ಕ್ರೈಂ

ಪ್ಯಾಲೇಸ್ತೀನ್ ನ ಭಾರತೀಯ ಪ್ರತಿನಿಧಿ ಮುಕುಲ್ ರಾಯ್ ಕಚೇರಿಯಲ್ಲಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ರಮಲ್ಲಾದಲ್ಲಿರುವ ಭಾರತದ ಪ್ರತಿನಿಧಿ ಮುಕುಲ್ ಆರ್ಯ ಅವರು ಪ್ಯಾಲೆಸ್ತೀನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ಭಾನುವಾರ ವರದಿ ಮಾಡಿವೆ. ಮುಕುಲ್ ಆರ್ಯ ಅವರ ನಿಧನಕ್ಕೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ‘ರಾಮಲ್ಲಾದಲ್ಲಿ ಭಾರತದ ಪ್ರತಿನಿಧಿ ಶ್ರೀ ಮುಕುಲ್ ಆರ್ಯ ಅವರ ನಿಧನದ ಬಗ್ಗೆ ತಿಳಿದು ತೀವ್ರ ಆಘಾತವಾಯಿತು. ಅವರು ಪ್ರತಿಭಾವಂತ ಅಧಿಕಾರಿಯಾಗಿದ್ದರು. ಓಂ ಶಾಂತಿ’ ಎಂದು ಜೈಶಂಕರ್ ಟ್ವೀಟ್ ಮಾಡಿದ್ದಾರೆ. ಭಾರತೀಯ ರಾಯಭಾರಿಯು ರಮಲ್ಲಾದಲ್ಲಿನ ಅವರ […]

ಪ್ಯಾಲೇಸ್ತೀನ್ ನ ಭಾರತೀಯ ಪ್ರತಿನಿಧಿ ಮುಕುಲ್ ರಾಯ್ ಕಚೇರಿಯಲ್ಲಿ ಶವವಾಗಿ ಪತ್ತೆ Read More »

ಪ್ರಾಂಶುಪಾಲೆಯನ್ನು ಹತ್ಯೆಗೈದು ಕಾರಿನಲ್ಲೇ ಶವ ಸುಟ್ಟ ಅಕೌಂಟೆಂಟ್

ಸಮಗ್ರ ನ್ಯೂಸ್: ನರ್ಸಿಂಗ್ ಕಾಲೇಜೊಂದರ ಪ್ರಾಂಶುಪಾಲೆಯನ್ನು ಹತ್ಯೆಗೈದು ಕಾರಿನಲ್ಲಿ ಆಕೆಯ ಶವವನ್ನು ಸುಟ್ಟುಹಾಕಿದ ಆರೋಪದ ಮೇಲೆ ನೌಕರನನ್ನು ಬಂಧಿಸಲಾಗಿರುವ ಘಟನೆ ದಮನ್ ನ ದಾದ್ರಾ ನಗರದಲ್ಲಿ ನಡೆದಿದೆ 45ರ ಹರೆಯದ ಕನಿಮೊಳಿ ಆರ್ಮುಗಂ ಎಂಬಾಕೆ ನಾಪತ್ತೆಯಾಗಿರುವ ಕುರಿತು ಮಾರ್ಚ್ 1ರಂದು ಸಿಲ್ವಾಸ್ಸಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು, ದಮನ್‌ನ ಕಾಲೇಜಿನಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಸವನ್ ಪಟೇಲ್‌ನ ಮೇಲೆ ತಾಂತ್ರಿಕ ಕಣ್ಗಾವಲು ಮತ್ತು ಇತರ ರೀತಿಯ ಇನ್‌ಪುಟ್‌ಗಳನ್ನು ಬಳಸುವ ತಂಡಗಳು ಆರೋಪಿ ಎಂದು ಖಚಿತಪಡಿಸಿಕೊಂಡು ಬಂಧಿಸಿದ್ದಾರೆ.

ಪ್ರಾಂಶುಪಾಲೆಯನ್ನು ಹತ್ಯೆಗೈದು ಕಾರಿನಲ್ಲೇ ಶವ ಸುಟ್ಟ ಅಕೌಂಟೆಂಟ್ Read More »

“ಮಂಗಳೂರಿನಲ್ಲಿ ಬೀಳಲಿದೆಯಂತೆ‌ ಮತ್ತೊಂದು ಹೆಣ”| ಹಿಜಾಬ್ ಗಲಾಟೆ ಬೆನ್ನಲ್ಲೇ ವಿರೋಧಿಸಿದ ವಿದ್ಯಾರ್ಥಿಗೆ ಶ್ರದ್ಧಾಂಜಲಿ ಕೋರಿದ ಕಿಡಿಗೇಡಿಗಳು

ಸಮಗ್ರ ನ್ಯೂಸ್: ಮಂಗಳೂರಿನ ರಥಬೀದಿಯಲ್ಲಿರುವ ಡಾ.ಪಿ, ದಯಾನಂದ, ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕೆಲವು ವಿದ್ಯಾರ್ಥಿನಿಯರು ತರಗತಿಗೆ ಹಿಜಾಬ್ ಧರಿಸಿ ಪ್ರವೇಶಿಸಲು ಪ್ರಯತ್ನಿಸಿದ ಸಂದರ್ಭದಲ್ಲಿ, ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಪ್ರಶ್ನಿಸಿ ಗೊಂದಲಗೊಂಡ ಬೆನ್ನಲ್ಲೇ ವಿರೋದಿಸಿದ ವಿದ್ಯಾರ್ಥಿ ಹೆಸರಲ್ಲಿ ಕಿಡಿಗೇಡಿಗಳು ಶ್ರಧ್ದಾಂಜಲಿ ಪೋಸ್ಟ್ ಮಾಡಿದ್ದಾರೆ. ವಿದ್ಯಾರ್ಥಿ ಸಾಯಿ ಸಂದೇಶ ಎಂಬಾತ ಹಿಜಾಬ್ ಧಾರಣೆ ಪ್ರಶ್ನಿಸಿ ವಿರೋಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈತನ ವಿರುದ್ಧ ಇನ್ಸ್ಟಾಗ್ರಾಂ ನಲ್ಲಿ ಫೊಟೋ ಹಾಕಿ ಶ್ರದ್ಧಾಂಜಲಿ ಸಾಯಿ ಸಂದೇಶ

“ಮಂಗಳೂರಿನಲ್ಲಿ ಬೀಳಲಿದೆಯಂತೆ‌ ಮತ್ತೊಂದು ಹೆಣ”| ಹಿಜಾಬ್ ಗಲಾಟೆ ಬೆನ್ನಲ್ಲೇ ವಿರೋಧಿಸಿದ ವಿದ್ಯಾರ್ಥಿಗೆ ಶ್ರದ್ಧಾಂಜಲಿ ಕೋರಿದ ಕಿಡಿಗೇಡಿಗಳು Read More »

ಸುಳ್ಯ: ಪ್ರತಿಷ್ಟಿತ ಕಾಲೇಜೊಂದರ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ| ಆರೋಪಿ ಕೈಗೆ ಕೋಳ ಬಿಗಿದ ಪೊಲೀಸರು|

ಸಮಗ್ರ ನ್ಯೂಸ್ : ಪುತ್ತೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸುಳ್ಯ ತಾಲೂಕಿನ ಐವರ್ನಾಡು ಮೂಲದ ರಕ್ಷಿತ್ ಎಂಬಾತನ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿಯ ವಿರುದ್ದ ಐಪಿಸಿ ಕಲಂ 354 A , 506 ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಈತ ಸಂಘಟನೆಯೊಂದರ ಸಂಚಾಲಕನಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ ತಿಳಿದು ಬಂದಿದೆ. ಸಂತ್ರಸ್ತೆ ಅಪ್ರಾಪ್ತೆಯಾಗಿದ್ದು, ಬಾಲಕಿಯನ್ನು ಆರೋಪಿ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಂತ್ರಸ್ತ ಬಾಲಕಿಯು ಸುಳ್ಯದ ಪ್ರತಿಷಿತ

ಸುಳ್ಯ: ಪ್ರತಿಷ್ಟಿತ ಕಾಲೇಜೊಂದರ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ| ಆರೋಪಿ ಕೈಗೆ ಕೋಳ ಬಿಗಿದ ಪೊಲೀಸರು| Read More »

ಕಡಬ : ಬುದ್ಧಿಮಾಂದ್ಯ ಯುವತಿಯನ್ನು ಗುಡ್ಡಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ

ಸಮಗ್ರ ನ್ಯೂಸ್: ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಕಡಬ‌ ಠಾಣಾ ವ್ಯಾಪ್ತಿಯ ಕಾಣಿಯೂರಿನಲ್ಲಿ ನಡೆದಿದೆ. ಆರೋಪಿಯನ್ನು ಪೋಲಿಸರು ಬಂಧಿಸಿದ್ದು, ಬಂಧಿತ ಆರೋಪಿಯನ್ನು ಬಂಡಾಜೆ ನಿವಾಸಿ ಚಂದ್ರಶೇಖರ (57) ಎಂದು ಗುರುತಿಸಲಾಗಿದೆ. ಸಂತ್ರಸ್ತ ಯುವತಿಯ ಸಹೋದರ ಚಾರ್ವಾಕದಲ್ಲಿರುವ ತನ್ನ ಜಮೀನಿನಲ್ಲಿ ಕೃಷಿ ಕೆಲಸದ ಬಗ್ಗೆ ತಂದೆ, ತಾಯಿಯವರನ್ನು ಬಿಟ್ಟು ಬರಲು ಹೋದ ಸಂದರ್ಭ, ಬುದ್ಧಿಮಾಂದ್ಯಳಾದ ಅಕ್ಕ ಮನೆಯಲ್ಲಿ ಒಬ್ಬಳೇ ಇದ್ದರು ಎನ್ನಲಾಗಿದೆ.ಚಾರ್ವಾಕದಿಂದ ಮರಳಿ ಮನೆಗೆ ಬಂದಾಗ ಮನೆಯಲ್ಲಿದ್ದ ಅಕ್ಕ ಕಾಣದೇ ಇದ್ದಾಗ ಆಕೆಯನ್ನು ಹುಡುಕುತ್ತಿದ್ದ ವೇಳೆ

ಕಡಬ : ಬುದ್ಧಿಮಾಂದ್ಯ ಯುವತಿಯನ್ನು ಗುಡ್ಡಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ Read More »

ಶಿವಮೊಗ್ಗ: ಮತ್ತೊಬ್ಬ ವ್ಯಕ್ತಿಯ ಮೇಲೆ ಮಾರಕ ದಾಳಿ

ಸಮಗ್ರ ನ್ಯೂಸ್: ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಶಿವಮೊಗ್ಗದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿ ಪರಿಸ್ಥಿತಿ ತಿಳಿಯಾಗತೊಡಗಿದೆ. ಇದೇ ವೇಳೆ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಗೋಪಾಳದಲ್ಲಿ ವಾಕಿಂಗ್ ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಲಾಗಿದೆ. 49 ವರ್ಷದ ವೆಂಕಟೇಶ್ ಹಲ್ಲೆಗೊಳಗಾದವರು. ಗೋಪಾಳದ ಪದ್ಮ ಟಾಕೀಸ್ ಬಳಿ ವೆಂಕಟೇಶ್ ಮೇಲೆ ನಾಲ್ವರು ಯುವಕರು ತಂಡ ದಾಳಿ ಮಾಡಿ, ಕಲ್ಲು, ದೊಣ್ಣೆಗಳಿಂದ ಹಲ್ಲೆ ಮಾಡಿದೆ. ತೀವ್ರವಾಗಿ ಗಾಯಗೊಂಡಿರುವ ವೆಂಕಟೇಶ್ ಅವರನ್ನು ಸ್ಥಳೀಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಶಿವಮೊಗ್ಗ: ಮತ್ತೊಬ್ಬ ವ್ಯಕ್ತಿಯ ಮೇಲೆ ಮಾರಕ ದಾಳಿ Read More »

ಉಡುಪಿ: ಸರಣಿ ಅಪಘಾತ

ಸಮಗ್ರ ನ್ಯೂಸ್: ಕರಾವಳಿ ಬೈಪಾಸ್ ಬಳಿ ನಡೆದ ಅಪಘಾತದಲ್ಲಿ ಎರಡು ಕಾರುಗಳಲ್ಲಿದ್ದ ಪ್ರಯಾಣಿಕರು ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ಮಾ.3ರ ಗುರುವಾರ ನಡೆದಿದೆ. ಕುಂದಾಪುರ ಕಡೆಗೆ ಚಲಿಸುತ್ತಿದ್ದ ಕಾರೊಂದು ಸಿಗ್ನಲ್ ಇಲ್ಲದೆ ಟೈಲ್ಸ್ ಸಾಗಿಸುತ್ತಿದ್ದ ಲಾರಿ ಏಕಾಏಕಿ ನಿಧಾನವಾದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿಗೆ ಡಿಕ್ಕಿ ಹೊಡೆಯುವುದರಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಕಾರು ಚಾಲಕ ರಸ್ತೆಯ ಮಧ್ಯಭಾಗಕ್ಕೆ ಬಂದ ಪರಿಣಾಮ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಇದೇ ಸಂದರ್ಭ ಕುಂದಾಪುರ ಕಡೆಗೆ ಸಾಗುತ್ತಿದ್ದ ಇನ್ನೊಂದು ಕಾರು ಮೊದಲ

ಉಡುಪಿ: ಸರಣಿ ಅಪಘಾತ Read More »

ಕೊಚ್ಚಿ: ಸೊಂಟಕ್ಕೆ ಟ್ಯಾಟೂ ಹಾಕಿಸಿಕೊಳ್ಳಲು ಹೋದವಳ ಅತ್ಯಾಚಾರಗೈದ ಟ್ಯಾಟೂ ಕಲಾವಿದ

ಸಮಗ್ರ ನ್ಯೂಸ್: ಕೇರಳದ ಕೊಚ್ಚಿಯಲ್ಲಿರುವ ಟ್ಯಾಟೂ ಕಲಾವಿದನ ವಿರುದ್ಧ ಕೆಲ ಯುವತಿಯರು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ. ಟ್ಯೂಟೂ ಕಲಾವಿದ ಸುಜೀಶ್​ನ​​ ಕರಾಳ ಮುಖವನ್ನು ಒಂದೊಂದಾಗಿ ಬಿಚ್ಚಿಟ್ಟಿರುವ ಸಂತ್ರಸ್ತೆಯರು ಟ್ಯಾಟೂ ಪಾರ್ಲರ್​ನ ಅಕ್ರಮವನ್ನು ಹೊರ ಹಾಕಿದ್ದಾರೆ. ಆರೋಪಿ ಸುಜಿತ್ ಟ್ಯಾಟೂ ಸೂಜಿಯಿಂದ ಹೆದರಿಸಿ ದೌರ್ಜನ್ಯ ಎಸಗಿದರು ಎಂದು ಸಂತ್ರಸ್ತೆಯೊಬ್ಬಳು ಆರೋಪಿಸಿದರೆ, ವರ್ಷದ ಹಿಂದೆ ಸುಜೀಶ್​ ಅತ್ಯಾಚಾರ ಮಾಡಿದ್ದಾರೆ ಎಂದು ಮತ್ತೊಬ್ಬ ಸಂತ್ರಸ್ತೆ ಹೇಳಿದ್ದಾರೆ. ಅಂದಹಾಗೆ ಸುಜೀಶ್​ ಟ್ಯೂಟೂ ಪಾರ್ಲರ್​ ಸಿಕ್ಕಾಪಟ್ಟೆ ಫೇಮಸ್​ ಆಗಿರುವ ಟ್ಯಾಟೂ ಕೇಂದ್ರ. ಅಲ್ಲಿಗೆ

ಕೊಚ್ಚಿ: ಸೊಂಟಕ್ಕೆ ಟ್ಯಾಟೂ ಹಾಕಿಸಿಕೊಳ್ಳಲು ಹೋದವಳ ಅತ್ಯಾಚಾರಗೈದ ಟ್ಯಾಟೂ ಕಲಾವಿದ Read More »

ಪುತ್ತೂರು: ಕದ್ದ ಅಡಿಕೆಯನ್ನು ಮತ್ತೆ ತಂದಿರಿಸಿದ ಕಳ್ಳರು

ಸಮಗ್ರ ನ್ಯೂಸ್: ಎರಡು ದಿನಗಳ ಹಿಂದೆ ಅಂಗಡಿಯಿಂದ ಅಡಿಕೆ ಕದ್ದೊಯ್ದ ಕಳ್ಳರು ಮರುದಿನ ಅದೇ ಅಂಗಡಿಯ ಮುಂಭಾಗದಲ್ಲಿ ಇಟ್ಟು ಹೋಗಿರುವ ವಿಚಿತ್ರ ಘಟನೆ ತಿಂಗಳಾಡಿಯಲ್ಲಿ ನಡೆದಿದೆ. ತಿಂಗಳಾಡಿಯ ಶಾಲೆಯ ಬಳಿಯಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದ ಜಗನ್ನಾಥ ರೈ ಎಂಬವರ ಅಂಗಡಿಯ ಹಿಂಬಾಗಿಲ ಚಿಲಕ ಮುರಿದ ಕಳ್ಳರು ಗೋಣಿ ಚೀಲದಲ್ಲಿ ತುಂಬಿಸಿಟ್ಟಿದ್ದ ಸುಮಾರು 60,000 ರೂ.ಮೌಲ್ಯದ 4 ಗೋಣಿ ಚೀಲ ಅಡಿಕೆಯನ್ನು ಮಾ. 01ರಂದು ರಾತ್ರಿಯ ವೇಳೆ ಕದ್ದೊಯ್ದಿದ್ದರು. ಈ ಕುರಿತು ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಸ್ಥಳಕ್ಕೆ

ಪುತ್ತೂರು: ಕದ್ದ ಅಡಿಕೆಯನ್ನು ಮತ್ತೆ ತಂದಿರಿಸಿದ ಕಳ್ಳರು Read More »

ಪಾಸ್ ಪೋರ್ಟ್ ಇಲ್ಲದೆ ಉಕ್ರೇನ್ ನಲ್ಲಿ ಸಂಕಷ್ಟಕ್ಕೊಳಗಾದ ಮಂಗಳೂರು ವಿದ್ಯಾರ್ಥಿನಿ!

ಸಮಗ್ರ ನ್ಯೂಸ್: ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ಮಂಗಳೂರು ಮೂಲದ ವಿದ್ಯಾರ್ಥಿನಿ ಅನೈನಾ ಅನ್ನಾ ಪಾಸ್ ಪೋರ್ಟ್ ಇಲ್ಲದೆ ಸಂಕಷ್ಟಕ್ಕೊಳಗಾಗಿದ್ದಾರೆ. ಉಕ್ರೇನ್ ನಲ್ಲಿ ರಷ್ಯಾದ ದಾಳಿ ಮುಂದುವರಿದಿದ್ದು, ಯುದ್ಧಪೀಡಿತ ದೇಶದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಕರೆ ತರುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಆದರೆ ಮಂಗಳೂರಿನ ದೇರೆಬೈಲು ಮೂಲದ ಅನೈನಾ ಅವರ ಪಾಸ್ ಪೋರ್ಟ್ ಏಜೆಂಟರ ಬಳಿ ಇದ್ದು, ಅವರಿಗೆ ಕರೆ ಮಾಡಿದರೆ ಅವರು ಇರುವಲ್ಲಿಗೆ ತೆರಳಿ ಪಾಸ್ ಪೋರ್ಟ್ ಪಡೆದುಕೊಳ್ಳುವಂತೆ ಹೇಳಿದ್ದಾರೆ. ಆದರೆ ಅವರಿರುವ ಸ್ಥಳದಲ್ಲಿ ದಾಳಿ ನಡೆಯುತ್ತಿರುವುದರಿಂದ

ಪಾಸ್ ಪೋರ್ಟ್ ಇಲ್ಲದೆ ಉಕ್ರೇನ್ ನಲ್ಲಿ ಸಂಕಷ್ಟಕ್ಕೊಳಗಾದ ಮಂಗಳೂರು ವಿದ್ಯಾರ್ಥಿನಿ! Read More »