ಕ್ರೈಂ

ಮತ್ತೆ ಬೆಚ್ಚಿಬಿದ್ದ ಶಿವಮೊಗ್ಗ| ಅನ್ಯಕೋಮಿನ ಯುವಕರಿಂದ ಹಿಂದೂ ಯುವಕನ ಮೇಲೆ ಮಾರಣಾಂತಿಕ ದಾಳಿ|

ಸಮಗ್ರ ನ್ಯೂಸ್: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಮಾಸುವ ಮುನ್ನವೇ ಶಿವಮೊಗ್ಗ ನಗರದಲ್ಲಿ ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಮಧು (21) ಎಂಬಾತನ ಮೇಲೆ ಅನ್ಯಕೋಮಿನ 6 ಯುವಕರ ತಂಡ ಹಲ್ಲೆ ನಡೆಸಿದ್ದಾರೆ. ಹೂವಿನ ವ್ಯಾಪಾರಿಯಾಗಿರುವ ಮಧು, ಮಂಡ್ಲಿ ಬಡಾವಣೆಯಲ್ಲಿ ಹೂವು ವಿತರಣೆಗೆ ಹೋಗಿದ್ದಾನೆ. ಈ ವೇಳೆ ಲಾಂಗು-ಮಚ್ಚು ಝಳಪಿಸುತ್ತ ಓಡಿಸಿಕೊಂಡು ಬಂದ ಅನ್ಯಕೋಮಿನ ಯುವಕರು […]

ಮತ್ತೆ ಬೆಚ್ಚಿಬಿದ್ದ ಶಿವಮೊಗ್ಗ| ಅನ್ಯಕೋಮಿನ ಯುವಕರಿಂದ ಹಿಂದೂ ಯುವಕನ ಮೇಲೆ ಮಾರಣಾಂತಿಕ ದಾಳಿ| Read More »

“ಅಪ್ಪಾ ಪ್ಲೀಸ್ ಕೊಲ್ಬೇಡ” ಅಂದ್ರೂ ಕರಗದ ಕ್ರೂರಮನ| ಹೆತ್ತ ಮಗನನ್ನೇ ಬೆಂಕಿ ಇಟ್ಟು ಕೊಂದ ಅಪ್ಪ| ಜೀವಕ್ಕಿಂತ ವ್ಯವಹಾರವೇ ದೊಡ್ಡದಾಯ್ತು!

ಸಮಗ್ರ ನ್ಯೂಸ್: ಹಾಡಹಗಲೇ ಅಪ್ಪನೊಬ್ಬ ತನ್ನ ಮಗನಿಗೆ ನಡುರಸ್ತೆಯಲ್ಲಿ ಬೆಂಕಿ ಇಟ್ಟು ಕೊಂದ ಘಟನೆ ಅಜಾದ್ ನಗರದಲ್ಲಿ ಸಂಭವಿಸಿದೆ. ಈ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್​ ಆಗಿದೆ. ಅಪ್ಪನಿಂದಲೇ ಕೊಲೆಯಾದ ಮಗನ ಹೆಸರು ಅರ್ಪಿತ್​. ಆರೋಪಿ ಸುರೇಂದ್ರನನ್ನು ಪೊಲೀಸರು ಬಂಧಿಸಿದ್ದಾರೆ. ಸುರೇಂದ್ರ ದೊಡ್ಡ ದೊಡ್ಡ ಬಿಲ್ಡಿಂಗ್ ಪ್ಯಾಬ್ರಿಕೇಷನ್ ಬಿಜಿನೆಸ್ ಮಾಡಿಕೊಂಡಿದ್ದ. ಈ ಜವಾಬ್ದಾರಿಯನ್ನು ಮಗನಿಗೆ ಸುರೇಂದ್ರ ನೀಡಿದ್ದ. ವ್ಯವಹಾರದಲ್ಲಿ ಸಾಕಷ್ಟು ಏರುಪೇರಾಗಿತ್ತು. ಹಣದ ಲೆಕ್ಕದಲ್ಲೂ ವ್ಯತ್ಯಾಸ ಕಂಡುಬಂದಿತ್ತು. ಇದೇ ವಿಚಾರಕ್ಕೆ ಬಿಜಿನೆಸ್ ಮೆಟೀರಿಯಲ್ ಇಟ್ಟಿದ್ದ

“ಅಪ್ಪಾ ಪ್ಲೀಸ್ ಕೊಲ್ಬೇಡ” ಅಂದ್ರೂ ಕರಗದ ಕ್ರೂರಮನ| ಹೆತ್ತ ಮಗನನ್ನೇ ಬೆಂಕಿ ಇಟ್ಟು ಕೊಂದ ಅಪ್ಪ| ಜೀವಕ್ಕಿಂತ ವ್ಯವಹಾರವೇ ದೊಡ್ಡದಾಯ್ತು! Read More »

ಉಡುಪಿ: ಸೈಂಟ್ ಮೇರಿಸ್ ಐಲ್ಯಾಂಡ್ ನಲ್ಲಿ ಪ್ರವಾಸಿ ವಿದ್ಯಾರ್ಥಿಗಳು ಸಮುದ್ರ ಪಾಲು

ಸಮಗ್ರ ನ್ಯೂಸ್: ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ ನಲ್ಲಿ ಪ್ರವಾಸಕ್ಕೆಂದು ಆಗಮಿಸಿದ್ದ ಮೂಲದ ಮೂವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದು, ಇಬ್ಬರ ಮೃತ ದೇಹ ಪತ್ತೆಯಾಗಿದೆ. ಇನ್ನೊಬ್ಬ ವಿದ್ಯಾರ್ಥಿಯ ಮೃತ ದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ. ಕೇರಳ ರಾಜ್ಯದ ಕೊಟ್ಟಾಯಂ ನ ಮಂಗಳಂ ಇಂಜಿನಿಯರಿಂಗ್ ಕಾಲೇಜಿನ ಅಲೆನ್ ರೇಜಿ (22), ಅಮಲ್ ಸೀ ಅನಿಲ್( 22) ಮತ್ತು ಆ್ಯಂಟನಿ ಶೆಣೈ (21) ಮೃತ ವಿದ್ಯಾರ್ಥಿಗಳು. ಕೊಟ್ಟಾಯಂ ನಿಂದ 42 ವಿದ್ಯಾರ್ಥಿಗಳು ಮತ್ತು ಇಬ್ಬರು ಪ್ರಾಧ್ಯಾಪಕರ ಜೊತೆ ಪ್ರವಾಸಕ್ಕೆ ಬಂದಿದ್ದು,

ಉಡುಪಿ: ಸೈಂಟ್ ಮೇರಿಸ್ ಐಲ್ಯಾಂಡ್ ನಲ್ಲಿ ಪ್ರವಾಸಿ ವಿದ್ಯಾರ್ಥಿಗಳು ಸಮುದ್ರ ಪಾಲು Read More »

ಪ್ರೇತಾತ್ಮ ಉಪಟಳವೆಂದು ಠಾಣೆ ಮೆಟ್ಟಿಲೇರಿದ ಭೂಪ!

ಸಮಗ್ರ ನ್ಯೂಸ್: ಹಲವು ದೂರುಗಳನ್ನು ಹಿಡಿದುಕೊಂಡು ಸಾರ್ವಜನಿಕರು ಪೊಲೀಸ್ ಠಾಣೆ ಮೆಟ್ಟಿಲೇರುತ್ತಾರೆ. ವಸ್ತುಗಳ ಕಳ್ಳತನವಾಗಿದೆ ಹುಡುಕಿಕೊಡಿ ಎಂದು, ತಮ್ಮ ಪ್ರಾಣಿಗಳು ಕಳ್ಳತನವಾಗಿದೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರುತ್ತಾರೆ. ಕೆಲವರು ಜೀವಬೆದರಿಕೆ, ತಂಟೆ, ತಕರಾರುಗಳಿಗೆ ಪೊಲೀಸ್ ಠಾಣೆ ಮೆಟ್ಟಿಲೇರುತ್ತಾರೆ. ಆದರೆ, ಇಲ್ಲೊಬ್ಬ ಯುವಕ ವಿಭಿನ್ನ ಕಾರಣಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ಈ ಯುವಕನ ಹೆಸರು ವೀರಯ್ಯ ಹಿರೇಮಠ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕಾಲ್ವೆಕಲ್ಲಾಪುರ ಗ್ರಾಮದ ಯುವಕ. ಪಿಯುಸಿ ಓದಿಕೊಂಡಿರುವ ವೀರಯ್ಯ ಹಿರೇಮಠಗೆ ಯಾರೋ ವಾಮಾಚಾರ ಮಾಡಿಸಿದ್ದಾರಂತೆ. ಹೀಗಾಗಿ

ಪ್ರೇತಾತ್ಮ ಉಪಟಳವೆಂದು ಠಾಣೆ ಮೆಟ್ಟಿಲೇರಿದ ಭೂಪ! Read More »

ಸುಳ್ಯ: ಸಂಪಾಜೆ ಮನೆ ದರೋಡೆ ಪ್ರಕರಣ| ಆರೋಪಿಗಳಿಂದ ನಗ-ನಗದು ವಶಪಡಿಸಿಕೊಂಡ ಪೊಲೀಸರು|

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಚಟ್ಟೆ ಕಲ್ಲು ಎಂಬಲ್ಲಿ ಕಳೆದ ಮಾ.20ರಂದು ನಡೆದ ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅವರಿಂದ 20ಸಾವಿರ ನಗದು, ಚಿನ್ನಾಭರಣ, ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನ ವಶಪಡಿಸಿಕೊಂಡಿದ್ದಾರೆ. ಚಟ್ಟೆಕಲ್ಲಿನ ಅಂಬರೀಶ್ ಎಂಬವರ ಮನೆಗೆ ದುಷ್ಕರ್ಮಿಗಳು ಒಳಪ್ರವೇಶಿಸಿ ಮನೆಯಲ್ಲಿದ್ದ ಸುಮಾರು 1,52,000/- ನಗದು ಮತ್ತು ಸುಮಾರು 83 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ದರೋಡೆ ಮಾಡಿದ ಘಟನೆ ನಡೆದಿತ್ತು. ಈ ಬಗ್ಗೆ ತನಿಖೆ

ಸುಳ್ಯ: ಸಂಪಾಜೆ ಮನೆ ದರೋಡೆ ಪ್ರಕರಣ| ಆರೋಪಿಗಳಿಂದ ನಗ-ನಗದು ವಶಪಡಿಸಿಕೊಂಡ ಪೊಲೀಸರು| Read More »

ಯುವಕನ ಅಪಹರಿಸಿ ಲೈಂಗಿಕ ದೌರ್ಜನ್ಯ| ಉಡುಪಿ ಮೂಲದ‌ ನಟೋರಿಯಸ್ ಗಳಿಗೆ ಗುಂಡೇಟು|

ಸಮಗ್ರ ನ್ಯೂಸ್: ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಅಪಹರಿಸಿ ಹಣ ದರೋಡೆ ಮಾಡಿದಲ್ಲದೆ, ಆತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಉಡುಪಿ ಮೂಲದ ಇಬ್ಬರು ನಟೋರಿಯಸ್ ಸುಲಿಗೆಕೋರರಿಗೆ ಕೊತ್ತನೂರು ಠಾಣೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಉಡುಪಿಯ ಕಾಪು ತಾಲೂಕಿನ ಮೊಹಮ್ಮದ್ ಆಶೀಕ್ ಮತ್ತು ಕುಂದಾಪುರ ತಾಲೂಕಿನ ಇಸಾಕ್ ಎಂಬವರಿಗೆ ಗುಂಡೇಟು ಬಿದ್ದಿದ್ದು, ಇಬ್ಬರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳಿಂದ ಹತ್ತು ಮೊಬೈಲ್‌ಗಳು, ಒಂದು ಕಾರು ವಶಕ್ಕೆಪಡೆಯಲಾಗಿದೆ. ಮಾ.26 ರಂದು ಮುಂಜಾನೆ 5 ಗಂಟೆ ಸುಮಾರಿಗೆ ನಂಬರ್ ಪ್ಲೇಟ್ ಇಲ್ಲದ

ಯುವಕನ ಅಪಹರಿಸಿ ಲೈಂಗಿಕ ದೌರ್ಜನ್ಯ| ಉಡುಪಿ ಮೂಲದ‌ ನಟೋರಿಯಸ್ ಗಳಿಗೆ ಗುಂಡೇಟು| Read More »

ಗುಂಡ್ಯ: ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಪತ್ತೆ ಪ್ರಕರಣ| ಹಲ್ಲೆಗೈದ ಇಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಮುಸ್ಲಿಂ ಯುವಕನೋರ್ವ ಹಿಂದೂ ಯುವತಿಯನ್ನು ಆಟೋರಿಕ್ಷಾದಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಹಲ್ಲೆ ನಡೆಸಿದ್ದಾರೆಂಬ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡ ಘಟನೆ ಮಂಗಳವಾರದಂದು ಗುಂಡ್ಯದಿಂದ‌ ವರದಿಯಾಗಿದೆ. ಪುತ್ತೂರು ಸಂಪ್ಯ ನಿವಾಸಿ ನಝೀರ್(21) ಎಂಬಾತ ಪೂಜಾ ಎಂಬಾಕೆಯನ್ನು ಆಟೋರಿಕ್ಷಾದಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಸಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ಸುರೇಂದ್ರ, ತೀರ್ಥಪ್ರಸಾದ್, ಜಿತೇಶ್ ಹಾಗೂ ಇತರರು ಆಟೋರಿಕ್ಷಾವನ್ನು ತಡೆದು ಹಲ್ಲೆ ನಡೆಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ

ಗುಂಡ್ಯ: ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಪತ್ತೆ ಪ್ರಕರಣ| ಹಲ್ಲೆಗೈದ ಇಬ್ಬರು ಅರೆಸ್ಟ್ Read More »

ಗುಂಡ್ಯ: ಭಿನ್ನಕೋಮಿನ ಜೋಡಿಯ ಪತ್ತೆ ಪ್ರಕರಣ| ಸಂಘಟನೆಯ ವಿರುದ್ಧ ದೂರು ನೀಡಿದ ಯುವಕ

ಸಮಗ್ರ ನ್ಯೂಸ್: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಕಾಡಿನಲ್ಲಿ ಭಿನ್ನಕೋಮಿನ ಜೋಡಿ ಪತ್ತೆ ಪ್ರಕರಣ ಸಂಬಂಧಿಸಿ, ಯುವಕ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಪ್ರಕರಣ ತಿರುವು ಪಡೆದುಕೊಂಡಿದೆ. ನಾನು ಪ್ರೀತಿಸುತ್ತಿದ್ದ ಯುವತಿಯೊಂದಿಗೆ ಆಟೋದಲ್ಲಿ ಹೋಗುತ್ತಿದ್ದಾಗ ಭಜರಂಗದಳದ ಕಾರ್ಯಕರ್ತರು ನಮ್ಮನ್ನು ತಡೆದು ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಿದ್ದು, ಇದೊಂದು ‘ಲವ್ ಜಿಹಾದ್’ ಎಂದು ಹೇಳಲಾಗಿದೆ. ಹಲ್ಲೆ ಮಾಡಿದ ಆರೋಪದಲ್ಲಿ ಸುರೇಂದ್ರ, ತೀರ್ಥಪ್ರಸಾದ್, ಜಿತೇಶ್ ಎಂಬವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ನ ಆಟೋ ರಿಕ್ಷಾದಲ್ಲಿ

ಗುಂಡ್ಯ: ಭಿನ್ನಕೋಮಿನ ಜೋಡಿಯ ಪತ್ತೆ ಪ್ರಕರಣ| ಸಂಘಟನೆಯ ವಿರುದ್ಧ ದೂರು ನೀಡಿದ ಯುವಕ Read More »

ಕಾಸರಗೋಡು: ಪುತ್ರನಿಂದಲೇ ತಂದೆಯ ಕೊಲೆ

ಸಮಗ್ರ ನ್ಯೂಸ್: ತಂದೆಯನ್ನು ಪುತ್ರ ಕೊಲೆಗೈದ ಘಟನೆ ಆದೂರು ಸಮೀಪದ ಪಾಂಡಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಮೃತಪಟ್ಟವರನ್ನು ಬಾಲಕೃಷ್ಣ (56) ಮತ್ತು ಕೊಲೆಗಾರನನ್ನು ನರೇಂದ್ರ ಪ್ರಸಾದ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಪಾನಮತ್ತರಾಗಿ ಪರಸ್ಪರ ಹೊಡೆ ದಾಡಿಕೊಂಡಿದ್ದು, ಈ ಸಂದರ್ಭದಲ್ಲಿ ಪುತ್ರನ ಹೊಡೆತಕ್ಕೆ ತಂದೆ ಬಲಿಯಾಗಿದ್ದಾರೆ. ಕೃತ್ಯಕ್ಕೆ ಸಂಬಂಧ ಪಟ್ಟಂತೆ ಪುತ್ರ ನರೇಂದ್ರ ಪ್ರಸಾದ್ ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಆದೂರು ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ಆರಂಭಿಸಿದ್ದಾರೆ.

ಕಾಸರಗೋಡು: ಪುತ್ರನಿಂದಲೇ ತಂದೆಯ ಕೊಲೆ Read More »

ಗುಂಡ್ಯ: ಪೊದೆಯೊಳಗೆ ಸಿಕ್ಕಿಬಿದ್ದ ಭಿನ್ನಕೋಮಿನ ಜೋಡಿ

ಸಮಗ್ರ ನ್ಯೂಸ್ : ಭಿನ್ನಕೋಮಿನ ಜೋಡಿಯೊಂದು ಗುಂಡ್ಯ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗುಂಡ್ಯ ಕಾಡಿನ ಪೊದೆಯೊಳಗೆ ಅನೈತಿಕ ಚಟುವಟಿಕೆ ನಡೆಸುತ್ತಾ ಸಿಕ್ಕಿಬಿದ್ದಿರುವ ಘಟನೆ ಇಂದು ನಡೆದಿದೆ. ಪೊದೆಯೊಳಗೆ ಚಕ್ಕಂದವಾಡುತ್ತಿದ್ದ ಈ ಯುವ ಜೋಡಿಯನ್ನು ಗಮನಿಸಿದ ಸ್ಥಳೀಯರು ವಿಚಾರಿಸಿ ಪೊಲೀಸರಿಗೆ ಒಪ್ಪಿಸಿರುವ ಬಗ್ಗೆ ತಿಳಿದು ಬಂದಿದೆ. ಈ ಜೋಡಿಯ ಕುರಿತು ಫೋಟೋ ಗಳು ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವೇಣೂರು ಮೂಲದ ಯುವತಿ ಹಾಗೂ ಪುತ್ತೂರಿನಲ್ಲಿ ಆಟೋ ಚಾಲಕನಾಗಿರುವ ಮುಸ್ಲಿಂ ಯುವಕ ಇಂದು ಗುಂಡ್ಯಕ್ಕೆ ಜಾಲಿ ಟ್ರಿಪ್ ತೆರಳಿದ್ದು, ಕಾಡಿನ

ಗುಂಡ್ಯ: ಪೊದೆಯೊಳಗೆ ಸಿಕ್ಕಿಬಿದ್ದ ಭಿನ್ನಕೋಮಿನ ಜೋಡಿ Read More »