ಕ್ರೈಂ

ಮತ್ತೊಂದು ಭೀಕರ ಅಪಘಾತ| ಖಾಸಗಿ ಬಸ್ ಗೆ ಬೈಕ್ ಡಿಕ್ಕಿ| ಒಂದೇ ಕುಟುಂಬದ ನಾಲ್ವರು ದುರ್ಮರಣ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದ ಬಳಿ ನಡೆದಿದೆ. ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿ ಒಂದೇ ಕುಟುಂಬದ ನಾಲ್ವರು ತೆರಳುತ್ತಿದ್ದರು ಎಂಬುದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಮೃತರನ್ನು ಬಿ.ದುರ್ಗಾ ಗ್ರಾಮದ ನಾಗರಾಜ್ (45), ಪತ್ನಿ ಶೈಲಜಾ (38) ಪುತ್ರರಾದ ವೀರೇಶ್ (15) […]

ಮತ್ತೊಂದು ಭೀಕರ ಅಪಘಾತ| ಖಾಸಗಿ ಬಸ್ ಗೆ ಬೈಕ್ ಡಿಕ್ಕಿ| ಒಂದೇ ಕುಟುಂಬದ ನಾಲ್ವರು ದುರ್ಮರಣ Read More »

ಸುಳ್ಯ : ಬೈಕ್ -ಜೀಪ್ ಅಪಘಾತ – ಓರ್ವ ವಿದ್ಯಾರ್ಥಿ ಸಾವು – ಮತ್ತೊಬ್ಬ ಗಂಭೀರ

ಸುಳ್ಯ : ಪೆರಾಜೆಯ ಕುಂಬಳಚೇರಿ ಎಂಬಲ್ಲಿ ಬೈಕ್ ಹಾಗೂ ಜೀಪು ಮಧ್ಯೆ ಅಪಘಾತ ನಡೆದು ಬೈಕ್ ನಲ್ಲಿದ್ದ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಹಾಗೂ ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮೃತ ಯುವಕನ್ನು ಪೆರಾಜೆಯ ಲೋಕನಾಥ ಕುಂದಲ್ಪಾಡಿ ಅವರ ಪುತ್ರ ವಿಶ್ವದೀಪ್ ಎಂದು ಗುರುತಿಸಲಾಗಿದೆ. ಪೆರಾಜೆಯ ಆರ್.ಡಿ. ವೆಂಕಪ್ಪ ರವರ ಪುತ್ರ ದರ್ಶನ್ ಮತ್ತು ಸುಳ್ಯದ ಸೈಂಟ್ ಜೋಸೆಫ್ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿಗಳಾಗಿದ್ದು ಇಂದು ಪರೀಕ್ಷೆ ಮುಗಿಸಿ ಇಬ್ಬರು ಬೈಕಿನಲ್ಲಿ ಮನೆಗೆ ತೆರಳಿದ್ದರು.ಈ ವೇಳೆ

ಸುಳ್ಯ : ಬೈಕ್ -ಜೀಪ್ ಅಪಘಾತ – ಓರ್ವ ವಿದ್ಯಾರ್ಥಿ ಸಾವು – ಮತ್ತೊಬ್ಬ ಗಂಭೀರ Read More »

ಸುಳ್ಯ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ| ಹೇಳದೆ ಕೇಳದೆ ಆಕೆ ಹೋಗಿದ್ದೆಲ್ಲಿಗೆ?

ಸಮಗ್ರ ನ್ಯೂಸ್: ಸುಳ್ಯದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾಗಿರುವ ಬಗ್ಗೆ ಸುಳ್ಯ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾಗಿರುವ ಡಾ. ಲೀಲಾಧರ್ ರವರು ದೂರು ನೀಡಿದ್ದು, ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜಿನ ದ್ವಿತೀಯ ಬಿಎಎಂಎಸ್‌ ಪದವಿ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಉತ್ತರ ಪ್ರದೇಶ ಮೂಲದ ಅಜ್ಮಘರ್ ನ ಕು|| ಮದೀಹಾ ಇಮ್ರಾನ್ (20 ವರ್ಷ) ಮಾ.20ರಂದು ರಾತ್ರಿ 8.00 ಗಂಟೆಗೆ ಹಾಜರಾತಿ ಪರಿಶೀಲನೆ ಸಮಯದಲ್ಲಿ ಗೈರು ಹಾಜರಾಗಿದ್ದು,

ಸುಳ್ಯ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ| ಹೇಳದೆ ಕೇಳದೆ ಆಕೆ ಹೋಗಿದ್ದೆಲ್ಲಿಗೆ? Read More »

“ಶರತ್ ಮಡಿವಾಳನಂತೆ‌ ನಿನ್ನ ಹೆಣವೂ ಬೀಳುತ್ತೆ”| ಪಂಚಾಯತ್ ಸದಸ್ಯನಿಗೆ ಕೊಲೆ ಬೆದರಿಕೆ| ದೂರು ನೀಡಿದರೂ ಎಫ್ಐಆರ್ ದಾಖಲಿಸದ ಪೊಲೀಸರು

ಸಮಗ್ರ ನ್ಯೂಸ್: ಅನಾಮಿಕ ಫೋನ್ ಕರೆಯೊಂದು ಗ್ರಾಮ ಪಂಚಾಯತ್ ಸದಸ್ಯರೊಬ್ಬರಿಗೆ ಜೀವ ಬೆದರಿಕೆ ಹಾಕಿದ್ದು ದೂರು ದಾಖಲಾಗಿರುವ ಘಟನೆ ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ನಡೆದಿದೆ. ಗ್ರಾ.ಪಂ ಸದಸ್ಯ ಚಂದ್ರಹಾಸ ಈಶ್ವರಮಂಗಲ ಎಂಬವರಿಗೆ ಕಳೆದ ವಾರ ಹೊಸ ನಂಬರ್ ಗಳಿಂದ ಬೆದರಿಕೆ ಕರೆ ಬಂದಿದ್ದು, ಕೂಡಲೆ ಚಂದ್ರಹಾಸ್ ಅವರು ಪುತ್ತೂರು ಗ್ರಾಮಾಂತರ ಠಾಣೆಗೆ ತೆರಳಿ ಈ ಬಗ್ಗೆ ಕೇಸ್ ದಾಖಲಿಸಿದ್ದರು. ಬೆದರಿಕೆ ಕರೆಯೊಡ್ಡಿದವರ ಮೇಲೆ ಕೇಸ್ ದಾಖಲಿಸುವುದಕ್ಕೆ ನ್ಯಾಯಾಲಯದಿಂದ ಅನುಮತಿ ಕೋರಿ ಅರ್ಜಿ ತರುವಂತೆ ಠಾಣೆಯಲ್ಲಿ

“ಶರತ್ ಮಡಿವಾಳನಂತೆ‌ ನಿನ್ನ ಹೆಣವೂ ಬೀಳುತ್ತೆ”| ಪಂಚಾಯತ್ ಸದಸ್ಯನಿಗೆ ಕೊಲೆ ಬೆದರಿಕೆ| ದೂರು ನೀಡಿದರೂ ಎಫ್ಐಆರ್ ದಾಖಲಿಸದ ಪೊಲೀಸರು Read More »

ರಾಜ್ಯ ಸಾರಿಗೆ ಬಸ್ ಮತ್ತು‌ಕಾರು ನಡುವೆ ಡಿಕ್ಕಿ| ನಾಲ್ವರು ವಿದ್ಯಾರ್ಥಿಗಳು ದುರ್ಮರಣ|

ಸಮಗ್ರ ನ್ಯೂಸ್: ಸರ್ಕಾರಿ ಬಸ್ ಹಾಗೂ ಕಾರು‌ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ದುರ್ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿಯಲ್ಲಿ ನಡೆದಿದೆ. ಅಕ್ಮಲ್(18) ಜಿಲಾನಿ(19) ತೌಹೀದ್(18) ಕೈಫ್ (18) ಎಂಬವರು ಮೃತ ದುರ್ದೈವಿಗಳು. ಓರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ.ಮೃತಪಟ್ಟವರನ್ನು ವಿದ್ಯಾವಿಕಾಸ್‌ ಶಾಲೆಯ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಐದು ಮಂದಿ ಬೇಲೂರಿನಿಂದ ಹಾಸನಕ್ಕೆ ಪ್ರಯಾಣಿಸುತ್ತಿದ್ದು, ನಿಯಂತ್ರಣ ತಪ್ಪಿ ಇಂದು ಮಧ್ಯಾಹ್ನ ಸಂಕೇನಹಳ್ಳಿ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ

ರಾಜ್ಯ ಸಾರಿಗೆ ಬಸ್ ಮತ್ತು‌ಕಾರು ನಡುವೆ ಡಿಕ್ಕಿ| ನಾಲ್ವರು ವಿದ್ಯಾರ್ಥಿಗಳು ದುರ್ಮರಣ| Read More »

ಕಾಸರಗೋಡು: ಸಹೋದರರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ

ಸಮಗ್ರ ನ್ಯೂಸ್: ಸಹೋದರರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಮಾ.21ರ ಸೋಮವಾರ ರಾತ್ರಿ ಕಾಸರಗೋಡು ಜಿಲ್ಲೆಯ ಪೆರ್ಲ ಸಮೀಪದ ಶೇಣಿ ಉಪ್ಪಳಿಗೆಯಲ್ಲಿ ನಡೆದಿದೆ. ಉಪ್ಪಳಿಗೆಯ ಥೋಮಸ್ ಡಿಸೋಜ ( 45) ಕೊಲೆಗೀಡಾದವರು. ಈತನ ಸಹೋದರ ರಾಜೇಶ್ ( 37) ಕೃತ್ಯ ನಡೆಸಿದ್ದಾನೆ. ರಾತ್ರಿ ಹತ್ತು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಇಬ್ಬರ ನಡುವಿನ ಜಗಳವನ್ನು ತಡೆಯಲು ಬಂದ ಥೋಮಸ್ ನ ಸಂಬಂಧಿಕ ವಿಲ್ಫ್ರೆಡ್ ಗೂ ಗಾಯಗಳಾಗಿವೆ. ಜಗಳ ವಿಕೋಪಕ್ಕೆ ತಿರುಗಿ ರಾಜೇಶ್ ನು ಥೋಮಸ್ ನನ್ನು

ಕಾಸರಗೋಡು: ಸಹೋದರರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ Read More »

ದಕ್ಷಿಣ ಚೀನಾ: 133 ಜನರಿದ್ದ ಪ್ರಯಾಣಿಕ ವಿಮಾನ ಪತನ| ಎಲ್ಲರೂ ಸಾವನ್ನಪ್ಪಿರುವ ಶಂಕೆ

ಸಮಗ್ರ ನ್ಯೂಸ್: ದಕ್ಷಿಣ ಚೀನಾದ ಗುವಾಂಗ್ಕ್ಸಿ ಪ್ರದೇಶದಲ್ಲಿ 133 ಜನರನ್ನು ಹೊತ್ತು ಸಾಗುತ್ತಿದ್ದಂತ 737 ವಿಮಾನವೊಂದು ಪತನಗೊಂಡಿದೆ. ಈ ಮೂಲಕ 133 ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ದಕ್ಷಿಣ ಚೀನಾದ ಕುನ್ಮಿಂಗ್ನಿಂದ ಗುವಾಂಗ್ಝೌಗೆ 133 ಪ್ರಯಾಣಿಕರನ್ನು ಹೊತ್ತ ಚೀನಾ ಈಸ್ಟರ್ನ್ ಏರ್ಲೈನ್ಸ್ ವಿಮಾನವು ಗುವಾಂಗ್ಕ್ಸಿ ಪ್ರದೇಶದಲ್ಲಿ ಪತನಗೊಂಡಿರುವುದಾಗಿ ವರದಿಗಳು ತಿಳಿಸಿವೆ. ಅಪಘಾತಕ್ಕೀಡಾದ ಜೆಟ್ ಬೋಯಿಂಗ್ 737 ವಿಮಾನವಾಗಿದ್ದು, ಸಾವುನೋವುಗಳ ಸಂಖ್ಯೆ ತಕ್ಷಣಕ್ಕೆ ತಿಳಿದುಬಂದಿಲ್ಲ ಎಂದು ರಾಯಿಟರ್ಸ್ ವರದಿ ಮಾಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ

ದಕ್ಷಿಣ ಚೀನಾ: 133 ಜನರಿದ್ದ ಪ್ರಯಾಣಿಕ ವಿಮಾನ ಪತನ| ಎಲ್ಲರೂ ಸಾವನ್ನಪ್ಪಿರುವ ಶಂಕೆ Read More »

ಕಾಪು: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ| ಇಬ್ಬರು ಸಜೀವ ದಹನ

ಸಮಗ್ರ ನ್ಯೂಸ್: ಸಮೀಪದ ಫಕೀರ್ನಕಟ್ಟೆಯಲ್ಲಿದ್ದ ಗುಜರಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡ ಘಟನೆ ಇಂದು ನಡೆದಿದೆ. ರಜಾಕ್ ಮಲ್ಲಾರ್ ಹಾಗೂ ಅಂಗಡಿಯ ಪಾಲುದಾರರಾದ ಚಂದ್ರನಗರದ ರಜಬ್ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇನ್ನೋರ್ವ ಪಾಲುದಾರ ಹಸನಬ್ಬ ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಕಾಪು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ

ಕಾಪು: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ| ಇಬ್ಬರು ಸಜೀವ ದಹನ Read More »

ಸುಳ್ಯ: ಸಂಪಾಜೆಯಲ್ಲಿ ಮಚ್ಚು ತೋರಿಸಿ ಮನೆ ದರೋಡೆ| ಭಾರೀ ಪ್ರಮಾಣದ ನಗ-ನಗದು ಕಳವು|

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತೀ ದೊಡ್ಡ ದರೋಡೆ ಪ್ರಕರಣವೊಂದು ಸುಳ್ಯ ತಾಲೂಕಿನ ಸಂಪಾಜೆಯಲ್ಲಿ ನಿನ್ನೆ ರಾತ್ರಿ 8.30ಕ್ಕೆ ನಡೆದಿದೆ. ಮಾರಕಾಸ್ತ್ರ ಸಜ್ಜಿತ ದರೋಡೆಕೋರರ ತಂಡ ಸಂಪಾಜೆಯ ಚಟ್ಟೆಕಲ್ಲಿನ ಅಂಬರೀಶ್ ಭಟ್ ಅವರ ಅಂಬಾಶ್ರಮ ಮನೆಗೆ ನುಗ್ಗಿ ಮನೆಮಂದಿಯನ್ನು ಮಚ್ಚು ಹಿಡಿದು ಬೆದರಿಸಿ 100 ಗ್ರಾಂ. ಚಿನ್ನ ಹಾಗೂ 1.50 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸಂಪಾಜೆಯಲ್ಲಿ ದೇವರ ಪೂಜಾ ಕಾರ್ಯ, ಜ್ಯೋತಿಷ್ಯ ಶಾಸ್ತ್ರದಲ್ಲಿ ಅಂಬರೀಶ್ ಭಟ್ ಅವರ ಕುಟುಂಬ

ಸುಳ್ಯ: ಸಂಪಾಜೆಯಲ್ಲಿ ಮಚ್ಚು ತೋರಿಸಿ ಮನೆ ದರೋಡೆ| ಭಾರೀ ಪ್ರಮಾಣದ ನಗ-ನಗದು ಕಳವು| Read More »

ಅತಿವೇಗದ ಚಾಲನೆ| ಮರಕ್ಕೆ ಡಿಕ್ಕಿ ಹೊಡೆದು ಕಾರು ಬೆಂಕಿಗಾಹುತಿ| ಮೂವರು ಸ್ಪಾಟ್ ಓಟ್

ಸಮಗ್ರ ನ್ಯೂಸ್: ಅತಿವೇಗದಿಂದ ಚಲಿಸುತ್ತಿದ್ದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು‌ ಬೆಂಕಿಗಾಹುತಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದ ಹೊರವಲಯದಲ್ಲಿರುವ ಬಸ್ ಡಿಪೋ ಸಮೀಪದಲ್ಲಿ ಶನಿವಾರ ಸಂಭವಿಸಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗದಗ ನಗರದ ದರ್ಶನ್ ರಾಜ್ ಪುರೋಹಿತ್ (22), ಶೌಖತ್ ಅಲಿ ಖಾನ್ (23), ಮೈಪೂಸ್ ಆಲಂ (22) ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಮುಲ್ಲಾ ಅವರಿಗೆ ರೋಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅತಿವೇಗದ ಚಾಲನೆ| ಮರಕ್ಕೆ ಡಿಕ್ಕಿ ಹೊಡೆದು ಕಾರು ಬೆಂಕಿಗಾಹುತಿ| ಮೂವರು ಸ್ಪಾಟ್ ಓಟ್ Read More »