ಕ್ರೈಂ

ಬಂಟ್ವಾಳ: ಸಿಲಿಂಡರ್ ಸ್ಫೋಟ, ಆಟೋ ರಿಕ್ಷಾಕ್ಕೆ ಬೆಂಕಿ, ಓರ್ವ ಗಂಭೀರ

ಸಮಗ್ರ ನ್ಯೂಸ್ ಡೆಸ್ಕ್: ಆಟೋ ಗ್ಯಾಸ್ ಸಿಲಿಂಡರ್ ಅನ್ನು ಕತ್ತರಿಸುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಗಾಯಗೊಂಡಿರುವ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಬಂಟ್ವಾಳ ಕಾರಾಜೆ ನಿವಾಸಿ ಅಬ್ದುಲ್ ರಝಾಕ್ (62) ಗಾಯಗೊಂಡವರು. ಗುಜರಿ ವ್ಯಾಪಾರಿಯಾದ ಅಮ್ಮೆಮಾರ್ ನಿವಾಸಿ ತಸ್ಲೀಮ್ ಎಂಬವರ ಮನೆಯಲ್ಲಿ ಗುಜರಿಗೆ ಬಂದಿದ್ದ ಆಟೋ ಗ್ಯಾಸ್ ಸಿಲಿಂಡರ್ ಕತ್ತರಿಸಲು ಅಬ್ದುಲ್ ರಝಾಕ್ ಅವರು ಆಟೋ ರಿಕ್ಷಾದಲ್ಲಿ ಬಂದಿದ್ದು ಸಿಲಿಂಡರ್ ಕತ್ತರಿಸುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ ಎನ್ನಲಾಗಿದೆ. ಘಟನೆಯಿಂದ ಸಿಲಿಂಡರ್ […]

ಬಂಟ್ವಾಳ: ಸಿಲಿಂಡರ್ ಸ್ಫೋಟ, ಆಟೋ ರಿಕ್ಷಾಕ್ಕೆ ಬೆಂಕಿ, ಓರ್ವ ಗಂಭೀರ Read More »

ಸಮುದ್ರ ಹಾರಿ ಸಾವನ್ನಪ್ಪಿದ ‌ಪ್ರಕರಣಕ್ಕೆ ತಿರುವು| ತ್ರಿಕೋನ ಪ್ರೇಮವೇ ಆತನ ಸಾವಿಗೆ ಕಾರಣವಾಯ್ತೇ?

ಮಂಗಳೂರು: ತ್ರಿಕೋನ ಪ್ರೇಮ ಪ್ರಕರಣದಲ್ಲಿ ಕಲಹ ಉಂಟಾಗಿ ಆತ್ಮಹತ್ಯೆ ಮಾಡಲು ಮುಂದಾದ ಪ್ರೇಯಸಿಯನ್ನು ರಕ್ಷಿಸಲು ಹೋದ ಯುವಕ ತಾನೇ ಬಲಿಯಾದ ಘಟನೆ ಮಂಗಳೂರು ನಗರ ಹೊರವಲಯದ ಸೋಮೇಶ್ವರ ಬೀಚ್‍ನಲ್ಲಿ ನಡೆದಿದೆ. ಮುನ್ನೂರು ಗ್ರಾಮದ ಉಳಿಯ ನಿವಾಸಿ ಲಾಯ್ಡ್ ಡಿಸೋಜ (26) ಸಮುದ್ರಪಾಲಾದ ಯುವಕ.ಈತ ಇಬ್ಬರು ಯುವತಿಯರನ್ನು ಪ್ರೀತಿಸುತ್ತಿದ್ದ. ಈ ಬಗ್ಗೆ ಕಲಹ ಉಂಟಾದಾಗ ಶುಕ್ರವಾರ ಸಂಜೆ ಸೋಮೇಶ್ವರ ಬೀಚ್‍ನಲ್ಲಿ ಮಾತುಕತೆ ನಡೆಸಲು ಮೂವರು ತೆರಳಿದ್ದರು. ಲಾಯ್ಡ್ ಪ್ರೇಯಸಿಯರಾದ ಅಶ್ವಿತಾ ಪೆರಾವೊ ಹಾಗೂ ಡಾಕ್ಲಿನ್ ನಡುವೆ ಮಾತುಕತೆ ವೇಳೆ

ಸಮುದ್ರ ಹಾರಿ ಸಾವನ್ನಪ್ಪಿದ ‌ಪ್ರಕರಣಕ್ಕೆ ತಿರುವು| ತ್ರಿಕೋನ ಪ್ರೇಮವೇ ಆತನ ಸಾವಿಗೆ ಕಾರಣವಾಯ್ತೇ? Read More »

ಶಾಸಕ ಸಿ.ಟಿ ರವಿಗೆ ಪಿತೃ ವಿಯೋಗ

ಚಿಕ್ಕಮಗಳೂರು : ಚಿಕ್ಕಮಗಳೂರು ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ತಂದೆ ಸಿ.ಇ.ತಿಮ್ಮೇಗೌಡ(92) ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಾಳೆ ಬೆಳಗ್ಗೆ 11.30 ಕ್ಕೆ ತಾಲೂಕಿನ ಆಲ್ದೂರಿನ ಚಿಕ್ಕಮಾಗರವಳ್ಳಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಭಾನುವಾರ ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 11.30 ರವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಆಲ್ದೂರಿನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ತಿಮ್ಮೇಗೌಡ ಅವರು ಚಿಕ್ಕಮಾಗರವಳ್ಳಿಯವರು. ಅವರಿಗೆ ಸಿ ಟಿ ರವಿ ಸೇರಿ ಇಬ್ಬರು ಪುತ್ರರು, ಮೂವರು

ಶಾಸಕ ಸಿ.ಟಿ ರವಿಗೆ ಪಿತೃ ವಿಯೋಗ Read More »

ಮಂಗಳೂರು: ಸಮುದ್ರಕ್ಕೆ ಹಾರಿದ ಪ್ರೇಯಸಿಯ ರಕ್ಷಿಸಹೋದ ಪ್ರಿಯಕರ ಸಾವು

ಸಮಗ್ರ ವರದಿ: ಸೋಮೇಶ್ವರ ಬೀಚ್ ನ ರುದ್ರಪಾದೆ ಎಂಬಲ್ಲಿ ಜೋಡಿಯೊಂದು ಮಾತನಾಡುತ್ತಿದ್ದಂತೆ ಪ್ರೇಯಸಿ ಸಮುದ್ರಕ್ಕೆ ಹಾರಿದ್ದು ಆಕೆಯನ್ನು ರಕ್ಷಿಸಲು ಹೋಗಿ ಪ್ರಿಯಕರ ಸಾವನ್ನಪ್ಪಿದ ಘಟನೆ ನಡೆದಿದೆ. ಉಳ್ಳಾಲ ರಾಣಿಪುರ ಉಳಿಯಾ ನಿವಾಸಿ ಲಾಯ್ಡ್ ಡಿಸೋಜಾ(28) ತನ್ನ ಪ್ರೇಯಸಿಯೊಂದಿಗೆ ಮಾತನಾಡುತ್ತಿದ್ದಂತೆ ಸಮುದ್ರಕ್ಕೆ ಹಾರಿದ್ದ ಪ್ರೇಯಸಿ ಕೋಟೆಕಾರು ಪಾನೀರು ನಿವಾಸಿ ಅಶ್ವಿತಾ ಫೆರಾವೋ (22) ರಕ್ಷಿಸಲು ಸಮುದ್ರಕ್ಕೆ ಹಾರಿದ್ದ ಸಂದರ್ಭದಲ್ಲಿ ತಲೆಗೆ ಬಂಡೆ ಕಲ್ಲು ತಗುಲಿ ಸಾವನ್ನಾಪ್ಪಿದ್ದಾನೆಂದು ತಿಳಿದು‌ ಬಂದಿದೆ. ಯುವತಿಯನ್ನು ರಕ್ಷಣೆ ಮಾಡಲಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಂತಾಜನಕ ಸ್ಥಿತಿ‌ಯಲ್ಲಿದ್ದಳೆಂದು

ಮಂಗಳೂರು: ಸಮುದ್ರಕ್ಕೆ ಹಾರಿದ ಪ್ರೇಯಸಿಯ ರಕ್ಷಿಸಹೋದ ಪ್ರಿಯಕರ ಸಾವು Read More »

ನಿರ್ದೇಶಕ ಕಟ್ಟೆ ರಾಮಚಂದ್ರ ಕೋವಿಡ್ ಗೆ ಬಲಿ

ಸಮಗ್ರ ನ್ಯೂಸ್ ಡೆಸ್ಕ್: ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ ಕಟ್ಟೆ ರಾಮಚಂದ್ರ(75) ಅವರು ಶುಕ್ರವಾರ ಕೋವಿಡ್‌ ಕಾರಣದಿಂದ ನಗರದ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಮೂರು ದಿನಗಳ ಹಿಂದೆ ಅವರ ಪತ್ನಿಯೂ ನಿಧನರಾಗಿದ್ದು, ಕುಟುಂಬ ಶೋಕಸಾಗರದಲ್ಲಿ ಮುಳುಗಿದೆ. ಚಿತ್ರರಂಗದಲ್ಲಿ ಹಲವು ದಶಕಗಳಿಂದ ಸಕ್ರಿಯರಾಗಿದ್ದ ರಾಮಚಂದ್ರ ಅವರು, ವೈಶಾಖದ ದಿನಗಳು, ಮಹಾಲಕ್ಷ್ಮೀ ಚಿತ್ರಗಳನ್ನು ನಿರ್ಮಿಸಿದ್ದರು. ಮನೆ ಮನೆ ಕಥೆ, ಅಲೆಗಳು ಮತ್ತು ಇತರ ಧಾರಾವಾಹಿಗಳಲ್ಲಿ ನಟಿಸಿದ್ದರು. ಅವರ ನಿರ್ದೇಶನದ ‘ಅರಿವು’ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ದೊರಕಿತ್ತು. ‘ತನು ನಿನ್ನದು

ನಿರ್ದೇಶಕ ಕಟ್ಟೆ ರಾಮಚಂದ್ರ ಕೋವಿಡ್ ಗೆ ಬಲಿ Read More »

ಕುಟುಂಬವನ್ನೇ ಹತ್ಯೆಮಾಡಿದ 14ರ ಪೋರ| ಕಾರಣ ಕೇಳಿದ್ರೆ ಶಾಕ್ ಆಗ್ತೀರ| ಮಕ್ಕಳ ಕೈಗೆ ಮೊಬೈಲ್ ಕೊಡ್ತಿದೀರಾ? ಹಾಗಿದ್ರೆ ಜೋಕೆ…!

ಸಮಗ್ರ ನ್ಯೂಸ್ ಡೆಸ್ಕ್: ಆನ್‌ಲೈನ್ ಗೇಮ್ ‘ಪಬ್‌ಜಿ’ ಪ್ರಭಾವದಿಂದ 14 ವರ್ಷದ ಬಾಲಕನೊಬ್ಬ ಇಡೀ ಕುಟುಂಬದವರನ್ನು ಹತ್ಯೆ ಮಾಡಿದ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ. ಇಲ್ಲಿನ ಆರೋಗ್ಯ ಕಾರ್ಯಕರ್ತೆ ನಹೀದ್ ಮುಬಾರಕ್(45), ಆಕೆಯ ಮಗ ತೈಮೂರ್(22) ಹಾಗೂ 17 ವರ್ಷದ ಇಬ್ಬರು ಹೆಣ್ಣುಮಕ್ಕಳ ಮೃತದೇಹಗಳು ಕಳೆದ ವಾರ ಲಾಹೋರ್‌ನ ಕನ್ಹಾ ಪ್ರದೇಶದಲ್ಲಿ ಪತ್ತೆಯಾಗಿದ್ದವು. ನಹೀದ್ ಮುಬಾರಕ್ ಅವರ 14 ವರ್ಷದ ಪುತ್ರ ಮಾತ್ರ ಬದುಕಿದ್ದಾನೆ. ಆತನೇ ಕೊಲೆಗಾರ ಎಂದು ಪೊಲೀಸರ ಪ್ರಕಟಣೆ ತಿಳಿಸಿದೆ. ಪಬ್‌ಜಿ ವ್ಯಸನಿಯಾಗಿದ್ದ

ಕುಟುಂಬವನ್ನೇ ಹತ್ಯೆಮಾಡಿದ 14ರ ಪೋರ| ಕಾರಣ ಕೇಳಿದ್ರೆ ಶಾಕ್ ಆಗ್ತೀರ| ಮಕ್ಕಳ ಕೈಗೆ ಮೊಬೈಲ್ ಕೊಡ್ತಿದೀರಾ? ಹಾಗಿದ್ರೆ ಜೋಕೆ…! Read More »

ಗರ್ಭಿಣಿ ಹಸುವಿಗೆ ಢಿಕ್ಕಿ ಹೊಡೆದ ಸಾರಿಗೆ ಬಸ್| ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ ಗೋಮಾತೆ

ಕಾರವಾರ: ಗರ್ಭಿಣಿ ಹಸುವಿಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಮಟಾ ಬಸ್ ನಿಲ್ದಾಣದಲ್ಲಿ ನಡೆದಿದೆ. ಹುನಗುಂದದಿಂದ ಪುತ್ತೂರು ಮಾರ್ಗವಾಗಿ ಚಲಿಸುತ್ತಿದ್ದ ಬಸ್​ ತಡರಾತ್ರಿ ನಿಲ್ದಾಣದಲ್ಲಿ ನಿಂತ ಆಕಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಹಸು ಹಾಗೂ ಅದರ ಹೊಟ್ಟೆಯಲ್ಲಿದ್ದ ಕರು ಸ್ಥಳದಲ್ಲೇ ಮೃತಪಟ್ಟಿದೆ. ಕುಮಟಾದ ನಾಗಪ್ಪ ಬಲೀಂದ್ರ ಗೌಡ ಅವರಿಗೆ ಸೇರಿದ ಹಸು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪಶು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುಮಟಾ ನಗರ ಪೊಲೀಸ್

ಗರ್ಭಿಣಿ ಹಸುವಿಗೆ ಢಿಕ್ಕಿ ಹೊಡೆದ ಸಾರಿಗೆ ಬಸ್| ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ ಗೋಮಾತೆ Read More »

ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿ ಎಸ್ ವೈ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ (30) ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಅವರು ಎಂ.ಎಸ್.‌ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ. ಮೊಮ್ಮಗಳು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆ ಬಿಎಸ್​​ ಯಡಿಯೂರಪ್ಪ ಮತ್ತು ಸಿಎಂ ಸೇರಿದಂತೆ

ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು Read More »

ಸುಳ್ಯ: ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ‌ ಪ್ರಿಯಕರನೊಂದಿಗೆ ಪತ್ತೆ

ಸುಳ್ಯ: ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆಯಾದ ಘಟನೆ ನಡೆದಿದೆ. ಈ ಮಹಿಳೆ ಜ. 25 ರಂದು ಪೈಚಾರು ಮನೆಯಿಂದ ಕಾಣೆಯಾಗಿ ಸಂಜೆಯಾದರೂ ಬಾರದ ಹಿನ್ನೆಲೆಯಲ್ಲಿ ಆಕೆಯ ಪತಿ ಪತಿ ಕೋಗನ್ ತಾತಿ ಅದೇ ದಿನ ಸಂಜೆ ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದರು. ಕಳೆದ ನಾಲ್ಕು ತಿಂಗಳಿಂದ ಸುಳ್ಯದ ಪೈಚಾರು ಸಂಸ್ಥೆ ಯೊಂದರಲ್ಲಿ ತೆಂಗಿನಕಾಯಿ ಸುಲಿಯುವ ಕೆಲಸವನ್ನು ಮಾಡುತ್ತಿದ್ದ ಮಹಿಳೆ ಮತ್ತು ಆಕೆಯ ಪತಿ, ಎರಡು ಮಕ್ಕಳೊಂದಿಗೆ ತಾನು ಕೆಲಸ ಮಾಡುತ್ತಿರುವ ಸಂಸ್ಥೆಯವರು ನೀಡಿದ

ಸುಳ್ಯ: ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ‌ ಪ್ರಿಯಕರನೊಂದಿಗೆ ಪತ್ತೆ Read More »

ಹಾಕಿ ದಂತಕಥೆ ಚರಂಜಿತ್‌ಸಿಂಗ್ ಇನ್ನಿಲ್ಲ

ನವದೆಹಲಿ: ಭಾರತದ 1964 ರ ಟೋಕಿಯೊ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಹಾಕಿ ತಂಡದ ನಾಯಕ ಚರಂಜಿತ್ ಸಿಂಗ್ ಅವರು ಹೃದಯಾಘಾತದಿಂದ ಹಿಮಾಚಲ ಪ್ರದೇಶದ ಉನಾದಲ್ಲಿನ ತಮ್ಮ ಮನೆಯಲ್ಲಿ ಇಂದು ನಿಧನರಾದರು. ಅವರು ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಚರಂಜಿತ್ ಐದು ವರ್ಷಗಳ ಹಿಂದೆ ಪಾರ್ಶ್ವವಾಯುವಿಗೆ ಒಳಗಾದರು . ‘ಅಪ್ಪ ಐದು ವರ್ಷಗಳ ಹಿಂದೆ ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರು ಕೋಲನ್ನು ಆಧರಿಸಿ ನಡೆಯುತ್ತಿದ್ದರು. ಆದರೆ ಕಳೆದ ಎರಡು ತಿಂಗಳಿನಿಂದ ಅವರ ಆರೋಗ್ಯ ಹದಗೆಟ್ಟಿತು

ಹಾಕಿ ದಂತಕಥೆ ಚರಂಜಿತ್‌ಸಿಂಗ್ ಇನ್ನಿಲ್ಲ Read More »