ಕ್ರೈಂ

ಸುಳ್ಯ: ಪ್ರತಿಷ್ಟಿತ ಕಾಲೇಜೊಂದರ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ| ಆರೋಪಿ ಕೈಗೆ ಕೋಳ ಬಿಗಿದ ಪೊಲೀಸರು|

ಸಮಗ್ರ ನ್ಯೂಸ್ : ಪುತ್ತೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸುಳ್ಯ ತಾಲೂಕಿನ ಐವರ್ನಾಡು ಮೂಲದ ರಕ್ಷಿತ್ ಎಂಬಾತನ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿಯ ವಿರುದ್ದ ಐಪಿಸಿ ಕಲಂ 354 A , 506 ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಈತ ಸಂಘಟನೆಯೊಂದರ ಸಂಚಾಲಕನಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ ತಿಳಿದು ಬಂದಿದೆ. ಸಂತ್ರಸ್ತೆ ಅಪ್ರಾಪ್ತೆಯಾಗಿದ್ದು, ಬಾಲಕಿಯನ್ನು ಆರೋಪಿ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಂತ್ರಸ್ತ ಬಾಲಕಿಯು ಸುಳ್ಯದ ಪ್ರತಿಷಿತ […]

ಸುಳ್ಯ: ಪ್ರತಿಷ್ಟಿತ ಕಾಲೇಜೊಂದರ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ| ಆರೋಪಿ ಕೈಗೆ ಕೋಳ ಬಿಗಿದ ಪೊಲೀಸರು| Read More »

ಕಡಬ : ಬುದ್ಧಿಮಾಂದ್ಯ ಯುವತಿಯನ್ನು ಗುಡ್ಡಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ

ಸಮಗ್ರ ನ್ಯೂಸ್: ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಕಡಬ‌ ಠಾಣಾ ವ್ಯಾಪ್ತಿಯ ಕಾಣಿಯೂರಿನಲ್ಲಿ ನಡೆದಿದೆ. ಆರೋಪಿಯನ್ನು ಪೋಲಿಸರು ಬಂಧಿಸಿದ್ದು, ಬಂಧಿತ ಆರೋಪಿಯನ್ನು ಬಂಡಾಜೆ ನಿವಾಸಿ ಚಂದ್ರಶೇಖರ (57) ಎಂದು ಗುರುತಿಸಲಾಗಿದೆ. ಸಂತ್ರಸ್ತ ಯುವತಿಯ ಸಹೋದರ ಚಾರ್ವಾಕದಲ್ಲಿರುವ ತನ್ನ ಜಮೀನಿನಲ್ಲಿ ಕೃಷಿ ಕೆಲಸದ ಬಗ್ಗೆ ತಂದೆ, ತಾಯಿಯವರನ್ನು ಬಿಟ್ಟು ಬರಲು ಹೋದ ಸಂದರ್ಭ, ಬುದ್ಧಿಮಾಂದ್ಯಳಾದ ಅಕ್ಕ ಮನೆಯಲ್ಲಿ ಒಬ್ಬಳೇ ಇದ್ದರು ಎನ್ನಲಾಗಿದೆ.ಚಾರ್ವಾಕದಿಂದ ಮರಳಿ ಮನೆಗೆ ಬಂದಾಗ ಮನೆಯಲ್ಲಿದ್ದ ಅಕ್ಕ ಕಾಣದೇ ಇದ್ದಾಗ ಆಕೆಯನ್ನು ಹುಡುಕುತ್ತಿದ್ದ ವೇಳೆ

ಕಡಬ : ಬುದ್ಧಿಮಾಂದ್ಯ ಯುವತಿಯನ್ನು ಗುಡ್ಡಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ Read More »

ಶಿವಮೊಗ್ಗ: ಮತ್ತೊಬ್ಬ ವ್ಯಕ್ತಿಯ ಮೇಲೆ ಮಾರಕ ದಾಳಿ

ಸಮಗ್ರ ನ್ಯೂಸ್: ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಶಿವಮೊಗ್ಗದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿ ಪರಿಸ್ಥಿತಿ ತಿಳಿಯಾಗತೊಡಗಿದೆ. ಇದೇ ವೇಳೆ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಗೋಪಾಳದಲ್ಲಿ ವಾಕಿಂಗ್ ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಲಾಗಿದೆ. 49 ವರ್ಷದ ವೆಂಕಟೇಶ್ ಹಲ್ಲೆಗೊಳಗಾದವರು. ಗೋಪಾಳದ ಪದ್ಮ ಟಾಕೀಸ್ ಬಳಿ ವೆಂಕಟೇಶ್ ಮೇಲೆ ನಾಲ್ವರು ಯುವಕರು ತಂಡ ದಾಳಿ ಮಾಡಿ, ಕಲ್ಲು, ದೊಣ್ಣೆಗಳಿಂದ ಹಲ್ಲೆ ಮಾಡಿದೆ. ತೀವ್ರವಾಗಿ ಗಾಯಗೊಂಡಿರುವ ವೆಂಕಟೇಶ್ ಅವರನ್ನು ಸ್ಥಳೀಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಶಿವಮೊಗ್ಗ: ಮತ್ತೊಬ್ಬ ವ್ಯಕ್ತಿಯ ಮೇಲೆ ಮಾರಕ ದಾಳಿ Read More »

ಉಡುಪಿ: ಸರಣಿ ಅಪಘಾತ

ಸಮಗ್ರ ನ್ಯೂಸ್: ಕರಾವಳಿ ಬೈಪಾಸ್ ಬಳಿ ನಡೆದ ಅಪಘಾತದಲ್ಲಿ ಎರಡು ಕಾರುಗಳಲ್ಲಿದ್ದ ಪ್ರಯಾಣಿಕರು ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ಮಾ.3ರ ಗುರುವಾರ ನಡೆದಿದೆ. ಕುಂದಾಪುರ ಕಡೆಗೆ ಚಲಿಸುತ್ತಿದ್ದ ಕಾರೊಂದು ಸಿಗ್ನಲ್ ಇಲ್ಲದೆ ಟೈಲ್ಸ್ ಸಾಗಿಸುತ್ತಿದ್ದ ಲಾರಿ ಏಕಾಏಕಿ ನಿಧಾನವಾದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿಗೆ ಡಿಕ್ಕಿ ಹೊಡೆಯುವುದರಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಕಾರು ಚಾಲಕ ರಸ್ತೆಯ ಮಧ್ಯಭಾಗಕ್ಕೆ ಬಂದ ಪರಿಣಾಮ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಇದೇ ಸಂದರ್ಭ ಕುಂದಾಪುರ ಕಡೆಗೆ ಸಾಗುತ್ತಿದ್ದ ಇನ್ನೊಂದು ಕಾರು ಮೊದಲ

ಉಡುಪಿ: ಸರಣಿ ಅಪಘಾತ Read More »

ಕೊಚ್ಚಿ: ಸೊಂಟಕ್ಕೆ ಟ್ಯಾಟೂ ಹಾಕಿಸಿಕೊಳ್ಳಲು ಹೋದವಳ ಅತ್ಯಾಚಾರಗೈದ ಟ್ಯಾಟೂ ಕಲಾವಿದ

ಸಮಗ್ರ ನ್ಯೂಸ್: ಕೇರಳದ ಕೊಚ್ಚಿಯಲ್ಲಿರುವ ಟ್ಯಾಟೂ ಕಲಾವಿದನ ವಿರುದ್ಧ ಕೆಲ ಯುವತಿಯರು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ. ಟ್ಯೂಟೂ ಕಲಾವಿದ ಸುಜೀಶ್​ನ​​ ಕರಾಳ ಮುಖವನ್ನು ಒಂದೊಂದಾಗಿ ಬಿಚ್ಚಿಟ್ಟಿರುವ ಸಂತ್ರಸ್ತೆಯರು ಟ್ಯಾಟೂ ಪಾರ್ಲರ್​ನ ಅಕ್ರಮವನ್ನು ಹೊರ ಹಾಕಿದ್ದಾರೆ. ಆರೋಪಿ ಸುಜಿತ್ ಟ್ಯಾಟೂ ಸೂಜಿಯಿಂದ ಹೆದರಿಸಿ ದೌರ್ಜನ್ಯ ಎಸಗಿದರು ಎಂದು ಸಂತ್ರಸ್ತೆಯೊಬ್ಬಳು ಆರೋಪಿಸಿದರೆ, ವರ್ಷದ ಹಿಂದೆ ಸುಜೀಶ್​ ಅತ್ಯಾಚಾರ ಮಾಡಿದ್ದಾರೆ ಎಂದು ಮತ್ತೊಬ್ಬ ಸಂತ್ರಸ್ತೆ ಹೇಳಿದ್ದಾರೆ. ಅಂದಹಾಗೆ ಸುಜೀಶ್​ ಟ್ಯೂಟೂ ಪಾರ್ಲರ್​ ಸಿಕ್ಕಾಪಟ್ಟೆ ಫೇಮಸ್​ ಆಗಿರುವ ಟ್ಯಾಟೂ ಕೇಂದ್ರ. ಅಲ್ಲಿಗೆ

ಕೊಚ್ಚಿ: ಸೊಂಟಕ್ಕೆ ಟ್ಯಾಟೂ ಹಾಕಿಸಿಕೊಳ್ಳಲು ಹೋದವಳ ಅತ್ಯಾಚಾರಗೈದ ಟ್ಯಾಟೂ ಕಲಾವಿದ Read More »

ಪುತ್ತೂರು: ಕದ್ದ ಅಡಿಕೆಯನ್ನು ಮತ್ತೆ ತಂದಿರಿಸಿದ ಕಳ್ಳರು

ಸಮಗ್ರ ನ್ಯೂಸ್: ಎರಡು ದಿನಗಳ ಹಿಂದೆ ಅಂಗಡಿಯಿಂದ ಅಡಿಕೆ ಕದ್ದೊಯ್ದ ಕಳ್ಳರು ಮರುದಿನ ಅದೇ ಅಂಗಡಿಯ ಮುಂಭಾಗದಲ್ಲಿ ಇಟ್ಟು ಹೋಗಿರುವ ವಿಚಿತ್ರ ಘಟನೆ ತಿಂಗಳಾಡಿಯಲ್ಲಿ ನಡೆದಿದೆ. ತಿಂಗಳಾಡಿಯ ಶಾಲೆಯ ಬಳಿಯಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದ ಜಗನ್ನಾಥ ರೈ ಎಂಬವರ ಅಂಗಡಿಯ ಹಿಂಬಾಗಿಲ ಚಿಲಕ ಮುರಿದ ಕಳ್ಳರು ಗೋಣಿ ಚೀಲದಲ್ಲಿ ತುಂಬಿಸಿಟ್ಟಿದ್ದ ಸುಮಾರು 60,000 ರೂ.ಮೌಲ್ಯದ 4 ಗೋಣಿ ಚೀಲ ಅಡಿಕೆಯನ್ನು ಮಾ. 01ರಂದು ರಾತ್ರಿಯ ವೇಳೆ ಕದ್ದೊಯ್ದಿದ್ದರು. ಈ ಕುರಿತು ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಸ್ಥಳಕ್ಕೆ

ಪುತ್ತೂರು: ಕದ್ದ ಅಡಿಕೆಯನ್ನು ಮತ್ತೆ ತಂದಿರಿಸಿದ ಕಳ್ಳರು Read More »

ಪಾಸ್ ಪೋರ್ಟ್ ಇಲ್ಲದೆ ಉಕ್ರೇನ್ ನಲ್ಲಿ ಸಂಕಷ್ಟಕ್ಕೊಳಗಾದ ಮಂಗಳೂರು ವಿದ್ಯಾರ್ಥಿನಿ!

ಸಮಗ್ರ ನ್ಯೂಸ್: ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ಮಂಗಳೂರು ಮೂಲದ ವಿದ್ಯಾರ್ಥಿನಿ ಅನೈನಾ ಅನ್ನಾ ಪಾಸ್ ಪೋರ್ಟ್ ಇಲ್ಲದೆ ಸಂಕಷ್ಟಕ್ಕೊಳಗಾಗಿದ್ದಾರೆ. ಉಕ್ರೇನ್ ನಲ್ಲಿ ರಷ್ಯಾದ ದಾಳಿ ಮುಂದುವರಿದಿದ್ದು, ಯುದ್ಧಪೀಡಿತ ದೇಶದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಕರೆ ತರುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಆದರೆ ಮಂಗಳೂರಿನ ದೇರೆಬೈಲು ಮೂಲದ ಅನೈನಾ ಅವರ ಪಾಸ್ ಪೋರ್ಟ್ ಏಜೆಂಟರ ಬಳಿ ಇದ್ದು, ಅವರಿಗೆ ಕರೆ ಮಾಡಿದರೆ ಅವರು ಇರುವಲ್ಲಿಗೆ ತೆರಳಿ ಪಾಸ್ ಪೋರ್ಟ್ ಪಡೆದುಕೊಳ್ಳುವಂತೆ ಹೇಳಿದ್ದಾರೆ. ಆದರೆ ಅವರಿರುವ ಸ್ಥಳದಲ್ಲಿ ದಾಳಿ ನಡೆಯುತ್ತಿರುವುದರಿಂದ

ಪಾಸ್ ಪೋರ್ಟ್ ಇಲ್ಲದೆ ಉಕ್ರೇನ್ ನಲ್ಲಿ ಸಂಕಷ್ಟಕ್ಕೊಳಗಾದ ಮಂಗಳೂರು ವಿದ್ಯಾರ್ಥಿನಿ! Read More »

ಉಡುಪಿ: ಸ್ಕೂಟರ್ ಗೆ ಬಸ್ಸ್ ಢಿಕ್ಕಿ ಹೊಡೆದು ತಂದೆ-ಮಗಳು ಸಾವು

ಸಮಗ್ರ ನ್ಯೂಸ್: ಕೇರಳ ಸಾರಿಗೆ ಸಂಸ್ಥೆ ಬಸ್ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಸಾವನ್ನಪ್ಪಿರುವ ಘಟನೆ ಸಂತೆಕಟ್ಟೆ ಬಳಿ ನಡೆದಿದೆ. ಮೃತರನ್ನು ಗಣೇಶ್ ಪೈ (58) ಹಾಗೂ ಮಗಳು ಗಾಯತ್ರಿ ಪೈ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯಿಂದ ಬಸ್ ನಲ್ಲಿ ಆಗಮಿಸಿದ್ದ ಮಗಳನ್ನು ಕರೆದುಕೊಂಡು ಹೋಗಲು ತನ್ನ ಸ್ಕೂಟರ್ ನಲ್ಲಿ ಬಸ್ ನಿಲ್ದಾಣಕ್ಕೆ ತಂದೆ ಬಂದಿದ್ದರು. ಮಗಳ ಜೊತೆ ಸ್ಕೂಟರ್‌ನಲ್ಲಿ ಸಂತೆಕಟ್ಟೆ‌ ಜಂಕ್ಷನ್ ನಲ್ಲಿ ರಸ್ತೆ ದಾಟುತ್ತಿದ್ದಾಗ ಉಡುಪಿಯಿಂದ ಕೊಲ್ಲೂರು ಕಡೆ ತೆರಳುತ್ತಿದ್ದ ಕೇರಳ

ಉಡುಪಿ: ಸ್ಕೂಟರ್ ಗೆ ಬಸ್ಸ್ ಢಿಕ್ಕಿ ಹೊಡೆದು ತಂದೆ-ಮಗಳು ಸಾವು Read More »

ಸುಳ್ಯ: ಆ್ಯಸಿಡ್ ಸೇವಿಸಿ‌ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ರಬ್ಬರ್ ಗೆ ಬಳಸುವ ಆ್ಯಸಿಡ್ ಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೆಂಜಾಳ‌ ಎಂಬಲ್ಲಿಯ ಜಗದೀಶ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈತ ರಬ್ಬರ್ ಗೆ ಬಳಸುವ ಆ್ಯಸಿಡ್ ಕುಡಿದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ

ಸುಳ್ಯ: ಆ್ಯಸಿಡ್ ಸೇವಿಸಿ‌ ಯುವಕ ಆತ್ಮಹತ್ಯೆ Read More »

ಧರ್ಮಸ್ಥಳ: ಪಾದಯಾತ್ರಿ ನೇತ್ರಾವತಿಯಲ್ಲಿ ಮುಳುಗಿ ಸಾವು

ಸಮಗ್ರ ನ್ಯೂಸ್: ಚಿಕ್ಕಮಗಳೂರಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಬಂದ ವ್ಯಕ್ತಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಧರ್ಮಸ್ಥಳದ ನೇತ್ರಾವತಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಗೌದನಹಳ್ಳಿ ನಿವಾಸಿ ಚಂದ್ರಶೇಖರ್(40) ಮೃತ ದುರ್ದೈವಿ. ಚಿಕ್ಕಮಗಳೂರು ಜಿಲ್ಲೆಯಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದ ಚಂದ್ರಶೇಖರ್, ಸ್ನೇಹಿತನಾದ ವೆಂಕಟೇಶ್ ಜೊತೆ ಧರ್ಮಸ್ಥಳಕ್ಕೆ ಚಾರ್ಮಾಡಿ ಘಾಟ್ ಮೂಲಕ ಪಾದಯಾತ್ರೆ ಮಾಡಿಕೊಂಡು ಇಂದು ಧರ್ಮಸ್ಥಳ ನೇತ್ರಾವತಿಗೆ ಬಂದಿದ್ದಾರೆ.ಈ ವೇಳೆ ಸ್ನಾನ ಮಾಡಲು ನದಿಗೆ ಇಳಿದಿದ್ದು ಈಜಲು ಬಾರದೆ ನೀರಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಧರ್ಮಸ್ಥಳ

ಧರ್ಮಸ್ಥಳ: ಪಾದಯಾತ್ರಿ ನೇತ್ರಾವತಿಯಲ್ಲಿ ಮುಳುಗಿ ಸಾವು Read More »