ಕ್ರೈಂ

ಕಾಸರಗೋಡು: ನೀಲೇಶ್ವರ ದಾಮೋದರ ತಂತ್ರಿ ಇನ್ನಿಲ್ಲ

ಕಾಸರಗೋಡು: ದ.ಕ ಜಿಲ್ಲೆಯ ಹಲವಾರು ದೇವಸ್ಥಾನಗಳ ತಂತ್ರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಸಿದ್ಧ ವೈದಿಕ ವಿದ್ವಾಂಸರಾದ ನೀಲೇಶ್ವರ ದಾಮೋದರ ತಂತ್ರಿಗಳವರು ನಿನ್ನೆ ರಾತ್ರಿ ನಿಧನರಾದರು. ಅವರಿಗೆ ಸುಮಾರು 85 ವರ್ಷ ವಯಸ್ಸಾಗಿತ್ತು. ಪುತ್ತೂರು ಹಾಗೂ ಸುಳ್ಯ ತಾಲೂಕಿನ ಬಹುತೇಕ ದೇವಸ್ಥಾನಗಳಲ್ಲಿ ತಂತ್ರಿಗಳಾಗಿ ಮಾರ್ಗಸೂಚಿ ನೀಡುತ್ತಿದ್ದ ಅವರು ಸುಳ್ಯ ತಾಲೂಕಿನ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ, ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನ, ಮರ್ಕಂಜದ ಕಾವೂರು, ರೆಂಜಾಳ, ಮಿನುಂಗೂರು ದೇವಸ್ಥಾನಗಳು, ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನ, ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಸ್ಥಾನ ಮೊದಲಾದ […]

ಕಾಸರಗೋಡು: ನೀಲೇಶ್ವರ ದಾಮೋದರ ತಂತ್ರಿ ಇನ್ನಿಲ್ಲ Read More »

ಬೆಳಗಾವಿ: ವಿಮ್ಸ್ ನಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ 3 ಹಸುಗೂಸುಗಳು ನಿಗೂಢ ಸಾವು|

ಬೆಳಗಾವಿ: ಜಿಲ್ಲೆಯ ವಿಮ್ಸ್ ನಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಂತ 3 ಹಸುಗೂಸುಗಳು ನಿಗೂಢವಾಗಿ ಸಾವನ್ನಪ್ಪಿವೆ. ಈ ಮೂಲಕ ರಾಜ್ಯದ ಜನತೆಯೇ ಬೆಚ್ಚಿ ಬೀಳುವಂತೆ ಘಟನೆ ನಡೆದಿದೆ. ಬೆಳಗಾವಿಯ ರಾಮದುರ್ಗ ತಾಲೂಕಿನ 13 ತಿಂಗಳ ಪವಿತ್ರಾ ಹುಲಗುರ್, ಒಂದು ವರ್ಷ ಎರಡು ತಿಂಗಳ ಮಧು ಉಮೇಶ್ ಕುರಗಂದಿ ಹಾಗೂ ಒಂದೂವರೆ ವರ್ಷದ ಚೇತನಾ ಪೂಜಾರಿ ಎಂಬ ಹಸುಗೂಸುಗಳು ಬಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಈ ಮೂವರು ಮಕ್ಕಳು ಐಸಿಯುನಲ್ಲಿ ಆಮ್ಲಜನಕದ ಸಪೋರ್ಟ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದ್ರೇ, ಚಿಕಿತ್ಸೆ ಪಡೆದು

ಬೆಳಗಾವಿ: ವಿಮ್ಸ್ ನಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ 3 ಹಸುಗೂಸುಗಳು ನಿಗೂಢ ಸಾವು| Read More »

ಕಾಸರಗೋಡು: ವಿದ್ಯಾರ್ಥಿನಿ ಜೊತೆ 2 ವರ್ಷದ ಮಗುವಿನ ತಾಯಿ ನಿಗೂಢ ನಾಪತ್ತೆ

ಕಾಸರಗೋಡು: ಇಲ್ಲಿನ ಪೆಟ್ರೋಲ್ ಬಂಕ್ ಸಮೀಪದ ನಿವಾಸಿಗಳಾದ ಇಬ್ಬರು ಮಹಿಳೆಯರು ನಿಗೂಢವಾಗಿ ನಾಪತ್ತೆಯಾದ ಘಟನೆ ನಡೆದಿದೆ. ಸಂಶೀನಾ(21) ಮತ್ತು ಈಕೆಯ ಸಂಬಂಧಿಯಾಗಿರುವ ಕಂಪ್ಯೂಟರ್ ವಿದ್ಯಾರ್ಥಿನಿ ಜಾಸ್ಮಿನ್ (19) ನಾಪತ್ತೆಯಾದವರು. ಸಂಶೀನಾ ವಿವಾಹಿತೆಯಾಗಿದ್ದು , 2 ವರ್ಷದ ಮಗುವಿನ ತಾಯಿಯಾಗಿದ್ದಾಳೆ. ಈಕೆಯ ಪತಿ ಕೊಲ್ಲಿಯಲ್ಲಿದ್ದಾರೆ. ಸಂಶೀನಾಳ ಪತಿಯ ತಂದೆ ಅಶ್ರಫ್ ನೀಡಿದ ದೂರಿನಂತೆ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಸರಗೋಡು: ವಿದ್ಯಾರ್ಥಿನಿ ಜೊತೆ 2 ವರ್ಷದ ಮಗುವಿನ ತಾಯಿ ನಿಗೂಢ ನಾಪತ್ತೆ Read More »

ಚಾಲಕನಿಗೆ ದಿಡೀರ್ ಅನಾರೋಗ್ಯ – ಬಸ್ ಚಲಾಯಿಸಿ ಆಸ್ಪತ್ರೆಗೆ ಸೇರಿಸಿದ ಸಹಪ್ರಯಾಣಿಕ ಮಹಿಳೆ

ಪುಣೆ: ಬಸ್ ಚಲಾಯಿಸುತ್ತಿದ್ದ ವೇಳೆ ಡ್ರೈವರ್ ಅನಾರೋಗ್ಯಕ್ಕೀಡಾಗಿದ್ದು, ತಕ್ಷಣ ಪ್ರಯಾಣಿಕ ಮಹಿಳೆ ಬಸ್ ಚಲಾಯಿಸಿ 10 ಕಿ.ಮೀ ದೂರ ತೆರಳಿ ಆಸ್ಪತ್ರೆಗೆ ದಾಖಲಿಸಿದ್ದು ಮಹಿಳೆಯ ವಿಡಿಯೋ ಇದೀಗ ವ್ಯಾಪಕವಾಗಿ ವೈರಲ್ ಆಗಿದೆ. ಯೋಗಿತಾ ಧರ್ಮೇಂದ್ರ ಸತವ್ ಎಂಬ ಮಹಿಳೆ ಈ ಸಾಹಸ ತೋರಿದ್ದಾರೆ. ಪುಣೆಯ ವಾಘೋಲಿಯಿಂದ 22ರಿಂದ 23 ಮಹಿಳೆಯರ ತಂಡ ಶಿರೂರು ತಾಲೂಕಿನ ಮೊರಚಿ ಚಿಂಚೋಳಿಗೆ ಟ್ರಿಪ್ ಹೋಗಿದ್ದರು.ಮೊರಚಿ ಚಿಂಚೋಳಿಯಿಂದ ವಾಪಸ್ ಬರುವಾಗ ಚಾಲಕನ ಆರೋಗ್ಯ ಹದಗೆಟ್ಟಿದೆ. ಈ ಸಂದರ್ಭದಲ್ಲಿ ಯೋಗಿತಾ ಬಸ್‌ ನ್ನು ಚಲಾಯಿಸುವ

ಚಾಲಕನಿಗೆ ದಿಡೀರ್ ಅನಾರೋಗ್ಯ – ಬಸ್ ಚಲಾಯಿಸಿ ಆಸ್ಪತ್ರೆಗೆ ಸೇರಿಸಿದ ಸಹಪ್ರಯಾಣಿಕ ಮಹಿಳೆ Read More »

ಬೆಂಗಳೂರು: ಶಾಪಿಂಗ್ ಮಾಲ್ ನಲ್ಲಿ ಅಗ್ನಿ ಅವಘಡ

ಬೆಂಗಳೂರು: ತಡರಾತ್ರಿ ಬೆಂಗಳೂರಿನ ಅರಕೆರೆ ಗೇಟ್ ಬಳಿಯಿರುವ ಬೃಹತ್ ಶಾಪಿಂಗ್ ಸಂಕೀರ್ಣವಾದ ಸೌಥ್ ಇಂಡಿಯನ್ ಮಾಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣಕ್ಕೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮಾಲ್ ನ ಸೂಪರ್ ಮಾರ್ಕೆಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ವೀಕೆಂಡ್ ಕರ್ಫ್ಯೂ ಹಿನ್ನೆಲೆ ಮಾಲ್ ನಲ್ಲಿ ಯಾರೂ ಇರದಿರುವ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ. ಇನ್ನು ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಅಪಾರ ಪ್ರಮಾಣದ ವಸ್ತುಗಳು ನಾಶವಾಗಿವೆ. ಸದ್ಯ ಘಟನೆಗೆ ನಿಖರ

ಬೆಂಗಳೂರು: ಶಾಪಿಂಗ್ ಮಾಲ್ ನಲ್ಲಿ ಅಗ್ನಿ ಅವಘಡ Read More »

ಮಂಗಳೂರು: ಕುಖ್ಯಾತ ರೌಡಿ ಶೀಟರ್ ಗಳ ಬಂಧಿಸಿದ ಪೊಲೀಸರು

ಮಂಗಳೂರು, ಜ.14. ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಅತ್ಯಾಚಾರ ಹಾಗೂ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿ 2 ತಿಂಗಳ ಹಿಂದೆ ಜೈಲಿನಿಂದ ಜಾಮೀನಿನ ಮೇರೆಗೆ ಬಿಡುಗಡೆಗೊಂಡಿದ್ದ ಆಕಾಶ ಭವನ ಶರಣ್ ಸಹಿತ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರೋಹಿದಾಸ್ ಯಾನೆ ಶರಣ್ ಆಕಾಶಭವನ (38), ಅನಿಲ್ ಕುಮಾರ್ ಸಾಲ್ಯಾನ್ ಯಾನೆ ಅನಿಲ್ ಪಂಪ್ ವೆಲ್ (40), ಸೈನಾಲ್ ಡಿ ಸೋಜಾ (22), ಪ್ರಸಾದ್ (39) ಹಾಗೂ ಚೇತನ್

ಮಂಗಳೂರು: ಕುಖ್ಯಾತ ರೌಡಿ ಶೀಟರ್ ಗಳ ಬಂಧಿಸಿದ ಪೊಲೀಸರು Read More »

ಪುತ್ತೂರು: ಹೆತ್ತ ತಾಯಿಯನ್ನೇ ಅತ್ಯಾಚಾರಗೈದ ಪಾಪಿ ಮಗ

ಪುತ್ತೂರು: ಹೆತ್ತು ಸಾಕಿ ಸಲಹಿದ ತಾಯಿಯನ್ನೇ ಕಿರಾತಕ ಮಗನೊಬ್ಬ ಅತ್ಯಾಚಾರಗೈದ ಘಟನೆ ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರೋಪಿ ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಕೆದಂಬಾಡಿ ಕುರಿಕ್ಕಾರದ ಜಯರಾಮ ರೈ ಅತ್ಯಾಚಾರ ಎಸಗಿರುವ ಆರೋಪಿ. 58 ವರ್ಷದ ತನ್ನ ತಾಯಿಯೊಂದಿಗೆ ವಾಸವಾಗಿರುವ ಜಯರಾಮ ಜ.12ರಂದು ಎಂದಿನಂತೆ ರಾತ್ರಿ ಊಟ ಮಾಡಿ ಅವರ ರೂಮ್ ನಲ್ಲಿ ಮಲಗಿದ್ದ. ಮುಂಜಾನೆ 3 ಗಂಟೆಯ ವೇಳೆಗೆ ತಾಯಿ ಮಲಗಿದ್ದ

ಪುತ್ತೂರು: ಹೆತ್ತ ತಾಯಿಯನ್ನೇ ಅತ್ಯಾಚಾರಗೈದ ಪಾಪಿ ಮಗ Read More »

ಕರಾಳ ಶುಕ್ರವಾರ:ಭೀಕರ ಅಪಘಾತಕ್ಕೆ ಏಳು ಬಲಿ

ದಾವಣಗೆರೆ: ಭೀಕರ ರಸ್ತೆ ಅಪಘಾತದಲ್ಲಿ ಎಳು ಮಂದಿ ಮೃತಪಟ್ಟಿರುವ ಘಟನೆ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ನಡೆದಿದೆ. ಕಾರು ಡಿವೈಡರ್​​ಗೆ ಢಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಪ್ರಯಾಣಿಕರು ಮೃತಪಟ್ಟಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ದಾವಣಗೆರೆ ಎಸ್ಪಿ ಸಿಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರಾಳ ಶುಕ್ರವಾರ:ಭೀಕರ ಅಪಘಾತಕ್ಕೆ ಏಳು ಬಲಿ Read More »

ಭೀಕರ ಅಪಘಾತ| ರಿಯಾಲಿಟಿ ಶೋ ಪುಟಾಣಿ ತಾರೆ ಸಮನ್ವಿ ವಿಧಿವಶ|

ಬೆಂಗಳೂರು:‌ ಟಿಪ್ಪರ್​ ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಕನ್ನಡ ವಾಹಿನಿವೊಂದರಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ ‘ನನ್ನಮ್ಮ ಸೂಪರ್​ ಸ್ಟಾರ್​ ಸ್ಪರ್ಧಿ’ ಸಮನ್ವಿ (6) ಸಾವನ್ನಪ್ಪಿದ್ದಾರೆ. ಗುರುವಾರ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಸಮನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆಯಲ್ಲಿ ಬಾಲಕಿ ತಾಯಿ ಅಮೃತಾ ನಾಯ್ಡು ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಮರಣೋತ್ತರ ಪರೀಕ್ಷೆಗೆ ಬಾಲಕಿ ಮೃತದೇಹವನ್ನು ಕಿಮ್ಸ್​ಗೆ ರವಾನಿಸಲಾಗಿದ್ದು, ಆರೋಪಿ ಟಿಪ್ಪರ್ ಲಾರಿ ಚಾಲಕನನ್ನು ಕೆ.ಎಸ್.ಲೇಔಟ್

ಭೀಕರ ಅಪಘಾತ| ರಿಯಾಲಿಟಿ ಶೋ ಪುಟಾಣಿ ತಾರೆ ಸಮನ್ವಿ ವಿಧಿವಶ| Read More »

ಅರ್ಚಕ ಸ್ಥಾನಕ್ಕಾಗಿ ಗರ್ಭಗುಡಿಯೊಳಗೆ ಬಡಿದಾಡಿಕೊಂಡ ಅರ್ಚಕರು

ಹಾವೇರಿ: ಪ್ರಧಾನ ಅರ್ಚಕ ಸ್ಥಾನಕ್ಕಾಗಿ ಅರ್ಚಕರು ಗರ್ಭಗುಡಿಯಲ್ಲಿ ಬಡಿದಾಡಿಕೊಂಡ ಘಟನೆ ರಾಣೆಬೇನ್ನೂರು ತಾಲೂಕಿನ ದೇವರಗುಡ್ಡದ ಮಾಲತೇಶ ದೇವಸ್ಥಾನದಲ್ಲಿ ನಡೆದಿದೆ. ಪೂಜೆ ಮಾಡುವ ಸಂಬಂಧ ದೇವಸ್ಥಾನದ ಪ್ರಧಾನ ಅರ್ಚಕ ಸಂತೋಷ ಭಟ್, ದೇವಸ್ಥಾನದ ಪರಿಚಾರಕ ಶಿವಪ್ಪ ಉಪ್ಪಾರ ಹಾಗೂ ಮೃತ್ಯುಂಜಯ ಎಂಬುವವರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಬೆಳಗಿನ ಜಾವ ದೇವರ ಮೊದಲ ಪೂಜೆಗಾಗಿ ಪ್ರಧಾನ ಅರ್ಚಕ ಸಂತೋಷ ಭಟ್ ಗಂಟೆ ಕೇಳಿದ್ದಾರೆ. ಈ ವೇಳೆ ಗಂಟೆ ಕೊಡದೆ ಮೃತ್ಯುಂಜಯ ಎಂಬುವವರು ದೇವರ ತ್ರಿಶೂಲದಿಂದ ಹಲ್ಲೆ

ಅರ್ಚಕ ಸ್ಥಾನಕ್ಕಾಗಿ ಗರ್ಭಗುಡಿಯೊಳಗೆ ಬಡಿದಾಡಿಕೊಂಡ ಅರ್ಚಕರು Read More »