ಕ್ರೈಂ

ತಾರಕಕ್ಕೇರಿದ ಹಿಜಾಬ್ ವಿವಾದ|ಕಾಲೇಜು ಶಿಕ್ಷಕನಿಗೆ ರಾಡ್‍ನಿಂದ ಮಾರಣಾಂತಿಕ ಹಲ್ಲೆ

ಬಾಗಲಕೋಟೆ: ಶಿರವಸ್ತ್ರ- ಕೇಸರಿ ವಿವಾದ ತಾರಕಕ್ಕೇರಿದ ಬೆನ್ನಲ್ಲೇ ಕಾಲೇಜಿನ ಶಿಕ್ಷಕರೊಬ್ಬರಿಗೆ ಕಿಡಿಗೇಡಿಗಳು ರಾಡ್‍ನಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಬನಹಟ್ಟಿಯಲ್ಲಿ ನಡೆದಿದೆ. ಬನಹಟ್ಟಿಯ ಖಾಸಗಿ ಕಾಲೇಜಿನ ಶಿಕ್ಷಕ ಮಂಜುನಾಥ್ ನಾಯಕ್ ಹಲ್ಲೆಗೆ ಒಳಗಾದವರು. ಸಂಜೆ ಹೊತ್ತಿಗೆ ಶಿಕ್ಷಕ ಮಂಜುನಾಥ್ ನಾಯಕ್ ಕಾಲೇಜು ಬಳಿ ರಸ್ತೆ ದಾಟುವಾಗ ಕಿಡಿಗೇಡಿಗಳು ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಮಂಜುನಾಥ್ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದು, ಬನಹಟ್ಟಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾರಕಕ್ಕೇರಿದ ಹಿಜಾಬ್ ವಿವಾದ|ಕಾಲೇಜು ಶಿಕ್ಷಕನಿಗೆ ರಾಡ್‍ನಿಂದ ಮಾರಣಾಂತಿಕ ಹಲ್ಲೆ Read More »

ರಕ್ಷಣೆಗೆ ಬರಲೇ ಇಲ್ಲ ಸೂಪರ್ ಹೀರೋ| ವೆಬ್ ಸರಣಿ‌ ನೋಡಿ 11ನೇ ಮಹಡಿಯಿಂದ ಹಾರಿದ‌ ಬಾಲಕ ಸಾವು

ಸಮಗ್ರ ಡಿಜಿಟಲ್ ಡೆಸ್ಕ್: ವೆಬ್ ಸರಣಿಗೆ ಅಡಿಕ್ಟ್ ಆಗಿದ್ದ ಬಾಲಕನೊಬ್ಬ ಕಟ್ಟಡದಿಂದ ಕೆಳಗೆ ಹಾರಿ ಪ್ರಾಣ ಬಿಟ್ಟ ಆಘಾತಕಾರಿ ಘಟನೆ ಕೊಲ್ಕತ್ತಾದಲ್ಲಿ ನಡೆದಿದೆ. 12 ವರ್ಷದ ಬಾಲಕ ಅಪಾರ್ಟ್‌ಮೆಂಟ್‌ನ 11ನೇ ಮಹಡಿಯಿಂದ ಹಾರಿದ್ದಾನೆ. ಪ್ಲಾಟಿನಂ ಎಂಡ್ ವೆಬ್ ಸರಣಿಯಲ್ಲಿ ತೋರಿಸಿದಂತೆ, ನನ್ನನ್ನು ರಕ್ಷಿಸಲು ಸೂಪರ್‌ ಹೀರೋ ಬರುತ್ತಾನೆಂದು ಬಾಲಕ ನಂಬಿದ್ದಾನೆ. ಇದನ್ನು ಪರೀಕ್ಷಿಸಲು ಆತ ಮೇಲಿಂದ ಹಾರಿದ್ದಾನೆ ಎನ್ನಲಾಗಿದೆ. ಪೋಲೀಸರ ಪ್ರಕಾರ, ಈ ಜಪಾನೀಸ್ ಧಾರಾವಾಹಿಯು ಕಾಲ್ಪನಿಕ ಕಥೆಯನ್ನು ಆಧರಿಸಿದೆ. ಇದರಲ್ಲಿ ಹದಿಹರೆಯದ ನಾಯಕನು ಕಟ್ಟಡದಿಂದ ಜಿಗಿಯುತ್ತಾನೆ.

ರಕ್ಷಣೆಗೆ ಬರಲೇ ಇಲ್ಲ ಸೂಪರ್ ಹೀರೋ| ವೆಬ್ ಸರಣಿ‌ ನೋಡಿ 11ನೇ ಮಹಡಿಯಿಂದ ಹಾರಿದ‌ ಬಾಲಕ ಸಾವು Read More »

ಮಡಿಕೇರಿ: ಕೇಸರಿ ಶಾಲು ಹಾಕುವ ವಿಚಾರದಲ್ಲಿ ಒಂದೇ ಗುಂಪಿನೊಳಗೆ ಘರ್ಷಣೆ; ವಿದ್ಯಾರ್ಥಿಗೆ ಚೂರಿ ಇರಿತ

ಸಮಗ್ರ ನ್ಯೂಸ್ ಡೆಸ್ಕ್: ಕಾಲೇಜು ಒಳಗೆ ಕೇಸರಿ ಶಾಲು ಹಾಕುವ ವಿಚಾರದಲ್ಲಿ ಒಂದೇ ಗುಂಪಿನ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದು ವಿದ್ಯಾರ್ಥಿ ಮೇಲೆ ಚಾಕು ದಾಳಿ ನಡೆದಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದ ಸುಂದರನಗರ ಕಾಲೇಜಿನ ಆವರಣದಲ್ಲಿ ಸಂಭವಿಸಿದೆ. ಸುಂದರನಗರ ಕಾಲೇಜು ಸೀನಿಯರ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಾಕುವಂತೆ ಅಂತಿಮ ವರ್ಷದ ವಿದ್ಯಾರ್ಥಿಗಳು ಒತ್ತಾಯ ಮಾಡಿದಾಗ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಂತಿಮ ವರ್ಷದ ವಿದ್ಯಾರ್ಥಿ ಸಂದೀಪ್ ಎಂಬಾತನ ಹೆಗಲು ಹಾಗೂ

ಮಡಿಕೇರಿ: ಕೇಸರಿ ಶಾಲು ಹಾಕುವ ವಿಚಾರದಲ್ಲಿ ಒಂದೇ ಗುಂಪಿನೊಳಗೆ ಘರ್ಷಣೆ; ವಿದ್ಯಾರ್ಥಿಗೆ ಚೂರಿ ಇರಿತ Read More »

ಸುಳ್ಯ: ಪಲ್ಟಿಯಾದ ಕಾರೊಳಗೆ ಭಿನ್ನ ಕೋಮಿನ ಜೋಡಿ..!

ಸಮಗ್ರ‌ ನ್ಯೂಸ್ ಡೆಸ್ಕ್: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರೊಳಗೆ ಅನ್ಯಕೋಮಿನ ಯುವ ಜೋಡಿಯೊಂದು ಪತ್ತೆಯಾದ ಘಟನೆ ಸುಳ್ಯ ಸಮೀಪದ ನಾಗಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಆಲೆಟ್ಟಿ ರಸ್ತೆಯಲ್ಲಿ ಕೇರಳದ ಬಂದಡ್ಕ ಕಡೆಯಿಂದ ಬಂದ ಬ್ಯಾಲೆನೊ ಕಾರು ಅತೀ ವೇಗದಿಂದ ಬಂದು ನಾಗಪಟ್ಟಣ ವಿಶ್ರಾಂತಿ ಗೃಹದ ಬಳಿಯ ತಿರುವಿನಲ್ಲಿ ಪಲ್ಟಿಯಾಗಿದೆ. ಈ ಕಾರಿನಲ್ಲಿ ಮಡಿಕೇರಿ ಮೂಲದ ಅನ್ಯಕೋಮಿನ ಯುವಕ ಮತ್ತು ಯುವತಿ ಪತ್ತೆಯಾಗಿದ್ದು, ಇವರಿಬ್ಬರು ಕೇರಳದ ಬಂದಡ್ಕ ಕಡೆಯಿಂದ ಕೋಲ್ಚಾರು ಮಾರ್ಗವಾಗಿ ಹಿಂತಿರುಗಿ ಬರುತ್ತಿದ್ದರು. ಕಾರಲ್ಲಿದ್ದ ಇಬ್ಬರು ಸಣ್ಣ ಪುಟ್ಟ

ಸುಳ್ಯ: ಪಲ್ಟಿಯಾದ ಕಾರೊಳಗೆ ಭಿನ್ನ ಕೋಮಿನ ಜೋಡಿ..! Read More »

ಮಂಗಳೂರು: ಮುಸ್ಲಿಂ ಯುವಕನ‌ ಮೇಲೆ ಹಲ್ಲೆ

ಸಮಗ್ರ ನ್ಯೂಸ್ ಡೆಸ್ಕ್: ಮುಸ್ಲಿಂ ಯುವಕನ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ತೊಕ್ಕೊಟ್ಟು ಬಳಿ ನಡೆದಿದೆ. ಇಬ್ರಾಹೀಂ ಹರ್ಷದ್ (31) ಹಲ್ಲೆಗೊಳಗಾದ ಯುವಕ. ಖಾಸಗಿ ಬಸ್ ನಿರ್ವಾಹಕ ಯಶ್ಚಿತ್ ಹಾಗೂ ಇತರ ಇಬ್ಬರು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಹಲ್ಲೆಗೊಳಗಾದ ಯುವಕ‌ ಆರೋಪಿಸಿದ್ದಾರೆ. ದುಷ್ಕರ್ಮಿಗಳಲ್ಲಿ‌ ಓರ್ವ ಸಂಘಪರಿವಾರ ಸಂಘಟನೆಯಲ್ಲಿ‌ ಗುರುತಿಸಿಕೊಂಡಿದ್ದ ಎನ್ನಲಾಗಿದೆ. ಸಂತ್ರಸ್ತ ಯುವ ರಿಕ್ಷಾ ಚಾಲಕನಾಗಿದ್ದು, ತೊಕ್ಕೊಟ್ಟು ಆಟೋ ರಿಕ್ಷಾ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರನ್ನು ಕರೆದುಕೊಂಡು ಹೋಗುತ್ತಿರುವಾಗ ದುಷ್ಕರ್ಮಿಗಳ ತಂಡ ದಾಳಿ ನಡೆಸಿದೆ. ಈ

ಮಂಗಳೂರು: ಮುಸ್ಲಿಂ ಯುವಕನ‌ ಮೇಲೆ ಹಲ್ಲೆ Read More »

ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಹೊಟೇಲಿನೊಳಗೆ ನುಗ್ಗಿದ‌ ಕಾರು

ಸಮಗ್ರ ನ್ಯೂಸ್ ಡೆಸ್ಕ್: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗಡಿಯಾರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ಹೊಟೇಲಿಗೆ ನುಗ್ಗಿ ಪಕ್ಕದ ಕಂದಕಕ್ಕೆ ಉರುಳಿದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆ ಸಾಗುತ್ತಿದ್ದ ಸಾಗುತ್ತಿದ್ದ ಇಂಡಿಕಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಟೇಲ್ ಒಳಗೆ ನುಗ್ಗಿದೆ. ಪರಿಣಾಮ ಹೊಟೇಲ್ ಮಾಲಕರಾದ ರಿಯಾಝ್ ಅವರು ಗಂಭೀರ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ

ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಹೊಟೇಲಿನೊಳಗೆ ನುಗ್ಗಿದ‌ ಕಾರು Read More »

ಮದ್ರಸಾ ಉಸ್ತಾದ್ ನಿಂದ‌ ಬಾಲಕಿಯರಿಗೆ ಲೈಂಗಿಕ ಕಿರುಕುಳ| ಗುರುವಿಲ್ಲದ ವಿದ್ಯೆ ಕಲಿಸಲು ಹೊರಟ ಕಾಮುಕ ಗುರು!!

ಸಮಗ್ರ ನ್ಯೂಸ್ ಡೆಸ್ಕ್ : ಮದ್ರಸಾದಲ್ಲಿ ಮಕ್ಕಳಿಗೆ ವಿದ್ಯೆ ಕಲಿಸಬೇಕಾದ ಗುರುವೊಬ್ಬ ಕಾಮಪಾಠ‌ ಮಾಡಿದ ಆರೋಪ ಕೇಳಿ ಬಂದಿದ್ದು, ಈತನ ಕಾಮುಕತನಕ್ಕೆ ಅಪ್ರಾಪ್ತ ಬಾಲಕಿಯರು ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಶಂಶುಲ್ ಹುದಾ ಮದ್ರಸಾ ಶಾಲೆ, ಕುಂಡಡ್ಕ ಇಲ್ಲಿನ ಉಸ್ತಾದ್ ಸಿರಾಜುದ್ದೀನ್ ಮದನಿ ಎಂಬಾತ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಅಪ್ರಾಪ್ತ ಬಾಲಕಿಯ ತಾಯಿ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಠಾಣೆಯಲ್ಲಿ

ಮದ್ರಸಾ ಉಸ್ತಾದ್ ನಿಂದ‌ ಬಾಲಕಿಯರಿಗೆ ಲೈಂಗಿಕ ಕಿರುಕುಳ| ಗುರುವಿಲ್ಲದ ವಿದ್ಯೆ ಕಲಿಸಲು ಹೊರಟ ಕಾಮುಕ ಗುರು!! Read More »

ಗೋಣಿಯಲ್ಲಿ ಕಟ್ಟಿರಿಸಿದ‌್ದ 21 ಕ್ವಿಂಟಾಲ್ ಅಡಿಕೆ ಕಳ್ಳತನ

ಸಮಗ್ರ ನ್ಯೂಸ್ ಡೆಸ್ಕ್: ಅಂಗಳದಲ್ಲಿ ಒಣಗಿಸಿದ್ದ 62 ಮೂಟೆಗಳಷ್ಟು ಸಿಪ್ಪೆಗೋಟು ಅಡಕೆಯನ್ನು ರಾತ್ರೋರಾತ್ರಿ ಕಳ್ಳತನ ಮಾಡಿದ ಪ್ರಕರಣ ತಾಲೂಕಿನ ತಾಳಗುಪ್ಪ ಸಮೀಪದ ತಲವಾಟ ಗ್ರಾಮದಲ್ಲಿ ನಡೆದಿದೆ. ಸುಮಾರು 21 ಕ್ವಿಂಟಾಲ್‌ಗಳಷ್ಟು ಅಡಕೆ ಕಳ್ಳತನ ಆಗಿರಬಹುದು ಎಂದು ಅಂದಾಜಿಲಾಗಿದ್ದು, ಈ ಅಡಕೆಯ ಮೌಲ್ಯ 4.20 ಲಕ್ಷ ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ತಲವಾಟ ಗ್ರಾಮದ ಮೋಹನ ನಾಗಾನಾಯ್ಕ ಹಾಗೂ ನೆರೆಮನೆಯಲ್ಲಿರುವ ಮಾವ ಕನ್ನಪ್ಪ ಶಂಬುಲಿಂಗ ನಾಯ್ಕ ಅವರು ತಮ್ಮ ತಮ್ಮ ತೋಟದ ಗೋಟಡಿಕೆಯನ್ನು ಪಕ್ಕದ ಮನೆಯವರಾದ ಸತ್ಯನಾರಾಯಣ ನಾಗಾನಾಯ್ಕ

ಗೋಣಿಯಲ್ಲಿ ಕಟ್ಟಿರಿಸಿದ‌್ದ 21 ಕ್ವಿಂಟಾಲ್ ಅಡಿಕೆ ಕಳ್ಳತನ Read More »

ತಾಯಿ ಹಾಗೂ ನಾಲ್ಕು ಮಕ್ಕಳು ಮಲಗಿದಲ್ಲಿಯೇ ಬರ್ಬರವಾಗಿ ಹತ್ಯೆ| ಒಂದಿಷ್ಟೂ ಸುಳಿವು ಬಿಡದ ಹಂತಕ

ಸಮಗ್ರ ನ್ಯೂಸ್ ಡೆಸ್ಕ್: ಒಂದೇ ಕುಟುಂಬದ ನಾಲ್ವರು ಮಕ್ಕಳು ಸೇರಿದಂತೆ ಐವರನ್ನು ಬರ್ಬರವಾಗಿ ಹತ್ಯೆಗೈದಿರುವ ಭೀಕರ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆ.ಆರ್.ಎಸ್​ನಲ್ಲಿ ನಡೆದಿದೆ. ಕೆ.ಆರ್.ಎಸ್ ಗ್ರಾಮದ ಬಜಾರ್ ಲೈನ್ ನಿವಾಸಿ ಗಂಗರಾಮ್ ಪತ್ನಿ ಲಕ್ಷ್ಮೀ(30), ಮಕ್ಕಳಾದ ರಾಜ್ (12) ಕೋಮಲ್ (7), ಕುನಾಲ್(5) ಹಾಗೂ ಅಣ್ಣನ ಮಗ ಗೋವಿಂದ್(12) ಕೊಲೆಯಾದ ದುರ್ದೈವಿಗಳು. ಗಂಗರಾಮ್ ಹಾಗೂ ಆತನ ಅಣ್ಣ ಗಣೇಶ್ ಪ್ಲಾಸ್ಟಿಕ್ ಅಲಂಕಾರಿಕ ವಸ್ತುಗಳ ವ್ಯಾಪಾರಿಗಳಾಗಿದ್ದು, ಕರ್ನಾಟಕ ಮಾತ್ರವಲ್ಲದೇ ಹೊರ ರಾಜ್ಯಗಳಿಗೂ ಹೋಗಿ ವ್ಯಾಪಾರ ಮಾಡುತ್ತಾರಂತೆ. ಒಮ್ಮೆ

ತಾಯಿ ಹಾಗೂ ನಾಲ್ಕು ಮಕ್ಕಳು ಮಲಗಿದಲ್ಲಿಯೇ ಬರ್ಬರವಾಗಿ ಹತ್ಯೆ| ಒಂದಿಷ್ಟೂ ಸುಳಿವು ಬಿಡದ ಹಂತಕ Read More »

ರಿಕ್ಷಾದಿಂದ ಹೊರಗೆಸೆಯಲ್ಪಟ್ಟು ಮಹಿಳೆ ಸಾವು

ಸಮಗ್ರ ಕ್ರೈಂ ಡೆಸ್ಕ್: ಕಾರು ಹಾಗೂ ಆಟೋ ರಿಕ್ಷಾ ಮಧ್ಯೆ ಢಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ಆಟೋದಿಂದ ಹೊರಗೆ ಎಸೆಯಲ್ಪಟ್ಟು ಸಾವನ್ನಪ್ಪಿರುವ ಘಟನೆ ಬಂಟ್ವಾಳದ ಅಮ್ಟೂರು ಸಮೀಪದ ಸುಬ್ಬಕೋಡಿಯಲ್ಲಿ ನಡೆದಿದೆ. ಕಲ್ಲಡ್ಕ ಮುರಬೈಲು ನಿವಾಸಿ ದೇವಕಿ(70) ಮೃತಪಟ್ಟವರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಆಟೋ ಚಾಲಕ ಭೋಜ ಮೂಲ್ಯ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿವೆ. ಕಾರಿನಲ್ಲಿದ್ದವರಿಗೆ ಯಾವುದೇ ಗಾಯವಾಗಿಲ್ಲ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಿಕ್ಷಾದಿಂದ ಹೊರಗೆಸೆಯಲ್ಪಟ್ಟು ಮಹಿಳೆ ಸಾವು Read More »