ಕ್ರೈಂ

ಹೆತ್ತ ಕಂದಮ್ಮನನ್ನೇ ಮಾರಾಟ ಮಾಡಲೆತ್ನಿಸಿದ ತಾಯಿ ಪೊಲೀಸ್ ಬಲೆಗೆ

ಸಮಗ್ರ ನ್ಯೂಸ್: ಐದು ದಿನದ ಹಸುಗೂಸನ್ನು ಮಾರಾಟ ಮಾಡಲು ತಾಯಿ ಹೊರಟ್ಟಿದ್ದು, ತಾಯಿ ಸೇರಿ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿರುವ ಘಟನೆ ಚೆನ್ನೈ ನಗರದ ಹೊರವಲಯದಲ್ಲಿರುವ ಸೆಲೈಯೂರ್ ನ ಮಪ್ಪೆಡು ಎಂಬಲ್ಲಿ ಈ ಘಟನೆ ನಡೆದಿದೆ. ಹೆತ್ತ ಗಂಡು ಮಗುವನ್ನು ತಾಯಿ ಐದು ಸಾವಿರ ರೂ.ಗೆ ಮಾರಾಟ ಮಾಡಲು ಹೊರಟಿದ್ದಾರೆ. ಈಕೆ ಸ್ಯಾನಿಟರಿ ವರ್ಕರ್ ಆಗಿ ಕೆಲಸವನ್ನು ನಿರ್ವಹಿಸುತ್ತಿದ್ದಳು.

ಹೆತ್ತ ಕಂದಮ್ಮನನ್ನೇ ಮಾರಾಟ ಮಾಡಲೆತ್ನಿಸಿದ ತಾಯಿ ಪೊಲೀಸ್ ಬಲೆಗೆ Read More »

ರಾಯಚೂರು: ಉಪನ್ಯಾಸಕನ ಬರ್ಬರ ಹತ್ಯೆ

ಸಮಗ್ರ‌ ನ್ಯೂಸ್: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಉಪನ್ಯಾಸಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ಸಮೀಪ ನಡೆದಿದೆ. ಇಲ್ಲಿನ ಪಿಯು ಕಾಲೇಜು ಉಪನ್ಯಾಸಕ ಮಾನಪ್ಪ ಗೋಪಾಳಾಪುರ(59) ನನ್ನು ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಉಪನ್ಯಾಸಕ ಮಾನಪ್ಪ ಎಂಬವರು ಪರೀಕ್ಷಾ ಕಾರ್ಯ ಮುಗಿಸಿಕೊಂಡು ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಐಯಾಳಕ್ಕೆ ತೆರಳುತ್ತಿದ್ದ ವೇಳೆಯಲ್ಲಿ ಅಡ್ಡಗಟ್ಟಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ರಾಯಚೂರು: ಉಪನ್ಯಾಸಕನ ಬರ್ಬರ ಹತ್ಯೆ Read More »

ಉಡುಪಿ : ವಿದ್ಯಾರ್ಹತೆಗೆ ಸೂಕ್ತ ಕೆಲಸ ಸಿಗದ ಹಿನ್ನಲೆ | ಆತ್ಮಹತ್ಯೆಗೆ ಶರಣಾದ ಯುವತಿ

ಸಮಗ್ರ ನ್ಯೂಸ್: 23 ವರ್ಷದ ಎಂಬಿಎ ಪದವೀಧರೆ, ಮಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಒಂದೂವರೆ ವರ್ಷದ ಹಿಂದೆಯೇ ಎಂಬಿಎ ಪದವಿ ಮುಗಿಸಿದ್ದಳು. ತನ್ನ ವಿದ್ಯಾರ್ಹತೆಗೆ ಸೂಕ್ತ ಕೆಲಸ ಸಿಗಲಿಲ್ಲವೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಶಿರ್ವ ಸಮೀಪದ ಕಟ್ಟಿಂಗೇರಿ ಗ್ರಾಮದಲ್ಲಿ ನಡೆದಿದೆ. ದ.ಕ ಜಿಲ್ಲೆ ಉಪ್ಪಿನಂಗಡಿ ಮೂಲದ ಸಹನಾ ಆತ್ಮಹತ್ಯೆ ಮಾಡಿಕೊಂಡ ಮೃತ ದುರ್ದೈವಿ. ಏಪ್ರಿಲ್ 30 ರಂದು ಸಹೋದರಿ ಸೌಮ್ಯ ಅವರ ಮನೆಗೆ ಬಂದಿದ್ದು ಅಲ್ಲೇ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ, ಆಕೆಯನ್ನು

ಉಡುಪಿ : ವಿದ್ಯಾರ್ಹತೆಗೆ ಸೂಕ್ತ ಕೆಲಸ ಸಿಗದ ಹಿನ್ನಲೆ | ಆತ್ಮಹತ್ಯೆಗೆ ಶರಣಾದ ಯುವತಿ Read More »

ಉಡುಪಿ: ಉದ್ಯಾವರ ಸಮೀಪ ಬಸ್ ಪಲ್ಟಿ, ಹಲವರು ಜಖಂ

ಸಮಗ್ರ ನ್ಯೂಸ್: ಮಂಗಳೂರಿನಿಂದ ಉಡುಪಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಉಡುಪಿ-ಉದ್ಯಾವರ ಜಂಕ್ಷನ್ ಬಳಿ ಪಲ್ಟಿಯಾಗಿ ಪ್ರಯಾಣಿಕರು ಜಖಂಗೊಂಡ ಘಟನೆ ಇಂದು (ಮೇ.೧೨) ಮಧ್ಯಾಹ್ನ ‌ನಡೆದಿದೆ. ಬಸ್ ಚಲಿಸುತ್ತಿದ್ದ ವೇಳೆ ಓವರ್ ಟೇಕ್‌ ಮಾಡುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಬಳಿಕ ಡಿವೈಡರ್ ಗೆ ಹಾರಿ ಪಲ್ಟಿಯಾಗಿರುವುದಾಗಿ ಹೇಳಲಾಗುತ್ತಿದೆ. ಬಸ್ ನಲ್ಲಿ ಪ್ರಯಾಣಿಕರಿದ್ದರೂ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಇಲ್ಲದೆ ಪಾರಾಗಿದ್ದಾರೆ. ಹೆಚ್ಚಿನ ‌ಮಾಹಿತಿ‌ ನಿರೀಕ್ಷಿಸಲಾಗುತ್ತಿದೆ.

ಉಡುಪಿ: ಉದ್ಯಾವರ ಸಮೀಪ ಬಸ್ ಪಲ್ಟಿ, ಹಲವರು ಜಖಂ Read More »

ಬೆಂಗಳೂರು: ಗಂಡನ ಕಿರುಕುಳಕ್ಕೆ ಬೇಸತ್ತ ಮಹಿಳೆ ಆತ್ಮಹತ್ಯೆ

ಸಮಗ್ರ ನ್ಯೂಸ್: ಗಂಡನ ಕಿರುಕುಳ ತಡೆಯಲಾದರೆ ಮೈಗೆ ಸಾನಿಟೈಸರ್ ಸುರಿದು ಬೆಂಕಿ ಹಚ್ಚಿಕೊಂಡು ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಆರ್.ಟಿ. ನಗರದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಶಾಜಿಯಾ ಭಾನು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಗಂಡ ಇಮ್ರಾನ್ ಖಾನ್ ವಿರುದ್ಧ ಶಾಜಿಯಾ ಪೋಷಕರು ಆರ್.ಟಿ.ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಗಂಡ ಬೇರೆ ಮಹಿಳೆ ಜತೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಈ ವಿಚಾರವಾಗಿ ಗಂಡ ಹೆಂಡತಿ ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು. ಈ ವಿಚಾರ

ಬೆಂಗಳೂರು: ಗಂಡನ ಕಿರುಕುಳಕ್ಕೆ ಬೇಸತ್ತ ಮಹಿಳೆ ಆತ್ಮಹತ್ಯೆ Read More »

ನೇಣಿಗೆ ಕೊರಳೊಡ್ಡಿದ ಶಿಕ್ಷಣ ಸಚಿವರ ಸೊಸೆ| ತವರು ಮನೆಯಿಂದ ಮರಳಿದವಳು ಆತ್ಮಹತ್ಯೆಗೆ ಶರಣು!

ಸಮಗ್ರ ನ್ಯೂಸ್: ತವರು ಮನೆಯಿಂದ ಗಂಡನ ಮನೆಗೆ ಮರಳಿದ ಮಧ್ಯಪ್ರದೇಶದ ಶಾಲಾ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ಅವರ ಸೊಸೆ ಸವಿತಾ ಪರ್ಮಾರ್ (22) ಮಂಗಳವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗ್ಗೆ ಕುಟುಂಬಸ್ಥರು ಕೊಠಡಿಗೆ ಹೋಗಿ ನೋಡಿದಾಗ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸವಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೈ ಪ್ರೊಫೈಲ್‌ ಪ್ರಕರಣವಾಗಿರುವುದರಿಂದ ಪೊಲೀಸರು ಈ ವಿಷಯದಲ್ಲಿ ಏನನ್ನೂ ಹೇಳಲು ನಿರಾಕರಿಸಿದ್ದಾರೆ. ಸಚಿವ ಪರ್ಮಾರ್

ನೇಣಿಗೆ ಕೊರಳೊಡ್ಡಿದ ಶಿಕ್ಷಣ ಸಚಿವರ ಸೊಸೆ| ತವರು ಮನೆಯಿಂದ ಮರಳಿದವಳು ಆತ್ಮಹತ್ಯೆಗೆ ಶರಣು! Read More »

ಮಂಗಳೂರು: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ಬುಧವಾರ ನಡೆದಿದೆ. ಕೇರಳದ ಕಣ್ಣೂರು ಜಿಲ್ಲೆಯ ನಿವಾಸಿ ಪದ್ಮನಾಭ ಎಂಬವರ ಪುತ್ರಿ ಸಾಂಧ್ರ ಪಿ.ಪಿ (21)ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ನಗರದ ಮೆಡಿಕಲ್ ಕಾಲೇಜಿನ ಬ್ಯಾಚುಲರ್ ಆಫ್ ಫಿಸಿಯೋಥೆರಪಿ (ಬಿಪಿಟಿ) ಮೂರನೇ ವರ್ಷದ ವಿದ್ಯಾರ್ಥಿನಿಯಾಗಿದ್ದ ಈಕೆ ಬುಧವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 12.15ರ ಮಧ್ಯೆ ಕಾಲೇಜಿಗೆ ಸೇರಿದ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಂಗಳೂರು: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು Read More »

ಕುಣಿಗಲ್ : ವಿದ್ಯುತ್ ಸ್ಪರ್ಶಿಸಿ ಜೂ. ರವಿಚಂದ್ರನ್ ಸಾವು

ಸಮಗ್ರ ನ್ಯೂಸ್: ಸಂಪ್‌ಗೆ ನೀರು ತುಂಬಿಸಲು ಮೋಟರ್ ಆನ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಸಂಗೀತ ಸಂಜೆ ಕಾರ್ಯಕ್ರಮದ ಕಲಾವಿದನೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಕುಣಿಗಲ್ ಕಸಬಾ ಹೋಬಳಿ ಹೇರೂರು ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಹೇರೂರು ಗ್ರಾಮದ ಲಕ್ಷ್ಮಿ ನಾರಾಯಣ (35) (ಜೂನಿಯರ್ ರವಿಚಂದ್ರನ್) ಮೃತ ದುರ್ದೈವಿ. ಜೂನಿಯರ್ ರವಿಚಂದ್ರನ್ ಎಂದೇ ಪ್ರಖ್ಯಾತಗೊಂಡಿದ್ದ ಸಂಗೀತ ಸಂಜೆ ಕಾರ್ಯಕ್ರಮದ ಕಲಾವಿಧ ಲಕ್ಷ್ಮಿ ನಾರಾಯಣ ಮಂಗಳವಾರ ತಮ್ಮ ಮನೆಯ ಸಂಪ್‌ಗೆ ನೀರು ತುಂಬಿಸಲೆಂದು ಮೋಟರ್ ಸ್ವಿಚ್ ಹಾಕಲು ಯತ್ನಿಸಿದ್ದಾರೆ ಎನ್ನಲಾಗಿದ್ದು,

ಕುಣಿಗಲ್ : ವಿದ್ಯುತ್ ಸ್ಪರ್ಶಿಸಿ ಜೂ. ರವಿಚಂದ್ರನ್ ಸಾವು Read More »

ಬಸ್ ಗೆ ಕಾಯುತ್ತಿದ್ದ ಯುವಕನ ಕೈಗೆ 9 ತಿಂಗಳ ಹಸುಳೆಯನ್ನು ನೀಡಿ ಪರಾರಿಯಾದ ತಾಯಿ|

ಸಮಗ್ರ ನ್ಯೂಸ್: ಬಸ್ ನಿಲ್ದಾಣದಲ್ಲಿ 9 ತಿಂಗಳ ಹಸುಗೂಸನ್ನು ಬಸ್ ಗೆ ಕಾಯುತ್ತಿದ್ದ ಯುವಕನ ಕೈಗೆ ಕೊಟ್ಟು ಅಪರಿಚಿತ ಮಹಿಳೆ ನಾಪತ್ತೆಯಾದ ಘಟನೆ ರಾಯಚೂರಿನಲ್ಲಿ ನಡೆದಿದೆ. ಮೈಸೂರಿನ ಹೆಚ್.ಡಿ.ಕೋಟೆಯ ನಿವಾಸಿ ರಘು ಕೈಗೆ ಮಗು ಕೊಟ್ಟು ಮಹಿಳೆ ನಾಪತ್ತೆಯಾಗಿದ್ದಾರೆ. ಸದ್ಯ 9 ತಿಂಗಳ ಹಸುಗೂಸನ್ನು ರಘು ಬಾಲಮಂದಿರದ ವಶಕ್ಕೆ ನೀಡಿದ್ದಾರೆ. ವೈಯಕ್ತಿಕ ಕೆಲಸಕ್ಕಾಗಿ ಹೆಚ್.ಡಿ.ಕೋಟೆಯ ನಿವಾಸಿ ರಘು ರಾಯಚೂರಿಗೆ ತೆರಳಿದ್ದರು. ಮೈಸೂರಿಗೆ ಹಿಂತಿರುಗಲು ರಾಯಚೂರು ಬಸ್ ಸ್ಟ್ಯಾಂಡ್ನಲ್ಲಿ ಮೈಸೂರು ಬಸ್ಗಾಗಿ ಕಾದು ಕುಳಿತಿದ್ದ ವೇಳೆ ಅಪರಿಚಿತ ಮಹಿಳೆ

ಬಸ್ ಗೆ ಕಾಯುತ್ತಿದ್ದ ಯುವಕನ ಕೈಗೆ 9 ತಿಂಗಳ ಹಸುಳೆಯನ್ನು ನೀಡಿ ಪರಾರಿಯಾದ ತಾಯಿ| Read More »

ಕಾರ್ಕಳ: ಶಾಲಾ‌ ಮಕ್ಕಳಿದ್ದ ಟೆಂಪೋ ಟ್ರಾವೆಲರ್ ಪಲ್ಟಿ – ಓರ್ವ ವಿದ್ಯಾರ್ಥಿ ಸಾವು

ಸಮಗ್ರ ನ್ಯೂಸ್: ನಿಯಂತ್ರಣ ತಪ್ಪಿದ ಟೆಂಪೋ ಟ್ರಾವೆಲರ್ ಉರುಳಿ ಬಿದ್ದು,‌ ವಿದ್ಯಾರ್ಥಿಯೋರ್ವ ಮೃತ ಪಟ್ಟ ಘಟನೆ ಕುದುರೆಮುಖ-ಮಾಳ ಹೆದ್ದಾರಿ ನಡುವೆ ಘಾಟಿ ರಸ್ತೆಯ ಎಸ್ ಕೆ ಬಾರ್ಡರ್ ಹಾಗೂ ಚೆಕ್ ಪೋಸ್ಟ್ ಬಳಿ ಮೇ.8 ಸಂಜೆ ನಡೆದಿದೆ. ಮೃತರನ್ನು ಹೇಮಂತ್ (23) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಪಲ್ಲವಿ ಹುಣಸಿಕಟ್ಟೆ, ಅಖಿಲಾಶ್ರೀ ಲೋಳೇಕರ, ಶ್ರೇಯಾ, ಬಿಂದು ಎಂದು ಗುರುತಿಸಲಾಗಿದೆ. ಪ್ರವಾಸ ನಿಮಿತ್ತ ಹೊರನಾಡು ಕಡೆಯಿಂದ ಕಾರ್ಕಳ ಕಡೆಗೆ ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದ ಕಾರಣ ದುರ್ಘಟನೆ ಸಂಭವಿಸಿದೆ‌.

ಕಾರ್ಕಳ: ಶಾಲಾ‌ ಮಕ್ಕಳಿದ್ದ ಟೆಂಪೋ ಟ್ರಾವೆಲರ್ ಪಲ್ಟಿ – ಓರ್ವ ವಿದ್ಯಾರ್ಥಿ ಸಾವು Read More »