ಕ್ರೈಂ

ಪುತ್ತೂರು:‌ ಬಾಲಕಿಯನ್ನು ಶೌಚಾಲಯಕ್ಕೆ ಕರೆದೊಯ್ದು ಅನ್ಯಕೋಮಿನ ಯುವಕನಿಂದ ಅಸಭ್ಯ ವರ್ತನೆ

ಸಮಗ್ರ ನ್ಯೂಸ್: ಗದಗ ಮೂಲದ ಬಾಲಕಿಯನ್ನು ಬಾಲಕಿಯನ್ನು ಶೌಚಾಲಯ ಕ್ಕೆ ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರುಗಡೆ ಟವರ್ ಬಿಲ್ಡಿಂಗ್ ನ ಸ್ವಚ್ಛತೆ ಕೆಲಸ ಮಾಡುತ್ತಿದ್ದ ಗದಗ ಮೂಲದ ಮಹಿಳೆಯೊಬ್ಬರ 10 ವರ್ಷದ ಮಗಳನ್ನು ನೌಫಲ್ ಸರಲಿಕಟ್ಟೆ ಎಂಬ ಮುಸ್ಲಿಂ ಕಾಮುಕ ಶೌಚಾಲಯಕ್ಕೆ ಬಾಲಕಿಯನ್ನು ಕರೆದುಕೊಂಡು ಹೋಗಿ, ಹಣ ಕೊಡುವುದಾಗಿ ನಂಬಿಸಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಬಗ್ಗೆ ತಾಯಿ ಆ ಯುವಕನನ್ನು ವಿಚಾರಿಸಿದಾಗ ಅಸಭ್ಯವಾಗಿ ಬೈದು ಕಳುಹಿಸಿದ್ದಾನೆ […]

ಪುತ್ತೂರು:‌ ಬಾಲಕಿಯನ್ನು ಶೌಚಾಲಯಕ್ಕೆ ಕರೆದೊಯ್ದು ಅನ್ಯಕೋಮಿನ ಯುವಕನಿಂದ ಅಸಭ್ಯ ವರ್ತನೆ Read More »

ಉಡುಪಿ: ಮನೆಯೊಳಗೆ ಕೊಲೆಯಾದ ಸ್ಥಿತಿಯಲ್ಲಿ ತಾಯಿ‌,‌ಮಗು ಪತ್ತೆ; ಗಂಡ ಪರಾರಿ

ಸಮಗ್ರ ನ್ಯೂಸ್: ತಾಯಿ ಮತ್ತು 10 ವರ್ಷ ಮಗುವಿನ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉಡುಪಿ ಜಿಲ್ಲೆಯ ಆತ್ರಾಡಿ ಗ್ರಾ.ಪಂ ವ್ಯಾಪ್ತಿಯ ಮದಗದಲ್ಲಿ ನಡೆದಿದೆ. ಚೆಲುವಿ (28) ಹಾಗು ಪ್ರಿಯಾ (10) ಇವರ ಮೃತದೇಹವು ಮನೆಯ ಕೋಣೆಯಲ್ಲಿ ಪತ್ತೆಯಾಗಿದ್ದು, ಬಾಯಿಯಲ್ಲಿ ರಕ್ತದ ಕಲೆಗಳು ಕಂಡು ಬಂದಿದೆ ಎನ್ನಲಾಗಿದೆ. ಮಣಿಪಾಲದ ಖಾಸಗಿ ಸಂಸ್ಥೆಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡಿದ್ದ ಚೆಲುವಿ, ಅವರ ಇಬ್ಬರ ಮಕ್ಕಳು ಮತ್ತು ತಾಯಿ ಮನೆಯಲ್ಲಿ ವಾಸವಿದ್ದರು. ಆದರೆ ಭಾನುವಾರ ಚೆಲುವಿ ಅವರ ತಾಯಿ

ಉಡುಪಿ: ಮನೆಯೊಳಗೆ ಕೊಲೆಯಾದ ಸ್ಥಿತಿಯಲ್ಲಿ ತಾಯಿ‌,‌ಮಗು ಪತ್ತೆ; ಗಂಡ ಪರಾರಿ Read More »

ಉಡುಪಿ: ದೇವರ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತ ಮೃತ್ಯು

ಸಮಗ್ರ ನ್ಯೂಸ್: ಉಡುಪಿಯ ಶ್ರೀ ಕ್ಷೇತ್ರ ಶ್ರೀಕೃಷ್ಣ ಮಠಕ್ಕೆ ದೇವರ ದರ್ಶನ ಪಡೆಯಲು ಸರದಿ ಸಾಲಿನಲ್ಲಿ ಸಾಗುತ್ತಿದ್ದ ಭಕ್ತರೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಬೆಂಗಳೂರಿನ ಮೋಹನ್‌ (70) ಮೃತ ಯಾತ್ರಾರ್ಥಿ. ಇವರು ಸರದಿ ಸಾಲಿನಲ್ಲಿ ನಿಂತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದಿದ್ದರು. ಈ ವೇಳೆ ಅವರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಒಳಕಾಡು ಅವರು ಶ್ರೀಕೃಷ್ಣ ಮಠದ ರಕ್ಷಣ ಸಿಬ್ಬಂದಿ ಸಹಕಾರದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.

ಉಡುಪಿ: ದೇವರ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತ ಮೃತ್ಯು Read More »

ಬೆಳ್ತಂಗಡಿ : ಬೈಕ್ ಸ್ಕಿಡ್ ಆಗಿ ಸವಾರ ಸಾವು; ಮತ್ತೊಬ್ಬ ಗಂಭೀರ

ಸಮಗ್ರ ನ್ಯೂಸ್: ಬೈಕ್ ಸ್ಕಿಡ್ ಆಗಿ ಫೋನ್ ಕಂಬಕ್ಕೆ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿದ್ದು,ಸಹಸವಾರ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಮುಂಡಾಜೆಯ ಶಾರದಾನಗರದಲ್ಲಿ ನಡೆದಿದೆ. ಸೋಮಂತಡ್ಕದಿಂದ ನಿನ್ನೆ ರಾತ್ರಿ ಹನ್ನೊಂದು ಗಂಟೆಗೆ ಗಾರೆ ಕೆಲಸ ಮುಗಿಸಿ ಕಡಿರುದ್ಯಾವರದ ಮನೆಗೆ ವಾಪಸ್ ಬೈಕ್ ಲ್ಲಿ ಬರುತ್ತಿದ್ದಾಗ ಮುಂಡಾಜೆ ಗ್ರಾಮದ ಶಾರದಾ ನಗರದ ಬಳಿ ಬೈಕ್ ಸ್ಕಿಡ್ ಆಗಿ ಫೋನ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ,

ಬೆಳ್ತಂಗಡಿ : ಬೈಕ್ ಸ್ಕಿಡ್ ಆಗಿ ಸವಾರ ಸಾವು; ಮತ್ತೊಬ್ಬ ಗಂಭೀರ Read More »

ಕರ್ನಾಟಕದ ಕರಾವಳಿಯಲ್ಲಿ ಪ್ರಿಂಟ್ ಆಗ್ತಿದೆಯಾ ಖೋಟಾನೋಟು| ಕಾರಾವಾರದಲ್ಲಿ ಬಂಧಿಯಾದ ಕಿಂಗ್ ಫಿನ್ಸ್

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯಲ್ಲಿ ಖೋಟಾ ನೋಟಿಗೆ ಸಂಬಂಧಿಸಿದಂತೆ ಈವರೆಗೆ ದಾಖಲಾದ ಎಲ್ಲಾ ಪ್ರಕರಣಗಳಲ್ಲಿ ಹೊರ ಜಿಲ್ಲೆ ಹಾಗೂ ಹೊರ ರಾಜ್ಯದಿಂದ ಖೋಟಾ ನೋಟುಗಳನ್ನು ತಂದು ಚಲಾವಣೆ ಮಾಡಿದ ಪ್ರಕರಣಗಳೇ ಬೆಳಕಿಗೆ ಬಂದಿದ್ದವು. ಆದರೆ ಇದೀಗ ಜಿಲ್ಲಾ ಕೇಂದ್ರ ಕಾರವಾರದಿಂದಲೇ ಬೇರೆಡೆಗೆ ಖೋಟಾ ನೋಟು ಮುದ್ರಿಸಿ ಸಾಗಿಸಲಾಗುತ್ತಿತ್ತು ಎನ್ನುವ ಸಂಗತಿ ಕರಾವಳಿಗರನ್ನು ಬೆಚ್ಚಿ ಬೀಳಿಸಿದೆ. ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಕಾರವಾರ ಮತ್ತು ಗೋವಾ ಮೂಲದ ಅವರನ್ನು ಪೊಲೀಸರು ಬಂಧಿಸಿದ್ದು ಕಾರವಾರದವರೇ ಕಿಂಗ್ ಪಿನ್ ಎಂಬ

ಕರ್ನಾಟಕದ ಕರಾವಳಿಯಲ್ಲಿ ಪ್ರಿಂಟ್ ಆಗ್ತಿದೆಯಾ ಖೋಟಾನೋಟು| ಕಾರಾವಾರದಲ್ಲಿ ಬಂಧಿಯಾದ ಕಿಂಗ್ ಫಿನ್ಸ್ Read More »

ಅಪಘಾತ; ನಟಿ ಸುನೇತ್ರಾ ಜಖಂ| ಹೆಲ್ಮೆಟ್ ನಿಂದ ಬಚಾವಾದ ಸ್ಯಾಂಡಲ್ ವುಡ್ ಅಭಿನೇತ್ರಿ

ಸಮಗ್ರ ನ್ಯೂಸ್: ಶೂಟಿಂಗ್ ಮುಗಿಸಿ ಮನೆಗೆ ತೆರಳುತ್ತಿದ್ದ ನಟಿ ಹಾಗೂ ಡಬ್ಬಿಂಗ್ ಕಲಾವಿದೆ ಸುನೇತ್ರಾ ಬೈಕ್‌ಗೆ ಅಪಘಾತವಾಗಿದ್ದು, ತಲೆಗೆ ಪೆಟ್ಟು ಬಿದ್ದಿದೆ. ಆದರೆ, ತಲೆಗೆ ಹೆಲ್ಮೆಟ್ ಹಾಕಿದ್ದರಿಂದ ಆಪಾಯದಿಂದ ಪಾರಾಗಿದ್ದಾರೆ. ಬಸವನಗುಡಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ 12: 30ರ ಸುಮಾರಿಗೆ ಈ ಘಟನೆ ನಡೆದಿದ್ದು, ರಸ್ತೆ ಹಂಪ್ ದಾಟುವಾಗ ಬೈಕ್‌ನಿಂದ ಆಯತಪ್ಪಿ ಬಿದ್ದು ಸುನೇತ್ರಾ ಗಾಯಗೊಂಡಿದ್ದಾರೆ. ಎನ್ ಆರ್ ಕಾಲೋನಿಯ 9ನೇ ಮುಖ್ಯ ರಸ್ತೆಯಲ್ಲಿ ಹಾಸ್ಯ ನಟಿ ಸುನೇತ್ರಾ, ತಮ್ಮ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದಾಗ

ಅಪಘಾತ; ನಟಿ ಸುನೇತ್ರಾ ಜಖಂ| ಹೆಲ್ಮೆಟ್ ನಿಂದ ಬಚಾವಾದ ಸ್ಯಾಂಡಲ್ ವುಡ್ ಅಭಿನೇತ್ರಿ Read More »

ಮದುವೆಯಾದ ವರ್ಷದೊಳಗೇ ಆತ್ಮಹತ್ಯೆಗೆ ಶರಣಾದ ವಿವಾಹಿತೆ| 20ರ ವಯಸ್ಸಿಗೆ ಜೀವನವೇ ಹತಾಷೆಯಾಯಿತೇ?

ಸಮಗ್ರ ನ್ಯೂಸ್: ವಿವಾಹಿತ ಮಹಿಳೆಯೋರ್ವರು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಗಾಂಧಿನಗರದ ಬಾಡಿಗೆ ಮನೆಯಲ್ಲಿ ಮೇ 6ರ ಸಂಜೆ ಬೆಳಕಿಗೆ ಬಂದಿದೆ. ಸುಳ್ಯ ಗಾಂಧಿನಗರ ಕೆರೆಮೂಲೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಮೀನ ಅವರ ಪುತ್ರಿ ಆಯೀಶಾ (20) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಳೆದ ವರ್ಷ ಕಾಸರಗೋಡಿನ ಯುವಕನೊಂದಿಗೆ ಈಕೆಯ ವಿವಾಹವಾಗಿದ್ದು, ಪತಿ ವಿದೇಶದಲ್ಲಿದ್ದಾರೆ ಎಂದು ತಿಳಿದುಬಂದಿದೆ. ವಿವಿಧ ಕಡೆಗಳಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಇವರು ಇತ್ತೀಚೆಗೆ ಗಾಂಧೀನಗರಕ್ಕೆ ಬಾಡಿಗೆ ಮನೆಗೆ ಬಂದಿದ್ದರು ಎನ್ನಲಾಗಿದೆ.

ಮದುವೆಯಾದ ವರ್ಷದೊಳಗೇ ಆತ್ಮಹತ್ಯೆಗೆ ಶರಣಾದ ವಿವಾಹಿತೆ| 20ರ ವಯಸ್ಸಿಗೆ ಜೀವನವೇ ಹತಾಷೆಯಾಯಿತೇ? Read More »

ಉಡುಪಿ: ಕಳಪೆ ರಸ್ತೆ ಕಾಮಗಾರಿ; ಹೊಳೆಗೆ ಮಗುಚಿದ ಲಾರಿ

ಸಮಗ್ರ ನ್ಯೂಸ್: ರಸ್ತೆ ಕಳಪೆ ಕಾಮಗಾರಿಯಿಂದಾಗಿ ಕಾಂಕ್ರಿಟ್ ಕುಸಿದ ಪರಿಣಾಮ ಟಿಪ್ಪರ್ ಲಾರಿಯೊಂದು ಪಕ್ಕದ ಹೊಳೆಗೆ ಮಗುಚಿ ಬಿದ್ದ ಘಟನೆ ಉಡುಪಿಯ ಕಿದಿಯೂರು ಸಂಕೇಶದಲ್ಲಿ ನಡೆದಿದೆ. ಮಣ್ಣು ತುಂಬಿಕೊಂಡು ಬರುತ್ತಿದ್ದ ಲಾರಿಯ ಭಾರಕ್ಕೆ ಕಾಂಕ್ರಿಟ್ ರಸ್ತೆ ಕುಸಿದಿದೆ. ಪರಿಣಾಮ ಲಾರಿ ಪಕ್ಕದ ಹೊಳೆಗೆ ಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಕಾಂಕ್ರೀಟ್ ಅಡಿಭಾಗದಲ್ಲಿ ಸರಿಯಾಗಿ ಮಣ್ಣು ತುಂಬದ ಪರಿಣಾಮ ರಸ್ತೆ ಕುಸಿದು ಹೋಗಿದೆ. ರಸ್ತೆ ಕಳಪೆ ಕಾಮಗಾರಿಯ ಬಗ್ಗೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ: ಕಳಪೆ ರಸ್ತೆ ಕಾಮಗಾರಿ; ಹೊಳೆಗೆ ಮಗುಚಿದ ಲಾರಿ Read More »

ಮತ್ತೆ ಉದ್ವಿಗ್ನಗೊಂಡ ಶಿವಮೊಗ್ಗ| ಅನ್ಯಕೋಮಿನ ಯುವಕರಿಂದ ಪುಂಡಾಟ

ಸಮಗ್ರ ನ್ಯೂಸ್: ಶಿವಮೊಗ್ಗ ನಗರದ ಹೊರವಲಯದ ಮತ್ತೂರು ರಸ್ತೆಯ ಇಂದಿರಾನಗರ ಸೂಳೆಬೈಲು ಬಡಾವಣೆಯಲ್ಲಿ ಅನ್ಯಕೋಮಿನ ಯುವಕರ ಗುಂಪು ಕಾರೊಂದರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಕೆಲಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಮತ್ತೂರಿನ ಬಿಜೆಪಿ ಮುಖಂಡರೊಬ್ಬರ ಪುತ್ರ ಕಾರ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಇಂದಿರಾನಗರದ ಅನ್ಯಕೋಮಿನ ಯುವಕರ ಗುಂಪು ಏಕಾಏಕಿ ದಾಳಿ ನಡೆಸಿದೆ. ರಸ್ತೆಯ ಹಂಪ್ ಬಳಿ ಕಾರ್ ನಿಧಾನವಾಗುತ್ತಿದ್ದಂತೆ ಕಲ್ಲುತೂರಾಟ ನಡೆಸಲಾಗಿದ್ದು, ನೂರಾರು ಜನರು ಸೇರಿಕೊಂಡು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಕೂಡಲೇ ಸ್ಥಳಕ್ಕೆ

ಮತ್ತೆ ಉದ್ವಿಗ್ನಗೊಂಡ ಶಿವಮೊಗ್ಗ| ಅನ್ಯಕೋಮಿನ ಯುವಕರಿಂದ ಪುಂಡಾಟ Read More »

“ಎಲ್ಲರನ್ನೂ ಬಿಟ್ಟು ಬಾ; ಇಲ್ಲದಿದ್ದರೆ ಸಾಯಿ” | ಪ್ರೀತಿಯಿಂದಲೇ ಆತ್ಮಹತ್ಯೆಗೆ ಪ್ರೇರೇಪಿಸಿದನಾ ಆ ಮುಸ್ಲಿಂ ಯುವಕ?

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ಕನ್ಯಾನ ಎಂಬಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ತಂದೆ ಯುವಕನೊಬ್ಬನ ವಿರುದ್ಧ ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ‘ತಂದೆ, ತಾಯಿಯನ್ನು ಬಿಟ್ಟು ನನ್ನೊಂದಿಗೆ ಬಾ, ಇಲ್ಲವಾದರೆ ಸಾಯಿ..’ ಎಂದು ಪ್ರೀತಿಸಲು ಒತ್ತಾಯಿಸುತ್ತಿದ್ದ ಅನ್ಯ ಕೋಮಿನ ಯುವಕನ ಪ್ರಚೋದನೆಯೇ ಆತ್ಮಹತ್ಯೆಗೆ ಕಾರಣ ಎಂದು ತಂದೆ ವಿಟ್ಲ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಸ್ಥಳೀಯ ಭಜರಂಗದಳ ಘಟಕವೂ ಪ್ರಕರಣದ ತನಿಖೆಗೆ ಒತ್ತಾಯಿಸಿದ್ದು, ವಿಟ್ಲ

“ಎಲ್ಲರನ್ನೂ ಬಿಟ್ಟು ಬಾ; ಇಲ್ಲದಿದ್ದರೆ ಸಾಯಿ” | ಪ್ರೀತಿಯಿಂದಲೇ ಆತ್ಮಹತ್ಯೆಗೆ ಪ್ರೇರೇಪಿಸಿದನಾ ಆ ಮುಸ್ಲಿಂ ಯುವಕ? Read More »