ಬಿಬಿಎಂಪಿ ಕಸದ ಲಾರಿ ಹರಿದು ಬ್ಯಾಂಕ್ ಅಧಿಕಾರಿ ಸಾವು; ಚಾಲಕ ಪರಾರಿ
ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದು ಬ್ಯಾಂಕ್ ಅಧಿಕಾರಿಯೊಬ್ಬರು ಮೃತಪಟ್ಟ ದಾರುಣ ಘಟನೆ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಮೃತರನ್ನು ಆರ್.ಆರ್.ನಗರ ನಿವಾಸಿ ಪದ್ಮಿನಿ(40)ಎಂದು ಗುರುತಿಸಲಾಗಿದೆ. ಇವರು ಖಾಸಗಿ ಬ್ಯಾಂಕ್ವೊಂದರ ಡೆಪ್ಯೂಟಿ ಮ್ಯಾನೇಜರ್ ಆಗಿದ್ದು, ಕೆಲಸ ಮುಗಿಸಿ ದ್ವಿಚಕ್ರ ವಾಹನದಲ್ಲಿ ಸಂಜೆ 7.10ರ ಸುಮಾರಿಗೆ ಮನೆಗೆ ತೆರಳುತ್ತಿದ್ದರು. ಈ ವೇಳೆ ನಾಯಂಡಹಳ್ಳಿ ರಿಂಗ್ ರಸ್ತೆಯಲ್ಲಿ ನಾಗರಬಾವಿ ಕಡೆಯಿಂದ ನಾಯಂಡಹಳ್ಳಿ ಕಡೆಗೆ ತೆರಳುತ್ತಿದ್ದ ಬಿಬಿಎಂಪಿ ಕಸದ ಲಾರಿ, ನಾಯಂಡಹಳ್ಳಿ ರೈಲ್ವೆ ಅಂಡರ್ ಪಾಸ್ ಬಳಿ […]
ಬಿಬಿಎಂಪಿ ಕಸದ ಲಾರಿ ಹರಿದು ಬ್ಯಾಂಕ್ ಅಧಿಕಾರಿ ಸಾವು; ಚಾಲಕ ಪರಾರಿ Read More »








