ಕ್ರೈಂ

ಠಾಣೆಯೆದರು ನಿಲ್ಲಿಸಿದ್ದ ಪೊಲೀಸ್ ವಾಹನಕ್ಕೇ ಕನ್ನ ಹಾಕಿದ ಚಾಣಾಕ್ಷ ಕಳ್ಳ

ಸಮಗ್ರ ನ್ಯೂಸ್ ಡೆಸ್ಕ್: ಪೊಲೀಸ್ ಠಾಣೆ ಎದುರು ನಿಲ್ಲಿಸಿದ್ದ ಪೊಲೀಸ್ ವಾಹನ ಕಳ್ಳತನವಾಗಿರುವ ಘಟನೆ ಧಾರವಾಡ ಜಿಲ್ಲೆ ಅಣ್ಣಿಗೇರಿ ಪೊಲೀಸ್ ಠಾಣೆ ಎದುರು ನಡೆದಿದೆ. ನಾಗಪ್ಪ ಹಡಪದ ಎಂಬ ವ್ಯಕ್ತಿ ಪೊಲೀಸ್ ವಾಹನ ಎಗರಿಸಿಕೊಂಡು ಪೊಲೀಸ್ ವಾಹನದಲ್ಲಿ ಬ್ಯಾಡಗಿವರೆಗೂ ಹೋಗಿದ್ದಾನೆ. ಸದ್ಯ ಪೊಲೀಸರು ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ವಾಹನ ಪತ್ತೆ ಹಚ್ಚಿ ಆರೋಪಿಯನ್ನು ವಾಪಸ್ ಕರೆದುಕೊಂಡು ಬಂದಿದ್ದಾರೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಣ್ಣಿಗೇರಿ ಪಟ್ಟಣದ ಅಂಬಿಕಾ ನಗರ ನಿವಾಸಿ ನಾಗಪ್ಪ ಹಡಪದ ಎಂಬುವವರು ಪೊಲೀಸ್ […]

ಠಾಣೆಯೆದರು ನಿಲ್ಲಿಸಿದ್ದ ಪೊಲೀಸ್ ವಾಹನಕ್ಕೇ ಕನ್ನ ಹಾಕಿದ ಚಾಣಾಕ್ಷ ಕಳ್ಳ Read More »

ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ನಿಧನ

ಸಮಗ್ರ ನ್ಯೂಸ್ ಡೆಸ್ಕ್: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ಇಂದು ನಿಧನರಾಗಿದ್ದಾರೆ. ಈ ಮೂಲಕ ಚೆಂದನವನದ ಹಿರಿಯ ಕಲಾವಿದ ಇನ್ನಿಲ್ಲವಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರು.ವಿದ್ಯಾರಣ್ಯಪುರದ ನಿವಾಸದಲ್ಲಿ ಅಶೋಕ್ ರಾವ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥ ಮಾಡಲಾಗಿದೆ. ಕನ್ನಡ ಸೇರಿದಂತೆ ಹಲವು ಚಿತ್ರಗಳಲ್ಲಿ ತಮ್ಮ ವಿಶಿಷ್ಟ ನಟನೆಯಿಂದ ನಟ ಅಶೋಕ್ ರಾವ್ ಗುರುತಿಸಿಕೊಂಡಿದ್ದರು. ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಅಶೋಕ್ ರಾವ್ ಅಭಿಮಾನಿಗಳ ಮನಗೆದ್ದಿದ್ದರು.

ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ನಿಧನ Read More »

ಸುಳ್ಯ: ಹೊಳೆಯಲ್ಲಿ ಮುಳುಗಿ ಬಾಲಕ ಸಾವು

ಸಮಗ್ರ ನ್ಯೂಸ್ ಡೆಸ್ಕ್: ಸುಳ್ಯ ಸಮೀಪದ ಪೈಚಾರು ದೊಡ್ಡೇರಿ ಬಳಿ ನದಿಯಲ್ಲಿ ಮುಳುಗಿ ಆರು ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ. ಆಂಧ್ರ ಮೂಲದ ಕುಟುಂಬಸ್ಥರು ಪೈಚಾರು ಬಳಿ ಬುಟ್ಟಿ ಹೆಣೆಯುವ ಕೆಲಸ ಮಾಡುತ್ತಿದ್ದು ಅಲ್ಲೇ ಪರಿಸರದಲ್ಲಿ ಟೆಂಟ್ ನಿರ್ಮಿಸಿ ವಾಸಿಸುತ್ತಿದ್ದರು. ಇಂದು ನದಿಗೆ ಸ್ನಾನ ಮಾಡಲೆಂದು ಕುಟುಂಬದ ಹಿರಿಯರು ಮತ್ತು ಮಕ್ಕಳು ಹೋಗಿದ್ದ ಸಂದರ್ಭದಲ್ಲಿ ಸ್ನಾನ ಮಾಡುತ್ತಿದ್ದ ಆರು ವರ್ಷದ ಮಗು ಕುಪ್ಪರಾ ಕಾಣೆಯಾಗಿದ್ದು, ಆತ ನೀರಿನಲ್ಲಿ ಮುಳುಗಿರುವ ಅನುಮಾನದಿಂದ ಹುಡುಕಾಡಿದಾಗ ಅಲ್ಲೇ ಪಕ್ಕದಲ್ಲಿ

ಸುಳ್ಯ: ಹೊಳೆಯಲ್ಲಿ ಮುಳುಗಿ ಬಾಲಕ ಸಾವು Read More »

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ| ಅಟೋ ಚಾಲಕನ ಬಂಧನ

ಸಮಗ್ರ ನ್ಯೂಸ್ ಡೆಸ್ಕ್: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ‌ ಆರೋಪದಲ್ಲಿ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಬಂಧಿತನನ್ನು ಕಂಬಳಬೆಟ್ಟು ನಿವಾಸಿ ಅಬ್ದುಲ್‌ ನಾಸಿರ್‌ ಎಂದು ಗುರುತಿಸಲಾಗಿದೆ. ಈತ ಪರಿಚಯದ ಅಪ್ರಾಪ್ತ ಬಾಲಕಿಯನ್ನು ತನ್ನ ಆಟೋದಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದು, ಆಗಾಗ್ಗೆ ಆಕೆಯ ಮನೆಗೂ ಬರುತ್ತಿದ್ದ. ಈ ಕುರಿತು ಆತನಿಗೆ ಎಚ್ಚರಿಕೆಯನ್ನು ನೀಡಲಾಗಿತ್ತು ಎನ್ನಲಾಗಿದೆ. ಈ ವಿಚಾರದಲ್ಲಿ ಮನೆಯವರು ಆಕೆಯನ್ನು ಮತ್ತಷ್ಟು ವಿಚಾರಣೆ ನಡೆಸಿದಾಗ ಆತ ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ| ಅಟೋ ಚಾಲಕನ ಬಂಧನ Read More »

ಬೆಂಗಳೂರಿನಲ್ಲಿ ಕಡಬದ ಯುವಕನ ದಾರುಣ ಸಾವು| ಅಪಘಾತದಲ್ಲಿ ರಸ್ತೆಗೆಸೆದವನ ಮೇಲೆ ಹರಿಯಿತು ಯಮಸ್ವರೂಪಿ ಲಾರಿ

ಸಮಗ್ರ ನ್ಯೂಸ್ ಡೆಸ್ಕ್: ಅಪಘಾತಕ್ಕೀಡಾಗಿ ರಸ್ತೆಗೆಸೆಯಲ್ಪಟ್ಟಿದ್ದ ಯುವಕನ ಮೇಲೆ ಲಾರಿ ಹರಿದು ದಾರುಣವಾಗಿ ಮೃತಪಟ್ಟ ಘಟನೆ ಇಂದು(ಜ.31) ನಡೆದಿದೆ. ಮೃತಪಟ್ಟ ಯುವಕನನ್ನು ಕಡಬ ತಾಲೂಕಿನ ಆಲಂಕಾರು ಮೂಲದ ಶರವೂರಿನ ನಂದೀಪ್(21) ಎಂದು ಗುರುತಿಸಲಾಗಿದೆ. ಈತನ ಜೊತೆಗಿದ್ದ ಸಹ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಇವರು ಬೆಂಗಳೂರಿನ ಜಿಗಣಿಯಲ್ಲಿ ಇಂಡಸ್ಟ್ರಿಯಲ್ ಏರಿಯದ ಕಂಪೆನಿಯೊಂದರಲ್ಲಿ ಉದ್ಯೋಗ ದಲ್ಲಿದ್ದು ಬೆಳಿಗ್ಗೆ ಕೆಲಸಕ್ಕೆಂದು ಹಳೆನೇರಂಕಿಯ ನಿವಾಸಿ ಸ್ನೇಹಿತನೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದರು ಎನ್ನಲಾಗಿದ್ದು, ಈ ಸಂದರ್ಭದಲ್ಲಿ ಅಟೋ ರಿಕ್ಷಾವೊಂದು ಹಠತ್ತಾಗಿ ಬಲಕ್ಕೆ ತಿರುಗಿದಾಗ ಅದಕ್ಕೆ

ಬೆಂಗಳೂರಿನಲ್ಲಿ ಕಡಬದ ಯುವಕನ ದಾರುಣ ಸಾವು| ಅಪಘಾತದಲ್ಲಿ ರಸ್ತೆಗೆಸೆದವನ ಮೇಲೆ ಹರಿಯಿತು ಯಮಸ್ವರೂಪಿ ಲಾರಿ Read More »

ಬೈಕ್ ನಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಗುದ್ದಿದ ಲಾರಿ| ಗರ್ಭಿಣಿ ಮಹಿಳೆ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್ ಡೆಸ್ಕ್: ಗರ್ಭಿಣಿ ಪತ್ನಿಯೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ, ಪತಿಯ ಕಣ್ಣೆದುರಿಗೆ ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಕಿಕ್ಕೇರಿಯ ಬಳಿಯಲ್ಲಿ ಬೈಕ್ ನಲ್ಲಿ ಗರ್ಭಿಣಿ ಪತ್ನಿ ಸಹನ ಹಾಗೂ ಪತಿ ಸಂದೀಪ್ ಚನ್ನರಾಯಪಟ್ಟಣಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಲಾರಿಯೊಂದು ಹಿಂಬದಿಯಿಂದ ಡಿಕ್ಕಿಯಾಗಿದೆ. ಪರಿಣಾಮವಾಗಿ ಬೈಕ್ ನಲ್ಲಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದಿದ್ದಾರೆ. ಆ ವೇಳೆ ಲಾರಿ ಸಹನ ತಲೆಯ

ಬೈಕ್ ನಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಗುದ್ದಿದ ಲಾರಿ| ಗರ್ಭಿಣಿ ಮಹಿಳೆ ಸ್ಥಳದಲ್ಲೇ ಸಾವು Read More »

ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸ್ ದಾಳಿ| ಯುವತಿಯ ರಕ್ಷಣೆ

ಸಮಗ್ರ ಕ್ರೈಂ ಡೆಸ್ಕ್: ವೇಶ್ಯಾವಾಟಿಕೆ ನಡೆಯುತ್ತಿದ್ದ ಕಾರವಾರದ ಲಾಡ್ಜ್ ಮೇಲೆ ಪೊಲೀಸರು ದಾಳಿ ಮಾಡಿದ್ದು ಯುವತಿಯನ್ನು ರಕ್ಷಿಸಿದ್ದಾರೆ. ಕಾರವಾರ ನಗರದ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಿಢೀರ್ ದಾಳಿ ಮಾಡಿದ್ದು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಜೋಡಿಯನ್ನು ವಶಕ್ಕೆ ಪಡೆದಿದ್ದಾರೆ. ಕುಮಟಾದ ಸುಭಾಷ್ ರಸ್ತೆ ನಿವಾಸಿ ಹೇಮಂತ್ ನನ್ನು ಬಂಧಿಸಲಾಗಿದೆ. ಲಾಡ್ಜ್ ನಡೆಸುತ್ತಿದ್ದ ಸತೀಶ್ ಮತ್ತು ಮಾಲೀಕನ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ

ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸ್ ದಾಳಿ| ಯುವತಿಯ ರಕ್ಷಣೆ Read More »

ಬಂಟ್ವಾಳ: ಸಿಲಿಂಡರ್ ಸ್ಫೋಟ, ಆಟೋ ರಿಕ್ಷಾಕ್ಕೆ ಬೆಂಕಿ, ಓರ್ವ ಗಂಭೀರ

ಸಮಗ್ರ ನ್ಯೂಸ್ ಡೆಸ್ಕ್: ಆಟೋ ಗ್ಯಾಸ್ ಸಿಲಿಂಡರ್ ಅನ್ನು ಕತ್ತರಿಸುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಗಾಯಗೊಂಡಿರುವ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಬಂಟ್ವಾಳ ಕಾರಾಜೆ ನಿವಾಸಿ ಅಬ್ದುಲ್ ರಝಾಕ್ (62) ಗಾಯಗೊಂಡವರು. ಗುಜರಿ ವ್ಯಾಪಾರಿಯಾದ ಅಮ್ಮೆಮಾರ್ ನಿವಾಸಿ ತಸ್ಲೀಮ್ ಎಂಬವರ ಮನೆಯಲ್ಲಿ ಗುಜರಿಗೆ ಬಂದಿದ್ದ ಆಟೋ ಗ್ಯಾಸ್ ಸಿಲಿಂಡರ್ ಕತ್ತರಿಸಲು ಅಬ್ದುಲ್ ರಝಾಕ್ ಅವರು ಆಟೋ ರಿಕ್ಷಾದಲ್ಲಿ ಬಂದಿದ್ದು ಸಿಲಿಂಡರ್ ಕತ್ತರಿಸುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ ಎನ್ನಲಾಗಿದೆ. ಘಟನೆಯಿಂದ ಸಿಲಿಂಡರ್

ಬಂಟ್ವಾಳ: ಸಿಲಿಂಡರ್ ಸ್ಫೋಟ, ಆಟೋ ರಿಕ್ಷಾಕ್ಕೆ ಬೆಂಕಿ, ಓರ್ವ ಗಂಭೀರ Read More »

ಸಮುದ್ರ ಹಾರಿ ಸಾವನ್ನಪ್ಪಿದ ‌ಪ್ರಕರಣಕ್ಕೆ ತಿರುವು| ತ್ರಿಕೋನ ಪ್ರೇಮವೇ ಆತನ ಸಾವಿಗೆ ಕಾರಣವಾಯ್ತೇ?

ಮಂಗಳೂರು: ತ್ರಿಕೋನ ಪ್ರೇಮ ಪ್ರಕರಣದಲ್ಲಿ ಕಲಹ ಉಂಟಾಗಿ ಆತ್ಮಹತ್ಯೆ ಮಾಡಲು ಮುಂದಾದ ಪ್ರೇಯಸಿಯನ್ನು ರಕ್ಷಿಸಲು ಹೋದ ಯುವಕ ತಾನೇ ಬಲಿಯಾದ ಘಟನೆ ಮಂಗಳೂರು ನಗರ ಹೊರವಲಯದ ಸೋಮೇಶ್ವರ ಬೀಚ್‍ನಲ್ಲಿ ನಡೆದಿದೆ. ಮುನ್ನೂರು ಗ್ರಾಮದ ಉಳಿಯ ನಿವಾಸಿ ಲಾಯ್ಡ್ ಡಿಸೋಜ (26) ಸಮುದ್ರಪಾಲಾದ ಯುವಕ.ಈತ ಇಬ್ಬರು ಯುವತಿಯರನ್ನು ಪ್ರೀತಿಸುತ್ತಿದ್ದ. ಈ ಬಗ್ಗೆ ಕಲಹ ಉಂಟಾದಾಗ ಶುಕ್ರವಾರ ಸಂಜೆ ಸೋಮೇಶ್ವರ ಬೀಚ್‍ನಲ್ಲಿ ಮಾತುಕತೆ ನಡೆಸಲು ಮೂವರು ತೆರಳಿದ್ದರು. ಲಾಯ್ಡ್ ಪ್ರೇಯಸಿಯರಾದ ಅಶ್ವಿತಾ ಪೆರಾವೊ ಹಾಗೂ ಡಾಕ್ಲಿನ್ ನಡುವೆ ಮಾತುಕತೆ ವೇಳೆ

ಸಮುದ್ರ ಹಾರಿ ಸಾವನ್ನಪ್ಪಿದ ‌ಪ್ರಕರಣಕ್ಕೆ ತಿರುವು| ತ್ರಿಕೋನ ಪ್ರೇಮವೇ ಆತನ ಸಾವಿಗೆ ಕಾರಣವಾಯ್ತೇ? Read More »

ಶಾಸಕ ಸಿ.ಟಿ ರವಿಗೆ ಪಿತೃ ವಿಯೋಗ

ಚಿಕ್ಕಮಗಳೂರು : ಚಿಕ್ಕಮಗಳೂರು ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ತಂದೆ ಸಿ.ಇ.ತಿಮ್ಮೇಗೌಡ(92) ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಾಳೆ ಬೆಳಗ್ಗೆ 11.30 ಕ್ಕೆ ತಾಲೂಕಿನ ಆಲ್ದೂರಿನ ಚಿಕ್ಕಮಾಗರವಳ್ಳಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಭಾನುವಾರ ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 11.30 ರವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಆಲ್ದೂರಿನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ತಿಮ್ಮೇಗೌಡ ಅವರು ಚಿಕ್ಕಮಾಗರವಳ್ಳಿಯವರು. ಅವರಿಗೆ ಸಿ ಟಿ ರವಿ ಸೇರಿ ಇಬ್ಬರು ಪುತ್ರರು, ಮೂವರು

ಶಾಸಕ ಸಿ.ಟಿ ರವಿಗೆ ಪಿತೃ ವಿಯೋಗ Read More »