ಕ್ರೈಂ

ಕಾಂತಾರ ಚಾಪ್ಟರ್ 1 ಸಿನಿಮಾದ ಕಲಾವಿದ ನಿಧನ

ಸಮಗ್ರ ನ್ಯೂಸ್: ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಇದೀಗ ಕೇರಳ ಮೂಲದ ಸಹ ಕಲಾವಿದ ಕಪಿಲ್ ಎಂಬುವರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಶೂಟಿಂಗ್ ಮುಗಿಸಿದ ಬಳಿಕ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಕಪಿಲ್ ಅವರು ತಮ್ಮ ತಂಡದವರ ಜೊತೆ ಈಜಲು ತೆರಳಿದ್ದರು. ನೀರಿನ ಆಳ ತಿಳಿಯದೇ ಅವರು ನದಿಗೆ ಇಳಿದರು. ಈ ವೇಳೆ ಅವರು ಮುಳುಗಿ ಸಾವಿಗೀಡಾಗಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಾಂತಾರ: […]

ಕಾಂತಾರ ಚಾಪ್ಟರ್ 1 ಸಿನಿಮಾದ ಕಲಾವಿದ ನಿಧನ Read More »

ಧರ್ಮಸ್ಥಳ: ಹೃದಯಾಘಾತದಿಂದ ಬಾಲಕ ಸಾವು

ಸಮಗ್ರ ನ್ಯೂಸ್: ಆಟವಾಡುತ್ತಿರುವ ವೇಳೆ ಹೃದಯಾಘಾತದಿಂದ ಬಾಲಕನೊಬ್ಬ ಸಾವನಪ್ಪಿದ ಘಟನೆ ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಗೋವಿಂದ ಗೌಡರ ಪುತ್ರ ಪ್ರಥಮ್‌ (16) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನದ ಸಮಯದಲ್ಲಿ ಬಾಲಕ ಆಟವಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಆತನನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಅಷ್ಟರಲ್ಲಿ ಆತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಉಜಿರೆ ಖಾಸಗಿ ಆಸ್ಪತ್ರೆಯಿಂದ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಬಾಲಕನ ಮೃತದೇಹವನ್ನು ಶವಪರೀಕ್ಷೆಗೆಂದು ಸಾಗಿಸಲಾಗಿದೆ. ಧರ್ಮಸ್ಥಳ

ಧರ್ಮಸ್ಥಳ: ಹೃದಯಾಘಾತದಿಂದ ಬಾಲಕ ಸಾವು Read More »

ಬೆಂಗಳೂರು: ನಡುರಸ್ತೆಯಲ್ಲೇ ನಗ್ನವಾಗಿ ಓಡಾಡಿದ ಯುವತಿ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಪಿಜಿ ಯುವತಿಯೊಬ್ಬಳು ನಗ್ನವಾಗಿ ಹಾಡಹಗಲೇ ಯುವತಿ ರಸ್ತೆಯಲ್ಲಿ ಓಡಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಅಕ್ರಮ ಪಿಜಿಗಳಲ್ಲಿ ಅನಾಗರಿಕ ವರ್ತನೆ ಕಂಡುಬಂದಿದ್ದು, ಹಾಡಹಗಲೆ ರಸ್ತೆಯಲ್ಲಿ ಯುವತಿ ನಗ್ನವಾಗಿ ಓಡಾಟ ನಡೆಸಿದ್ದಾಳೆ. ಅಕ್ರಮ ಪಿಜಿಗಳ ಪುಂಡಾಟಕ್ಕೆ ಸ್ಥಳೀಯ ಜನರು ಬೇಸತ್ತು ಹೋಗಿದ್ದಾರೆ. ನಗ್ನವಾಗಿ ರಸ್ತೆಯಲ್ಲಿಯೇ ಪಿಜಿ ಯುವತಿ ಓಡಾಡಿದ್ದಾಳೆ. ಬಿಬಿಎಂಪಿ ಮತ್ತು ಬೆಸ್ಕಾಂ ಹಾಗೂ ಪೊಲೀಸ್ ಠಾಣೆಗೆ ಈ ಸಂಬಂಧ ದೂರು ನೀಡಲಾಗಿದೆ. ಸ್ಥಳೀಯ ನಿವಾಸಿಗಳು ದೂರು ನೀಡಿದರು ಕೂಡ ಪಿ ಜಿ ಹಾಗೂ ಯುವತಿಯ

ಬೆಂಗಳೂರು: ನಡುರಸ್ತೆಯಲ್ಲೇ ನಗ್ನವಾಗಿ ಓಡಾಡಿದ ಯುವತಿ Read More »

ಸುಹಾಸ್ ಶೆಟ್ಟಿ‌ ಕೊಲೆ ಪ್ರಕರಣ| 8 ಮಂದಿ ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಮಂಗಳೂರು ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಗೃಹಸಚಿವ ಜಿ. ಪರಮೇಶ್ವರ್‌, “ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದ್ದು, ಈಗಾಗಲೇ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಯಾವುದೇ ಸಮುದಾಯದವರನ್ನು ಕಾನೂನು ಉಲ್ಲಂಘನೆ ಮಾಡಲು ಬಿಡಲ್ಲ. ಎಲ್ಲಾ ತರದ ಕಾನೂನು

ಸುಹಾಸ್ ಶೆಟ್ಟಿ‌ ಕೊಲೆ ಪ್ರಕರಣ| 8 ಮಂದಿ ಆರೋಪಿಗಳ ಬಂಧನ Read More »

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ| ೮ ಮಂದಿ ಶಂಕಿತರು ಪೊಲೀಸ್ ವಶಕ್ಕೆ?

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಬಾರಿ ಸಂಚು ನಡೆದಿರುವುದು ಬಯಲಾಗಿದೆ. ಕಾಂಟ್ರಾಕ್ಟ್ ಕಿಲ್ಲರ್ಸ್ ಬಳಸಿ ಈ ದಾಳಿ ನಡೆಸಿರುವ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ. ಇದೀಗ ಪೊಲೀಸರು ಒಟ್ಟು 8 ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಬಯಲಾಗಿದೆ. ಪೊಲೀಸರು ವಶಕ್ಕೆ ಪಡೆದಿರುವ 8 ಶಂಕಿತ ಆರೋಪಿಗಳ ಪೈಕಿ ಇಬ್ಬರು ಹಿಂದೂ ಯುವಕರು ಎಂದು ಹೇಳಲಾಗುತ್ತಿದೆ. ವಿಡಿಯೋ ಸಾಕ್ಷ್ಯದ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇದೀಗ 8 ಮಂದಿ ಬಂಧಿತರನ್ನು

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ| ೮ ಮಂದಿ ಶಂಕಿತರು ಪೊಲೀಸ್ ವಶಕ್ಕೆ? Read More »

ಉಡುಪಿ: ಮುಸ್ಲಿಂ ಯುವಕನ ಮೇಲೆ ಕೊಲೆ ಯತ್ನ| ಇಬ್ಬರು ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ರಿಕ್ಷಾ ಚಾಲಕರೊಬ್ಬರ ಮೇಲೆ ಇಬ್ಬರು ದುಷ್ಕರ್ಮಿಗಳು ತಲವಾರಿನಿಂದ ದಾಳಿ ಮಾಡಿ ಕೊಲೆಗೆ ಯತ್ನಿಸಿರುವ ಘಟನೆ ಮೇ 1ರಂದು ರಾತ್ರಿ 11:15ರ ಸುಮಾರಿಗೆ ಶೇಡಿಗುಡ್ಡೆ ಬಳಿ ನಡೆದಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಿರಿಯಡ್ಕ ಬೊಮ್ಮರಬೆಟ್ಟುವಿನ ಸಂದೇಶ್ (31) ಮತ್ತು ಬಾಪೂಜಿ ದರ್ಖಾಸು ನಿವಾಸಿ ಸುಶಾಂತ್ (32) ಬಂದಿತ ಆರೋಪಿಗಳು. ಆತ್ರಾಡಿಯ ಅಬೂಬಕರ್ (50) ಎಂಬವರು ಬಾಡಿಗೆ ನಿಮಿತ್ತ ಆತ್ರಾಡಿಯಿಂದ ಮದಗ ಕಡೆಗೆ ಮುಖ್ಯರಸ್ತೆಯಲ್ಲಿ ರಿಕ್ಷಾದಲ್ಲಿ ಆತ್ರಾಡಿ ಗ್ಯಾಸ್ ಪೆಟ್ರೋಲ್ ಬಂಕ್ ಬಳಿ

ಉಡುಪಿ: ಮುಸ್ಲಿಂ ಯುವಕನ ಮೇಲೆ ಕೊಲೆ ಯತ್ನ| ಇಬ್ಬರು ಆರೋಪಿಗಳ ಬಂಧನ Read More »

ಮೇ.6ರವರೆಗೆ ದ.ಕ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಬಜಪೆಯ ಕಿನ್ನಿಪದವಿನಲ್ಲಿ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಬೆನ್ನಲ್ಲೇ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 2 ರಿಂದ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಅವರು ಶುಕ್ರವಾರ ಆದೇಶ ಮಾಡಿದ್ದಾರೆ. ‘ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ನಗರದ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಜಾಸ್ತಿಯಾಗಿವೆ. ಹಾಗಾಗಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಕಾನೂನು

ಮೇ.6ರವರೆಗೆ ದ.ಕ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿ Read More »

ಸುಹಾಸ್ ಶೆಟ್ಟಿ ಹತ್ಯೆ ಖಂಡನೆ| ಇಂದು(ಮೇ.2) ದ.ಕ ಜಿಲ್ಲಾ ಬಂದ್ ಗೆ ಹಿಂದೂ ಸಂಘಟನೆಗಳ ಕರೆ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಬಜ್ಪೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಹತ್ಯೆ ಖಂಡಿಸಿ ಇಂದು(ಮೇ.2) ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಗೆ ಕರೆ ನೀಡಲಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಂದ್ ಗೆ ಕರೆ ನೀಡಲಾಗಿದೆ ಎಂದು VHP ಮುಖಂಡ ಶರಣ್ ಪಂಪ್

ಸುಹಾಸ್ ಶೆಟ್ಟಿ ಹತ್ಯೆ ಖಂಡನೆ| ಇಂದು(ಮೇ.2) ದ.ಕ ಜಿಲ್ಲಾ ಬಂದ್ ಗೆ ಹಿಂದೂ ಸಂಘಟನೆಗಳ ಕರೆ Read More »

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಮಂಗಳೂರು ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಂಗಳೂರಿನ ಬಜ್ಪೆ ಬಳಿಯಲ್ಲಿ ಜುಲೈ 22, 2022ರಂದು ಸುರತ್ಕಲ್ ಫಾಜಿಲ್ ಕೊಲೆಯಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಆಗಿದ್ದರು. ಪ್ರವೀಣ್ ನೆಟ್ಟಾರು ಕೊಲೆಯ ಪ್ರತೀಕಾರವಾಗಿ ನಡೆದಿದ್ದಂತ ಕೊಲೆ ಫಾಜಿಲ್ ಆಗಿತ್ತು. ಇಂದು ಈ ಪ್ರಕರಣ ಪ್ರಮುಖ ಆರೋಪಿ, ರೌಡಿ ಶೀಟರ್ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಹಲವು, ಕೊಲೆ, ಸುಲಿಗೆ ಪ್ರಕರಣಗಳಲ್ಲಿ ಸುಹಾಸ್ ಶೆಟ್ಟಿ

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ Read More »

ಮಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ್ದಕ್ಕೆ ಹತ್ಯೆ| ದೂರು ದಾಖಲಿಸಿದ ಯುವಕ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಕುಡುಪುವಿನಲ್ಲಿ ಕ್ರಿಕೆಟ್ ಮ್ಯಾಚ್ ವೇಳೆ ನಡೆದ ಗಲಾಟೆ ವೇಳೆ ವಲಸೆ ಕಾರ್ಮಿಕ ಮೊಹಮ್ಮದ್ ಅಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಎಫ್‌ಐಆರ್ ದಾಖಲಾಗಿದ್ದು, ಮೃತ ವ್ಯಕ್ತಿ ಪಾಕಿಸ್ತಾನ ಪಾಕಿಸ್ತಾನ ಎಂದು ಕೂಗಿದ್ದಕ್ಕೆ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಡುಪು ಬಳಿ ಗುಂಪು ಹಲ್ಲೆಯಿಂದ ಕೇರಳದ ವ್ಯಕ್ತಿ ಮೃತಪಟ್ಟ ಘಟನೆ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ. ದೀಪ್

ಮಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ್ದಕ್ಕೆ ಹತ್ಯೆ| ದೂರು ದಾಖಲಿಸಿದ ಯುವಕ Read More »