ಕ್ರೈಂ

ಬೆಂಗಳೂರಿನ ವೈಮಾನಿಕ ತರಬೇತಿ ಕೇಂದ್ರದಲ್ಲಿ ತಪ್ಪಿದ ಭಾರಿ ಅನಾಹುತ

ಸಮಗ್ರ ನ್ಯೂಸ್: ಬೆಂಗಳೂರಿನ ಯಲಹಂಕದ ಜಕ್ಕೂರಿನಲ್ಲಿರುವ ವೈಮಾನಿಕ ತರಬೇತಿ ಕೇಂದ್ರದಲ್ಲಿ ಅನಾಹುತವೊಂದು ತಪ್ಪಿದೆ. ಏರ್​ಕ್ರಾಫ್ಟ್ ಲ್ಯಾಂಡಿಂಗ್ ವೇಳೆ ರನ್​ವೇನಲ್ಲಿ ನಾಯಿಯೊಂದು ಅಡ್ಡಬಂದ ಪರಿಣಾಮ, ರನ್​ವೇ ಬಿಟ್ಟು ಖಾಲಿ ಜಾಗಕ್ಕೆ ನುಗ್ಗಿ ಏರ್​ಕ್ರಾಫ್ಟ್ ಪಲ್ಟಿಯಾಗಿದೆ. ಪೈಲಟ್ ಅಪಾಯದಿಂದ ಪಾರಾಗಿದ್ದು, ಏರ್​ಕ್ರಾಫ್ಟ್​ಗೆ ಹಾನಿಯಾಗಿದೆ. ರನ್​ವೇ ಚಿಕ್ಕದಾಗಿದ್ದರಿಂದ ಪೈಲಟ್ ಶಾರ್ಟ್​ಲ್ಯಾಂಡಿಂಗ್ ಮಾಡಿದ್ದರು. ಇದು ಖಾಸಗಿ ಕಂಪನಿಗೆ ಸೇರಿದ ಏರ್ ಕ್ರಾಫ್ಟ್ ಲ್ಯಾಂಡ್ ಆಗಿ ರನ್​ ವೇ ನಲ್ಲಿ ಚಲಿಸುವಾಗ ನಾಯಿಯೊಂದು ಅಡ್ಡ ಬಂದಿತ್ತು. ನಾಯಿ ಕಂಡು ರನ್ ವೇ ಬಿಟ್ಟು ಪಕ್ಕದಲ್ಲಿರುವ […]

ಬೆಂಗಳೂರಿನ ವೈಮಾನಿಕ ತರಬೇತಿ ಕೇಂದ್ರದಲ್ಲಿ ತಪ್ಪಿದ ಭಾರಿ ಅನಾಹುತ Read More »

ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಹಿಂಸಾಚಾರ| 100 ಮಂದಿ ಪೊಲೀಸ್ ವಶ

ಸಮಗ್ರ ನ್ಯೂಸ್: ಭಾನುವಾರ ತಡರಾತ್ರಿ ಹುಬ್ಬಳ್ಳಿ ನಗರದಲ್ಲಿ ದೊಡ್ಡ ಗಲಭೆಯೇ ನಡೆದು ಹೋಗಿದ್ದು, ಇಡೀ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದೆ. ಧರ್ಮ ಯುದ್ಧದ ಮಧ್ಯೆ ಹುಬ್ಬಳ್ಳಿ ಗಲಾಟೆ ರಾಜ್ಯವನ್ನು ಮತ್ತಷ್ಟು ಅಪಾಯಕಾರಿ ಪರಿಸ್ಥಿತಿಯತ್ತ ತಳ್ಳಿದೆ. ಪ್ರಚೋದನಕಾರಿ ವಾಟ್ಸಾಪ್ ಸ್ಟೇಟಸ್‌ನಿಂದ ಗಲಾಟೆಯಾಗಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 100ಕ್ಕೂ ಹೆಚ್ಚು ಜನರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. 88 ಆರೋಪಿಗಳನ್ನು ಬಂಧಿಸಿದ್ದಾರೆ. ಗಲಾಟೆ ಪ್ರಕರಣ ಸಂಬಂಧ ಈವರೆಗೆ 10 ಪ್ರಕರಣ ದಾಖಲಾಗಿವೆ. ಏಪ್ರಿಲ್ 18ರ ಬೆಳಗ್ಗೆ 10.30ಕ್ಕೆ ಪೊಲೀಸರು ಆರೋಪಿಗಳನ್ನು ಕೋರ್ಟ್‌ಗೆ

ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಹಿಂಸಾಚಾರ| 100 ಮಂದಿ ಪೊಲೀಸ್ ವಶ Read More »

ಮಂಗಳೂರು: ಮೀನಿನ ಪ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ| ಮೂವರ ಸಾವು; ಐದು ಮಂದಿ ಗಂಭೀರ

ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯದ ಎಸ್​ಇಝೆಡ್ (ವಿಶೇಷ ಆರ್ಥಿಕ ವಲಯ) ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ವಿಷಾನಿಲ ಸೋರಿಕೆಯಾಗಿ ಮೂವರು ಮೃತಪಟ್ಟಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಎಸ್​ಇಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೀನಿನ ಫ್ಯಾಕ್ಟರಿಯ ಟ್ಯಾಂಕೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ಈ ದುರಂತ ಸಂಭವಿಸಿದೆ. ಭಾನುವಾರ ರಾತ್ರಿ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದಾನೆ. ಈ ವೇಳೆ ಏಕಾಏಕಿ ಅಸ್ವಸ್ಥಗೊಂಡು ಬಿದ್ದಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು 8 ಕಾರ್ಮಿಕರು ಹೋಗಿದ್ದಾರೆ. ಈ ವೇಳೆ ಅವರು ಕೂಡ ಅಸ್ವಸ್ಥಗೊಂಡು, ಉಸಿರಾಟದಲ್ಲಿ

ಮಂಗಳೂರು: ಮೀನಿನ ಪ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ| ಮೂವರ ಸಾವು; ಐದು ಮಂದಿ ಗಂಭೀರ Read More »

ಸುಳ್ಯ ಮೂಲದ ದಂಪತಿ ಮೈಸೂರಿನಲ್ಲಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಸುಳ್ಯ ಸಮೀಪದ ಕುಕ್ಕಾಜೆಕಾನ ಮೂಲದ ದಂಪತಿ ಮೈಸೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎ.16ರಂದು ನಡೆದಿದೆ. ಸೋಣಂಗೇರಿ, ಮಂಗಳೂರು ಮೊದಲಾದೆಡೆ ಅಂಚೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಆಗಿದ್ದ ಕುಕ್ಕಾಜೆಕಾನದ ಮಾಧವ ನಾಯ್ಕ್ ರವರು 3 ವರ್ಷಗಳ ಹಿಂದೆ ಪತ್ನಿ, ಪುತ್ರಿ ಸಮೇತ ಮೈಸೂರಿಗೆ ಹೋಗಿ ಅಲ್ಲಿ ನೆಲೆಸಿದ್ದರು. ಎ.16 ರಂದು ಮಾಧವ ನಾಯ್ಕ್ (56) ಮತ್ತು ಅವರ ಪತ್ನಿ ಉಷಾ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ. ಮೈಸೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮಹಜರು ನಡೆಸಿದ ಬಳಿಕ

ಸುಳ್ಯ ಮೂಲದ ದಂಪತಿ ಮೈಸೂರಿನಲ್ಲಿ ಆತ್ಮಹತ್ಯೆ Read More »

ಉಡುಪಿ : ಶಾರ್ಟ್ ಸರ್ಕ್ಯೂಟ್ ನಿಂದ ಭಾರೀ ಅಗ್ನಿದುರಂತ ; ಲಕ್ಷಾಂತರ ರೂ. ನಷ್ಟ

ಸಮಗ್ರ ನ್ಯೂಸ್ : ಉಡುಪಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ಅಗ್ನಿ ದುರಂತವೊಂದು ನಡೆದಿದ್ದು, ಮಣಿಪಾಲದ ವೆಷ್ಟೇಕ್ ಎಂಟರ್​ಪ್ರೈಸಸ್​ನಲ್ಲಿ ಭಾರೀ ನಷ್ಟ ಸಂಭವಿಸಿದೆ. ರಾತ್ರಿ ವೇಳೆ ವೆಷ್ಟೇಕ್ ಎಂಟರ್​ಪ್ರೈಸಸ್​ನಲ್ಲಿ ಶಾರ್ಟ್​ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕಿಸಲಾಗಿದೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಮುಂಜಾನೆವರೆಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮವಾಗಿದೆ ಎಂದು ತಿಳಿದುಬಂದಿದೆ.

ಉಡುಪಿ : ಶಾರ್ಟ್ ಸರ್ಕ್ಯೂಟ್ ನಿಂದ ಭಾರೀ ಅಗ್ನಿದುರಂತ ; ಲಕ್ಷಾಂತರ ರೂ. ನಷ್ಟ Read More »

ಪತಿಯ ಸಾವಿನ‌ ಸುದ್ದಿ ಸಹಿಸದ ಸತಿ| ಮಗುವನ್ನು ಕೊಂದು ಸಾವಿಗೆ ಶರಣಾದ ಪತ್ನಿ

ಸಮಗ್ರ ನ್ಯೂಸ್: ಪತಿ ಇಲ್ಲದೆ ಬದುಕೇ ಇಲ್ಲ ಎಂಬ ನಿರ್ಧಾರಕ್ಕೆ ಬಂದ ಮಹಿಳೆ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ. ಮುದ್ದಾದ ಮಗುವನ್ನು ಕೊಂದು ತಾನೂ ಸಹ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ರಾಯಚೂರಿನಲ್ಲಿ ನಡೆದಿದೆ. ಮಂಗಳೂರು ನಗರದಲ್ಲಿ ಅಪಘಾತದಲ್ಲಿ ಪತಿ ಸಾವನ್ನಪ್ಪಿದ್ದಾನೆ ಎನ್ನುವ ಸುದ್ದಿ ತಿಳಿಯುತ್ತಿದ್ದಂತೆ ಪತ್ನಿ ಶೃತಿ ಆಘಾತಕ್ಕೊಳಗಾಗಿದ್ದಾಳೆ. ರಾಯಚೂರಿನಲ್ಲಿದ್ದ ಶೃತಿ ತನ್ನ 6 ತಿಂಗಳ ಮಗುವನ್ನು ನೇಣುಹಾಕಿ ಹತ್ಯೆಗೈದು ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ. ಮಂಗಳೂರಿನ ಅಗ್ನಿಶಾಮಕ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗಂಗಾಧರ ಬಿ.

ಪತಿಯ ಸಾವಿನ‌ ಸುದ್ದಿ ಸಹಿಸದ ಸತಿ| ಮಗುವನ್ನು ಕೊಂದು ಸಾವಿಗೆ ಶರಣಾದ ಪತ್ನಿ Read More »

ಕಲಬುರಗಿ ಖಾಸಗಿ ಬಸ್ – ಟ್ಯಾಂಕರ್ ನಡುವೆ ಭೀಕರ ಅಪಘಾತ; ಮೂವರು ಗಂಭೀರ

ಸಮಗ್ರ ನ್ಯೂಸ್: ಖಾಸಗಿ ಬಸ್-ಟ್ಯಾಂಕರ್ ನಡುವೆ ಭೀಕರ ಅಪಘಾತ ನಡೆದಿದ್ದು ಮೂವರ ಸ್ಥಿತಿ ಗಂಭೀರ, ಹಲವು ಪ್ರಯಾಣಿಕರಿಗೆ ಗಾಯಗಳಾದ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಕಲಬುರ್ಗಿಯ ಹುಮನಾಬಾದ್ ರಿಂಗ್ ರಸ್ತೆಯ ಹೊರವಲಯದಲ್ಲಿ ಖಾಸಗಿ ಬಸ್ ಹಾಗೂ ಸಿಮೆಂಟ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಎರಡೂ ವಾಹನಗಳು ಪಲ್ಟಿಯಾದ ಪರಿಣಾಮ, ಮೂವರು ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿ ತಲುಪಿದ್ದಾರೆ. ಅಲ್ಲದೇ ಹಲವರಿಗೆ ಸಣ್ಣ ಪುಟ್ಟ ಗಾಯವಾಗಿರೋದಾಗಿ ತಿಳಿದು ಬಂದಿದೆ. ಇನ್ನೂ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ

ಕಲಬುರಗಿ ಖಾಸಗಿ ಬಸ್ – ಟ್ಯಾಂಕರ್ ನಡುವೆ ಭೀಕರ ಅಪಘಾತ; ಮೂವರು ಗಂಭೀರ Read More »

ವಿವಾದಾತ್ಮಕ ಪೊಸ್ಟ್‌: ಹುಬ್ಬಳ್ಳಿಯಲ್ಲಿ ಗಲಾಟೆ, ಪರಿಸ್ಥಿತಿ ಉದ್ವಿಗ್ನ

ವಾಹನಗಳಿಗೆ ಕಲ್ಲು ತೂರಾಟ ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆಗೆ ರಾತ್ರೋ ರಾತ್ರಿ ಮುತ್ತಿಗೆ ಹುಬ್ಬಳ್ಳಿ: ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್‌ ಹಾಕಿರುವ ವಿಚಾರವಾಗಿ ಹಳೆ ಹುಬ್ಬಳ್ಳಿ ಪ್ರದೇಶದಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ ಸಂಭವಿಸಿದೆ. ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಹಾಗೂ ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ. ಘಟನೆಯಲ್ಲಿ ಇನ್‌ಸ್ಪೆಕ್ಟರ್‌ ಸೇರಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಭಾರೀ ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ನಗರದಲ್ಲಿ

ವಿವಾದಾತ್ಮಕ ಪೊಸ್ಟ್‌: ಹುಬ್ಬಳ್ಳಿಯಲ್ಲಿ ಗಲಾಟೆ, ಪರಿಸ್ಥಿತಿ ಉದ್ವಿಗ್ನ Read More »

ಮಾಣಿ : ರಿಕ್ಷಾ ಪಲ್ಟಿಯಾಗಿ ಚಾಲಕ ಗಂಭೀರ| ಆಸ್ಪತ್ರೆಗೆ ಸಾಗಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಸಮಗ್ರ ನ್ಯೂಸ್ : ಹೆದ್ದಾರಿಯಲ್ಲಿ ರಿಕ್ಷಾ ಪಲ್ಟಿಯಾಗಿ ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಮಾಣಿ ಯುವ ಕಾಂಗ್ರೆಸ್ ನ ಕಾರ್ಯಕರ್ತರು ಆಸ್ಪತ್ರೆಗೆ ಸೇರಿಸಿದ ಘಟನೆ ನಡೆದಿದೆ. ರಿಕ್ಷಾ ಚಾಲಕನನ್ನು ಪುತ್ತೂರಿನ ನವೀನ್ ಎಂದು ಗುರುತಿಸಲಾಗಿದೆ. ಈತ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಮಾಣಿ ಸಮೀಪ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಪರಿಣಾಮ ಚಾಲಕ ಗಂಭೀರ ಗಾಯಗೊಂಡಿದ್ದರು. ಈ ವೇಳೆ ಘಟನೆ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಮಾಣಿ ಯುವ ಕಾಂಗ್ರೆಸ್ ಕಾರ್ಯಕರ್ತರು ತಕ್ಷಣ ಕಾರಿನಲ್ಲಿ ತುಂಬೆ ಫಾದರ್ ಮುಲ್ಲರ್

ಮಾಣಿ : ರಿಕ್ಷಾ ಪಲ್ಟಿಯಾಗಿ ಚಾಲಕ ಗಂಭೀರ| ಆಸ್ಪತ್ರೆಗೆ ಸಾಗಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು Read More »

ಬೆಳ್ತಂಗಡಿ: ಪೈಪ್ ಪೈನ್ ಕೊರೆದು ಪೆಟ್ರೋಲ್ ಕಳ್ಳತನಕ್ಕೆ ಯತ್ನ

ಸಮಗ್ರ ನ್ಯೂಸ್: ಬೆಂಗಳೂರು – ಮಂಗಳೂರು ಪೆಟ್ರೋಲ್ ಉತ್ಪನ್ನ ಸಾಗಿಸವ ಪಿ.ಎಚ್ .ಎಂ.ಬಿ.ಎಲ್ ಪೈಪ್ ಲೈನ್ ಕೊರೆದು ಪೆಟ್ರೋಲ್ ಕಳ್ಳತನ ಮಾಡಲು ಯತ್ನಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲಾ ಬಳಿ ಎ.15 ರಂದು ಬೆಳಕಿಗೆ ಬಂದಿದೆ. ರಸ್ತೆಬದಿಯ ಮೋರಿಯ ಬಳಿ ಮಣ್ಣು ಅಗೆದು ಪಪೈನ್ನು ಕೊರೆದು ಪೈಪಿನ ಮೂಲಕ ಕಳ್ಳತನ ನಡೇಸಲು ಯತ್ನಿಸಿದ್ದಾರೆ ಎಂದು ಸಂಶಯಿಸಲಾಗಿದೆ. ಇನ್ನು ಕಳ್ಳತನ ನಡೆದ ಪೈಪಿನ ಶೇಖರಣಾ ಸ್ಥಳ ಪತ್ತೆಯಾಗಿಲ್ಲ. ಘಟನೆಯ ಬಗ್ಗೆ ಮಾಹಿತಿ

ಬೆಳ್ತಂಗಡಿ: ಪೈಪ್ ಪೈನ್ ಕೊರೆದು ಪೆಟ್ರೋಲ್ ಕಳ್ಳತನಕ್ಕೆ ಯತ್ನ Read More »