ಕ್ರೈಂ

ಸುಳ್ಯ: ನಿಯಂತ್ರಣ ತಪ್ಪಿದ ಕಾರು ಪಲ್ಟಿ; ನಾಲ್ಕು ಮಂದಿ ಜಖಂ

ಸಮಗ್ರ ನ್ಯೂಸ್: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಸುಳ್ಯದ ಹಳೆಗೇಟು ಬೆಟ್ಟಂಪಾಡಿ ಮೂಲದ ನಾಲ್ವರು ಗಾಯಗೊಂಡ ಘಟನೆ ಇಂದು ವರದಿಯಾಗಿದೆ. ಹಳೆಗೇಟು ಬೆಟ್ಟಂಪಾಡಿ ನಿವಾಸಿ ಬಶೀರ್ ಎಂಬುವವರು ತಮ್ಮ ಸಂಬಂಧಿಕರನ್ನು ವಿದೇಶಕ್ಕೆ ಬೀಳ್ಕೊಡಲು ಕಣ್ಣೂರು ಏರ್ಪೋರ್ಟಿಗೆ ಬಿಟ್ಟು ಹಿಂತಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕಾರಿನಲ್ಲಿ ಚಾಲಕ ಶರೀಫ್ ಹಾಗೂ ಬಶೀರ್, ಅವರ ಪತ್ನಿ, ಮತ್ತೋರ್ವ ಕುಟುಂಬದ ಮಹಿಳೆ, ಹಾಗೂ ಏಳು ವರ್ಷದ ಮಗುವೊಂದು ಇದ್ದರು.ಕಾರು ಅಪಘಾತದಿಂದ ನಾಲ್ವರಿಗೆ ಸಣ್ಣಪುಟ್ಟ […]

ಸುಳ್ಯ: ನಿಯಂತ್ರಣ ತಪ್ಪಿದ ಕಾರು ಪಲ್ಟಿ; ನಾಲ್ಕು ಮಂದಿ ಜಖಂ Read More »

ರಾಮ ನವಮಿ ಆಚರಣೆ ವೇಳೆ ಎಬಿವಿಪಿ ಕಾರ್ಯಕರ್ತರ ಮೇಲೆ ಹಲ್ಲೆ ಖಂಡನೀಯ – ಮಣಿಕಂಠ ಕಳಸ

ಸಮಗ್ರ ನ್ಯೂಸ್: ಕಲಬುರ್ಗಿಯ ಕೇಂದ್ರಿಯ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿಗಳು ಕ್ಯಾಂಪಸ್ ಬಳಿ ಇರುವ ಲಕ್ಷ್ಮಿ ದೇವಸ್ಥಾನದಲ್ಲಿ ರಾಮ ನವಮಿಯ ಆಚರಣೆಗೆ ಸೇರಿದ್ದ ವೇಳೆ ಹಲ್ಲೆ ನಡೆಸಿದ್ದು, ಖಂಡನೀಯ ಎಂದು ಎಬಿವಿಪಿ ರಾಜ್ಯ ಕಾರ್ಯದರ್ಶಿ ಮಣಿಕಂಠ ಕಳಸ ಹೇಳಿದ್ದಾರೆ. ವಿದ್ಯಾರ್ಥಿಗಳು ದೇವಸ್ಥಾದಲ್ಲಿ ನಡೆದ ರಾಮನವಮಿಯ ಆಚರಣೆಯ ನಂತರ ಹಿಂದಿರುಗುವ ಸಂಧರ್ಭದಲ್ಲಿ 4 ವಿದ್ಯಾರ್ಥಿಗಳ ತಂಡವೊಂದು ರಾಮ ನವಮಿಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ , ವಿದ್ಯಾರ್ಥಿಯ ಬಟ್ಟೆಯನ್ನು ಹರಿದು ಹಲ್ಲೆಯನ್ನು ನಡೆಸಿದ್ದಾರೆ ಮತ್ತು ವಿದ್ಯಾರ್ಥಿಯನ್ನು ಅಪಹರಿಸುವಂತಹ

ರಾಮ ನವಮಿ ಆಚರಣೆ ವೇಳೆ ಎಬಿವಿಪಿ ಕಾರ್ಯಕರ್ತರ ಮೇಲೆ ಹಲ್ಲೆ ಖಂಡನೀಯ – ಮಣಿಕಂಠ ಕಳಸ Read More »

ಚಂದ್ರು ಹತ್ಯೆ ಪ್ರಕರಣ| ಸಿಐಡಿ‌ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ಬೆಂಗಳೂರಿನ ಜೆ.ಜೆ. ನಗರದಲ್ಲಿ ಚಂದ್ರು ಕೊಲೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಚಂದ್ರು ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ಸೂಚಿಸಿದ್ದೇನೆ. ನಿನ್ನೆ ಡಿಜಿ, ಐಜಿಪಿ ಮತ್ತು ಕಮಿಷನರ್ ಕರೆದು ಮಾತನಾಡಿದ್ದೇನೆ. ಇಂದು ನಗರ ಪೊಲೀಸ್ ಆಯುಕ್ತರು ಸಿಐಡಿಗೆ ಚಂದ್ರು ಹತ್ಯೆ ಕೇಸ್ ಹಸ್ತಾಂತರ ಮಾಡಲಿದ್ದಾರೆ.ಆರೋಪ ಪ್ರತ್ಯಾರೋಪ ಏನೇ ಇರಲಿ ಸತ್ಯ ಹೊರಬರಲೇಬೇಕು ಎಂದು

ಚಂದ್ರು ಹತ್ಯೆ ಪ್ರಕರಣ| ಸಿಐಡಿ‌ ತನಿಖೆಗೆ ರಾಜ್ಯ ಸರ್ಕಾರ ಆದೇಶ Read More »

ಪುತ್ತೂರು: ಬಿಜೆಪಿ ಕಾರ್ಯಕರ್ತನಿಗೆ ಕೊಲೆ‌ ಬೆದರಿಕೆ; ದೂರು ದಾಖಲು

ಸಮಗ್ರ ನ್ಯೂಸ್: ಅನಾಮಧೇಯ ಕರೆ ಮಾಡಿ ಬಿಜೆಪಿಯ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರೋರ್ವರಿಗೆ ಜೀವ ಬೆದರಿಕೆ ಒಡ್ಡಿದ್ದು ಈ ಕುರಿತು ಪುತ್ತೂರು ತಾಲೂಕಿನ ಸಂಪ್ಯ ಹೊರಠಾಣೆಯಲ್ಲಿ ದೂರು ದಾಖಲಾಗಿದೆ. ಬಿಜೆಪಿ ಕಾರ್ಯಕರ್ತ ಅಬ್ದುಲ್ ರಜಾಕ್ ಬಡಗನ್ನೂರು ಇವರು ದೂರು ನೀಡಿದವರು. ಅಬ್ದುಲ್ ರಜಾಕ್ ಗೆ ಅನಾಮಧೇಯ ಫೋನ್ ನಂಬರ್ ನಿಂದ ಬೆದರಿಕೆ ಕರೆ ಬಂದಿದ್ದು ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ, ಇರಿದು ಕೊಲೆ ಮಾಡುತ್ತೇವೆ ಎಂಬುದಾಗಿ ಬೆದರಿಕೆ‌ ಒಡ್ಡಿದ್ದು, ಈ ಸಂಬಂಧ ಇಂದು ಸಂಪ್ಯ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪುತ್ತೂರು: ಬಿಜೆಪಿ ಕಾರ್ಯಕರ್ತನಿಗೆ ಕೊಲೆ‌ ಬೆದರಿಕೆ; ದೂರು ದಾಖಲು Read More »

ರಾಜಧಾನಿ ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ| 8 ಜನರಿಂದ 16 ವರ್ಷದ ಬಾಲಕಿಯ ಗ್ಯಾಂಗ್ ರೇಪ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬೆಂಗಳೂರಿನಲ್ಲಿ 16 ವರ್ಷದ ಬಾಲಕಿ ಮೇಲೆ 8 ಜನರು ಗ್ಯಾಂಗ್ ರೇಪ್ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ಮೇಲೆ 8 ಜನ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಬಾಲಕಿ ಮೇಲೆ 8 ಜನರು ನಿರಂತರ ಲೌಂಗಿಕ ದೌರ್ಜನ್ಯ ಎಸಗಿದ್ದಾರೆ. ವಿಡಿಯೋ ಮಾಡಿ ಈ ವಿಚಾರವನ್ನು ಯಾರಿಗಾದ್ರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ವಿಷಯ

ರಾಜಧಾನಿ ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ| 8 ಜನರಿಂದ 16 ವರ್ಷದ ಬಾಲಕಿಯ ಗ್ಯಾಂಗ್ ರೇಪ್ Read More »

ಪಸ್ಟ್ ನೈಟ್ ನಲ್ಲೇ ವಿಚ್ಛೇದನಗೊಂಡ ದಾಂಪತ್ಯ| ಆ ಮೊದಲ ರಾತ್ರಿ ಆಗಿದ್ದೇನು?

ಸಮಗ್ರ ನ್ಯೂಸ್: ಮದುವೆ ಎಂಬುದು ಹೊಸ ಜೀವನದ ಮುನ್ನುಡಿ. ಹತ್ತಾರು ಕನಸುಗಳನ್ನು ಹೊತ್ತು ನವಜೀವನಕ್ಕೆ ಅವರಿಬ್ಬರೂ ಅಣಿಯಾಗಿದ್ದರು. ಆದರೆ, ಮದುವೆಯಾದ ಮೊದಲ ರಾತ್ರಿಯೇ ಗಂಡನ ಮುಂದೆ ಕಹಿ ಸತ್ಯವೊಂದನ್ನು ಬಿಚ್ಚಿಟ್ಟಿದ್ದಕ್ಕಾಗಿ ಇಬ್ಬರು ಬೇರ್ಪಟ್ಟಿದ್ದಾರೆ. ಮಧ್ಯಪ್ರದೇಶದ ಗ್ವಾಲಿಯರ್​​ನಲ್ಲಿ ಈ ಪ್ರಕರಣ ನಡೆದಿದ್ದು, 2019ರಲ್ಲಿ ನಡೆದ ಘಟನೆ ಇದೀಗ ಬೆಳಕಿಗೆ ಬಂದಿದೆ. ಬಂಧು-ಮಿತ್ರರು, ಅಪಾರ ಜನರ ಮುಂದೆ ನವಜೋಡಿ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುವ ಮೊದಲ ರಾತ್ರಿ ಇಬ್ಬರು ತಮ್ಮ ಜೀವನದಲ್ಲಿ ನಡೆದ ಒಳ್ಳೆಯ ಮತ್ತು

ಪಸ್ಟ್ ನೈಟ್ ನಲ್ಲೇ ವಿಚ್ಛೇದನಗೊಂಡ ದಾಂಪತ್ಯ| ಆ ಮೊದಲ ರಾತ್ರಿ ಆಗಿದ್ದೇನು? Read More »

ಅಂಬ್ಯುಲೆನ್ಸ್ ನಲ್ಲಿ ಖಾಲಿಯಾದ ಆಕ್ಸಿಜನ್; ಉಸಿರುಚೆಲ್ಲಿದ ಬಾಣಂತಿ

ಸಮಗ್ರ ನ್ಯೂಸ್: ಸವದತ್ತಿ ತಾಲೂಕು ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಧಾರವಾಡ ಜಿಲ್ಲಾಸ್ಪತ್ರೆಗೆ ‌ಕರೆದೊಯ್ಯುವ ವೇಳೆ ಆಕ್ಸಿಜನ್ ಖಾಲಿಯಾಗಿ ಬಾಣಂತಿ ಸಾವನ್ನಪ್ಪಿದ್ದು, ಸಮಗ್ರ ತನಿಖೆ ನಡೆಸಬೇಕೆಂದು ಕುಟುಂಬಸ್ಥರು ಸವದತ್ತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸವದತ್ತಿ ಪಟ್ಟಣದ ನಿವಾಸಿ ವಿದ್ಯಶ್ರೀ ಸುರೇಶ ಬೆಂಚಿಗೇರಿ (25) ಸಾವನ್ನಪ್ಪಿದ ಬಾಣಂತಿ. ವಿದ್ಯಶ್ರೀ ಏಪ್ರಿಲ್ 04 ರಂದು ಸದವತ್ತಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಮಹಿಳೆ ಮತ್ತು ಮಗುವಿಗೆ ಯಾವುದೇ ತೊಂದರೆ ಆಗಬಾರದು ಎಂದು ವೈದ್ಯರು ಸಿಸೇರಿಯನ್ ಮೂಲಕ ಹೆರಿಗೆಯನ್ನೂ ಮಾಡಿಸಿದ್ದರು.

ಅಂಬ್ಯುಲೆನ್ಸ್ ನಲ್ಲಿ ಖಾಲಿಯಾದ ಆಕ್ಸಿಜನ್; ಉಸಿರುಚೆಲ್ಲಿದ ಬಾಣಂತಿ Read More »

ಉಪ್ಪಿನಂಗಡಿ: ನೇತ್ರಾವತಿಗೆ ಹಾರಿ ಗದಗ ಮೂಲದ ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಸೇತುವೆಯಿಂದ ನದಿಗೆ ಧುಮುಕಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಮೂಲತಃ ಗದಗ ಜಿಲ್ಲೆಯ ರೋಣ ಮನೆ ನಿವಾಸಿ ಭರಮಪ್ಪ (31), ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಕೂಲಿ ಕಾರ್ಮಿಕನಾಗಿದ್ದು, ತನ್ನ ಕುಟುಂಬ ಸಮೇತ ತೆಕ್ಕಾರು ಗ್ರಾಮದ ಸರಳೀಕಟ್ಟೆಯ ಮೂಡಡ್ಕ ಎಂಬಲ್ಲಿ ಬಾಡಿಗೆ ಮನೆಯಲ್ಲಿದ್ದುಕೊಂಡು ಸ್ಥಳೀಯ ನಿವಾಸಿಯೋರ್ವರ ತೋಟಕ್ಕೆ ಕೆಲಸಕ್ಕೆ ಹೋಗುತ್ತಿದ್ದ. ವಿಪರೀತ ಮದ್ಯವ್ಯಸನಿಯಾಗಿದ್ದರು. ಕೂಲಿ ಕೆಲಸಕ್ಕೆಂದು ಹೋದವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಪತ್ನಿ

ಉಪ್ಪಿನಂಗಡಿ: ನೇತ್ರಾವತಿಗೆ ಹಾರಿ ಗದಗ ಮೂಲದ ವ್ಯಕ್ತಿ ಆತ್ಮಹತ್ಯೆ Read More »

ಅರಣ್ಯ ಇಲಾಖೆ ಸಿಬ್ಬಂದಿ ನದಿಗೆ ಜಿಗಿದು ಆತ್ಮಹತ್ಯೆ| ಬೈಕ್, ಮೊಬೈಲ್, ಹಗ್ಗ ಕೊಟ್ಟಿತ್ತು ಸುಳಿವು|

ಸಮಗ್ರ ನ್ಯೂಸ್: ಕೃಷ್ಣಾ ನದಿಗೆ ಜಿಗಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಕೃಷ್ಣಾ ನದಿಯಲ್ಲಿ ಘಟನೆ ನಡೆದಿದೆ. ಕೊಲ್ಹಾರ ಸೇತುವೆಯ ಮೇಲಿಂದ ಹಾರಿ ಕೊಲ್ಹಾರ ವಲಯ ಅರಣ್ಯ ಇಲಾಖೆಯ ಅರಣ್ಯ ರಕ್ಷಕ ಈರಪ್ಪ ದುಂಡಪ್ಪ ದಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸುಮಾರು 8 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದ ನಿವಾಸಿ ಈರಪ್ಪ ದುಂಡಪ್ಪ ದಟ್ಟಿ ನಿನ್ನೆ ಮಧ್ಯಾಹ್ನ ಕೃಷ್ಣಾ ನದಿಗೆ

ಅರಣ್ಯ ಇಲಾಖೆ ಸಿಬ್ಬಂದಿ ನದಿಗೆ ಜಿಗಿದು ಆತ್ಮಹತ್ಯೆ| ಬೈಕ್, ಮೊಬೈಲ್, ಹಗ್ಗ ಕೊಟ್ಟಿತ್ತು ಸುಳಿವು| Read More »

ಎಸಿ ಸ್ಪೋಟ; ಮಲಗಿದ್ದಲ್ಲೇ ದಂಪತಿ ಹಾಗೂ ಮಕ್ಕಳು ದುರ್ಮರಣ

ಸಮಗ್ರ ನ್ಯೂಸ್: ಎಸಿ ಸ್ಫೋಟದಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯಲ್ಲಿ ನಡೆದಿದೆ. ವೆಂಕಟ್ ಪ್ರಶಾಂತ್​ (42) ಪತ್ನಿ ಡಿ. ಚಂದ್ರಕಲಾ (38 ) ಹಾಗೂ ಮಕ್ಕಳಾದ ಎಚ್.ಎ. ಅರ್ದ್ವಿಕ್(16) ಮತ್ತು ಪ್ರೇರಣಾ (8) ಮೃತ ದುರ್ದೈವಿಗಳು. ರಾಘವೇಂದ್ರ ಶೆಟ್ಟಿ ಎನ್ನುವವರ ಮನೆಯಲ್ಲಿ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್​ ಮತ್ತು ಎ.ಸಿ ಸ್ಫೋಟದಿಂದ ಮನೆಗೆ ಬೆಂಕಿ ಹತ್ತಿಕೊಂಡು ದಟ್ಟ ಹೊಗೆ

ಎಸಿ ಸ್ಪೋಟ; ಮಲಗಿದ್ದಲ್ಲೇ ದಂಪತಿ ಹಾಗೂ ಮಕ್ಕಳು ದುರ್ಮರಣ Read More »