ಕ್ರೈಂ

‘ದಿ ಕಾಶ್ಮೀರಿ ಫೈಲ್ಸ್’ ಸಿನಿಮಾ ಲಿಂಕ್ ಮೊಬೈಲ್ ಗೆ ಬಂದರೆ ಎಚ್ಚರ| ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಗೆ ಬೀಳುತ್ತೆ ಕನ್ನ

ಸಮಗ್ರ ನ್ಯೂಸ್: ಭಾರೀ ಸುದ್ದಿಯಲ್ಲಿರುವ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಉಚಿತವಾಗಿ ತೋರಿಸುವ ನೆಪದಲ್ಲಿ ಮೊಬೈಲ್​ಗೆ ಲಿಂಕ್​ ಕಳುಹಿಸಿ ವಂಚನೆ ಮಾಡಲಾಗುತ್ತಿದ್ದು, ಈ ಬಗ್ಗೆ ಸೈಬರ್​ ಭದ್ರತ ತಜ್ಞರು ಎಚ್ಚರಿಕೆ ನೀಡಿದ್ದಾರೆ. ವಂಚಕರು ಮೊಬೈಲ್​ಗೆ ಲಿಂಕ್​ ಕಳುಹಿಸಿ ಅದರಲ್ಲಿ ದಿ ಕಾಶ್ಮೀರ್​ ಫೈಲ್ಸ್​ ಸಿನಿಮಾವನ್ನ ಉಚಿತವಾಗಿ ವೀಕ್ಷಿಸಬಹುದು ಎಂಬ ಮೆಸೆಜ್​ ಇರುತ್ತದೆ. ಈ ಲಿಂಕ್​ ಅನ್ನು ಕ್ಲಿಕ್​ ಮಾಡಿದಾಗ ಮೊಬೈಲ್​ ಫೋನ್​ಗೆ ವೈರಸ್​​ ಡೌನ್​ಲೋಡ್​ ಆಗುತ್ತದೆ. ಮಾಲ್​ವೇರ್ ಎಂಬ ವೈರಸ್​​ ಮೂಲಕ ಮೊಬೈಲ್​ ಸಂಖ್ಯೆಗೆ ಲಿಂಕ್​ ಆಗಿರುವ […]

‘ದಿ ಕಾಶ್ಮೀರಿ ಫೈಲ್ಸ್’ ಸಿನಿಮಾ ಲಿಂಕ್ ಮೊಬೈಲ್ ಗೆ ಬಂದರೆ ಎಚ್ಚರ| ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಗೆ ಬೀಳುತ್ತೆ ಕನ್ನ Read More »

ಪಾವಗಡ ಬಳಿ ಖಾಸಗಿ‌ ಬಸ್ ಪಲ್ಟಿ| 8ಕ್ಕೂ ಅಧಿಕ ಮಂದಿ ಸಾವು| ಹಲವರು ಜಖಂ

ಸಮಗ್ರ ನ್ಯೂಸ್: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್​ ಪಲ್ಟಿಯಾದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಶನಿವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಪಾವಗಡ ಪಟ್ಟಣದಿಂದ ವೈ.ಎನ್. ಹೊಸಕೋಟೆ ಗ್ರಾಮಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದೆ. ಗಾಯಾಳುಗಳನ್ನು ತುಮಕೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ

ಪಾವಗಡ ಬಳಿ ಖಾಸಗಿ‌ ಬಸ್ ಪಲ್ಟಿ| 8ಕ್ಕೂ ಅಧಿಕ ಮಂದಿ ಸಾವು| ಹಲವರು ಜಖಂ Read More »

ಸಾವಿನ ನೋವಲ್ಲೂ ಸಾರ್ಥಕತೆ ಮೆರೆದ ನವೀನ್ ಕುಟುಂಬ| ಪಾರ್ಥಿವ ಶರೀರ ಎಸ್.ಎಸ್ ಆಸ್ಪತ್ರೆಗೆ ಹಸ್ತಾಂತರಿಸಲು ನಿರ್ಧಾರ|

ಸಮಗ್ರ ನ್ಯೂಸ್: ಉಕ್ರೇನ್ ನಲ್ಲಿ ಮೃತವಾಗಿರುವ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹ ಸೋಮವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿದೆ. ಬೆಂಗಳೂರಿನಿಂದ ನೇರವಾಗಿ ಹುಟ್ಟೂರು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ. ನವೀನ್ ಮೃತದೇಹಕ್ಕೆ ಅಂತಿಮ ವಿಧಿವಿಧಾನಗಳನ್ನು ಸಲ್ಲಿಸಿದ ಬಳಿಕ, ಶವವನ್ನು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ದಾನ ನೀಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ನವೀನ್ ತಂದೆ ಶೇಖರಪ್ಪ ಗ್ಯಾನಗೌಡರ್, ಮಗನ ಮೃತದೇಹ ಸೋಮವಾರ ಬರಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಾವಿನ ನೋವಲ್ಲೂ ಸಾರ್ಥಕತೆ ಮೆರೆದ ನವೀನ್ ಕುಟುಂಬ| ಪಾರ್ಥಿವ ಶರೀರ ಎಸ್.ಎಸ್ ಆಸ್ಪತ್ರೆಗೆ ಹಸ್ತಾಂತರಿಸಲು ನಿರ್ಧಾರ| Read More »

ಮಹಿಳೆಯ ಖಾಸಗಿ‌ ಅಂಗದೊಳಗಿತ್ತು ಗಾಜಿನ ಚೂರು| ಶಸ್ತ್ರಚಿಕಿತ್ಸೆ ನಡೆಸಿದ ‌ವೈದ್ಯರಿಗೆ ಶಾಕ್

ಸಮಗ್ರ ಡಿಜಿಟಲ್ ಡೆಸ್ಕ್: ಶಸ್ತ್ರ ಚಿಕಿತ್ಸೆ ‌ನಡೆಸಿದ ವೈದ್ಯರನ್ನೂ ಬೆಚ್ಚಿ ಬೀಳಿಸಿದಂತಹ ಘಟನೆ ಇದು. ಟ್ಯುನೀಶಿಯಾದ 45 ವರ್ಷದ ಮಹಿಳೆಯೊಬ್ಬಳ ಖಾಸಗಿ ಅಂಗದಲ್ಲಿ 4 ವರ್ಷಗಳಿಂದ ಗಾಜಿನ ಚೂರೊಂದು ಸಿಕ್ಕಿಹಾಕಿಕೊಂಡಿತ್ತು. ಅದನ್ನು ಹೊರತೆಗೆದ ವೈದ್ಯರೇ ಶಾಕ್‌ ಆಗಿದ್ದಾರೆ. ಈ ಮಹಿಳೆಗೆ ಯಾವಾಗಲೂ ಖಾಸಗಿ ಅಂಗದಲ್ಲಿ ತೀವ್ರ ನೋವು ಬರುತ್ತಿತ್ತು. ಪದೇ ಪದೇ ಮೂತ್ರ ವಿಸರ್ಜನೆಗೆ ಹೋಗಬೇಕಾಗುತ್ತಿತ್ತು. ಕಳೆದ 4 ವರ್ಷಗಳಿಂದ ನೋವು ಉಣ್ಣುತ್ತಿದ್ದ ಮಹಿಳೆ ಕೊನೆಗೂ ತಪಾಸಣೆಗಾಗಿ ವೈದ್ಯರ ಬಳಿ ಹೋಗಿದ್ದಾಳೆ. ಮಹಿಳೆಯ ಖಾಸಗಿ ಅಂಗದಲ್ಲಿ 8

ಮಹಿಳೆಯ ಖಾಸಗಿ‌ ಅಂಗದೊಳಗಿತ್ತು ಗಾಜಿನ ಚೂರು| ಶಸ್ತ್ರಚಿಕಿತ್ಸೆ ನಡೆಸಿದ ‌ವೈದ್ಯರಿಗೆ ಶಾಕ್ Read More »

ಚಲಿಸುತ್ತಿದ್ದ ಕಾರಲ್ಲೇ ಮಹಿಳೆಯ ಅತ್ಯಾಚಾರ!

ಸಮಗ್ರ ನ್ಯೂಸ್: ಹೊಳೆ-ಮೊಹಲ್ಲಾದ ನಿಮಿತ್ತ ಆನಂದಪುರ ಸಾಹಿಬ್‌ ಗೆ ಬಂದ ಮಹಿಳೆ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಮಾಹಿತಿ ನೀಡಿದ ಆನಂದ್‌ಪುರ್ ಸಾಹಿಬ್ ಇನ್‌ಸ್ಪೆಕ್ಟರ್ ಗುರುಪ್ರೀತ್ ಸಿಂಗ್, ಮಾರ್ಚ್ 16 ರಂದು ನವನ್‌ ಶಹರ್ ಬಳಿಯ ಖಟ್ಕರ್‌ ಕಲನ್‌ ನಲ್ಲಿ ಪಂಜಾಬ್‌ನ ನೂತನ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಂಬಂಧಿಸಿದಂತೆ ಟ್ರಾಫಿಕ್ ನಿಯಂತ್ರಿಸಲು ಬ್ಯಾರಿಕೇಡ್ ಹಾಕಲಾಗಿತ್ತು. ಆನಂದಪುರ ಸಾಹಿಬ್ ಕಡೆಯಿಂದ ವೇಗವಾಗಿ ಬರುತ್ತಿದ್ದ ವಾಹನದ ಕಡೆಯಿಂದ

ಚಲಿಸುತ್ತಿದ್ದ ಕಾರಲ್ಲೇ ಮಹಿಳೆಯ ಅತ್ಯಾಚಾರ! Read More »

ಬೆಳ್ತಂಗಡಿ: ಭೀಕರ ಅಪಘಾತ| ಸಹೋದರರು ಸ್ಥಳದಲ್ಲೇ ದುರ್ಮರಣ

ಸಮಗ್ರ ನ್ಯೂಸ್: KSRTC ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸಹೋದರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕು ವೇಣೂರು ಸಮೀಪದ ನಂದಿಬೆಟ್ಟದಲ್ಲಿನಡೆದಿದೆ. ಸಿರಾಜ್,ಸಾದಿಕ್ ಮೃತಪಟ್ಟ ಸಹೋದರರು ಎಂದು ಗುರುತಿಸಲಾಗಿದೆ. ಇವರು ಬಂಡಾಡ್ ರಝಾಕ್ ಮಾಸ್ಟರ್ ಅವರ ಮಕ್ಕಳು ಎಂದು ತಿಳಿದು ಬಂದಿದೆ. ಬೆಳ್ತಂಗಡಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ KSRTC ಬಸ್ ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಯುವಕರಿಬ್ಬರು ಮೃತಪಟ್ಟಿದ್ದಾರೆ.

ಬೆಳ್ತಂಗಡಿ: ಭೀಕರ ಅಪಘಾತ| ಸಹೋದರರು ಸ್ಥಳದಲ್ಲೇ ದುರ್ಮರಣ Read More »

ಬಾಂಗ್ಲಾದೇಶ: ರಾಧಾಕಾಂತ ದೇವಾಲಯ ನೆಲಸಮ| 200 ಮಂದಿಯಿಂದ ಏಕಕಾಲಕ್ಕೆ ದಾಳಿ ನಡೆಸಿ ಲೂಟಿ

ಸಮಗ್ರ ನ್ಯೂಸ್: ಢಾಕಾದ ವಾರಿಯ 222 ಲಾಲ್ ಮೋಹನ್ ಸಹಾ ಬೀದಿಯಲ್ಲಿರುವ ಇಸ್ಕಾನ್ ರಾಧಾಕಾಂತ ದೇವಾಲಯದ ಮೇಲೆ 200ಕ್ಕೂ ಹೆಚ್ಚು ಜನರು ಗುರುವಾರ ದಾಳಿ ನಡೆಸಿ, ದೇವಾಲಯವನ್ನು ಧ್ವಂಸಗೊಳಿಸಿದ್ದಾರೆ. ಅಲ್ಲದೇ ಲೂಟಿ ಮಾಡಿರೋದಾಗಿ ತಿಳಿದು ಬಂದಿದೆ. ವರದಿಗಳ ಪ್ರಕಾರ, ಸುಮಂತ್ರ ಚಂದ್ರ ಶ್ರವಣ್, ನಿಹಾರ್ ಹಲ್ದಾರ್, ರಾಜೀವ್ ಭದ್ರಾ ಸೇರಿದಂತೆ ಅನೇಕ ಜನರು ದಾಳಿಯಲ್ಲಿ ಗಾಯಗೊಂಡಿದ್ದಾರೆ. ಗುಂಪಿನ ನೇತೃತ್ವವನ್ನು ಹಾಜಿ ಶಫಿವುಲ್ಲಾ ವಹಿಸಿದ್ದರು ಎಂದು ತಿಳಿದುಬಂದಿದೆ. ಕಳೆದ ವರ್ಷವೂ ಇದೇ ದೇವಾಲಯದ ಮೇಲೆ ದಾಳಿ ನಡೆಸಲಾಗಿತ್ತು. ಆಗ

ಬಾಂಗ್ಲಾದೇಶ: ರಾಧಾಕಾಂತ ದೇವಾಲಯ ನೆಲಸಮ| 200 ಮಂದಿಯಿಂದ ಏಕಕಾಲಕ್ಕೆ ದಾಳಿ ನಡೆಸಿ ಲೂಟಿ Read More »

ಕಡಬ: ಸೀಬೆ ಮರದಿಂದ ಬಿದ್ದು ಬಾಲಕ ಸಾವು

ಸಮಗ್ರ ನ್ಯೂಸ್: ಶಾಲೆ ಮುಗಿಸಿ ಮನೆಗೆ ಬಂದ ಬಾಲಕನೊಬ್ಬ ಸೀಬೆ ಮರ ಹತ್ತಲು ಹೋಗಿ ಉರುಳಿ ಬಿದ್ದು ಮೃತಪಟ್ಟ ಘಟನೆ ಕಡಬ ತಾಲೂಕಿನ ದೋಳ್ಪಾಡಿ ಬಳಿ ಮಾ.17ರ ಸಂಜೆ ನಡೆದಿದೆ. ಎಡಮಂಗಲ ಸಮೀಪದ ದೋಳ್ಪಾಡಿ ಮರಕ್ಕಡ ಮನೆಯ ದಿವಾಕರ ಗೌಡರವರ ಪುತ್ರ ಉಲ್ಲಾಸ್ ಡಿ.ಎಂ (8 ವ.) ಮೃತ ಬಾಲಕ. ದೋಳ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿ ವಿದ್ಯಾರ್ಥಿಯಾಗಿರುವ ಉಲ್ಲಾಸ್, ಎಂದಿನಂತೆ ಶಾಲೆಗೆ ಹೋಗಿ ಸಂಜೆ ಮನೆಗೆ ಹಿಂತಿರುಗಿದ್ದಾನೆ. ಮನೆಗೆ ಬಂದ ಬಳಿಕ ಮನೆ

ಕಡಬ: ಸೀಬೆ ಮರದಿಂದ ಬಿದ್ದು ಬಾಲಕ ಸಾವು Read More »

ಸುಳ್ಯ: ಸಂಪಾಜೆ ಬಳಿ ಹೊಳೆಗೆ ಉರುಳಿದ ಸರ್ಕಾರಿ ಬಸ್ – ನಾಲ್ವರು ಗಂಭೀರ; ಹಲವರು ಜಖಂ

ಸಮಗ್ರ ನ್ಯೂಸ್: ಮಾಣಿ – ಮೈಸೂರು ರಾಷ್ಟೀಯ ಹೆದ್ದಾರಿಯ ಸಂಪಾಜೆ ಗಡಿಕಲ್ಲು ಬಳಿ ಸರಕಾರಿ ಬಸ್ಸೊಂದು ರಸ್ತೆ ಬದಿಯ ಹೊಳೆಗೆ ಉರುಳಿದ ಪರಿಣಾಮ ಬಸ್ಸಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡು 30ಕ್ಕೂ ಹೆಚ್ಚು ಮಂದಿ ಜಖಂಗೊಂಡಿರುವ ಘಟನೆ ನಡೆದಿದೆ. ಧರ್ಮಸ್ಥಳದಿಂದ – ಗುಂಡ್ಲುಪೇಟೆಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ರಸ್ತೆಯಿಂದ ಹೊಳೆಗೆ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ತಂದು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಬಸ್ ನ ಟಯರ್ ಸ್ಪೋಟಗೊಂಡಿದ್ದೇ ಘಟನೆಗೆ ಕಾರಣ

ಸುಳ್ಯ: ಸಂಪಾಜೆ ಬಳಿ ಹೊಳೆಗೆ ಉರುಳಿದ ಸರ್ಕಾರಿ ಬಸ್ – ನಾಲ್ವರು ಗಂಭೀರ; ಹಲವರು ಜಖಂ Read More »

ಮೂವರ ಸಾವಿಗೆ ಕಾರಣವಾಯ್ತು ಕಾಡುಹಂದಿ..!

ಸಮಗ್ರ ನ್ಯೂಸ್ ಡೆಸ್ಕ್: ಜಿಲ್ಲೆಯ ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ದುರ್ಮರಣಕ್ಕೀಡಾಗಿದ್ದಾರೆ. ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತಕ್ಕೀಡಾದ ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿ ಒಟ್ಟು 6 ಮಂದಿ ಇದ್ದರು. ಇವರು ಬೆಂಗಳೂರಿನಿಂದ ದಾವಣಗೆರೆ, ದುರ್ಗದೇವಿ ಜಾತ್ರೆಗಾಗಿ ತೆರಳುತ್ತಿದ್ದರು. ಈ ವೇಳೆ ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾಡುಹಂದಿಗೆ ಕಾರು ಡಿಕ್ಕಿ ಆಗಿದೆ. ಬಳಿಕ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ರವಿಚಂದ್ರ, ವಿಜಯ್ ಕುಮಾರ್ ಇಬ್ಬರ ಗುರುತು ಪತ್ತೆ

ಮೂವರ ಸಾವಿಗೆ ಕಾರಣವಾಯ್ತು ಕಾಡುಹಂದಿ..! Read More »