ಕ್ರೈಂ

ಮಡಿಕೇರಿ | ಕೊರೋನಾ ಆಸ್ಪತ್ರೆಯ ಮೊಬೈಲ್ ಕಳ್ಳ ಅರೆಸ್ಟ್!

ಮಡಿಕೇರಿ: ಪುಟ್ಟ ಬಾಲಕಿಯೊಬ್ಬಳು ಕೋವಿಡ್ ನಿಂದಾಗಿ ತನ್ನ ತಾಯಿಯನ್ನು ಕಳೆದುಕೊಂಡು ಜಿಲ್ಲಾಡಳಿತ ಹಾಗೂ ಶಾಸಕರಿಗೆ ಪತ್ರ ಬರೆದು ಆಸ್ಪತ್ರೆಯಲ್ಲಿ ಕಳೆದುಹೋಗಿರುವ ನನ್ನ ತಾಯಿಯ ನೆನಪುಗಳು ಇರುವ ಮೊಬೈಲ್‌ ಪೋನ್‌‌‌ ಅನ್ನು ಹುಡುಕಿಕೊಡುವಂತೆ ಮನವಿ ಮಾಡಿದ್ದಳು. ಇದು ವೈರಲ್ ಆಗಿದ್ದು, ಎಲ್ಲರ ಮನ ಮಿಡಿದಿತ್ತು. ಇದೀಗ ಕೊರೊನಾ ಕೇಂದ್ರದಿಂದ ಮೊಬೈಲ್ ಎಗರಿಸುತ್ತಿದ್ದಂತ ಕಳ್ಳ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಮಡಿಕೇರಿಯ ಕೊರೋನಾ ಆಸ್ಪತ್ರೆಯಲ್ಲಿ ಅನೇಕರ ಮೊಬೈಲ್ ಕಳ್ಳತನವಾಗುತ್ತಿದ್ದು, ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ಕೂಡ ದಾಖಲಾಗಿದ್ದವು. ಅದರಲ್ಲಿಯೂ […]

ಮಡಿಕೇರಿ | ಕೊರೋನಾ ಆಸ್ಪತ್ರೆಯ ಮೊಬೈಲ್ ಕಳ್ಳ ಅರೆಸ್ಟ್! Read More »

ಅಕ್ರಮ ಮದ್ಯ ಮಾರಾಟ | ಓರ್ವನ ಬಂಧನ

ಹೆಬ್ರಿ: ಹೆಬ್ರಿಯಲ್ಲಿ ಅಕ್ರಮ ಮದ್ಯ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮೇ. 26 ರಂದು ನಡೆದಿದೆ. ಪೊಲೀಸರು ವಶಕ್ಕೆ ಪಡೆದ ಆರೋಪಿ ‌ಉಪೇಂದ್ರ ನಾಯಕ್ (48) ಎಂಬವರು ಎಂದು ತಿಳಿದುಬಂದಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಹೆಬ್ರಿ ಠಾಣಾ ಪೊಲೀಸರು ಶಿವಪುರ ಗ್ರಾಮದ ಮುಳ್ಳುಗುಡ್ಡೆ ಕಾಳಾಯಿ ಎಂಬಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು, ಆತನ ಬಳಿ ಇದ್ದ ಸುಮಾರು 1300 ರೂ. ಮೌಲ್ಯದ ಮದ್ಯ ತುಂಬಿರುವ

ಅಕ್ರಮ ಮದ್ಯ ಮಾರಾಟ | ಓರ್ವನ ಬಂಧನ Read More »

ಆಸ್ತಿ ವಿವಾದ ಮಾರಾಮಾರಿ ನಾಲ್ವರ ಕೊಲೆಯಲ್ಲಿ ಅಂತ್ಯ

ಹೊಳೆನರಸೀಪುರ: ತಾಲ್ಲೂಕಿನ ಮಾರಗೌಡನಹಳ್ಳಿ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ನಡೆದ ಸಂಬಂಧಿಕರ ನಡುವಿನ ಘರ್ಷಣೆಯು ನಾಲ್ವರ ಸಾವಿನಲ್ಲಿ ಅಂತ್ಯವಾಗಿದೆ. ಗ್ರಾಮದ ಮಲ್ಲೇಶ್ ಹಾಗೂ ಸ್ವಾಮಿಗೌಡ ಎಂಬವರ ನಡುವೆ ಜಮೀನು ವಿಚಾರವಾಗಿ ಹಿಂದೆಯೂ ಗಲಾಟೆ ನಡೆಯುತ್ತಿತ್ತು. ನಿನ್ನೆ ಮಧ್ಯಾಹ್ನ ಮತ್ತೆ ಜಮೀನಿನ ಬಳಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಹರಿತವಾದ ಆಯುಧದಿಂದ ಇರಿದ ಪರಿಣಾಮ ಮಲ್ಲೇಶ ( 60 ), ಮಲ್ಲೇಶನ ಚಿಕ್ಕಪ್ಪನ ಮಗ ಮಂಜೇಶ ( 35 ), ಮಲ್ಲೇಶನ ಅಳಿಯ ರವಿ ( 35 )

ಆಸ್ತಿ ವಿವಾದ ಮಾರಾಮಾರಿ ನಾಲ್ವರ ಕೊಲೆಯಲ್ಲಿ ಅಂತ್ಯ Read More »

ಮೂಡಿಗೆರೆಯ ಮೂತ್ರ ಕುಡಿಸಿದ ಪ್ರಕರಣ: ಯುವಕನ ವಿರುದ್ಧ ಎಫ್ಐಆರ್ ದಾಖಲು | ವಿವಾಹಿತ ಮಹಿಳೆ ಜೊತೆಗಿನ ಫೋನ್ ಸಂಭಾಷಣೆ ವೈರಲ್

ಮೂಡಿಗೆರೆ: ಕಳೆದೆರಡು ವಾರಗಳಿಂದ ರಾಜ್ಯದಾದ್ಯಂತ ಧೂಳೆಬ್ಬಿಸಿರುವ ಮೂಡಿಗೆರೆಯಲ್ಲಿ ಪಿಎಸ್ ಐ, ದಲಿತ ಯುವಕನೋರ್ವನಿಗೆ ಮೂತ್ರ ಕುಡಿಸಿದ್ದರು ಎನ್ನಲಾದ ಪ್ರಕರಣ ದಿನ ಕಳೆದಂತೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪಿಎಸ್ಎ ವಿರುದ್ಧ ಎಫ್ಐಆರ್ ದಾಖಲಾದ ಬೆನ್ನಲ್ಲೇ ದೂರು ನೀಡಿದ್ದ ಯುವಕನ ಮೇಲೆಯೂ ಎಫ್ಐಆರ್ ದಾಖಲಾಗಿದೆ. ಕಿರುಗುಂದ ವಿವಾಹಿತ ಮಹಿಳೆಯೋರ್ವರ ದೂರಿನ ಆಧಾರದ ಮೇಲೆ ಬಂಧಿತನಾಗಿದ್ದ ಅದೇ ಗ್ರಾಮದ ದಲಿತ ಯುವಕ ಪುನೀತ್, ಗೋಣಿಬೀಡು ಪಿಎಸ್ಐ ವಿಚಾರಣೆ ವೇಳೆ ನನಗೆ  ಮೂತ್ರ ಕುಡಿಸಿ, ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿದ್ದಾರೆ.

ಮೂಡಿಗೆರೆಯ ಮೂತ್ರ ಕುಡಿಸಿದ ಪ್ರಕರಣ: ಯುವಕನ ವಿರುದ್ಧ ಎಫ್ಐಆರ್ ದಾಖಲು | ವಿವಾಹಿತ ಮಹಿಳೆ ಜೊತೆಗಿನ ಫೋನ್ ಸಂಭಾಷಣೆ ವೈರಲ್ Read More »

ಕುಡಿದ ಮತ್ತಿನಲ್ಲಿ ಬೈಕ್ ಚಲಾಯಿಸಿ ಹಿಂಬದಿ ಸವಾರನ ಜೀವ ತೆಗೆದ ಸವಾರ, ಚೆಕ್ ಪೋಸ್ಟ್ ಗೇಟ್ ಗೆ ಬೈಕ್ ಗುದ್ದಿದ ವೀಡಿಯೋ ವೈರಲ್

ತೆಲಂಗಾಣ: ಅಸಾದ್ಯ ರೀತಿಯಲ್ಲಿ ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ತಪ್ಪಿಸುವ ಸಾಹಸ ಮಾಡಲು ಹೋಗಿ ಹಿಂಬದಿ ಸವಾರನ ಸಾವಿಗೆ ಬೈಕ್ ಸವಾರನೇ ಕಾರಣನಾದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಂಚೇರಿಯಲ್ ಜಿಲ್ಲೆಯ ತಪುರ್ ಚೆಕ್ ಪೋಸ್ಟ್ ನಲ್ಲಿ ಘಟನೆಯು ಮೇ 22 ರ ಮಧ್ಯಾಹ್ನ 12.53 ರ ವೇಳೆಗೆ ನಡೆದಿದ್ದು , ಘಟನೆಗೆ ಸಂಬಂಧಿಸಿದ ಸಿಸಿಟಿವಿ ವೀಡಿಯೋ ವೈರಲ್ ಆಗುತ್ತಿದ್ದಂತೆ ಘಟನೆ ಬೆಳಕಿಗೆ ಬಂದಿದೆ. ಸೆರೆಯಾಗಿರುವ ವೀಡಿಯೋದಲ್ಲಿ ಯುವಕರಿಬ್ಬರು ಅತಿ ವೇಗವಾಗಿ ಬಂದಿದ್ದು, ಈ ಸಂದರ್ಭ ಚೆಕ್ ಪೋಸ್ಟ್

ಕುಡಿದ ಮತ್ತಿನಲ್ಲಿ ಬೈಕ್ ಚಲಾಯಿಸಿ ಹಿಂಬದಿ ಸವಾರನ ಜೀವ ತೆಗೆದ ಸವಾರ, ಚೆಕ್ ಪೋಸ್ಟ್ ಗೇಟ್ ಗೆ ಬೈಕ್ ಗುದ್ದಿದ ವೀಡಿಯೋ ವೈರಲ್ Read More »

ಕಡಬ: ಕಬ್ಬಿಣದ ಸಲಾಕೆಗೆ ವಿದ್ಯುತ್ ತಂತಿ ತಗುಲಿ ತೆಂಗಿನಕಾಯಿ ಕೊಯ್ಯುತ್ತಿದ್ದ ಯುವಕ ಮೃತ್ಯು

ಕಡಬ: ಕಬ್ಬಿಣದ ಸಲಾಕೆ ಸಹಾಯದಿಂದ ಮರದಿಂದ ತೆಂಗಿನಕಾಯಿ ಕೇಳುತ್ತಿದ್ದಾಗ ಸಲಕ್ಕೆ ಪಕ್ಕದಲ್ಲಿದ್ದ ವಿದ್ಯುತ್ ತಂತಿ ತಗುಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಬಡಬೆಟ್ಟು ಎಂಬಲ್ಲಿ ನಡೆದಿದೆ. ಕುಟ್ರುಪಾಡಿ ಗ್ರಾಮದ ಬಡಬೆಟ್ಟು ನಿವಾಸಿ ತಂಗಚ್ಚನ್ ಎಂಬವರ ಪುತ್ರ 35 ವರ್ಷದ ಲಿಜು ಮೃತಪಟ್ಟ ದುರ್ದೈವಿ. ಲಿಜು ತನ್ನ ಮನೆಯಲ್ಲಿ ಇಂದು ಬೆಳಿಗ್ಗೆ  ತೆಂಗಿನಕಾಯಿ ಕೀಳುತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಡಬ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕಡಬ: ಕಬ್ಬಿಣದ ಸಲಾಕೆಗೆ ವಿದ್ಯುತ್ ತಂತಿ ತಗುಲಿ ತೆಂಗಿನಕಾಯಿ ಕೊಯ್ಯುತ್ತಿದ್ದ ಯುವಕ ಮೃತ್ಯು Read More »

ಸುಳ್ಯ: ‘ಉಲಾಯಿ-ಪಿದಾಯಿ’, ಬಿಜೆಪಿ ಮಾಜಿ ಜಿ.ಪಂ.ಸದಸ್ಯ ಸಹಿತ ೧೦ ಮಂದಿ ಉಲಾಯಿ

ಸುಳ್ಯ: ಕೊರೊನಾ ಮಾರ್ಗ ಸೂಚಿ ಉಲ್ಲಂಘಿಸಿ ರಾತ್ರಿ ವೇಳೆ ಅಕ್ರಮವಾಗಿ ಜೂಜಾಟ ಆಡುತಿದ್ದ ಮಾಜಿ ಜಿಲ್ಲಾ ಪಂಚಾಯತ್ ಸೇರಿದಂತೆ 10 ಮಂದಿಯನ್ನು ಸುಳ್ಯ ಪೊಲೀಸ್ ಬಂಧಿಸಿದ ಘಟನೆ ನೆಡೆದಿದೆ. ಮಾಜಿ ಜಿ.ಪಂ.ಸದಸ್ಯ, ಬಿ.ಜೆ.ಪಿ ಕಾರ್ಯಕರ್ತ ಗಂಗಾಧರ ಕೇಪಳಕಜೆ ಸಹಿತ, ಗೋಪಾಲಕೃಷ್ಣ, ಗಂಗಾಧರಚಂದ್ರಶೇಖರ, ರಾಮ, ಸೋಮಶೇಖರ, ಜನಾರ್ದನ, ದೀಪಕ್ , ಮೋಹನ್ ದಾಸ್, ಅಶೋಕ, ದಯಾನಂದ ಬಂಧಿತ ಆರೋಪಿಗಳು. ಇವರು ನೆಲ್ಲೂರು ಕೆಮ್ರಾಜೆ ಗ್ರಾಮದ ಮೋಂಡಡ್ಕದಲ್ಲಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದರು. ಈ ವೇಳೆ ರಾತ್ರಿ ಗಸ್ತು ನಿರತ ಸುಳ್ಯ

ಸುಳ್ಯ: ‘ಉಲಾಯಿ-ಪಿದಾಯಿ’, ಬಿಜೆಪಿ ಮಾಜಿ ಜಿ.ಪಂ.ಸದಸ್ಯ ಸಹಿತ ೧೦ ಮಂದಿ ಉಲಾಯಿ Read More »

ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪಿ ಗೋಣಿಬೀಡು ಪಿಎಸ್ಐ ಅಮಾನತು

ಮೂಡಿಗೆರೆ: ಮಹಿಳೆ ನಾಪತ್ತೆ ಪ್ರಕರಣದಲ್ಲಿ ಆರೋಪಿ ಎನ್ನಲಾಗಿದ್ದ ದಲಿತ ಯುವಕನೋರ್ವನಿಗೆ ತಲೆಕೆಳಗಾಗಿ ಕಟ್ಟಿಹಾಕಿ ಬೇರೊಬ್ಬ ಆರೋಪಿಯ ಮೂತ್ರ ಕುಡಿಸಿದ ಆರೋಪ ಎದುರಿಸುತ್ತಿರುವ ಪಿಎಸ್ಐ ಯನ್ನು ಅಮಾನತು ಮಾಡಲಾಗಿದೆ. ಮೇ10ರಂದು ಪುನೀತ್ ಎಂಬವನನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸುವಾಗ ಈ ಘಟನೆ ನಡೆದಿತ್ತು. ನಂತರ ಪಿಎಸ್ ಐ ಅರ್ಜುನ್ ಅವರ ಈ ಅಮಾನವೀಯ ವರ್ತನೆ ತಿಳಿಯುತ್ತಿದ್ದಂತೆ ಹಲವೆಡೆ ಪಿಎಸೈ ಅಮಾನತಿಗೆ ಸಾರ್ವಜನಿಕರು ಪ್ರತಿಭಟನೆ ನಡೆಸಿ ಒತ್ತಾಯಿಸಿದ್ದರು. ಅದರಂತೆ ಅರ್ಜುನ್ ಅವರನ್ನು ಪಶ್ಚಿಮ ವಲಯ ಐಜಿಪಿ ನಿನ್ನೆ ಸೇವೆಯಿಂದ ಅಮಾನತುಗೊಳಿಸಿ

ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪಿ ಗೋಣಿಬೀಡು ಪಿಎಸ್ಐ ಅಮಾನತು Read More »

ರಿಯಾದ್ ನಲ್ಲಿ ರಸ್ತೆ ಅಪಘಾತಕ್ಕೆ ಕರಾವಳಿ ಮೂಲದ ಮಗು ‌ಬಲಿ

ಮಂಗಳೂರು.ಮೇ23:‌ ಇಲ್ಲಿನ ಮೂಡುಬಿದಿರೆ ಪುರಸಭಾ ವ್ಯಾಪ್ತಿ ಕಲ್ಲಬೆಟ್ಟು ಮೂಲದ ದಂಪತಿಯ ಮಗು ರಿಯಾದ್ ನಲ್ಲಿ ನಡೆದಕಾರು ಅಪಘಾತದಲ್ಲಿ ಮೃತಪಟ್ಟಿದೆ. ಕಲ್ಲಬೆಟ್ಟು ಗಂಟಾಲ್ಕಟ್ಟೆ ಮೂಲದ ಆದಿಲ್ ದಂಪತಿ ರಿಯಾದ್ ನಲ್ಲಿ ವಾಸವಾಗಿದ್ದಾರೆ. ಆದಿಲ್ ಅವರು ಟ್ರಾವೆಲ್ ಏಜೆನ್ಸಿ ಹೊಂದಿದ್ದಾರೆ. ಅವರ ಕುಟುಂಬ ತಮ್ಮ ಕಾರಿನಲ್ಲಿ ದಮ್ಮಾಮ್ ಗೆ ತೆರಳಿತ್ತು. ಕೆಲಸ ಮುಗಿಸಿ ರಿಯಾದ್ ಗೆ ವಾಪಾಸಾಗುತ್ತಿದ್ದಾಗ ಆದಿಲ್ ಚಲಾಯಿಸುತ್ತಿದ್ದ ಕಾರು ಅಪಘಾತಕ್ಕೆ ಈಡಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ದಂಪತಿಗಳ ಒಂದು ವರ್ಷದ ಗಂಡು ಮಗು ಓವೈಸಿ ಆದಿಲ್ ಗೆ ಗಂಭೀರ

ರಿಯಾದ್ ನಲ್ಲಿ ರಸ್ತೆ ಅಪಘಾತಕ್ಕೆ ಕರಾವಳಿ ಮೂಲದ ಮಗು ‌ಬಲಿ Read More »

ಜೈಲಿನಿಂದ ಬಿಡುಗಡೆಯಾದವನ ರುಂಡ ಚೆಂಡಾಡಿದ ಹಂತಕರು. ಏನಿದು ಭೀಬತ್ಸ ಕೃತ್ಯ? ಮುಂದೆ ಓದಿ..

ಹಾಸನ.ಮೇ23: ಎರಡು ವಾರದ ಹಿಂದಷ್ಟೆ ಜೈಲಿನಿಂದ ಹೊರಬಂದಿದ್ದ ರೌಡಿಶೀಟರ್ ಒಬ್ಬನ ತಲೆಯನ್ನು ಹಾಡುಹಗಲೇ ಮಚ್ಚಿನಿಂದ ಕೊಚ್ಚಿ, ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರದ ವಲ್ಲಭಾಯ್ ರಸ್ತೆಯ ನಿವಾಸಿ ಭರತ್ ಎಂಬುವನೇ ಕೊಲೆಯಾದ ಯುವಕ. ಇಂದು ಹಾಸನ ಸಂತೆಪೇಟೆಯ 80 ಫೀಟ್ ರಸ್ತೆಯಲ್ಲಿ ಭರತ್​​ ಬೈಕ್​ನಲ್ಲಿ ತೆರಳುತ್ತಿದ್ದಾಗ ಈ ಭೀಕರ ಘಟನೆ ನಡೆದಿದೆ. ಮಚ್ಚಿನಿಂದ ಕೊಚ್ಚಿರುವ ಹಂತಕರು ತಲೆಯನ್ನು ಎರಡು ಹೋಳು ಮಾಡಿದ್ದಾರೆ ಎನ್ನಲಾಗಿದೆ. ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ. ಪೂರ್ವದ್ವೇಷದಿಂದಲೇ‌

ಜೈಲಿನಿಂದ ಬಿಡುಗಡೆಯಾದವನ ರುಂಡ ಚೆಂಡಾಡಿದ ಹಂತಕರು. ಏನಿದು ಭೀಬತ್ಸ ಕೃತ್ಯ? ಮುಂದೆ ಓದಿ.. Read More »