ಕ್ರೈಂ

ಫೋಟೋದಲ್ಲಿ ರೈಲು ಬೇಕು ಎಂದು ಕದಲದೆ ನಿಂತಿದ್ದ ಯುವಕರಿಗೆ ರೈಲ್ ಢಿಕ್ಕಿ – ನಾಲ್ವರು ದುರ್ಮರಣ

ನವದೆಹಲಿ: ಸೆಲ್ಫಿ ತೆಗೆದುಕೊಳ್ಳುತ್ತಿದ್ದ ನಾಲ್ವರು ಯುವಕರಿಗೆ ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಮಂಗಳವಾರ ದೆಹಲಿಯ ಹೊರವಲಯದಲ್ಲಿರುವ ಗುರುಗ್ರಾಮ್‍ನಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ಮೇಲ್ಸೇತುವೆ ಬಳಿ ನಡೆದಿದೆ. ಮೃತರನ್ನು ದೇವಿಲಾಲ್ ಕಾಲೋನಿ ನಿವಾಸಿಗಳಾದ ಸಮೀರ್ (19), ಮೊಹಮ್ಮದ್ ಅನಸ್ (20), ಯೂಸುಫ್ ಅಲಿಯಾಸ್ ಭೋಲಾ (21) ಮತ್ತು ಯುವರಾಜ್ ಗೋಗಿಯಾ (18) ಎಂದು ಗುರುತಿಸಲಾಗಿದೆ. ಇವರಲ್ಲಿ ಒಬ್ಬ 9 ನೇ ತರಗತಿ ವಿದ್ಯಾರ್ಥಿಯಾಗಿದ್ದು, ಮತ್ತೊಬ್ಬ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಸರ್ಕಾರಿ ರೈಲ್ವೆ […]

ಫೋಟೋದಲ್ಲಿ ರೈಲು ಬೇಕು ಎಂದು ಕದಲದೆ ನಿಂತಿದ್ದ ಯುವಕರಿಗೆ ರೈಲ್ ಢಿಕ್ಕಿ – ನಾಲ್ವರು ದುರ್ಮರಣ Read More »

ಧಾರವಾಡ: ಹಿರಿಯ ಕವಿ,ನಾಡೋಜ ಚೆನ್ನವೀರ ಕಣವಿ ಇನ್ನಿಲ್ಲ

ಸಮಗ್ರ ನ್ಯೂಸ್ ಡೆಸ್ಕ್: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ನಾಡೋಜ ಚೆನ್ನವೀರ ಕಣವಿ (93), ಇಂದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಈ ಮೂಲಕ ಕನ್ನಡ ಸಾಹಿತ್ಯ ಲೋಕದ ಹಿರಿಯ ಕೊಂಡಿಯೊಂದು ಕಳಚಿದಂತೆ ಆಗಿದೆ. ಅನಾರೋಗ್ಯದಿಂದಾಗಿ ಜನವರಿ 14ರಿಂದ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ನಾಡೋಜ ಚೆನ್ನವೀರ ಕಣವಿ ದಾಖಲಾಗಿ, ಪಡೆಯುತ್ತಿದ್ದರು. ನಿನ್ನೆ ಅವರ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿಸಲಾಗಿತ್ತು. ಚೆನ್ನವೀರ ಕಣವಿ ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ್‌ಎಂದು ಪ್ರಸಿದ್ಧಿರಾದ ಕನ್ನಡದ ಖ್ಯಾತ ವಿದ್ವಾಂಸ

ಧಾರವಾಡ: ಹಿರಿಯ ಕವಿ,ನಾಡೋಜ ಚೆನ್ನವೀರ ಕಣವಿ ಇನ್ನಿಲ್ಲ Read More »

ಕಾಸರಗೋಡು: ಕೊಲೆ ಪ್ರಕರಣದ ಆರೋಪಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಕೊಲೆ ಸೇರಿದಂತೆ ಹಲವು ಪ್ರಕರಣದ ಆರೋಪಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಅಣ೦ಗೂರು ಜೆ. ಪಿ ಕಾಲನಿಯ ಜ್ಯೋತಿಷ್ (35) ಮೃತಪಟ್ಟವನು. ಫೆ.15ರ ಇಂದು ಬೆಳಿಗ್ಗೆ ತನ್ನ ಮನೆ ಸಮೀಪದ ಮರವೊಂದರ ರೆಂಬೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದ ಜ್ಯೋತಿಷ್ ಇಂದು ಬೆಳಿಗ್ಗೆ ಮನೆಯವರು ಗಮನಿಸಿದಾಗ ನಾಪತ್ತೆಯಾಗಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಜ್ಯೋತಿಷ್ ಮೇಲೆ ಬಂಗ್ರಗುಡ್ಡೆ ಯ ಸಿನಾನ್, ಸೂರ್ಲು ವಿನ

ಕಾಸರಗೋಡು: ಕೊಲೆ ಪ್ರಕರಣದ ಆರೋಪಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ Read More »

ಹುಟ್ಟುಹಬ್ಬದಂದೇ ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು ಬಾಲಕಿ ಸಾವು

ಹೈದರಾಬಾದ್: ಹುಟ್ಟುಹಬ್ಬದ ದಿನ ಬಿಸಿ ಸಾಂಬಾರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಬಾಲಕಿ ಸಾವನ್ನಪ್ಪಿರುವ ದುರಂತ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಕಲಗಾರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಿವ ಮತ್ತು ಭಾನುಮತ್ ಅವರ ಪುತ್ರಿ ತೇಜಸ್ವಿ ತನ್ನ ಹುಟ್ಟುಹಬ್ಬದ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದಳು. ಆಕೆಯ ಪೋಷಕರು ಅತಿಥಿಗಳನ್ನು ಭೇಟಿ ಮಾಡಲು ಮತ್ತು ಊಟ ಬಡಿಸಲು ಹೋದಾಗ, ತೇಜಸ್ವಿ ಅಡುಗೆಮನೆಗೆ ಹೋಗಿ ಕುರ್ಚಿ ಮೇಲೆ ಹತ್ತಿ ಆಟವಾಡುತ್ತಿದ್ದ ವೇಳೆ ಬಿಸಿ ಸಾಂಬಾರ್ ತುಂಬಿದ ಪಾತ್ರೆಯಲ್ಲಿ ಬಿದ್ದಿದ್ದಾಳೆ.

ಹುಟ್ಟುಹಬ್ಬದಂದೇ ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು ಬಾಲಕಿ ಸಾವು Read More »

ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಗಂಭೀರ

ಸಮಗ್ರ ನ್ಯೂಸ್ ಡೆಸ್ಕ್: ಕನ್ನಡದ ಹಿರಿಯ ಕವಿ , ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಧಾರವಾಡದ ಎಸ್ ​ ಡಿಎಂ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ​ ಬಿಡುಗಡೆ ಮಾಡಲಾಗಿದೆ . ಕಣವಿಯವರು ಇನ್ನೂ ಕೂಡ ನಿದ್ರಾಮಂಪರಿನಲ್ಲಿಯೇ ಇದ್ದು, ರಕ್ತದೊತ್ತಡ ಹೆಚ್ಚಾಗಿದೆ ಎಂದು ಎಸ್​ಡಿಎಂ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್​ ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಧಾರವಾಡದ ಸತ್ತೂರಿನ‌ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿ ಚಿಕಿತ್ಸೆ

ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಗಂಭೀರ Read More »

ಸ್ಯಾಂಡಲ್ ವುಡ್ ಹಿರಿಯ ನಟಿ ಭಾರ್ಗವಿ ನಾರಾಯಣ್ ಇನ್ನಿಲ್ಲ

ಸಮಗ್ರ ನ್ಯೂಸ್ ಡೆಸ್ಕ್: ಅನಾರೋಗ್ಯದಿಂದ ಬಳಲುತ್ತಿದ್ದ ಚಂದನವನದ ಹಿರಿಯ ನಟಿ ಭಾರ್ಗವಿ ನಾರಾಯಣ್ ಇದೀಗ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ಭಾರ್ಗವಿ ನಾರಾಯಣ್ ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ಭಾರತೀಯ ಚಲನಚಿತ್ರದ ನಟಿ ಮತ್ತು ಕರ್ನಾಟಕದ, ರಂಗಭೂಮಿಯ ಕಲಾವಿದೆ. ಎರಡು ಕನಸು, ಪಲ್ಲವಿ ಅನುಪಲ್ಲವಿ, ಹಾಗೂ ಬಾ ನಲ್ಲೆ ಮಧುಚಂದ್ರಕ್ಕೆ ಸೇರಿದಂತೆ ಹಲವು ಜನಪ್ರಿಯ ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಭಾರ್ಗವಿ ನಾರಾಯಣ್ ಪ್ರಸಿದ್ಧ ಟಿವಿ ಧಾರಾವಾಹಿಗಳಾದ ‘ಮಂಥನಾ’ ಮತ್ತು ‘ಮುಕ್ತಾ’ ಸೇರಿದಂತೆ ಕನ್ನಡದ ಅನೇಕ ನಾಟಕಗಳನ್ನು ನಟಿಸಿದ್ದಾರೆ. ಅವರು

ಸ್ಯಾಂಡಲ್ ವುಡ್ ಹಿರಿಯ ನಟಿ ಭಾರ್ಗವಿ ನಾರಾಯಣ್ ಇನ್ನಿಲ್ಲ Read More »

ರಸ್ತೆಯ ಡಿವೈಡರ್ ಮೇಲೆ ನಿಂತಿದ್ದ ನಾಲ್ವರ ಮೇಲೆ ಹತ್ತಿದ ಕಾರು – ಓರ್ವ ಯುವತಿ ದುರ್ಮರಣ

ಕಾರವಾರ: ದಾಂಡೇಲಿ ನಗರದ ಜೆ. ಎನ್. ಎಸ್ ರಸ್ತೆಯ ಡಿವೈಡರ್ ಮೇಲೆ ನಿಂತಿದ್ದ ನಾಲ್ವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮಾವನನ್ನು ಬೆಂಗಳೂರಿಗೆ ಬಿಡಲು ತನ್ನ ಅಕ್ಕನೊಂದಿಗೆ ಬಂದಿದ್ದ ಬಿಂದು ಗುಡಿ ಎಂಬ 24 ವರ್ಷದ ಯುವತಿ ಸಾವಿಗೀಡಾದ ನತದೃಷ್ಟೆ. ಬಸ್‌ ನಿಲ್ದಾಣದಿಂದ ವಾಪಾಸ್ ಬರುವಾಗ ರಸ್ತೆ ದಾಟಿ ಡಿವೈಡರ್ ಮೇಲೆ ಆ ನಾಲ್ವರೂ ಒಟ್ಟುಗೂಡಿ ನಿಂತಿದ್ದರು. ಏಕಾಏಕಿ ಬಂದ ಕಾರು ಆ ನಾಲ್ವರ ಮೇಲೆ ಹತ್ತಿ, ಡಿಕ್ಕಿ

ರಸ್ತೆಯ ಡಿವೈಡರ್ ಮೇಲೆ ನಿಂತಿದ್ದ ನಾಲ್ವರ ಮೇಲೆ ಹತ್ತಿದ ಕಾರು – ಓರ್ವ ಯುವತಿ ದುರ್ಮರಣ Read More »

ಮದುವೆ ಮನೆ ಬಳಿ ಬಾಂಬ್ ಸ್ಪೋಟ| ಓರ್ವ ದುರ್ಮರಣ, ಇಬ್ಬರು ಗಂಭೀರ| Dj ಪಾರ್ಟಿ ಗಲಾಟೆ ತಂದಿಟ್ಟಿತೇ ಕುತ್ತು?

ಸಮಗ್ರ ನ್ಯೂಸ್ ಡೆಸ್ಕ್: ಮದುವೆ ಮನೆ ಸಮೀಪ ಬಾಂಬ್ ಸ್ಪೋಟಗೊಂಡು ಓರ್ವ ಯುವಕ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆಕೇರಳದ ಕಣ್ಣೂರಿನಲ್ಲಿ ನಡೆದಿದೆ‌ ಏಚೂರು ನಿವಾಸಿ ಜಿಷ್ಣು( 26) ಮೃತ ದುರ್ದೈವಿ. ಹೇಮಂತ್ ಹಾಗೂ ಅರವಿಂದ್ ಗೆ ಗಂಭೀರ ಗಾಯಗಳಾಗಿದೆ. ತೊಟ್ಟಡ ಎಂಬಲ್ಲಿರುವ ವಧುವಿನ ಮನೆಯಲ್ಲಿ ತಡರಾತ್ರಿಯವರೆಗೆ DJ ಪಾರ್ಟಿ ಆಯೋಜಿಸಲಾಗಿತ್ತು. ಈ ವಿಚಾರದಲ್ಲಿ ಪಕ್ಕದ ಮನೆಯವರಿಗೆ ಜಗಳ ಕೂಡ ನಡೆದಿತ್ತು. ಬಳಿಕ ಸಮಾಧಾನ ವಾಗಿತ್ತು. ಆದರೆ ಇಂದು ವರನ ಮನೆಯಲ್ಲಿ ವಿವಾಹ ಕಾರ್ಯಕ್ರಮ ಮುಗಿಸಿ ಮರಳುವಾಗ

ಮದುವೆ ಮನೆ ಬಳಿ ಬಾಂಬ್ ಸ್ಪೋಟ| ಓರ್ವ ದುರ್ಮರಣ, ಇಬ್ಬರು ಗಂಭೀರ| Dj ಪಾರ್ಟಿ ಗಲಾಟೆ ತಂದಿಟ್ಟಿತೇ ಕುತ್ತು? Read More »

ನಾಲ್ಕು ವರ್ಷದ ಮಗುವಿನ ಮೇಲೆ ಹಂದಿಗಳು ದಾಳಿ

ಸಮಗ್ರ ನ್ಯೂಸ್ ಡೆಸ್ಕ್: ಆಟವಾಡುತ್ತಿದ್ದ ನಾಲ್ಕು ವರ್ಷದ ಮಗುವಿನ ಮೇಲೆ ಹಂದಿಗಳು ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ‌ ಕುಷ್ಟಗಿ ತಾಲೂಕಿನ ದೋಣಿಹಳ್ಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವನ್ನೂರ್ ಅಲಿ ತಂದಿ ಹುಸೇನಸಾಬ್ ಬಲಕುಂದಿ ಎಂಬ ನಾಲ್ಕು ವರ್ಷದ ಮಗು ಆಟವಾಡುವ ವೇಳೆ ಹಂದಿಗಳು ದಾಳಿ ಮಾಡಿ ಮಗುವಿನ ಕಿವಿ, ಮುಖವನ್ನು ಕಚ್ಚಿದ ಹಂದಿಗಳು ಆತನನ್ನು ಎಳೆದೊಯ್ಯುವ ಪ್ರಯತ್ನವನ್ನು ಮಾಡಿವೆ. ಕೂಡಲೇ ಘಟನೆಯನ್ನು ನೋಡಿದ ಗ್ರಾಮಸ್ಥರು ಹಂದಿಗಳಿಂದ ಮಗುವನ್ನು ಪಾರು ಮಾಡಿದ್ದಾರೆ. ಈ ಘಟನೆಯಿಂದ ರೊಚ್ಚಿಗೆದ್ದ ನಿವಾಸಿಗಳು

ನಾಲ್ಕು ವರ್ಷದ ಮಗುವಿನ ಮೇಲೆ ಹಂದಿಗಳು ದಾಳಿ Read More »

ಕೋರ್ಟ್ ಆವರಣದಲ್ಲಿ ದುರ್ವರ್ತನೆ| ವಕೀಲ ಜಗದೀಶ್ ಗೆ 14 ದಿನ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್ ಡೆಸ್ಕ್: ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ವಕೀಲ ಜಗದೀಶ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೋರ್ಟ್ ಆವರಣದಲ್ಲಿ ದುರ್ವರ್ತನೆ ತೋರಿರುವುದಾಗಿ‌ ಆರೋಪಿಸಿ ಶನಿವಾರ ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ನೇತೃತ್ವದ ನಿಯೋಗವು ಪೊಲೀಸ್ ಕಮೀಷನರ್ ಕಮಲ್ ಪಂತ್​​ಗೆ ದೂರು ನೀಡಿದ್ದರು. ವಕೀಲ ಜಗದೀಶ್ ರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನ ಮಾಡುವುದಕ್ಕೆ ಒಂದನೇ ಎಸಿಎಂಎಂ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ತನಿಖೆ ಮಾಡುವಂತೆ ಕೇಂದ್ರ

ಕೋರ್ಟ್ ಆವರಣದಲ್ಲಿ ದುರ್ವರ್ತನೆ| ವಕೀಲ ಜಗದೀಶ್ ಗೆ 14 ದಿನ ನ್ಯಾಯಾಂಗ ಬಂಧನ Read More »