ಕ್ರೈಂ

ಸಂಸದ ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ

ಸಮಗ್ರ ನ್ಯೂಸ್ ಡೆಸ್ಕ್: ಸಂಸದ ಅಸಾದುದ್ದೀನ್ ಓವೈಸಿ ತೆರಳುತ್ತಿದ್ದ ಕಾರಿನ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಉತ್ತರ ಪ್ರದೇಶದ ಮೀರತ್‌ನಿಂದ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಈ ಕುರಿತು ಅಸಾದುದ್ದೀನ್ ಓವೈಸಿ ಟ್ವೀಟ್ ಮಾಡಿದ್ದು, ‘ಮೀರತ್ ನಿಂದ ಹಿಂದಿರುಗುವಾಗ ತನ್ನ ಕಾರಿನ ಮೇಲೆ ಗುಂಡು ಹಾರಿಸಲಾಗಿದೆ’ ಎಂದು ಹೇಳಿದ್ದಾರೆ. ‘ಕೆಲವು ಸಮಯದ ಹಿಂದೆ, ನನ್ನ ಕಾರಿನ ಮೇಲೆ ಚಿಜಾರ್ಸಿ ಟೋಲ್ ಗೇಟ್ ಮೇಲೆ ಗುಂಡು ಹಾರಿಸಲಾಯಿತು. 4 ಸುತ್ತು ಗುಂಡು ಹಾರಿಸಲಾಗಿದೆ. ಅಲ್ಲಿ 3-4 ಜನರಿದ್ದರು, ಅವರೆಲ್ಲರೂ […]

ಸಂಸದ ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ Read More »

ಚಿತ್ರದುರ್ಗ: ನಿಂತಿದ್ದ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಕಾರು| ಮೂವರು ಸ್ಥಳದಲ್ಲೇ ಸ್ಪಾಟ್ ಔಟ್

ಸಮಗ್ರ ಕ್ರೈಂ ಡೆಸ್ಕ್: ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಹಿರಿಯೂರು ಬಳಿ ಸಂಭವಿಸಿದೆ. ಇಲ್ಲಿನ ಗುಯಿಲಾಳು ಟೋಲ್ ಗೇಟ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹಿರಿಯೂರು ಪಿಐ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿತ್ರದುರ್ಗ: ನಿಂತಿದ್ದ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಕಾರು| ಮೂವರು ಸ್ಥಳದಲ್ಲೇ ಸ್ಪಾಟ್ ಔಟ್ Read More »

ಪೋರ್ನ್ ವೆಬ್ ಸೈಟ್ ನಲ್ಲಿ ತನ್ನದೇ ವಿಡಿಯೋ ಕಂಡು ಕಂಗಾಲಾದ ಯುವಕ

ಸಮಗ್ರ ನ್ಯೂಸ್ ಡೆಸ್ಕ್: ಯುವಕನೊಬ್ಬ ಅಶ್ಲೀಲ ವೆಬ್‌ಸೈಟ್‌ ವೀಕ್ಷಿಸುತ್ತಿದ್ದಾಗ ತನ್ನದೇ ವೀಡಿಯೋ ಕಂಡು ದಂಗಾಗಿದ್ದಾನೆ. ಈ ಸಂಬಂಧ ಆಸ್ಟಿನ್‌ಟೌನ್‌ನ 25 ವರ್ಷದ ಯುವಕ ಕೇಂದ್ರ ವಿಭಾಗದ ಸೆನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಖಾಸಗಿ ಕಂಪೆನಿಯ ಉದ್ಯೋಗಿಯಾಗಿರುವ ಈತ ತನ್ನ ಗೆಳತಿ ಜತೆ ನಗರದ ಹೊಟೇಲೊಂದರಲ್ಲಿ ಖಾಸಗಿ ಕ್ಷಣಗಳನ್ನು ಕಳೆದಿದ್ದಾರೆ. ಆ ದೃಶ್ಯಗಳನ್ನು ಯಾರೋ ಸೆರೆ ಹಿಡಿದು, ವಿವಿಧ ಅಶ್ಲೀಲ ವೆಬ್‌ಸೈಟ್‌ಗಳಲ್ಲಿ ಅಪ್‌ಲೋಡ್‌ ಮಾಡಿದ್ದಾರೆ. ಇದು ಜ.21ರಂದು ಯುವಕನ ಗಮನಕ್ಕೆ ಬಂದಿದೆ. ಬಳಿಕ ಬೇರೆ ವೆಬ್‌ಸೈಟ್‌ಗಳಲ್ಲೂ ಈ

ಪೋರ್ನ್ ವೆಬ್ ಸೈಟ್ ನಲ್ಲಿ ತನ್ನದೇ ವಿಡಿಯೋ ಕಂಡು ಕಂಗಾಲಾದ ಯುವಕ Read More »

ಠಾಣೆಯೆದರು ನಿಲ್ಲಿಸಿದ್ದ ಪೊಲೀಸ್ ವಾಹನಕ್ಕೇ ಕನ್ನ ಹಾಕಿದ ಚಾಣಾಕ್ಷ ಕಳ್ಳ

ಸಮಗ್ರ ನ್ಯೂಸ್ ಡೆಸ್ಕ್: ಪೊಲೀಸ್ ಠಾಣೆ ಎದುರು ನಿಲ್ಲಿಸಿದ್ದ ಪೊಲೀಸ್ ವಾಹನ ಕಳ್ಳತನವಾಗಿರುವ ಘಟನೆ ಧಾರವಾಡ ಜಿಲ್ಲೆ ಅಣ್ಣಿಗೇರಿ ಪೊಲೀಸ್ ಠಾಣೆ ಎದುರು ನಡೆದಿದೆ. ನಾಗಪ್ಪ ಹಡಪದ ಎಂಬ ವ್ಯಕ್ತಿ ಪೊಲೀಸ್ ವಾಹನ ಎಗರಿಸಿಕೊಂಡು ಪೊಲೀಸ್ ವಾಹನದಲ್ಲಿ ಬ್ಯಾಡಗಿವರೆಗೂ ಹೋಗಿದ್ದಾನೆ. ಸದ್ಯ ಪೊಲೀಸರು ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ವಾಹನ ಪತ್ತೆ ಹಚ್ಚಿ ಆರೋಪಿಯನ್ನು ವಾಪಸ್ ಕರೆದುಕೊಂಡು ಬಂದಿದ್ದಾರೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಣ್ಣಿಗೇರಿ ಪಟ್ಟಣದ ಅಂಬಿಕಾ ನಗರ ನಿವಾಸಿ ನಾಗಪ್ಪ ಹಡಪದ ಎಂಬುವವರು ಪೊಲೀಸ್

ಠಾಣೆಯೆದರು ನಿಲ್ಲಿಸಿದ್ದ ಪೊಲೀಸ್ ವಾಹನಕ್ಕೇ ಕನ್ನ ಹಾಕಿದ ಚಾಣಾಕ್ಷ ಕಳ್ಳ Read More »

ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ನಿಧನ

ಸಮಗ್ರ ನ್ಯೂಸ್ ಡೆಸ್ಕ್: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ಇಂದು ನಿಧನರಾಗಿದ್ದಾರೆ. ಈ ಮೂಲಕ ಚೆಂದನವನದ ಹಿರಿಯ ಕಲಾವಿದ ಇನ್ನಿಲ್ಲವಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರು.ವಿದ್ಯಾರಣ್ಯಪುರದ ನಿವಾಸದಲ್ಲಿ ಅಶೋಕ್ ರಾವ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥ ಮಾಡಲಾಗಿದೆ. ಕನ್ನಡ ಸೇರಿದಂತೆ ಹಲವು ಚಿತ್ರಗಳಲ್ಲಿ ತಮ್ಮ ವಿಶಿಷ್ಟ ನಟನೆಯಿಂದ ನಟ ಅಶೋಕ್ ರಾವ್ ಗುರುತಿಸಿಕೊಂಡಿದ್ದರು. ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಅಶೋಕ್ ರಾವ್ ಅಭಿಮಾನಿಗಳ ಮನಗೆದ್ದಿದ್ದರು.

ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ನಿಧನ Read More »

ಸುಳ್ಯ: ಹೊಳೆಯಲ್ಲಿ ಮುಳುಗಿ ಬಾಲಕ ಸಾವು

ಸಮಗ್ರ ನ್ಯೂಸ್ ಡೆಸ್ಕ್: ಸುಳ್ಯ ಸಮೀಪದ ಪೈಚಾರು ದೊಡ್ಡೇರಿ ಬಳಿ ನದಿಯಲ್ಲಿ ಮುಳುಗಿ ಆರು ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ. ಆಂಧ್ರ ಮೂಲದ ಕುಟುಂಬಸ್ಥರು ಪೈಚಾರು ಬಳಿ ಬುಟ್ಟಿ ಹೆಣೆಯುವ ಕೆಲಸ ಮಾಡುತ್ತಿದ್ದು ಅಲ್ಲೇ ಪರಿಸರದಲ್ಲಿ ಟೆಂಟ್ ನಿರ್ಮಿಸಿ ವಾಸಿಸುತ್ತಿದ್ದರು. ಇಂದು ನದಿಗೆ ಸ್ನಾನ ಮಾಡಲೆಂದು ಕುಟುಂಬದ ಹಿರಿಯರು ಮತ್ತು ಮಕ್ಕಳು ಹೋಗಿದ್ದ ಸಂದರ್ಭದಲ್ಲಿ ಸ್ನಾನ ಮಾಡುತ್ತಿದ್ದ ಆರು ವರ್ಷದ ಮಗು ಕುಪ್ಪರಾ ಕಾಣೆಯಾಗಿದ್ದು, ಆತ ನೀರಿನಲ್ಲಿ ಮುಳುಗಿರುವ ಅನುಮಾನದಿಂದ ಹುಡುಕಾಡಿದಾಗ ಅಲ್ಲೇ ಪಕ್ಕದಲ್ಲಿ

ಸುಳ್ಯ: ಹೊಳೆಯಲ್ಲಿ ಮುಳುಗಿ ಬಾಲಕ ಸಾವು Read More »

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ| ಅಟೋ ಚಾಲಕನ ಬಂಧನ

ಸಮಗ್ರ ನ್ಯೂಸ್ ಡೆಸ್ಕ್: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ‌ ಆರೋಪದಲ್ಲಿ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಬಂಧಿತನನ್ನು ಕಂಬಳಬೆಟ್ಟು ನಿವಾಸಿ ಅಬ್ದುಲ್‌ ನಾಸಿರ್‌ ಎಂದು ಗುರುತಿಸಲಾಗಿದೆ. ಈತ ಪರಿಚಯದ ಅಪ್ರಾಪ್ತ ಬಾಲಕಿಯನ್ನು ತನ್ನ ಆಟೋದಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದು, ಆಗಾಗ್ಗೆ ಆಕೆಯ ಮನೆಗೂ ಬರುತ್ತಿದ್ದ. ಈ ಕುರಿತು ಆತನಿಗೆ ಎಚ್ಚರಿಕೆಯನ್ನು ನೀಡಲಾಗಿತ್ತು ಎನ್ನಲಾಗಿದೆ. ಈ ವಿಚಾರದಲ್ಲಿ ಮನೆಯವರು ಆಕೆಯನ್ನು ಮತ್ತಷ್ಟು ವಿಚಾರಣೆ ನಡೆಸಿದಾಗ ಆತ ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ| ಅಟೋ ಚಾಲಕನ ಬಂಧನ Read More »

ಬೆಂಗಳೂರಿನಲ್ಲಿ ಕಡಬದ ಯುವಕನ ದಾರುಣ ಸಾವು| ಅಪಘಾತದಲ್ಲಿ ರಸ್ತೆಗೆಸೆದವನ ಮೇಲೆ ಹರಿಯಿತು ಯಮಸ್ವರೂಪಿ ಲಾರಿ

ಸಮಗ್ರ ನ್ಯೂಸ್ ಡೆಸ್ಕ್: ಅಪಘಾತಕ್ಕೀಡಾಗಿ ರಸ್ತೆಗೆಸೆಯಲ್ಪಟ್ಟಿದ್ದ ಯುವಕನ ಮೇಲೆ ಲಾರಿ ಹರಿದು ದಾರುಣವಾಗಿ ಮೃತಪಟ್ಟ ಘಟನೆ ಇಂದು(ಜ.31) ನಡೆದಿದೆ. ಮೃತಪಟ್ಟ ಯುವಕನನ್ನು ಕಡಬ ತಾಲೂಕಿನ ಆಲಂಕಾರು ಮೂಲದ ಶರವೂರಿನ ನಂದೀಪ್(21) ಎಂದು ಗುರುತಿಸಲಾಗಿದೆ. ಈತನ ಜೊತೆಗಿದ್ದ ಸಹ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಇವರು ಬೆಂಗಳೂರಿನ ಜಿಗಣಿಯಲ್ಲಿ ಇಂಡಸ್ಟ್ರಿಯಲ್ ಏರಿಯದ ಕಂಪೆನಿಯೊಂದರಲ್ಲಿ ಉದ್ಯೋಗ ದಲ್ಲಿದ್ದು ಬೆಳಿಗ್ಗೆ ಕೆಲಸಕ್ಕೆಂದು ಹಳೆನೇರಂಕಿಯ ನಿವಾಸಿ ಸ್ನೇಹಿತನೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದರು ಎನ್ನಲಾಗಿದ್ದು, ಈ ಸಂದರ್ಭದಲ್ಲಿ ಅಟೋ ರಿಕ್ಷಾವೊಂದು ಹಠತ್ತಾಗಿ ಬಲಕ್ಕೆ ತಿರುಗಿದಾಗ ಅದಕ್ಕೆ

ಬೆಂಗಳೂರಿನಲ್ಲಿ ಕಡಬದ ಯುವಕನ ದಾರುಣ ಸಾವು| ಅಪಘಾತದಲ್ಲಿ ರಸ್ತೆಗೆಸೆದವನ ಮೇಲೆ ಹರಿಯಿತು ಯಮಸ್ವರೂಪಿ ಲಾರಿ Read More »

ಬೈಕ್ ನಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಗುದ್ದಿದ ಲಾರಿ| ಗರ್ಭಿಣಿ ಮಹಿಳೆ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್ ಡೆಸ್ಕ್: ಗರ್ಭಿಣಿ ಪತ್ನಿಯೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ, ಪತಿಯ ಕಣ್ಣೆದುರಿಗೆ ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಕಿಕ್ಕೇರಿಯ ಬಳಿಯಲ್ಲಿ ಬೈಕ್ ನಲ್ಲಿ ಗರ್ಭಿಣಿ ಪತ್ನಿ ಸಹನ ಹಾಗೂ ಪತಿ ಸಂದೀಪ್ ಚನ್ನರಾಯಪಟ್ಟಣಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಲಾರಿಯೊಂದು ಹಿಂಬದಿಯಿಂದ ಡಿಕ್ಕಿಯಾಗಿದೆ. ಪರಿಣಾಮವಾಗಿ ಬೈಕ್ ನಲ್ಲಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದಿದ್ದಾರೆ. ಆ ವೇಳೆ ಲಾರಿ ಸಹನ ತಲೆಯ

ಬೈಕ್ ನಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಗುದ್ದಿದ ಲಾರಿ| ಗರ್ಭಿಣಿ ಮಹಿಳೆ ಸ್ಥಳದಲ್ಲೇ ಸಾವು Read More »

ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸ್ ದಾಳಿ| ಯುವತಿಯ ರಕ್ಷಣೆ

ಸಮಗ್ರ ಕ್ರೈಂ ಡೆಸ್ಕ್: ವೇಶ್ಯಾವಾಟಿಕೆ ನಡೆಯುತ್ತಿದ್ದ ಕಾರವಾರದ ಲಾಡ್ಜ್ ಮೇಲೆ ಪೊಲೀಸರು ದಾಳಿ ಮಾಡಿದ್ದು ಯುವತಿಯನ್ನು ರಕ್ಷಿಸಿದ್ದಾರೆ. ಕಾರವಾರ ನಗರದ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಿಢೀರ್ ದಾಳಿ ಮಾಡಿದ್ದು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಜೋಡಿಯನ್ನು ವಶಕ್ಕೆ ಪಡೆದಿದ್ದಾರೆ. ಕುಮಟಾದ ಸುಭಾಷ್ ರಸ್ತೆ ನಿವಾಸಿ ಹೇಮಂತ್ ನನ್ನು ಬಂಧಿಸಲಾಗಿದೆ. ಲಾಡ್ಜ್ ನಡೆಸುತ್ತಿದ್ದ ಸತೀಶ್ ಮತ್ತು ಮಾಲೀಕನ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ

ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸ್ ದಾಳಿ| ಯುವತಿಯ ರಕ್ಷಣೆ Read More »