ಕ್ರೈಂ

ಯುವತಿಯೊಂದಿಗೆ ಅಸಭ್ಯ ವರ್ತನೆ| ಯುವಕನ ಬೆತ್ತಲೆಗೊಳಿಸಿ ಹಲ್ಲೆಗೈದ ತಂಡ|

ಹಾಸನ: ಯುವತಿ ಜೊತೆ ಅಸಭ್ಯ ವರ್ತನೆ ತೋರಿದ ಕಾರಣಕ್ಕೆ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿ ನಡೆದಿದೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಯುವಕ ಕೈ ಮುಗಿದು ಬೇಡಿಕೊಂಡರೂ ಬಿಡದ ಯುವಕರ ಗುಂಪು ಆತನ ಮೇಲೆ ಹಲ್ಲೆ ನಡೆಸಿದೆ. ಬಿಜಾಪುರ ಮೂಲದ ಮೇಘರಾಜ್ ಹಲ್ಲೆಗೊಳಗಾಗಿದ್ದು, ಈತ ಹಾಸನದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ. ಮೇಘರಾಜ್ ಯುವತಿ ಜೊತೆ ಅಸಭ್ಯ ವರ್ತನೆ ತೋರಿದ ಕಾರಣಕ್ಕೆ ಜನನಿಬಿಡ ಪ್ರದೇಶದಲ್ಲೇ ಬೆತ್ತಲೆಗೊಳಿಸಿ ಎಳೆದಾಡುವ ವಿಡಿಯೋ […]

ಯುವತಿಯೊಂದಿಗೆ ಅಸಭ್ಯ ವರ್ತನೆ| ಯುವಕನ ಬೆತ್ತಲೆಗೊಳಿಸಿ ಹಲ್ಲೆಗೈದ ತಂಡ| Read More »

ಮದುವೆಗೆ ಸಿಂಗರಿಸಿದಂತಿದ್ದ ಕಾರಿನೊಳಗೆ ಗೋವುಗಳ ಗುದ್ದಾಟ| ಅಕ್ರಮ ಗೋಸಾಗಾಟಕ್ಕೆ ಹೊಸ ಮಾರ್ಗ ಕಂಡುಕೊಂಡ ಗೋಕಳ್ಳರು|

ಉಡುಪಿ: ಮದುವೆ ಮನೆಗೆ ಹೊರಟಿರುವಂತೆ ಕಾರಿನ ಹೊರಗಡೆ ಸಿಂಗಾರ ಮಾಡಿ, ಒಳಗಡೆ ಹಸುಗಳ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಭಯಾನಕ ಕೃತ್ಯವೊಂದು ಉಡುಪಿಯಲ್ಲಿ ನಡೆದಿದ್ದು, ಖದೀಮರು ಸಿಕ್ಕಿಬಿದ್ದಿದ್ದಾರೆ. ಗೋವುಗಳನ್ನು ಸಾಗಾಟ ಮಾಡಲು ಖದೀಮರು ಕಂಡುಕೊಂಡಿರುವ ಹೊಸ ಮಾರ್ಗ ಎಲ್ಲರನ್ನೂ ದಂಗುಬಡಿಸಿದೆ. ಉಡುಪಿ ಜಿಲ್ಲೆ ಕಾಪು ತಾಲೂಕಿನ ಶಿರ್ವದಲ್ಲಿ ಈ ಘಟನೆ ನಡೆದಿದ್ದು, ಇನ್ನೋವಾ ಕಾರನ್ನು ಮದುವೆ ಕಾರಿನಂತೆ ಸಿಂಗರಿಸಿಕೊಂಡು ಯಾರಿಗೂ ಅನುಮಾನ ಬಾರದಂತೆ ಮಾಡಲಾಗಿದೆ. ಅದರಲ್ಲಿ ಕದ್ದ ಹಸುಗಳನ್ನು ತುಂಬಿಕೊಂಡು ಸಾಗಿಸಲಾಗುತ್ತಿತ್ತು. ವಿಷಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಿಗೆ

ಮದುವೆಗೆ ಸಿಂಗರಿಸಿದಂತಿದ್ದ ಕಾರಿನೊಳಗೆ ಗೋವುಗಳ ಗುದ್ದಾಟ| ಅಕ್ರಮ ಗೋಸಾಗಾಟಕ್ಕೆ ಹೊಸ ಮಾರ್ಗ ಕಂಡುಕೊಂಡ ಗೋಕಳ್ಳರು| Read More »

ಕಡಬ: ಆ್ಯಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಕಡಬ: ರಬ್ಬರ್ ಗೆ ಬೆರೆಸುವ ಆಸಿಡ್ ಸೇವಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಕುದ್ಮಾರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಮೂಲತಃ ಕೇರಳದ ಶ್ರೀಧರನ್ ಕಾಣಿ ಎಂದು ಗುರುತಿಸಲಾಗಿದೆ. ಶ್ರೀಧರನ್ ಕುದ್ಮಾರಿನ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದು, ರಬ್ಬರ್ ಟ್ಯಾಪಿಂಗ್ ವೃತ್ತಿ ಮಾಡುತ್ತಿದ್ದರು. ಇವರು ರಬ್ಬರ್ ಶೀಟ್ ಮಾಡಲು ಉಪಯೋಗಿಸುವ ಆಸಿಡ್ ನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ವೇಳೆ ಜೊತೆಗಿದ್ದ ರೆಝಿ ಆರ್ ಸೋಮರಾಜ್ ಎಂಬವರು ಸ್ಥಳೀಯರ ಸಹಾಯದಿಂದ ಪುತ್ತೂರು ಆಸ್ಪತ್ರೆಗೆ ದಾಖಲಿಸಿ, ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ

ಕಡಬ: ಆ್ಯಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ Read More »

ತುಳುನಾಡಿನಲ್ಲಿ ದೈವಗಳ ಕೆಟ್ಟ ರೀತಿಯಲ್ಲಿ ಅವಮಾನ| ಮುಸ್ಲಿಂ ಯುವಕನ ಬೆನ್ನಲ್ಲೇ ಹಿಂದೂ ವ್ಯಕ್ತಿಯಿಂದ ದೈವನಂಬಿಕೆಗೆ ಅವಮಾನ|ಈತನ ಬಂಧನ ಯಾವಾಗ?

“ಪತ್ತ್ ಇಂಜಿ ಪೊನ್ನು… ನಾಲ್ ಇಂಜಿ ಪಜೆ, ನಾಲ್ ಇಂಚಿ….. “ಮುಸ್ಲಿಂ ಯುವಕನ ಬೆನ್ನಲ್ಲೇ ಹಿಂದೂ ಯುವಕನಿಂದ ದೈವನಂಬಿಕೆಗೆ ಅಪಮಾನ| ಜಾಲತಾಣಗಳಲ್ಲಿ ವಿಡಿಯೋ ವೈರಲ್. ಈತನ ಬಂಧನ ಯಾವಾಗ..? ಮಂಗಳೂರು: ಮುಸ್ಲಿಂ ಯುವಕನೋರ್ವ ಕೊರಗಜ್ಜನ ವೇಷ ಧರಿಸಿ ಅವಮಾನ ಮಾಡಿದ ವಿಡಿಯೋ ವೈರಲ್ ಆಗುತ್ತಿರುವ ಬೆನ್ನಲ್ಲೇ ಹಿಂದೂ ಯುವಕನೋರ್ವ ದೈವಗಳ ಕಟ್ಟು(ಪ್ರಾರ್ಥನೆ) ಹೇಳುವಂತೆ ಕೆಟ್ಟ ರೀತಿಯಲ್ಲಿ ಅವಮಾನ ಮಾಡಿದ ವಿಡಿಯೋಗಳು ಜಾಣತಾಣದಲ್ಲಿ ವೈರಲ್ ಆಗುತ್ತಿದ್ದು, ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.ಕೆಲ ದಿನಗಳ ಹಿಂದೆ ವಿಟ್ಲದ ಮುಸ್ಲಿಂ ಯುವಕ ತನ್ನ

ತುಳುನಾಡಿನಲ್ಲಿ ದೈವಗಳ ಕೆಟ್ಟ ರೀತಿಯಲ್ಲಿ ಅವಮಾನ| ಮುಸ್ಲಿಂ ಯುವಕನ ಬೆನ್ನಲ್ಲೇ ಹಿಂದೂ ವ್ಯಕ್ತಿಯಿಂದ ದೈವನಂಬಿಕೆಗೆ ಅವಮಾನ|ಈತನ ಬಂಧನ ಯಾವಾಗ? Read More »

ಲಾರಿ ಹತ್ತಿಸಿ ಪ್ರಧಾನಿ ಮೋದಿ ಕೊಲ್ಲಲು ಕಾಂಗ್ರೆಸ್ ಸಂಚು ರೂಪಿಸಿತ್ತು…! ಈ ಸುಳ್ಳು ಸುದ್ದಿಯ ಸತ್ಯಾಂಶವೇನು? ವಾಸ್ತವ ಸತ್ಯ ನೀವೇ ಓದಿ…

ಪಂಜಾಬ್: ಇಲ್ಲಿನ ಫಿರೋಜ್‌ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲು ಉದ್ದೇಶಿಸಿದ್ದ ಸಾರ್ವಜನಿಕ ರ್ಯಾಲಿಗೆ ರೈತರು ಅಡ್ಡಿಪಡಿಸಿದ ಕಾರಣ ಸುಮಾರು 20 ನಿಮಿಷಗಳ ಕಾಲ ಫ್ಲೈಓವರ್ ಮೇಲೆ ಸಿಕ್ಕಿಹಾಕಿಕೊಂಡಿದ್ದರು ಎಂಬ ಘಟನೆ ಇಡೀ ದೇಶದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಈ ಕಾರಣಕ್ಕಾಗಿ ಪಂಜಾಬ್ ನ ಫಿರೋಜ್ ಪುರ್ ನಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ರ್ಯಾಲಿಯನ್ನು ಮೋದಿಯವರು ಮೊಟಕುಗೊಳಿಸಿದರು. ಜ.5 ರಂದು ನಡೆದ ಈ ಘಟನೆಯನ್ನು ಪಂಜಾಬ್ ಸರ್ಕಾರದ ಭದ್ರತಾ ವೈಫಲ್ಯ ಎಂದು ಬಿಜೆಪಿ ಆರೋಪಿಸಿದೆ. ಇನ್ನೊಂದೆಡೆ ಯಾವುದೇ ಭದ್ರತಾ ಲೋಪ

ಲಾರಿ ಹತ್ತಿಸಿ ಪ್ರಧಾನಿ ಮೋದಿ ಕೊಲ್ಲಲು ಕಾಂಗ್ರೆಸ್ ಸಂಚು ರೂಪಿಸಿತ್ತು…! ಈ ಸುಳ್ಳು ಸುದ್ದಿಯ ಸತ್ಯಾಂಶವೇನು? ವಾಸ್ತವ ಸತ್ಯ ನೀವೇ ಓದಿ… Read More »

ಕೇಸರಿ ಶಾಲು v/s ಸ್ಕಾರ್ಫ್ ಗಲಾಟೆಗೆ ತಾರ್ಕಿಂತ ಅಂತ್ಯ| ಪೋಷಕರ ಸಭೆಯಲ್ಲಿ ಬಗೆಹರಿಯಿತು ವಿವಾದ|

ಚಿಕ್ಕಮಗಳೂರು: ಕಳೆದ ಎಂಟತ್ತು ದಿನಗಳಿಂದ ಜಿಲ್ಲೆಯ ಕೊಪ್ಪ ತಾಲೂಕಿನ ಬಾಳಗಡಿ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಲೆದೂರಿದ್ದ ಕೇಸರಿ ಶಲ್ಯ ಹಾಗೂ ಸ್ಕಾರ್ಫ್ ವಿವಾದಕ್ಕೆ ಶಾಂತಿಯುತ ತೆರೆಬಿದ್ದಿದೆ. ಕಾಲೇಜಿನ ಪ್ರಾಂಶುಪಾಲರು ಸೋಮವಾರ ಕಾಲೇಜಿನಲ್ಲಿ ಪೋಷಕರ ಸಭೆ ಕರೆದಿದ್ದರು. ಪೋಷಕರ ಸಭೆಯಲ್ಲಿ ಅನ್ಯ ಕೋಮಿನ ವಿದ್ಯಾರ್ಥಿನಿಯರು ತರಗತಿಯ ಒಳಗೆ ಸ್ಕಾರ್ಫ್ ಧರಿಸುವಂತಿಲ್ಲ, ತಲೆಯ ಮೇಲೆ ವೇಲ್ ಹಾಕಿಕೊಳ್ಳಲು ಅಷ್ಟೇ ಅವಕಾಶ. ವೇಲ್‌ನ್ನು ಪಿನ್‌ಗಳಿಂದ ಸುತ್ತಿ ಕಟ್ಟುವಂತಿಲ್ಲ ಎಂದು ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲಾಗಿದೆ. ಪೋಷಕರ ಸಭೆಯಲ್ಲಿ ಪ್ರಾಂಶುಪಾಲ

ಕೇಸರಿ ಶಾಲು v/s ಸ್ಕಾರ್ಫ್ ಗಲಾಟೆಗೆ ತಾರ್ಕಿಂತ ಅಂತ್ಯ| ಪೋಷಕರ ಸಭೆಯಲ್ಲಿ ಬಗೆಹರಿಯಿತು ವಿವಾದ| Read More »

ಕೊರಗಜ್ಜನಿಗೆ ಅವಮಾನ ಪ್ರಕರಣ| ಇಬ್ಬರು ಆರೋಪಿಗಳು ಅಂದರ್| ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಮದುಮಗ|

ವಿಟ್ಲ: ಇಲ್ಲಿನ ಸಾಲೆತ್ತೂರಿನಲ್ಲಿ ಕೊರಗಜ್ಜ ದೈವಕ್ಕೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ‌ ಪೊಲೀಸರು ಮಂಗಳವಾರದಂದು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಮಂಗಲ್ಪಾಡಿ ನಿವಾಸಿ, ಪುತ್ತೂರಿನ ಫಾತಿಮಾ ಮ್ಯಾಚಿಂಗ್ ಸೆಂಟರ್ ನ ಮಾಲಕ ಅಹಮ್ಮದ್ ಮುಜ್ತಾಬ್(28) ಹಾಗೂ ಮಂಜೇಶ್ವರ ತಾಲೂಕಿನ ಬಾಯಾರು ಪದವು ನಿವಾಸಿ ಮೊಯ್ದೀನ್ ಮನೀಶ್(19) ಎಂದು ಗುರುತಿಸಲಾಗಿದೆ. ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಉಪ್ಪಳ ಸೋಂಕಲ್ ಅಗರ್ತಿಮೂಲೆ ಸಮೀಪದ

ಕೊರಗಜ್ಜನಿಗೆ ಅವಮಾನ ಪ್ರಕರಣ| ಇಬ್ಬರು ಆರೋಪಿಗಳು ಅಂದರ್| ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಮದುಮಗ| Read More »

ವಿದ್ಯಾರ್ಥಿನಿಯ ಅತ್ಯಾಚಾರಗೈದ ಶಿಕ್ಷಕ

ಜೈಪುರ: 11 ನೇ ತರಗತಿಯ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ ಶಿಕ್ಷಕರೊಬ್ಬರನ್ನು ಬಂಧಿಸಿರುವ ಘಟನೆ ರಾಜಾಸ್ಥಾನದ ಜೈಪುರ್ ನಲ್ಲಿ ನಡೆದಿದೆ. ಕಳೆದ ಮೂರು ವರ್ಷಗಳಿಂದ ವಿದ್ಯಾರ್ಥಿನಿ ಮೇಲೆ ಈ ಶಿಕ್ಷಕ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಎಂದು‌ ಹೇಳಲಾಗಿದೆ. ಆದರೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ ಎಂದು ತಿಳಿದುಬಂದಿದೆ. ಆದರೆ ಈ ಬಾರಿ ಶಿಕ್ಷಕನ ಮನೆಯಲ್ಲಿ ಅತ್ಯಾಚಾರ ನಡೆಯುತ್ತಿದ್ದಾಗ ನೆರೆಹೊರೆಯವರು ಬಾಲಕಿ ಕಿರುಚಾಡುವ ಶಬ್ಧ ಕೇಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಹೋಗಿ ನೋಡಿದಾಗ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ

ವಿದ್ಯಾರ್ಥಿನಿಯ ಅತ್ಯಾಚಾರಗೈದ ಶಿಕ್ಷಕ Read More »

ಕಾರು ಮತ್ತು ಬೈಕ್ ಮೇಲೆ ಉರುಳಿದ ಟಿಪ್ಪರ್| 6 ಜನರು ದುರ್ಮರಣ|

ಬೆಂಗಳೂರು : 2 ಕಾರು ಹಾಗೂ ಬೈಕ್ ಮೇಲೆ ಟಿಪ್ಪರ್ ಒಂದು ಉರುಳಿ ಬಿದ್ದ ಪರಿಣಾಮ 6 ಜನರು ಮೃತಪಟ್ಟ ಘಟನೆ ಬೆಂಗಳೂರಿನ ಕುಂಬಳಗೋಡು ಬಳಿಯಲ್ಲಿ ನಡೆದಿದೆ. ಬೆಂಗಳೂರಿನ ಕುಂಬಳಗೋಡು ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, 2 ಕಾರು ಹಾಗೂ ಬೈಕ್ ಮೇಲೆ ಟಿಪ್ಪರ್ ಒಂದು ಉರುಳಿ ಬಿದ್ದ ಪರಿಣಾಮ ಈ ಭೀಕರ ಘಟನೆ ನಡೆದಿದೆ. ಸಾವಿಗೀಡಾದವರ ಪೈಕಿ ನಾಲ್ವರು ಪುರುಷರು, ಇಬ್ಬರು ಮಹಿಳೆಯರು ಸೇರಿದ್ದಾರೆ. ಈ ಶವಗಳನ್ನ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ಕಾರು ಮತ್ತು ಬೈಕ್ ಮೇಲೆ ಉರುಳಿದ ಟಿಪ್ಪರ್| 6 ಜನರು ದುರ್ಮರಣ| Read More »

ಸತತ 30 ಗಂಟೆಗಳ ಕಾಲ ಸಮುದ್ರದಲ್ಲಿ ಈಜಿ ಸಾವನ್ನು ಗೆದ್ದ ಮೀನುಗಾರ

ಕಾಸರಗೋಡು: ಸಮುದ್ರಕ್ಕೆ ಬಿದ್ದು ಸುದೀರ್ಘ 30 ಗಂಟೆಗಳ ಕಾಲ ಈಜಾಡಿ ಸಾವನ್ನು ಗೆದ್ದುಬಂದ ಮೀನುಗಾರರೋರ್ವರು ಅಚ್ಚರಿ ಸೃಷ್ಟಿಸಿದ ಘಟನೆ ವರದಿಯಾಗಿದೆ‌. ಮೀನುಗಾರನನ್ನು ತಮಿಳುನಾಡು ಮೂಲದ ಜೋಸೆಫ್ ಎಂದು ಗುರುತಿಸಲಾಗಿದೆ. ಇವರು ಡಿ. 31ರಂದು ಮಂಗಳೂರಿನಿಂದ ಮೀನುಗಾರಿಕಾ ದೋಣಿಯೊಂದರಲ್ಲಿ ಎಂಟು ಮಂದಿಯ ತಂಡದೊಂದಿಗೆ ತೆರಳಿದ್ದರು. ಜ. 6ರಂದು ಮುಂಜಾನೆ ಎರಡು ಗಂಟೆಯ ಸುಮಾರಿಗೆ ದೋಣಿಯಲ್ಲಿ ಕುಳಿತು ವಿಶ್ರಾಂತಿ ಪಡೆಯುತ್ತಿದ್ದ ಜೋಸೆಫ್ ನಾಪತ್ತೆಯಾಗಿದ್ದರು. ಆಗ ದೋಣಿ ಸಮುದ್ರ ದಡದಿಂದ ಸುಮಾರು 36 ನಾಟಿಕಲ್ ಮೈಲ್ ದೂರದಲ್ಲಿದ್ದು, ಬೆಳಗ್ಗೆ 11 ಗಂಟೆಯವರೆಗೆ

ಸತತ 30 ಗಂಟೆಗಳ ಕಾಲ ಸಮುದ್ರದಲ್ಲಿ ಈಜಿ ಸಾವನ್ನು ಗೆದ್ದ ಮೀನುಗಾರ Read More »