ಕ್ರೈಂ

ಬಂಟ್ವಾಳ: ಯುವಕರ ಮೇಲೆ ತಲ್ವಾರ್ ದಾಳಿ ಪ್ರಕರಣ| ಓರ್ವ ಸಾವು, ಮತ್ತೋರ್ವ ಗಂಭೀರ

ಸಮಗ್ರ ನ್ಯೂಸ್: ದುಷ್ಕರ್ಮಿಗಳ ತಂಡವೊಂದು ಇಬ್ಬರ‌ ಮೇಲೆ ತಲವಾರು ಮಾಡಿದ ಪರಿಣಾಮ ಓರ್ವ ಮೃತಪಟ್ಟು ಇನ್ನೋರ್ವ ಗಾಯಗೊಂಡಿರುವ ಘಟನೆ ಅಡ್ಡೂರು ಕೊಲ್ತಮಜಲು ಎಂಬಲ್ಲಿ ಮಂಗಳವಾರ ವರದಿಯಾಗಿದೆ. ಘಟನೆಯಲ್ಲಿ ಮೃತಪಟ್ಟವರನ್ನು‌ ಇಮ್ತಿಯಾಝ್ ಎಂದು ಗುರುತಿಸಲಾಗಿದೆ. ಕೊಲ್ತಮಜಲು ಬೆಲ್ಲೂರು ನಿವಾಸಿ ಅಬ್ದುಲ್ ಖಾದರ್ ಎಂಬವರ ಮಗ ಅಬ್ದುಲ್ ರಹಿಮಾನ್ ಗಾಯಗೊಂಡ ಯುವಕ ಎಂದು ತಿಳಿದು ಬಂದಿದೆ. ಇಬ್ಬರೂ ಕೊಲ್ತಮಜಲು ಎಂಬಲ್ಲಿ ಪಿಕ್ ಅಪ್ ವಾಹನದಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ದುಷ್ಕರ್ಮಿಗಳು ತಲವಾರು ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಹೆಚ್ಚಿನ […]

ಬಂಟ್ವಾಳ: ಯುವಕರ ಮೇಲೆ ತಲ್ವಾರ್ ದಾಳಿ ಪ್ರಕರಣ| ಓರ್ವ ಸಾವು, ಮತ್ತೋರ್ವ ಗಂಭೀರ Read More »

ಬಂಟ್ವಾಳ: ಮುಸ್ಲಿಂ ಯುವಕರ ಮೇಲೆ ದುಷ್ಕರ್ಮಿಗಳಿಂದ ತಲ್ವಾರ್ ದಾಳಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮುಂದುವರಿದಿದ್ದು ಬಂಟ್ವಾಳ ತಾಲೂಕಿನ ಕಾಂಬೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಕೊಳತ್ತಮಜಲು ನಿವಾಸಿ ಪಿಕಪ್ ಮಾಲೀಕ ರಹೀಂ ಮತ್ತು ಸಹಾಯಕ ಶಾಫಿ ಎಂಬವರ ಮೇಲೆ ಅಪರಿಚಿತ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದೆ ಎಂದು ತಿಳಿದುಬಂದಿದೆ. ಹಲ್ಲೆಗೀಡಾದ ರಹೀಂ ಗಂಭೀರವಾಗಿ ಗಾಯಗೊಂಡಿದ್ದು ಅವರ ಸ್ಥಿತಿ ಚಿಂತಾಜನಕವಾಗಿದ್ದು, ಶಾಫಿ ಅವರ ಸ್ಥಿತಿ ಕೂಡ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಬಂಟ್ವಾಳ: ಮುಸ್ಲಿಂ ಯುವಕರ ಮೇಲೆ ದುಷ್ಕರ್ಮಿಗಳಿಂದ ತಲ್ವಾರ್ ದಾಳಿ Read More »

ಹುಲಿ ದಾಳಿಗೆ ನವವಿವಾಹಿತ ಬಲಿ

ಸಮಗ್ರ ನ್ಯೂಸ್: 3 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಆದಿವಾಸಿ ಯುವಕನ ಮೇಲೆ ದಾಳಿ ನಡೆಸಿದ ಹುಲಿಯು ಆತನನ್ನು ಕೊಂದು ಹಾಕಿದ ಘಟನೆ ನಾಗರಹೊಳೆ ಉದ್ಯಾನದಂಚಿನ ಗುರುಪುರ ಗ್ರಾ.ಪಂ. ವ್ಯಾಪ್ತಿಯ ಸೊಳ್ಳೆಪುರದಲ್ಲಿ ಸಂಭವಿಸಿದೆ. ಹುಣಸೂರು ತಾಲೂಕಿನ ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ 5ನೇ ಬ್ಲಾಕ್‌ನ ಕೃಷ್ಣ-ನಾಗವೇಣಿ ದಂಪತಿಯ ಪುತ್ರ ಹರೀಶ್‌ (29) ಮೃತಪಟ್ಟವರು. ಹರೀಶ್‌ ತಂದೆಯೊಂದಿಗೆ ಬೆಳಗ್ಗೆ ಜಮೀನು ಬಳಿಯ ಅರಣ್ಯ ಪ್ರದೇಶದಲ್ಲಿ ಮೇಕೆ ಮೇಯಿಸಲು ತೆರಳಿದ್ದಾನೆ. ತಂದೆ ಕೃಷ್ಣ ಅರಣ್ಯದ ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಮೇಕೆ

ಹುಲಿ ದಾಳಿಗೆ ನವವಿವಾಹಿತ ಬಲಿ Read More »

ಸಂಚಾರ ಪೊಲೀಸರಿಂದ ತಪಾಸಣೆ ವೇಳೆ ಬೈಕ್ ನಿಂದ ಮಗು ಬಿದ್ದು ಸಾವನ್ನಪ್ಪಿದ ಪ್ರಕರಣ| ಮೂವರು ಎಎಸ್ಐ ಗಳ ಅಮಾನತುಗೊಳಿಸಿ ಆದೇಶ

ಸಮಗ್ರ ನ್ಯೂಸ್: ಮಂಡ್ಯದಲ್ಲಿ ಸಂಚಾರ ಪೊಲೀಸರು ಬೈಕ್‌ ಅಡ್ಡಗಟ್ಟಿದ ಪರಿಣಾಮ ಅಪಘಾತ ಸಂಭವಿಸಿ, ಮೂರು ವರ್ಷದ ಮಗು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಎಎಸ್‌ಐಗಳಾದ ನಾಗರಾಜು, ಜಯರಾಮು ಮತ್ತು ಗುರುದೇವ್ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ. ಮಂಡ್ಯ ನಗರದ ಸ್ವರ್ಣಸಂದ್ರದ ಸಮೀಪ ಹೆದ್ದಾರಿಯಲ್ಲಿ ಸೋಮವಾರ ನಡೆದ ಅಪಘಾತದಲ್ಲಿ ಮಗು ಸಾವಿಗೀಡಾಗಿದೆ. ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಸಂಚಾರ ಪೊಲೀಸರು ಬೈಕ್ ಅಡ್ಡಗಟ್ಟಿದ್ದಾರೆ. ಈ ವೇಳೆ ಹಿಂಬದಿಯಿಂದ

ಸಂಚಾರ ಪೊಲೀಸರಿಂದ ತಪಾಸಣೆ ವೇಳೆ ಬೈಕ್ ನಿಂದ ಮಗು ಬಿದ್ದು ಸಾವನ್ನಪ್ಪಿದ ಪ್ರಕರಣ| ಮೂವರು ಎಎಸ್ಐ ಗಳ ಅಮಾನತುಗೊಳಿಸಿ ಆದೇಶ Read More »

ಕಡಬ: ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಸವಾರ ದುರ್ಮರಣ

ಸಮಗ್ರ ನ್ಯೂಸ್: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೆಸ್ಟೇಷನ್ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ಸು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಉದೇರಿ ನಿವಾಸಿ ದಿ. ಶ್ರೀಧರ ಗೌಡ ಎಂಬವರ ಪುತ್ರ ಬಿಶ್ವಜಿತ್(23) ಎಂದು ಗುರುತಿಸಲಾಗಿದೆ. ಯುವಕ ಮರ್ಧಾಳದ ಪಾಲತ್ತಡ್ಕದಲ್ಲಿ ಫ್ಯಾಬ್ರಿಕೇಷನ್ ವೃತ್ತಿ ಮಾಡುತ್ತಿದ್ದು.ಎಂದಿನಂತೆ ಕೆಲಸ ಮುಗಿಸಿ ಮನೆಗೆ ಹೊರಟು ಕಡಬ ಕಡೆ ಬೈಕಿನಲ್ಲಿ ಬರುತ್ತಿದ್ದಾಗ ಹಳೆಸ್ಟೇಷನ್ ಬಳಿ ಸುಬ್ರಹ್ಮಣ್ಯ

ಕಡಬ: ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಸವಾರ ದುರ್ಮರಣ Read More »

ಮಂಡ್ಯ: ಟ್ರಾಫಿಕ್ ಪೊಲೀಸರ ವಸೂಲಿಗಾಗಿ 3 ವರ್ಷದ ಕಂದಮ್ಮ ಬಲಿ

ಸಮಗ್ರ ನ್ಯೂಸ್: ಸಕ್ಕರೆ ನಾಡು ಮಂಡ್ಯ ನಗರದ ನಂದ ಸರ್ಕಲ್ ಬಳಿ ಭಾನುವಾರ ಭಾರೀ ದುರ್ಘಟನೆ ಸಂಭವಿಸಿದ್ದು, ಟ್ರಾಫಿಕ್ ಪೊಲೀಸರ ನಿರ್ಲಕ್ಷ್ಯದಿಂದ 3 ವರ್ಷದ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ ದುರಂತ ನಡೆದಿದೆ. ಈ ಘಟನೆ ಜಿಲ್ಲೆಯಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಸಾರ್ವಜನಿಕರು ಪೊಲೀಸರ ವಿರುದ್ಧ ಕಿಡಿಕಾರುತ್ತಿದ್ದಾರೆ. ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೊರವನಹಳ್ಳಿಗೆ ಸೇರಿದ ಅಶೋಕ್ ಮತ್ತು ವಾಣಿ ದಂಪತಿ, ತಮ್ಮ ಮಗಳು ಹೃತೀಕ್ಷಗೆ (3 ವರ್ಷ) ನಾಯಿ ಕಚ್ಚಿದ್ದ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ

ಮಂಡ್ಯ: ಟ್ರಾಫಿಕ್ ಪೊಲೀಸರ ವಸೂಲಿಗಾಗಿ 3 ವರ್ಷದ ಕಂದಮ್ಮ ಬಲಿ Read More »

ಕಡಬ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ| ಮಗು ಸಹಿತ ಪ್ರಯಾಣಿಕರು ಸಾವಿನ ದವಡೆಯಿಂದ‌ ಬಚಾವ್

ಸಮಗ್ರ ನ್ಯೂಸ್: ಪೆರಿಯಶಾಂತಿಯನ್ನು ಸಂಪರ್ಕಿಸುವ ಹೆದ್ದಾರಿಯ ನೂಜಿಬಾಳ್ತಿಲ ಸಮೀಪದ ಕನ್ವರೆ ಎಂಬಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದು ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮೇ. 25ರ ಮಧ್ಯಾಹ್ನ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯದಿಂದ ಇಚ್ಲಂಪಾಡಿ ಮೂಲಕ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು (ಕೆಎ14ಎಂಬಿ0226) ಇದಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಚಾಲಕ, ಇಬ್ಬರು ಮಹಿಳೆಯರು, ಒಂದು ಮಗು ಕಾರಿನಲ್ಲಿ ಸಿಲುಕಿಕೊಂಡಿದ್ದು ಸ್ಥಳೀಯರು ಕಾರ್ಯಾಚರಣೆ ನಡೆಸಿ ಸಿಲುಕಿದ್ದ ಗಾಯಾಳುಗಳನ್ನು ಹೊರ ತೆಗೆದು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಸ್ಥಳದಲ್ಲಿದ್ದವರ

ಕಡಬ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ| ಮಗು ಸಹಿತ ಪ್ರಯಾಣಿಕರು ಸಾವಿನ ದವಡೆಯಿಂದ‌ ಬಚಾವ್ Read More »

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ| ಗ್ರಾಹಕರಿಂದ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಗ್ರಾಹಕರು ಠೇವಣಿ ಇಟ್ಟಿದ್ದ 40 ಕೋಟಿ ಹಣ ವಾಪಾಸ್ ನೀಡದೆ ವಂಚನೆ ಮಾಡಿದ ಆರೋಪದ ಮೇಲೆ ಶ್ರೀ ರಾಮ ಕ್ರೆಡಿಟ್‌ ಕೋ- ಆಪರೇಟಿವ್‌ ಸೊಸೈಟಿಯ ವಿರುದ್ದ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಬೆಳ್ತಂಗಡಿ ನಗರದ ಜೂನಿಯರ್‌ ಕಾಲೇಜ್‌ ರಸ್ತೆಯಲ್ಲಿರುವ ರಾಮನಗರದ ವಿ.ಆರ್‌. ನಾಯಕ್‌ ಕಾಂಪೌಂಡ್‌ನಲ್ಲಿ ಸುಮಾರು 25 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಶ್ರೀರಾಮ ಕ್ರೆಡಿಟ್‌ ಕೋ- ಆಪರೇಟಿವ್‌ ಸೊಸೈಟಿಯಲ್ಲಿ ಆಡಳಿತ ಮಂಡಳಿಯವರು ಗ್ರಾಹಕರಿಗೆ ಸೇರಿದ ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂ. ಹಣ

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ| ಗ್ರಾಹಕರಿಂದ ಪ್ರಕರಣ ದಾಖಲು Read More »

ಕಾರ್ಕಳ: ಶಾಸಕ ಸುನಿಲ್ ಸಹೋದರ ನಿಧನ

ಸಮಗ್ರ ನ್ಯೂಸ್: ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಕಾರ್ಕಳ: ಶಾಸಕ ಸುನಿಲ್ ಸಹೋದರ ನಿಧನ Read More »

ವಿಟ್ಲ: ಪತ್ನಿಯ ಸೀಮಂತದ ವೇಳೆ ಕುಸಿದು ಬಿದ್ದು ಪತಿ ಸಾವು| ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ

ಸಮಗ್ರ ನ್ಯೂಸ್: ಪತ್ನಿಯ ಸೀಮಂತ ಕಾರ್ಯಕ್ರಮ ನಡೆಯುತ್ತಿದ್ದ ಶುಭ ದಿನದಂದೇ ಪತಿ ಅನಿರೀಕ್ಷಿತವಾಗಿ ನಿಧನರಾದ ಅತ್ಯಂತ ವಿಷಾದನೀಯ ಘಟನೆ ಕನ್ಯಾನ ಗ್ರಾಮದ ಮಿತ್ತನಡ್ಕ ಎಂಬಲ್ಲಿ ಸಂಭವಿಸಿದೆ. ಸ್ಥಳೀಯ ನಿವಾಸಿ ಹಾಗೂ ಪಿಕಪ್ ವಾಹನ ಚಾಲಕರಾದ ಸತೀಶ್ (33 ವ) ಮೃತರಾದವರು. ತಮ್ಮ ಪತ್ನಿಯ ಸೀಮಂತ ಕಾರ್ಯಕ್ರಮದ ಸಂದರ್ಭದಲ್ಲಿ ಸತೀಶ್ ಅವರು ಹಠಾತ್ತನೆ ಕುಸಿದು ಬಿದ್ದಿದ್ದಾರೆ. ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಹಾಗೂ ತದನಂತರ ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದಾಗ್ಯೂ, ಚಿಕಿತ್ಸಾ

ವಿಟ್ಲ: ಪತ್ನಿಯ ಸೀಮಂತದ ವೇಳೆ ಕುಸಿದು ಬಿದ್ದು ಪತಿ ಸಾವು| ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ Read More »