ಕ್ರೈಂ

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: 17 ಮಂದಿ ದುರ್ಮರಣ, ಹಲವರಿಗೆ ಗಾಯ

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಬಸ್ ಮತ್ತು ಆಟೋ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ. ಕಾನ್ಪುರದ ಉಪನಗರ ಸಚೆಂದಿಯಲ್ಲಿ ಬಸ್ ಮತ್ತು ಆಟೊ ಢಿಕ್ಕಿ ಹೊಡೆದ ಪರಿಣಾಮ 17 ಮಂದಿ ಮೃತಪಟ್ಟಿದ್ದು, 30 ಮಂದಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಲಾಲಾ ಲಜಪತ್​ರಾಯ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಪೊಲೀಸರು ಹೇಳಿದ್ದಾರೆ.ಲಖನೌ ನಿಂದ ದೆಹಲಿಗೆ ಬಸ್ ಪ್ರಯಾಣಿಸುತ್ತಿತ್ತು. ಈ ವೇಳೆ ಸಚೆಂದಿಯಲ್ಲಿ ಬಸ್ ಆಟೋಗೆ […]

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: 17 ಮಂದಿ ದುರ್ಮರಣ, ಹಲವರಿಗೆ ಗಾಯ Read More »

ಕ್ಷುಲ್ಲಕ ಕಾರಣಕ್ಕೆ ದಲಿತ ಬಾಲಕನ ಮೇಲೆ ಮೂತ್ರ ವಿಸರ್ಜನೆ : ಇಬ್ಬರ ಬಂಧನ

ಮಹಾರಾಷ್ಟ್ರ : ದಲಿತ ಬಾಲಕನ ಮೇಲೆ ಮೂತ್ರವಿಸರ್ಜಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಜಲಗಾಂವ್ ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಜಮೀನಿನ ಮಾಲಕ ರವೀಂದ್ರ ಮತ್ತು ಪ್ರವೀಣನನ್ನು ಬಂಧಿತ ಆರೋಪಿಗಳು.ಬಾಲಕನ ಮೇಲಿನ ಹಲ್ಲೆಯ ವಿಡಿಯೋ ವೈರಲ್ ಆಗಿದ್ದು, ವಿಡಿಯೋದಲ್ಲಿ ಮಾವಿನ ಕಾಯಿ ಕೀಳಿದ್ದಕ್ಕೆ ಬಾಲಕನನ್ನು ಪ್ರಶ್ನಿಸಿ ಮರಕ್ಕೆ ಕಟ್ಟಿಹಾಕಿ, ಮೈಮೇಲೆ ಮೂತ್ರ ವಿಸರ್ಜನೆ ಮಾಡಿ ಹಲ್ಲೆ ನಡೆಸಿರುವುದು ಕಂಡುಬಂದಿದೆ. ಘಟನೆ ಬಗ್ಗೆ ಸಂತ್ರಸ್ತ ಬಾಲಕ ಮನೆಯಲ್ಲಿ ಹೇಳಿದ್ದು, ಪೋಷಕರು ಕೇಸ್ ದಾಖಲಿಸಿದ್ದಾರೆ. ಮಾವು

ಕ್ಷುಲ್ಲಕ ಕಾರಣಕ್ಕೆ ದಲಿತ ಬಾಲಕನ ಮೇಲೆ ಮೂತ್ರ ವಿಸರ್ಜನೆ : ಇಬ್ಬರ ಬಂಧನ Read More »

ಒಲಿಂಪಿಕ್ಸ್​ ಕೂಟದಲ್ಲಿ ಕ್ರೀಡಾಪಟುಗಳಿಗೆ 1.60 ಲಕ್ಷ ಕಾಂಡೋಮ್ ಹಂಚಿಕೆ, ಆದ್ರೂ ಬಳಕೆ ಮಾಡಂಗಿಲ್ಲ! ಮತ್ತೇನ್ ಮಾಡ್ತಾರೆ?

ಟೋಕಿಯೊ : ಪ್ರತಿ ವರ್ಷದಂತೆ ಈ ವರ್ಷ ಕೂಡ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಬರುವ ಕ್ರೀಡಾಪಟುಗಳಿಗೆ ಕೋಂಡಮ್ ವಿತರಿಸಲು ಸಂಘಟಕರು ಸಿದ್ದತೆಯನ್ನು ನಡೆಸಿದ್ದಾರೆ. ಜುಲೈ 23ರಿಂದ ಟೋಕಿಯೊ ಜಾಗತಿಕ ಒಲಿಂಪಿಕ್ಸ್​ ಕ್ರೀಡಾಕೂಟವನ್ನು ಆಯೋಜಿಸಲು ಆತಿಥೇಯ ಜಪಾನ್​ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಕ್ರೀಡಾಕೂಟದಲ್ಲಿ 11 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಲಿದ್ದು, ಅವರೆಲ್ಲರಿಗೂ ತಲಾ 14ರಂತೆ ಒಟ್ಟಾರೆ 1.60 ಲಕ್ಷ ಕಾಂಡೋಮ್​ಗಳನ್ನು ಸಂಘಟಕರು ವಿತರಿಸಲು ಸಿದ್ದತೆ ಮಾಡಿದ್ದಾರೆ. ಪ್ರತಿ ವರ್ಷ ಕೂಡ ಕಾಂಡಮ್ ವಿತರಿಸಲಾಗುತ್ತದೆ. ಆದರೆ ಈ ಬಾರಿ ಕೋಂಡಮ್ ಬಳಸದೆ

ಒಲಿಂಪಿಕ್ಸ್​ ಕೂಟದಲ್ಲಿ ಕ್ರೀಡಾಪಟುಗಳಿಗೆ 1.60 ಲಕ್ಷ ಕಾಂಡೋಮ್ ಹಂಚಿಕೆ, ಆದ್ರೂ ಬಳಕೆ ಮಾಡಂಗಿಲ್ಲ! ಮತ್ತೇನ್ ಮಾಡ್ತಾರೆ? Read More »

ರಾಸಲೀಲೆ ಸಿಡಿ ಪ್ರಕರಣದ ಆರೋಪಿಗಳಿಗೆ ಬಿಗ್ ರಿಲೀಪ್

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣದಲ್ಲಿ ಸಿಡಿ ಪ್ರಕರಣದ ರೂವಾರಿಗಳು ಎಂದು ಹೇಳಲಾದ ನರೇಶ್​ ಗೌಡ ಹಾಗೂ ಶ್ರವಣ್​ಗೆ ಬೆಂಗಳೂರಿನ 91ನೇ ಸಿಸಿಹೆಚ್​ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಕಳೆದ ಮಾರ್ಚ್ 2ರಿಂದ ತಲೆಮರೆಸಿಕೊಂಡಿರುವ ಈ ಇಬ್ಬರೂ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದು ತನಿಖಾ ತಂಡ ಇಬ್ಬರನ್ನೂ ಪತ್ತೆಹಚ್ಚಲು ಶ್ರಮಿಸುತ್ತಿತ್ತು. ತಮ್ಮ ಮೇಲೆ ಕೇಳಿಬಂದ ಸಿಡಿ ಪ್ರಕರಣದ ನಂತರ ಈ ಇಬ್ಬರ ಮೇಲೆ ಮಾಜಿ

ರಾಸಲೀಲೆ ಸಿಡಿ ಪ್ರಕರಣದ ಆರೋಪಿಗಳಿಗೆ ಬಿಗ್ ರಿಲೀಪ್ Read More »

ಮಂಗಳೂರು: ತನ್ನ ಮಗುವನ್ನೇ ಕಿಡ್ನಾಪ್ ಮಾಡಿದನಾ ತಂದೆ…!? | ಠಾಣೆ ಮೆಟ್ಟಿಲೇರಿದ ತಾಯಿ

ಮಂಗಳೂರು:ನಗರದ ಕದ್ರಿಯಲ್ಲಿ ತಂದೆಯೇ ತನ್ನ ಮಗುವನ್ನು ಕಿಡ್ನಾಪ್ ಮಾಡಿದ್ದಾನೆ ಎನ್ನಲಾಗಿದ್ದು ಈ ಬಗ್ಗೆ ಮಗುವಿನ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮನೆಯಿಂದ 14 ತಿಂಗಳ ತನ್ನ ಮಗುವನ್ನು ಮಾ.23ರಂದು ನನ್ನ ಗಂಡನೇ ಕಿಡ್ನಾಪ್ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು, ತನ್ನ ಪತಿಯ ವಿರುದ್ಧವೇ ಮೇ 26 ರ ರಂದು ಪೊಲೀಸ್ ದೂರು ದಾಖಲಿಸಿದ್ದಾಳೆ. ದೂರಿನಲ್ಲಿ, ನನ್ನ ಪತಿ ಯಾವುದೇ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದು ಅಪರಾಧ ಚಟುವಟಿಕೆಗಳಲ್ಲಿ ತೋಡಾಗಿಕೊಂಡಿದ್ದು, ಆತನ ವಿರುದ್ದ ಕೊಡಗು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಮಂಗಳೂರು: ತನ್ನ ಮಗುವನ್ನೇ ಕಿಡ್ನಾಪ್ ಮಾಡಿದನಾ ತಂದೆ…!? | ಠಾಣೆ ಮೆಟ್ಟಿಲೇರಿದ ತಾಯಿ Read More »

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ | ಮೂವರು ದೋಷಿಗಳೆಂದು ಅಂತಿಮ ತೀರ್ಪು ನೀಡಿದ ನ್ಯಾಯಾಲಯ

ಉಡುಪಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿ ಮೂಲದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಕೊನೆಯ ಹಂತ ತಲುಪಿದ್ದು, ನ್ಯಾಯಾಲಯ ಮೂವರು ಆರೋಪಿಗಳನ್ನು ದೋಷಿಗಳೆಂದು ಪರಿಗಣಿಸಿ ಒಬ್ಬರನ್ನು ಖುಲಾಸೆಗೊಳಿಸಿ ಇಂದು ಅಂತಿಮ ತೀರ್ಪು ಪ್ರಕಟಿಸಿದೆ. ಜಿಲ್ಲೆಯ ಇಂದ್ರಾಳಿಯ ಉದ್ಯಮಿ ಭಾಸ್ಕರ್ ಶೆಟ್ಟಿ (52 ವ.) ಅವರನ್ನು ಕೊಂದು ಹೋಮಕುಂಡದಲ್ಲಿ ಸುಟ್ಟಿದ್ದ ಪತ್ನಿ ರಾಜೇಶ್ವರಿ ಶೆಟ್ಟಿ ಪುತ್ರ ನವನೀತ್ ಶೆಟ್ಟಿ ಹಾಗೂ ಜ್ಯೋತಿಷಿ ನಿರಂಜನ್ ಭಟ್ ಅವರನ್ನು ಉಡುಪಿಯ ಜಿಲ್ಲಾ ಸೆಷನ್ಸ್ ಮತ್ತು ಸತ್ರ ನ್ಯಾಯಾಲಯ ದೋಷಿಗಳೆಂದು

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ | ಮೂವರು ದೋಷಿಗಳೆಂದು ಅಂತಿಮ ತೀರ್ಪು ನೀಡಿದ ನ್ಯಾಯಾಲಯ Read More »

ಉಡುಪಿ: ದನ ಕದ್ದು ಟಾಯ್ಲೆಟ್ ನಲ್ಲಿ ಕೊಂದಾತನ ಬಂಧನ | ಸಿಸಿಟಿವಿ ಸಹಾಯದಿಂದ ಕೃತ್ಯ ಬಯಲು

ಉಡುಪಿ: ವ್ಯಕ್ತಿಯೋರ್ವ ನೆರೆಮನೆಯ ಹಸುವನ್ನು ಕದ್ದು ತನ್ನ ಮನೆಯ ಟಾಯ್ಲೆಟ್ ನಲ್ಲಿ ಮಾಂಸ ಮಾಡಿ ಮಾರಾಟ ಮಾಡಿದ್ದಾನೆ ಎನ್ನಲಾದ ಘಟನೆ ಜಿಲ್ಲೆಯ ನೇಜಾರಿನಲ್ಲಿ ನಡೆದಿದೆ. ಆರೋಪಿ ಇಬ್ರಾಹಿಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನೇಜಾರು ನಿವಾಸಿ ಗಂಗಾಧರ್ ಎಂಬವರು ಪ್ರತಿದಿನದಂತೆ ಭಾನುವಾರ ಬೆಳಿಗ್ಗೆ ತನ್ನ ಮನೆಯ ಹಸುವನ್ನು ಮೇಯಲು ಬಿಟ್ಟಿದ್ದರು. ಸ್ವಲ್ಪ ಸಮಯದಲ್ಲಿ ಹತ್ತಿರದಲ್ಲೇ ಇದ್ದ ಹಸು ಕಾಣೆಯಾಗಿತ್ತು. ನಂತರ ಘಟನೆ ನಡೆದ ಪ್ರದೇಶದಲ್ಲಿದ್ದ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ, ನೆರೆಮನೆಯ ಇಬ್ರಾಹಿಂ ಎಂಬಾತ ಹಸುವನ್ನು ಎಳೆದೊಯ್ಯುವ ದೃಶ್ಯ ಸೆರೆಯಾಗಿರುವುದು

ಉಡುಪಿ: ದನ ಕದ್ದು ಟಾಯ್ಲೆಟ್ ನಲ್ಲಿ ಕೊಂದಾತನ ಬಂಧನ | ಸಿಸಿಟಿವಿ ಸಹಾಯದಿಂದ ಕೃತ್ಯ ಬಯಲು Read More »

ಧರ್ಮಸ್ಥಳ: 4 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ಆರೋಪಿ ಅರೆಸ್ಟ್

ಬೆಳ್ತಂಗಡಿ: ಯುವಕನೋರ್ವ ನಾಲ್ಕು ವರ್ಷದ ಪುಟ್ಟ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಪೋಷಕರು ನೀಡಿದ ದೂರಿನನ್ವಯ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನೀಚ ಕೃತ್ಯವೆಸಗಿ ಪೊಲೀಸರ ಅತಿಥಿಯಾದವನು ವಿಘ್ನೇಶ್ ಭಂಡಾರಿ. ಈತ ತಾಲೂಕಿನ ಕಕ್ಕಿಂಜೆಯಲ್ಲಿ ನಾಲ್ಕು ವರ್ಷದ ಪುಟ್ಟ ಬಾಲಕಿಯ ಮೇಲೆ ಹಿಂದೊಮ್ಮೆ ಲೈಂಗಿಕ ಕಿರುಕುಳ ಎಸಗಿದ್ದ. ಆ ಸಮಯದಲ್ಲಿ ಮಗುವಿನ ಪೋಷಕರು ಮಾತುಕತೆ ನಡೆಸಿ ಪ್ರಕರಣವನ್ನು ಇತ್ಯರ್ಥಗೊಳಿಸಿದ್ದರು. ಆದರೆ ಆರೋಪಿ ನೀಚ ಕೃತ್ಯವನ್ನು ಮತ್ತೆ ಮುಂದುವರಿಸಿದ್ದು, ಮಗುವಿನ ಪೋಷಕರು ನೀಡಿದ ದೂರಿನನ್ವಯ ಆತನನ್ನು ಪೊಲೀಸರು

ಧರ್ಮಸ್ಥಳ: 4 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ಆರೋಪಿ ಅರೆಸ್ಟ್ Read More »

ಮಗನಿಗೆ ಗೊತ್ತಿಲ್ಲದೆ ಸೊಸೆಯನ್ನೇ 80 ಸಾವಿರಕ್ಕೆ ಮಾರಿದ ಮಾವ

ಲಖನೌ: ಅವರಿಬ್ಬರದ್ದು ಲವ್​ ಮ್ಯಾರೇಜ್. ಸೋಶಿಯಲ್​ ಮೀಡಿಯಾ ಮೂಲಕ ಸ್ನೇಹಿತರಾಗಿದ್ದ ಅಸ್ಸಾಂ ಮೂಲದ ಯುವತಿ ಮತ್ತು ಉತ್ತರ ಪ್ರದೇಶದ ಮೂಲದ ಪ್ರಿನ್ಸ್ ಮದುವೆಯಾಗಿದ್ದರು. ಪ್ರಿನ್ಸ್ ಟ್ಯಾಕ್ಸಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಗಾಜಿಯಾಬಾದ್​ನಲ್ಲೇ ವಾಸ ಆರಂಭಿಸಿದ್ದರು. ಈ ಮಧ್ಯೆ ಪ್ರಿನ್ಸ್​ನ ತಂದೆ ಸೊಸೆಯನ್ನು ನಮ್ಮ ಮನೆಗೆ ಬಾ ಎಂದು ಕರೆದಿದ್ದಾರೆ. ಜೂನ್​ 4ರಂದು ಸೊಸೆಯನ್ನು ಮನೆಗೆ ಕರೆಸಿಕೊಂಡಿದ್ದಾರೆ. ಅಲ್ಲಿ ಮತ್ತೊಬ್ಬ ಯುವಕನಿದ್ದು, ಸಂಜೆ ವೇಳೆ ಆತನೇ ನಿನ್ನನ್ನು ಗಂಡನ ಮನೆ ಬಳಿ ಬಿಡುತ್ತಾನೆ ಎಂದು ಕಳುಹಿಸಿಕೊಟ್ಟಿದ್ದಾನೆ. ಆದರೆ

ಮಗನಿಗೆ ಗೊತ್ತಿಲ್ಲದೆ ಸೊಸೆಯನ್ನೇ 80 ಸಾವಿರಕ್ಕೆ ಮಾರಿದ ಮಾವ Read More »

ಪೊಲೀಸ್ ಬಲೆಗೆ ಬಿದ್ದ ಪೊಲೀಸ್ ಜೊತೆ ಮಂಚ ಹತ್ತಿದ್ದ ಪೊಲೀಸ್

ಹೈದರಾಬಾದ್​: ಸಹೋದ್ಯೋಗಿ ಮಹಿಳೆಯೊಂದಿಗೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದಾಗ ಪಿ ಎಸ್ ಐ ಪೊಲೀಸ್ ಬಲೆಗೆ ಬಿದ್ದ ಘಟನೆ ಹೈದರಬಾದ್ನಲ್ಲಿ ನಡೆದಿದೆ. ಸಹೋದ್ಯೋಗಿಯೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿ ಸಿಕ್ಕಿಬಿದ್ದ ಹೈದರಾಬಾದ್​ನ ಜವಹರ್​ ನಗರ ಠಾಣೆಯ ಸಬ್​ ಇನ್ಸ್​ಪೆಕ್ಟರ್​ನನ್ನು ರಾಚಕೊಂಡ ಪೊಲೀಸ್​ ಆಯುಕ್ತ ಮಹೇಶ್​ ಭಾಗವತ್​ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಪಿಎಸ್​ಐ ಅನಿಲ್​ ಎಂಬವರು ಮಹಿಳಾ ಸಿಬ್ಬಂದಿಯೊಂದಿಗೆ ಹಲವು ದಿನಗಳಿಂದ ಈ ಸಂಬಂಧ ಇಟ್ಟುಕೊಂಡಿದ್ದರು. ಇದರ ನಡುವೆ ತಿಮ್ಮೈಪಲ್ಲಿಯಲ್ಲಿರುವ ರೆಸಾರ್ಟ್​ನಒಂದರಲ್ಲಿ ಅನಿಲ್​ ಮತ್ತು ಮಹಿಳೆ ಇಬ್ಬರು ಸೇರಿರುವುದಾಗಿ ಕೀಸರ

ಪೊಲೀಸ್ ಬಲೆಗೆ ಬಿದ್ದ ಪೊಲೀಸ್ ಜೊತೆ ಮಂಚ ಹತ್ತಿದ್ದ ಪೊಲೀಸ್ Read More »