ಕ್ರೈಂ

8 ತಿಂಗಳ ತುಂಬು ಗರ್ಭಿಣಿ ಕತ್ತು ಹಿಸುಕಿ ಕೊಂದ 22 ವರ್ಷದ ಯುವಕ

ಸಮಗ್ರ ನ್ಯೂಸ್: 22 ವರ್ಷದ ಯುವಕ ಎಂಟು ತಿಂಗಳ ತುಂಬು ಗರ್ಭಿಣಿಯನ್ನು ಕತ್ತು ಹಿಸುಕಿ ಕೊಂದ ಘಟನೆ ಮುಂಬೈನಲ್ಲಿ ನಡೆದಿದೆ. ಬುಧವಾರ ನಗರ ಕುರ್ಲಾ ಪ್ರದೇಶದ ನಿವಾಸವೊಂದರಲ್ಲಿ ಈ ಘಟನೆ ನಡೆದಿದ್ದು, ಮೃತ ದುರ್ದೈವಿಯನ್ನು ಕೋಮಲ್ ಸಂಜಯ್ ಸೋಂಕರ್ ಎಂದು ಗುರುತಿಸಲಾಗಿದೆ. ಮಹಿಳೆಯ ಜೊತೆಗೆ ಭ್ರೂಣವು ಸಹ ಆಕೆಯ ಗರ್ಭದಲ್ಲಿಯೇ ಸಾವನ್ನಪ್ಪಿದೆ.  ಆರೋಪಿ ಅರ್ಜುನ್ ಸೋಂಕರ್ ಮೃತ ಮಹಿಳೆಯ ಪತಿ ಸಂಜಯ್ ಅವರ ಸೋದರ ಸಂಬಂಧಿಯಾಗಿದ್ದು, ಕಳೆದ ಕೆಲವು ತಿಂಗಳುಗಳಿಂದ ಅವರೊಂದಿಗೆ ವಾಸವಾಗಿದ್ದ. ಇದೀಗ ಆರೋಪಿ ಮಹಿಳೆಯ […]

8 ತಿಂಗಳ ತುಂಬು ಗರ್ಭಿಣಿ ಕತ್ತು ಹಿಸುಕಿ ಕೊಂದ 22 ವರ್ಷದ ಯುವಕ Read More »

ಬೆಳ್ತಂಗಡಿ: ವುಡ್ ವರ್ಕ್ಸ್‌ನ ಮಾಲಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಇಲ್ಲಿನ ಪುಂಜಾಲಕಟ್ಟೆಯ ನೆರಳಕಟ್ಟೆಯ ಜಿತೇಶ್ ವುಡ್ ವರ್ಕ್ಸ್‌ನ ಮಾಲಕ ಹರೀಶ್ ಕುಲಾಲ್‌ ಎ. 28 ರಂದು ಬೆಳಿಗ್ಗೆ ತನ್ನ ಅಂಗಡಿಯಲ್ಲಿ ನೇಣು ಬಿಗಿದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ನೇರಳಕಟ್ಟೆ ಕುಲಾಲು ದರ್ಖಾಸು ನಿವಾಸಿ ಹರೀಶ್(42ವ) ಎಂದು ತಿಳಿದುಬಂದಿದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತರು ತನ್ನ ಅಂಗಡಿಯಲ್ಲಿ ಮರದ ವಿವಿಧ ರೀತಿಯ ಪೀಠೋಪಕರಣಗಳನ್ನು ತಯಾರಿಸುತ್ತಿದ್ದರು ಅವರೊಂದಿಗೆ ಹಲವು ಕಾರ್ಮಿಕರು ಕೆಲಸ ಮಾಡುತ್ತಿದ್ದರು.

ಬೆಳ್ತಂಗಡಿ: ವುಡ್ ವರ್ಕ್ಸ್‌ನ ಮಾಲಕ ಆತ್ಮಹತ್ಯೆ Read More »

ಪ್ರೀತಿಸಿದಾಕೆಯ ಮೇಲೆ ವಿಕೃತಿ ತೋರಿದ ಪ್ರಿಯಕರ| ಪಾಗಲ್ ಪ್ರೇಮಿಯಿಂದ ನಡೆಯಿತು ಘೋರ ಕೃತ್ಯ

ಸಮಗ್ರ ನ್ಯೂಸ್: ಪಾಗಲ್ ಪ್ರೇಮಿಯೊಬ್ಬ ಯುವತಿಯ ಮೇಲೆ ಆಸಿಡ್ ದಾಳಿ ನಡೆಸಿ ವಿಕೃತಿ ಮೆರೆದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಯುವತಿ ಮನೆಯಿಂದ ಕೆಲಸಕ್ಕೆಂದು ಕಚೇರಿಗೆ ಹೋಗುತ್ತಿದ್ದಾಗ ಬೆಂಗಳೂರಿನ ಸುಂಕದ ಕಟ್ಟೆಯ ಬಳಿ ಯುವಕ, ಯುವತಿ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದಾನೆ. ಆಸಿಡ್ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತನ್ನನ್ನು ಪ್ರೀತಿಸುವಂತೆ ಹಲವು ದಿನಗಳಿಂದ ಪಾಗಲ್ ಪ್ರೇಮಿ ಯುವತಿ ಹಿಂದೆ ಬಿದ್ದಿದ್ದ. ಆದರೆ ಯುವತಿ ನಿರಾಕರಿಸಿದ್ದಳು. ಇದೇ ಕಾರಣಕ್ಕೆ ಸೇಡಿನಿಂದ ಯುವಕ

ಪ್ರೀತಿಸಿದಾಕೆಯ ಮೇಲೆ ವಿಕೃತಿ ತೋರಿದ ಪ್ರಿಯಕರ| ಪಾಗಲ್ ಪ್ರೇಮಿಯಿಂದ ನಡೆಯಿತು ಘೋರ ಕೃತ್ಯ Read More »

ವಿಟ್ಲ: ಕಾಮಗಾರಿ ವೇಳೆ ಕೆಳಗೆ ಬಿದ್ದು ಯುವಕ ದುರ್ಮರಣ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದಲ್ಲಿ ಲಕ್ನೋ ಮೂಲದ ಕಾರ್ಮಿಕ ಸಭಾಭವನದ ಫಿನಿಶಿಂಗ್ ಕಾಮಗಾರಿ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ವಿಟ್ಲ ಶೋಕಮಾತೆ ಇಗರ್ಜಿಯ ಸಂಬಂಧಪಟ್ಟ ಸಭಾಭವನದ ಫಿನಿಶಿಂಗ್ ಕೆಲಸ ಮಾಡುತ್ತಿದ್ದ ಲಕ್ನೋದ ಪಿಪ್ರಾ ಗೂಮ್ ಮೂಲದ ಕಾರ್ಮಿಕ ಜಯ ಪ್ರಕಾಶ್(25), ನಿನ್ನೆ ಸಂಜೆ ಮೃತಪಟ್ಟಿದ್ದಾನೆ . ಚಿಕಿತ್ಸೆಗೆ ಎಂದು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದೊಯ್ದರು ಚಿಕಿತ್ಸೆ ಫಲಿಸದೇ ಜಯಪ್ರಕಾಶ್ ಅಸುನೀಗಿದ್ದಾರೆ.

ವಿಟ್ಲ: ಕಾಮಗಾರಿ ವೇಳೆ ಕೆಳಗೆ ಬಿದ್ದು ಯುವಕ ದುರ್ಮರಣ Read More »

ಕಣ್ಣಾ‌ಮುಚ್ಚಾಲೆ ಆಡಿ ಕಣ್ಣು‌ಮುಚ್ಚಿದ ಬಾಲಕಿಯರು| ಐಸ್ ಕ್ರೀಂ ಬಾಕ್ಸ್ ನೊಳಗೆ ಅವಿತು ಉಸಿರುಗಟ್ಟಿ ಸಾವು

ಸಮಗ್ರ ನ್ಯೂಸ್: ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ಐಸ್‌ಕ್ರೀಂ ಪೆಟ್ಟಿಗೆಯೊಳಗೆ ಅಡಗಿ ಕುಳಿತು ಕೊಳ್ಳಲು ಮುಂದಾಗಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಮಸಗೆ ಗ್ರಾಮದಲ್ಲಿ ನಡೆದಿದೆ. ನಾಗರಾಜು ಮತ್ತು ಚಿಕ್ಕದೇವಮ್ಮ ಎಂಬುವರ ಪುತ್ರಿ ಭಾಗ್ಯ (12), ರಾಜನಾಯಕ ಮತ್ತು ಗೌರಮ್ಮ ಎಂಬುವರ ಪುತ್ರಿ ಕಾವ್ಯ (7) ಮೃತ ಬಾಲಕಿಯರು. ಮೃತ ಬಾಲಕಿಯರಾದ ಭಾಗ್ಯ ಹಾಗೂ ಕಾವ್ಯ ಬುಧವಾರ ಬೆಳಿಗ್ಗೆ ಶಾಲೆಗೆ ಬೇಸಿಗೆ ರಜೆ ಇದ್ದ ಕಾರಣ ಆಟವಾಡುತ್ತಿದ್ದರು. ಈ ವೇಳೆ ಕಣ್ಣಾಮುಚ್ಚಾಲೆ ಆಟವಾಡುವ ಸಂದರ್ಭ ಐಸ್ ಕ್ರೀಮ್

ಕಣ್ಣಾ‌ಮುಚ್ಚಾಲೆ ಆಡಿ ಕಣ್ಣು‌ಮುಚ್ಚಿದ ಬಾಲಕಿಯರು| ಐಸ್ ಕ್ರೀಂ ಬಾಕ್ಸ್ ನೊಳಗೆ ಅವಿತು ಉಸಿರುಗಟ್ಟಿ ಸಾವು Read More »

12ರ ಬಾಲಕನಿಂದ 5ವರ್ಷದ ಬಾಲಕಿಯ ಅತ್ಯಾಚಾರ

ಸಮಗ್ರ ನ್ಯೂಸ್: 12 ವರ್ಷದ ಬಾಲಕನೊಬ್ಬ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಜಾರ್ಖಂಡ್ ನ ಖುಂತಿ‌ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿ ತನ್ನ ಮನೆಯ ಸಮೀಪದ ಅಂಗಡಿಯೊಂದಕ್ಕೆ ತಂಪು ಪಾನೀಯ ಖರೀದಿಸಲು ಹೋದಾಗ ಅಲ್ಲಿ ಒಬ್ಬನೇ ಇದ್ದ ಹುಡುಗ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಅವರು ಹೇಳಿದ್ದಾರೆ. ಕಳೆದ‌ ಶನಿವಾರ ತೋರ್ಪಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ಜಿಲ್ಲೆಯಾದ್ಯಂತ ಬೆಚ್ಚಿಬೀಳಿಸಿದೆ. ಘಟನೆ ಸಂಬಂಧ ಬಾಲಕನನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ಆತ ತಪ್ಪೊಪ್ಪಿಕೊಂಡಿದ್ದಾನೆ

12ರ ಬಾಲಕನಿಂದ 5ವರ್ಷದ ಬಾಲಕಿಯ ಅತ್ಯಾಚಾರ Read More »

ಸುಳ್ಯ: ನದಿಯಲ್ಲಿ ಮುಳುಗಿ ಬಾಲಕ ಸಾವು

ಸಮಗ್ರ ನ್ಯೂಸ್: ಹೊಳೆಯಲ್ಲಿ ಸ್ನಾನ ಮಾಡಲೆಂದು ಹೋದ ಸಂದರ್ಭದಲ್ಲಿ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಅರಂತೋಡು ಗ್ರಾಮದ ಕುಕ್ಕುಂಬಳ ಎಂಬಲ್ಲಿ ಇಂದು ಸಂಜೆ ವರದಿಯಾಗಿದೆ. ಮೃತಪಟ್ಟ ಬಾಲಕನನ್ನು ಮಂಗಳೂರಿನ ಮನ್ವಿತ್(12) ಎಂದು ಗುರುತಿಸಲಾಗಿದೆ. ಅರಂತೋಡಿನ ಬಾಲಕೃಷ್ಣ ಶೆಟ್ಟಿಯವರ ಪುತ್ರಿಯನ್ನು ಮಂಗಳೂರಿಗೆ ವಿವಾಹ ಮಾಡಿಕೊಡಲಾಗಿದ್ದು, ಅವರ ಮಗ ಮನ್ವಿತ್ ಅಜ್ಜನ ಮನೆಗೆ ಬಂದ ಸಂದರ್ಭದಲ್ಲಿ ಕುಕ್ಕುಂಬಳ ಎಂಬಲ್ಲಿ ಸ್ನಾನ ಮಾಡಲೆಂದು ನೀರಿಗಿಳಿದು ಮೃತಪಟ್ಟರೆಂದು ತಿಳಿದುಬಂದಿದೆ. ಮೃತದೇಹವನ್ನು ಶರತ್, ನಿಧೀಶ್, ತಾಜ್ ಅರಂತೋಡು, ಮುನೀರ್ ನೀರಿನಿಂದ ಹೊರತೆಗೆಯಲು ಸಹಕರಿಸಿದರು.

ಸುಳ್ಯ: ನದಿಯಲ್ಲಿ ಮುಳುಗಿ ಬಾಲಕ ಸಾವು Read More »

ಹಿಂದೂ ದೇವರಿಗೆ ಅವಮಾನ|ಒಳ ಚಡ್ಡಿ, ಬ್ರಾ ದಲ್ಲಿ ಶಿವ ವಿಷ್ಣು ಫೋಟೋ ಪ್ರಿಂಟ್ ಮಾಡಿದ ಸಹಾರಾ‌ ರಾಯ್!!

ಸಮಗ್ರ ನ್ಯೂಸ್ ಡೆಸ್ಕ್ : ಒಳ ಚಡ್ಡಿ, ಬ್ರಾ ಅಲ್ಲಿ ಶಿವ ವಿಷ್ಣು ಪ್ರಿಂಟ್ ಮಾಡಿ ಮಾರ್ಕೆಟಿಂಗ್ ಮಾಡುತ್ತಿರುವ ಫೋಟೋ ಇದೀಗ ವೈರಲ್ ಆಗಿದ್ದು ಹಿಂದೂಗಳ ಆಕ್ರೋಶಕ್ಕೆ ಕಾರಣ ವಾಗಿದೆ. ಸಹಾರ ರಾಯ್ ಸ್ವಿಮ್ಮಿ ಎಂಬ ಕಂಪನಿ ಇದಾಗಿದ್ದು ಹಿಂದೂ ದೇವರಗಳನ್ನು ಅವಮಾನ ಮಾಡಿರುವುದು ಎದ್ದು ಕಾಣುತ್ತದೆ. ಇದರ ಫೋಟೋ ಗಳು ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು ಹಿಂದೂ ಗಳು ಈ ಕಂಪನಿ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಹಿಂದೂ ದೇವರಿಗೆ ಅವಮಾನ|ಒಳ ಚಡ್ಡಿ, ಬ್ರಾ ದಲ್ಲಿ ಶಿವ ವಿಷ್ಣು ಫೋಟೋ ಪ್ರಿಂಟ್ ಮಾಡಿದ ಸಹಾರಾ‌ ರಾಯ್!! Read More »

ಮಂಗಳೂರು: ಠಾಣೆಯಲ್ಲೇ ಹೊಡೆದಾಡಿಕೊಂಡ ಪೊಲೀಸ್ ಸಿಬ್ಬಂದಿ

ಓರ್ವ ಆಸ್ಪತ್ರೆಗೆ ದಾಖಲು ಸಮಗ್ರ ನ್ಯೂಸ್: ಮಂಗಳೂರು ನಗರದ ಸಂಚಾರ ಪಶ್ಚಿಮ ಠಾಣೆಯಲ್ಲಿ ಸೋಮವಾರ ಬೆಳಗ್ಗೆ ಹಿರಿಯ ಮತ್ತು ಕಿರಿಯ ಪೊಲೀಸ್ ಸಿಬ್ಬಂದಿಯ ಮಧ್ಯೆ ಹೊಡೆದಾಟ ನಡೆದಿದ್ದು, ಗಾಯಾಳು ಹಿರಿಯ ಸಿಬ್ಬಂದಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿರುವುದಾಗಿ ಮಾಹಿತಿ ಲಭಿಸಿದೆ. ಸೋಮವಾರ ಬೆಳಗ್ಗಿನ ಗಸ್ತು ಕರ್ತವ್ಯಕ್ಕೆ ಸಂಬಂಧಿಸಿ ಠಾಣೆಗೆ ಆಗಮಿಸಿದ ಕಿರಿಯ ಸಿಬ್ಬಂದಿ, ಹಿರಿಯ ಸಿಬ್ಬಂದಿಯ ಮಧ್ಯೆ ರೇಗಾಡಿ ಹಲ್ಲೆ ನಡೆಸಿದ್ದಾರೆ . ಬಳಿಕ ಅಲ್ಲಿದ್ದ ಇತರ ಸಿಬ್ಬಂದಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಈ ಹಿಂದೆಯೂ ಕಿರಿಯ ಸಿಬ್ಬಂದಿಯ

ಮಂಗಳೂರು: ಠಾಣೆಯಲ್ಲೇ ಹೊಡೆದಾಡಿಕೊಂಡ ಪೊಲೀಸ್ ಸಿಬ್ಬಂದಿ Read More »

ಪುಂಜಾಲಕಟ್ಟೆ: ಸಿಡಿಲಿಗೆ ಓರ್ವ ಬಲಿ

ಸಮಗ್ರ ನ್ಯೂಸ್: ಸಿಡಿಲು ಬಡಿದು ಯುವಕಯೋರ್ವ ಮೃತಪಟ್ಟ ಘಟನೆ ಪಾಂಡವರಕಲ್ಲು ಎಂಬಲ್ಲಿ ನಡೆದಿದೆ. ಪಾಂಡವರಕಲ್ಲು ನಿವಾಸಿ ಲೋಕೇಶ್ ಎಂಬವರು ಮೃತ ವ್ಯಕ್ತಿ.ಕೂಲಿ ಕೆಲಸ ಮಾಡುತ್ತಿದ್ದ ಲೋಕೇಶ್ ಅವರು ರಜೆಯಲ್ಲಿದ್ದರು.ಮನೆಯಲ್ಲಿ ಮಧ್ಯಾಹ್ನ ಊಟ ಮುಗಿಸಿ ಮಲಗಿದ್ದ ವೇಳೆ ಸುಮಾರು ಮೂರು ಗಂಟೆಯ ವೇಳೆ ಬಡಿದ ಸಿಡಲಿನ ಆಘಾತಕ್ಕೆ ಇವರು ಮೃತಪಟ್ಟದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ಪುಂಜಾಲಕಟ್ಟೆ: ಸಿಡಿಲಿಗೆ ಓರ್ವ ಬಲಿ Read More »