ಕ್ರೈಂ

ಸಾಗರ: ಹೃದಯಾಘಾತದಿಂದ ಐದರ ಬಾಲೆ ಸಾವು

ಸಾಗರ: ನಗರದ ಅಣಲೆಕೊಪ್ಪದಲ್ಲಿ ಆಯತಪ್ಪಿ ಬಿದ್ದ ಮಗು, ಆಘಾತಗೊಂಡು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ. ಕ್ರಿಶಾ (5) ಮೃತಪಟ್ಟ ಮಗು. ಈಕೆ ಸಂಜೆ ಆಟವಾಡಿಕೊಂಡಿದ್ದಾಗ ಆಯತಪ್ಪಿ ಬಿದ್ದಿದ್ದಾಳೆ. ಕೂಡಲೇ ಮಗುವನ್ನು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಆ ವೇಳೆಗೆ ಮಗು ಸಾವನ್ನಪ್ಪಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.

ಸಾಗರ: ಹೃದಯಾಘಾತದಿಂದ ಐದರ ಬಾಲೆ ಸಾವು Read More »

ಸುಳ್ಯ: ಮಂಗಳೂರಿನಲ್ಲಿ ನಾಪತ್ತೆಯಾದ ಬೆಳ್ಳಾರೆಯ ಮಹಿಳೆ ಮೈಸೂರಿನಲ್ಲಿ ಪತ್ತೆ

ಮಂಗಳೂರು : ಬ್ಯಾಂಕಿಗೆ ಹೋಗಿ ಬರುತ್ತೇನೆ ಎಂದು ಮಂಗಳೂರಿನ ಉರ್ವ ಸ್ಟೋರ್ ನಿಂದ ನಾಪತ್ತೆಯಾಗಿದ್ದ ಬೆಳ್ಳಾರೆ ಮೂಲದ ವಿವಾಹಿತ ಮಹಿಳೆ ಪತ್ತೆಯಾದ ಬಗ್ಗೆ ವರದಿಯಾಗಿದೆ. ದಿವ್ಯಾ(29) ನಾಪತ್ತೆಯಾದವರು. ಇವರು ಶುಕ್ರವಾರ ಬೆಳ್ಳಾರೆ ಕಲ್ಮಡ್ಕದ ಮನೆಯಿಂದ ಮುಂಜಾನೆ ತನ್ನ ಅಕ್ಕ ಚೈತ್ರಾ ಅವರೊಂದಿಗೆ ಮಂಗಳೂರಿಗೆ ಬಂದಿದ್ದು ಉರ್ವ ಸ್ಟೋರ್ ಮೂಡ ಬಿಲ್ಡಿಂಗ್ ಮುಂಭಾಗ ಎಸ್.ಆರ್. ಫ್ಯಾನ್ಸಿ ಬಳಿ ಬಂದ ಬಳಿಕ ಬ್ಯಾಂಕಿಗೆ ಹೋಗಿ ಬರುತ್ತೇನೆ ಎಂದು ತಿಳಿಸಿ ಬಳಿಕ ಬಾರದೆ, ಫೋನ್ ಕರೆಗೂ ಸಿಗದೇ ನಾಪತ್ತೆಯಾಗಿದ್ದರು. ಆಕೆಯ ಮೊಬೈಲ್

ಸುಳ್ಯ: ಮಂಗಳೂರಿನಲ್ಲಿ ನಾಪತ್ತೆಯಾದ ಬೆಳ್ಳಾರೆಯ ಮಹಿಳೆ ಮೈಸೂರಿನಲ್ಲಿ ಪತ್ತೆ Read More »

ಶಿವಮೊಗ್ಗ: ಪರಿಚಯಸ್ಥರಿಂದಲೇ ಬಾಲಕಿಯ ಅತ್ಯಾಚಾರ| ವಿಡಿಯೋ ವೈರಲ್, ಇಬ್ಬರ ಬಂಧನ

ಶಿವಮೊಗ್ಗ: ಹೊಸನಗರ ಬಸ್​ ನಿಲ್ದಾಣದಲ್ಲಿ ಬಸ್ಸಿಗೆ ಕಾಯುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಸಂತೋಷ್ (24) ಹಾಗೂ ಸುನೀಲ್ (26) ಎಂಬವರು ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಬಾಲಕಿ ಬಸ್​ಗಾಗಿ ಕಾಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಈ ಇಬ್ಬರು ಯುವಕರು, ನಾವು ನಿನ್ನ ಗ್ರಾಮಕ್ಕೆ ಹೋಗುತ್ತಿದ್ದೇವೆ ಎಂದು ಪುಸಲಾಯಿಸಿ ಆಕೆಯನ್ನು ಕಾರಿನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರವೆಸಗಿ ವಿಡಿಯೋ ಸಹ ಮಾಡಿದ್ದರು. ಘಟನೆ ಬಗ್ಗೆ

ಶಿವಮೊಗ್ಗ: ಪರಿಚಯಸ್ಥರಿಂದಲೇ ಬಾಲಕಿಯ ಅತ್ಯಾಚಾರ| ವಿಡಿಯೋ ವೈರಲ್, ಇಬ್ಬರ ಬಂಧನ Read More »

ಮದುವೆ ಸಮಾರಂಭದಲ್ಲಿ ಸಹೋದರನ ಸಂಬಂಧಿಯೊಡನೆ ಭರ್ಜರಿ ಡ್ಯಾನ್ಸ್ |ಪಿತ್ತ ನೆತ್ತಿಗೇರುತ್ತಿದ್ದಂತೆ ಭಾವಿ ಪತ್ನಿಯ ಕೆಪ್ತಂಡೆಗೆ ಕೊಟ್ಟ ಪತಿ |ಕೆರಳಿದ ವಧುವಿನಿಂದ ವರನ ಬದಲಾವಣೆ

ತಮಿಳುನಾಡು: ವಿವಾಹ ಸಮಾರಂಭದಲ್ಲಿ ಮದುಮಗಳು ಡ್ಯಾನ್ಸ್ ಮಾಡಿದ್ದು, ಈ ಸಂದರ್ಭದಲ್ಲಿ ಆಕ್ರೋಶಗೊಂಡ ವರ ಆಕೆಯ ಕೆನ್ನೆಗೆ ಹೊಡೆದಿದ್ದ, ಇದರ ಪರಿಣಾಮ ಮಧುಮಗಳು ತನ್ನ ಸಹೋದರ ಸಂಬಂಧಿಯನ್ನು ವಿವಾಹವಾಗಿರುವ ಪ್ರಕರಣ ಇದಾಗಿದೆ. ಒಟ್ಟಾಗಿ ಮೂವರ ಜೀವನದ ದಿಕ್ಕನ್ನೇ ಬದಲಿಸಿರುವ ಅಪರೂಪದ ಪ್ರಸಂಗವೊಂದು ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಏನಿದು ಘಟನೆ: ಇದೊಂದು ಸಿನಿಮಾ ಶೈಲಿಯಲ್ಲಿ ನಡೆದ ಘಟನೆಯಂತಿದ್ದು, ಸ್ಥಳೀಯ ಪ್ರಸಿದ್ಧ ಉದ್ಯಮಿಯೊಬ್ಬರ ಮಗಳ ವಿವಾಹ ತಮಿಳುನಾಡಿನ ಕಡಂಪುಲಿಯೂರ್ ನಲ್ಲಿ ಜನವರಿ 20ರಂದು ನಡೆಯಬೇಕಾಗಿತ್ತು. ಪನ್ರುಟಿಯ ವಧು ಹಾಗೂ ಪೆರಿಯಕುಟ್ಟುಪಾಳ್ಯಂನ ವರ

ಮದುವೆ ಸಮಾರಂಭದಲ್ಲಿ ಸಹೋದರನ ಸಂಬಂಧಿಯೊಡನೆ ಭರ್ಜರಿ ಡ್ಯಾನ್ಸ್ |ಪಿತ್ತ ನೆತ್ತಿಗೇರುತ್ತಿದ್ದಂತೆ ಭಾವಿ ಪತ್ನಿಯ ಕೆಪ್ತಂಡೆಗೆ ಕೊಟ್ಟ ಪತಿ |ಕೆರಳಿದ ವಧುವಿನಿಂದ ವರನ ಬದಲಾವಣೆ Read More »

ಮುಂಬೈ: ಬಹುಮಹಡಿ ಕಟ್ಟಡದಲ್ಲಿ ಬೆಂಕಿ| ಏಳು ಮಂದಿ ಸಜೀವ ದಹನ

ಮುಂಬೈ: ಇಲ್ಲಿನ ತದ್ದೇವ್ ಪ್ರದೇಶದ ಭಾಟಿಯಾ ಆಸ್ಪತ್ರೆ ಬಳಿಯ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 7 ಜನರು ಸಾವನ್ನಪ್ಪಿದ್ದಾರೆ. ಹಲವರಿಗೆ ಸುಟ್ಟ ಗಾಯಗಳಾಗಿವೆ. ಮೃತಪಟ್ಟ ಏಳು ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ವೇಳೆ ಅವರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರಲ್ಲಿ 5 ಜನರು ನಾಯರ್ ಆಸ್ಪತ್ರೆಯಲ್ಲಿ, ಒಬ್ಬರು ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮತ್ತು ಇನ್ನೊಬ್ಬರು ಭಾಟಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮಾಹಿತಿ ಪ್ರಕಾರ ಬೆಳಗ್ಗೆ 7.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದ 15ನೇ ಮಹಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡು ನಂತರ ಮೇಲಕ್ಕೆ

ಮುಂಬೈ: ಬಹುಮಹಡಿ ಕಟ್ಟಡದಲ್ಲಿ ಬೆಂಕಿ| ಏಳು ಮಂದಿ ಸಜೀವ ದಹನ Read More »

ಉಡುಪಿ: ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗೆ ಚೂರಿ ಇರಿತ

ಪಡುಬಿದ್ರಿ: ನಿನ್ನೆ ಸಂಜೆ ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿ’ಸೋಜಾ(35) ಅವರಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಹಲ್ಲೆ ನಡೆಸಿದ್ದಾನೆ. ಗಾಯಾಳು ಮಹಿಳೆಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಡಿತದ ಚಟ ಹೊಂದಿದ್ದ ನೆರೆಮನೆಯ ಸುಮಾರು 45 ವರ್ಷ ಪ್ರಾಯದ ವ್ಯಕ್ತಿಯು ಕ್ಷುಲ್ಲಕ ಕಾರಣಗಳಿಗಾಗಿ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ರೀನಾ ಇನ್ನೋರ್ವ ಮಹಿಳೆಯೊಂದಿಗೆ ತನ್ನ ಮನೆ ಬಳಿ ಮಾತನಾಡುತ್ತಿದ್ದಾಗ ಏಕಾಏಕಿ ಬಂದ ವ್ಯಕ್ತಿ ಹೊಟ್ಟೆಗೆ ಇರಿದಿದ್ದಾನೆ.ರೀನಾ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು

ಉಡುಪಿ: ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗೆ ಚೂರಿ ಇರಿತ Read More »

ಕ್ಲಬ್ ಹೌಸ್ ನಲ್ಲಿ ಮುಸ್ಲಿಂ ಮಹಿಳೆಯರ ಕುರಿತು ಅಶ್ಲೀಲ ಮಾತು | ಮೂವರನ್ನು ಬಂಧಿಸಿದ ಪೊಲೀಸರು

ಹರಿಯಾಣ : ಕ್ಲಬ್ ಹೌಸ್ ನಲ್ಲಿ ಮುಸ್ಲಿಂ ಮಹಿಳೆಯ ಕುರಿತು ಅಶ್ಲೀಲ, ದ್ವೇಷದ ಮಾತುಗಳನ್ನಾಡಿದ ಆರೋಪದ ಮೇಲೆ ಹರಿಯಾಣ ಮೂಲದ ಮೂವರನ್ನು ಮುಂಬೈ ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಆಕಾಶ್, ಜೇಶ್ಣವ್ ಮತ್ತು ಯಶ್ ಪರಶಾರ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಇಂದು ಮಧ್ಯಾಹ್ನ ನ್ಯಾಯಾಲಯಕ್ಕೆ ಒಪ್ಪಿಸುವುದ್ದಾಗಿ ತಿಳಿಸಿದ್ದಾರೆ. ಕ್ಲಬ್ ಹೌಸ್ ಚರ್ಚೆ ಬೇಧಿಸಿ ದ್ವೇ‍ಷ ಹರಡುತ್ತಿದ್ದವರನ್ನು ಬಂಧಿಸಿದ್ದಕ್ಕಾಗಿ ಮುಂಬೈ ಪೊಲೀಸರನ್ನು ಹಲವರು ಶ್ಲಾಘಿಸಿದ್ದಾರೆ. ಈ ಕುರಿತು ಇಂದು ಮುಂಜಾನೆ ಶಿವಸೇನೆಯ ರಾಜಸಭಾ ಸದ್ಯಸರಾದ ಪ್ರಿಯಾಂಕ ಚತುರ್ವೆದಿ ಅವರು

ಕ್ಲಬ್ ಹೌಸ್ ನಲ್ಲಿ ಮುಸ್ಲಿಂ ಮಹಿಳೆಯರ ಕುರಿತು ಅಶ್ಲೀಲ ಮಾತು | ಮೂವರನ್ನು ಬಂಧಿಸಿದ ಪೊಲೀಸರು Read More »

ಸುಳ್ಯ: ಪಾದಾಚಾರಿಗೆ ಡಿಕ್ಕಿ ಹೊಡೆದ ಪಿಕಪ್, ವ್ಯಕ್ತಿ ಸಾವು

ಸುಳ್ಯ: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಪಿಕಪ್ ಡಿಕ್ಕಿಯಾದ ಪರಿಣಾಮ ಗಂಭಿರ ಗಾಯಗೊಂಡು ವ್ಯಕ್ತಿ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟವರನ್ನು ಪೈಚಾರಿನ ನವೀನ್ ಕುಮಾರ್ (60) ಎಂದು ಗುರುತಿಸಲಾಗಿದೆ. ಇವರು ಅಡ್ಕಾರಿನಲ್ಲಿ ರೇಷನ್ ಪಡೆಯಲು ತೆರಳಿದ್ದು ಬಸ್ ನಿಂದ ಇಳಿದು ರಸ್ತೆ ದಾಟುತ್ತಿದ್ದ ವೇಳೆ ರಸ್ತೆಯಲ್ಲಿ ಬಂದ ಪಿಕಪ್ ಢಿಕ್ಕಿಯಾಯಿತು. ಪರಿಣಾಮ ನವೀನರು ರಸ್ತೆಗೆ ಎಸೆಯಲ್ಪಟ್ಟು ಗಂಭಿರ ಗಾಯಗೊಂಡರು. ಪಿಕಪ್ ನವರೇ ತಕ್ಷಣ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದರಾದರೂ ಅದಾಗಲೇ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.

ಸುಳ್ಯ: ಪಾದಾಚಾರಿಗೆ ಡಿಕ್ಕಿ ಹೊಡೆದ ಪಿಕಪ್, ವ್ಯಕ್ತಿ ಸಾವು Read More »

ಮಂಗಳೂರು: ಆಸ್ಪತ್ರೆಯಲ್ಲಿ ‌ಮೃತಪಟ್ಟ ವ್ಯಕ್ತಿ ದಾರಿ ಮಧ್ಯೆ ಉಸಿರಾಡಿದ! | ಸಾವಿನ ಬಾಯಿಂದ ಬದುಕಿ ಬಂದವ ಮರಳಿ ಆಸ್ಪತ್ರೆಗೆ ದಾಖಲು|

ಮಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆಂದು ಬಿಟ್ಟುಕೊಟ್ಟಿದ್ದ ಬದಿಯಡ್ಕದ ವ್ಯಕ್ತಿಯು ಮಾರ್ಗಮಧ್ಯೆ ಜೀವಂತವಾಗಿ ಉಸಿರಾಡಿದ ಘಟನೆ ಇಂದು ನಡೆದಿದೆ. ಬದಿಯಡ್ಕದ ಕೂಲಿಕಾಮಿರ್ಕ ಗುರುವ(60) ಎಂಬವರನ್ನು ಅಸೌಖ್ಯದ ಹಿನ್ನೆಲೆ ಸೋಮವಾರದಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಂಗಳವಾರ ತಪಾಸಣೆ ನಡೆಸಿದ ವೈದ್ಯರು, ರೋಗಿ ಆಕ್ಸಿಜನ್​ ಸಹಾಯದಿಂದ ಮಾತ್ರ ಉಸಿರಾಡುತ್ತಿದ್ದು, ಆಕ್ಸಿಜನ್ ಇಲ್ಲದೇ ಹೋದರೆ ಪ್ರಾಣ ಹೋಗುತ್ತದೆ ಎಂದು ಹೇಳಿದ್ದರು. ಅದರಂತೆ ಆಕ್ಸಿಜನ್​ ತೆರವುಗೊಳಿಸಲಾಗಿತ್ತು. ಬಳಿಕ ರೋಗಿಯ ಸಂಬಂಧಿಕರ ಮನೆಗೆ ಫೋನ್​

ಮಂಗಳೂರು: ಆಸ್ಪತ್ರೆಯಲ್ಲಿ ‌ಮೃತಪಟ್ಟ ವ್ಯಕ್ತಿ ದಾರಿ ಮಧ್ಯೆ ಉಸಿರಾಡಿದ! | ಸಾವಿನ ಬಾಯಿಂದ ಬದುಕಿ ಬಂದವ ಮರಳಿ ಆಸ್ಪತ್ರೆಗೆ ದಾಖಲು| Read More »

ಮೂಡುಬಿದಿರೆ: ರಸ್ತೆ ಅಪಘಾತದಲ್ಲಿ ಯಕ್ಷಗಾನ ಕಲಾವಿದ ವಾಮನ ಕುಮಾರ್ ಸಾವು

ಮೂಡುಬಿದಿರೆ: ಇಲ್ಲಿನ ಗಂಟಾಲ್ಕಟ್ಟೆಯ ಸಮೀಪ ಜ.20 ರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಮೃತಪಟ್ಟಿದ್ದಾರೆ. ವಾಮನ ಕುಮಾರ್ ವೇಣೂರು (47) ಮೃತರು. ಗಂಟಾಲ್ಕಟ್ಟೆಯ ಸಮೀಪ ಓಮ್ನಿ ಕಾರು ಬೈಕ್ ಢಿಕ್ಕಿಯಾಗಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ವಾಮನ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧರ್ಮಸ್ಥಳ ಮೇಳದ , ಕದ್ರಿ ಮೇಳ ಸೇವೆ ಸಲ್ಲಿಸಿದ್ದ ಇವರು ಪ್ರಸ್ತುತ ಹಿರಿಯಡ್ಕ ಮೇಳದಲ್ಲಿ ಕಲಾವಿದರಾಗಿದ್ದರು. ಕುಂದಾಪುರದ ಕೊಂಕಿ ಎಂಬಲ್ಲಿ ರಾತ್ರಿ ಯಕ್ಷಗಾನವನ್ನು ಮುಗಿಸಿ ಮನೆಗೆ ಹಿಂತಿರುಗುವಾಗ ಬೆಳಗಿನ ಜಾವ ಈ

ಮೂಡುಬಿದಿರೆ: ರಸ್ತೆ ಅಪಘಾತದಲ್ಲಿ ಯಕ್ಷಗಾನ ಕಲಾವಿದ ವಾಮನ ಕುಮಾರ್ ಸಾವು Read More »