾಗಿದ್ದಾಳೆ. ಕಳೆದ ವರ್ಷ ಇದೇ ಬಾಲಕಿ ವಿಚಾರವಾಗಿ ಪ್ರಿಯಕರ ಜೈಲು ಸೇರಿದ್ದ.ಪೋಕ್ಸೋ ಕಾಯ್ದೆ ಅಡಿ ಪ್ರಿಯಕರನನ್ನು ಬಂಧಿಸಲಾಗಿತ್ತು. ಆದರೆ ಏಪ್ರಿಲ್‌ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದಿದ್ದ. ಅಪ್ರಾಪ್ತೆ ಕೂಡಾ ಸಾಂತ್ವನ ಕೇಂದ್ರದಲ್ಲಿ ಇದ್ದಳು. ಮಗಳನ್ನು ಕಾಲೇಜಿಗೆ ಸೇರಿಸಲು ತಾಯಿ, ಮನೆಗೆ ವಾಪಸ್‌ ಕದೆರುಕೊಂಡು ಬಂದಿದ್ದರು. ಕಳೆದ

ತಾಯಿಗೆ ಚಾಕುವಿನಿಂದ ಇರಿದು ಪ್ರಿಯಕರನ ಜೊತೆ ಅಪ್ರಾಪ್ತ ಮಗಳು ಪರಾರಿ Read More »

ಮಂಗಳೂರು: ಬೆಳ್ಳಂಬೆಳಗ್ಗೆ ಗುಂಡಿ ಸದ್ದು| ಪೊಲೀಸರ ಮೇಲೆ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ ಕೊಲೆ ಆರೋಪಿಗಳಿಗೆ ಗುಂಡೇಟು|

ಸಮಗ್ರ ನ್ಯೂಸ್: ಬೆಳ್ಳಂಬೆಳಗ್ಗೆ ನಗರದಲ್ಲಿ ಗುಂಡಿನ ಸದ್ದು ಕೇಳಿದೆ. ಕೊಲೆ ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಇಬ್ಬರು ಖದೀಮರ ಕಾಲಿಗೆ ಖಾಕಿ ಪಡೆ ಗುಂಡು ಹಾರಿಸಿ ಬಂಧಿಸಿದೆ. ಅರ್ಜುನ್ ಮೂಡುಶೆಡ್ಡೆ ಮತ್ತು ಮನೋಜ್ ಯಾನೆ ಬಿಂದಾಸ್ ಬಂಧಿತರು. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲು ಪೊಲೀಸರು ಮುಲ್ಕಿಯ ಗ್ಲೋಬಲ್ ಹೆರಿಟೇಜ್ ಲೇಔಟ್​ಗೆ ಹೋದಾಗ ಘಟನೆ ನಡೆದಿದೆ. ಆರೋಪಿಗಳನ್ನ ಬಂಧಿಸಲು ಮುಂದಾದ ಪೊಲೀಸರ

ಮಂಗಳೂರು: ಬೆಳ್ಳಂಬೆಳಗ್ಗೆ ಗುಂಡಿ ಸದ್ದು| ಪೊಲೀಸರ ಮೇಲೆ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ ಕೊಲೆ ಆರೋಪಿಗಳಿಗೆ ಗುಂಡೇಟು| Read More »

ನೆಲ್ಯಾಡಿ: ಕಂದಕಕ್ಕೆ ಉರುಳಿದ ಸಿಮೆಂಟ್ ತುಂಬಿದ ಲಾರಿ| ಚಾಲಕ ಜಖಂ

ಸಮಗ್ರ ನ್ಯೂಸ್: ಬಸ್ ಗಳ ಓವರ್ ಟೇಕ್ ನಿಂದಾಗಿ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಸಿಮೆಂಟ್ ಹೊತ್ತ ಲಾರಿಯೊಂದು ಕಂದಕಕ್ಕೆ ಉರುಳಿಬಿದ್ದ ಘಟನೆ ನೆಲ್ಯಾಡಿ ಸಮೀಪದ ಪೆರಿಯಶಾಂತಿಯಲ್ಲಿ ಇಂದು ಮುಂಜಾನೆ 4ರ ಸುಮಾರಿಗೆ ನಡೆದಿದೆ. ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದು ಗಾಯಗೊಂಡ ಚಾಲಕ ಸ್ಥಳೀಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನೆಲ್ಯಾಡಿ: ಕಂದಕಕ್ಕೆ ಉರುಳಿದ ಸಿಮೆಂಟ್ ತುಂಬಿದ ಲಾರಿ| ಚಾಲಕ ಜಖಂ Read More »

ಸುಳ್ಯ: ಕಾರುಗಳ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಕಾರುಗಳೆರಡು ಮುಖಾಮುಖಿ ಡಿಕ್ಕಿಯಾಗಿ ಜಖಂಗೊಂಡ ಘಟನೆ ‌ಮಾಣಿ- ಮೈಸೂರು ರಸ್ತೆಯ ಅರಂತೋಡು ಬಳಿ ನಡೆದಿದೆ. ಅರಂತೋಡು ಸುಳ್ಯ ದಿಂದ ಮಡಿಕೇರಿ ತೆರಳುತ್ತಿದ್ದ ಕಾರು ಮತ್ತು ಸಂಪಾಜೆಯಿಂದ ಸುಳ್ಯ ಕಡೆ ಬರುತ್ತಿದ್ದ ಕಾರುಗಳ ನಡುವೆ ಕೊಡಂಕೇರಿ ತಿರುವು ಬಳಿ ಈ ಅಪಘಾತ ಸಂಭವಿಸಿದ್ದು, ಎರಡು ಕಾರಿಗಳ ಮುಂಭಾಗ ಜಖಂ ಆಗಿವೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಸುಳ್ಯ: ಕಾರುಗಳ ಮುಖಾಮುಖಿ ಡಿಕ್ಕಿ Read More »