ಕ್ರೈಂ

ದೂರು ಕೊಡಲು ಹೋದ ಮಹಿಳೆಯ ಮಂಚಕ್ಕೆ ಕರೆದ ಪೋಲಿ ಇನ್ಸ್ ಪೆಕ್ಟರ್| ಸಂತ್ರಸ್ತೆಯಿಂದ ಪೊಲೀಸ್ ಆಯುಕ್ತರಿಗೆ ದೂರು

ಬೆಂಗಳೂರು: ದೂರು ನೀಡಲು ಹೋದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಹೆಣ್ಣೂರು ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ ಕೇಳಿ ಬಂದಿದೆ. ಹೆಣ್ಣೂರು ಪೊಲೀಸ್ ಇನ್ಸ್ ಪೆಕ್ಟರ್ ವಸಂತ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಮಹಿಳೆಯೊಬ್ಬರು ಪೊಲೀಸ್ ಆಯುಕ್ತರಿಗೆ ದೂರು ನೀಡಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಗಲಾಟೆ ವಿಷಯಕ್ಕೆ ಸಂಬಂಧಿಸಿ ಸಂತ್ರಸ್ತ ಮಹಿಳೆ ದೂರು ನೀಡಲು ಹೆಣ್ಣೂರು ಪೊಲೀಸ್ ಠಾಣೆಗೆ ತೆರಳಿದ್ದು ಈ ವೇಳೆ ಪೊಲೀಸ್ ಇನ್ಸ್ ಪೆಕ್ಟರ್ ವಸಂತ್ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದು, […]

ದೂರು ಕೊಡಲು ಹೋದ ಮಹಿಳೆಯ ಮಂಚಕ್ಕೆ ಕರೆದ ಪೋಲಿ ಇನ್ಸ್ ಪೆಕ್ಟರ್| ಸಂತ್ರಸ್ತೆಯಿಂದ ಪೊಲೀಸ್ ಆಯುಕ್ತರಿಗೆ ದೂರು Read More »

ನಟಿ ರೈಮಾ ಶಿಮು ಕೊಲೆ ಪ್ರಕರಣ| ಕೊಲೆ ಸಂಚಿನ ರೂವಾರಿ ಯಾರು ಗೊತ್ತೇ?

ಸಮಗ್ರ ನ್ಯೂಸ್: ಬಾಂಗ್ಲಾದೇಶಿ ನಟಿ ರೈಮಾ ಇಸ್ಲಾಂ ಶಿಮು ಅವರ ಭೀಕರ ಕೊಲೆಯಲ್ಲಿ ಭಾಗಿಯಾಗಿರುವುದಾಗಿ ಆಕೆಯ ಪತಿ ಶಖಾವತ್ ಅಲಿ ನೊಬೆಲ್ ತಪ್ಪೊಪ್ಪಿಕೊಂಡಿದ್ದಾನೆ. ಕಳೆದ ಸೋಮವಾರ ಢಾಕಾದ ಕಡಮ್ತೋಳಿ ಪ್ರದೇಶದ ಅಲಿಪುರ ಸೇತುವೆ ಬಳಿ ಗೋಣಿಚೀಲದಲ್ಲಿ ರೈಮಾ ಅವರ ಮೃತದೇಹ ಪತ್ತೆಯಾಗಿತ್ತು ನಂತರ ಶಖಾವತ್ ಅಲಿ ನಾಪತ್ತೆಯಾಗಿದ್ದ. ನಟಿಯ ದೇಹದ ಮೇಲೆ ಹಲವಾರು ಗಾಯದ ಗುರುತುಗಳು ಕಂಡುಬಂದ ನಂತರದಲ್ಲಿ ನಾನಾರೀತಿ ಅನುಮಾನ ಶುರುವಾಗಿತ್ತು. ತಕ್ಷಣ ಕಂಡು ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಈಗ

ನಟಿ ರೈಮಾ ಶಿಮು ಕೊಲೆ ಪ್ರಕರಣ| ಕೊಲೆ ಸಂಚಿನ ರೂವಾರಿ ಯಾರು ಗೊತ್ತೇ? Read More »

ಬ್ರಹ್ಮಾವರ: ಅಪಘಾದಲ್ಲಿ ಗಂಭೀರ ಗಾಯಗೊಂಡ ಮಹಿಳೆ ಮೃತ್ಯು

ಬ್ರಹ್ಮಾವರ: ರಸ್ತೆ ಅಪಘಾದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅಸುನೀಗಿದ್ದಾರೆ. ಸರಿತಾ ಪಿಂಟೊ (38) ಮೃತ ಮಹಿಳೆ. ಇವರು ಸೋಮವಾರ ಕೋಟದಲ್ಲಿರುವ ತನ್ನ ತಂದೆ-ತಾಯಿ ಮನೆಗೆ ಕಳೆದ ಕೆಲವು ದಿನಗಳ ಹಿಂದೆ ಕುವೈಟ್ ನಿಂದ ಆಗಮಿಸಿದ ಪತಿ ಅನಿಲ್ ಪಿಂಟೊ ಮತ್ತು 3 ವರ್ಷದ ಮಗುವಿನೊಂದಿಗೆ ದ್ವಿಚಕ್ರದಲ್ಲಿ ತೆರಳುತ್ತಿದ್ದ ವೇಳೆ ಬ್ರಹ್ಮಾವರದ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ಅವರು ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮಗ ಮತ್ತು ಪತಿ ಸಣ್ಣ ಪುಟ್ಟ ಗಾಯಗಳೊಂದಿಗೆ

ಬ್ರಹ್ಮಾವರ: ಅಪಘಾದಲ್ಲಿ ಗಂಭೀರ ಗಾಯಗೊಂಡ ಮಹಿಳೆ ಮೃತ್ಯು Read More »

ಸುಬ್ರಹ್ಮಣ್ಯ: ಬಿಸ್ಲೆ ಘಾಟ್ ನಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಸುಬ್ರಹ್ಮಣ್ಯ : ಬಿಸಿಲೆ ಘಾಟ್ ನ ರಸ್ತೆಯ ಬದಿ ಇರುವ ನದಿಯ ಸಮೀಪ ಅಪರಿಚಿತ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿಷಸೇವಿಸಿ ಅರೆಪ್ರಜ್ಞಾವಸ್ಥೆಯಲ್ಲಿದ್ದ ಈತನನ್ನು ಬದುಕಿಸಲು ಯುವ ತೇಜಸ್ಸು ಸಂಸ್ಥೆಯ ಸದಸ್ಯರ ಗರಿಷ್ಠ ಪ್ರಯತ್ನದ ಹೊರತಾಗಿಯೂ ವ್ಯಕ್ತಿ ಸಾವನ್ನಪ್ಪಿದ್ದಾನೆ. ಬಿಸಿಲೆ ಘಾಟ್ ನ ಚೌಡೇಶ್ವರಿ ಅಮ್ಮನವರ ಗುಡಿಯಿಂದ ಸುಮಾರು 100 ಮೀಟರ್ ಇಳಿಜಾರಿನ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರ ಗಮನಕ್ಕೆ ಬಂದು ಕೂಡಲೇ ಸುಬ್ರಮಣ್ಯದ ಯುವತೇಜಸ್ಸು ಟ್ರಸ್ಟ್ ಗೆ ತಿಳಿಸಿದ್ದಾರೆ.

ಸುಬ್ರಹ್ಮಣ್ಯ: ಬಿಸ್ಲೆ ಘಾಟ್ ನಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ Read More »

ಪುತ್ತೂರು: ಹಿಂದೂ-ಮುಸ್ಲಿಂ ಯುವಕರ ನಡುವೆ ಹಲ್ಲೆ| ಪೊಲೀಸರಿಂದ ಲಾಠಿ ಪ್ರಹಾರ

ಪುತ್ತೂರು: ಅನ್ಯಕೋಮಿನ ಯುವಕರ ಮಧ್ಯೆ ಮಾತಿನ ಚಕಮಕಿ ನಡೆದು ನಂತರ ಅದು ಪರಸ್ಪರ ಹಲ್ಲೆಗೆ ತಿರುಗಿ ಘಟನಾ ಸ್ಥಳಕ್ಕೆ ಪೊಲೀಸರು ಬಂದು ಲಘು ಲಾಠಿ ಪ್ರಹಾರದ ಮೂಲಕ ಗುಂಪು ಚದುರಿಸಿದ ಘಟನೆ ಪುತ್ತೂರಿನ ಕೆದಿಲ ಗ್ರಾಮದ ಗಡಿಯಾರದಲ್ಲಿ ತಡರಾತ್ರಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕೆಲ ಯುವಕರನ್ನು ಪೊಲೀಸರು ಬಂಧಿಸಿದ್ದು, ಬಂಧಿತರನ್ನು ಗಡಿಯಾರದ ಸತ್ತಿಕಲ್ಲು ನಿವಾಸಿ ರಷ್ಪಕ್, ಪೆರ್ನೆ ನಿವಾಸಿಗಳಾದ ಹರ್ಷಿತ್, ಸತೀಶ್, ಜಗದೀಶ್ ಎನ್ನಲಾಗಿದೆ. ಅನ್ಯಕೋಮಿನ ಯುವಕರ ನಡುವೆ ಮಾತಿನ ಚಕಮಕಿ ನಡೆದು ಹಲ್ಲೆ ನಡೆದಾಗ ಪೊಲೀಸರು

ಪುತ್ತೂರು: ಹಿಂದೂ-ಮುಸ್ಲಿಂ ಯುವಕರ ನಡುವೆ ಹಲ್ಲೆ| ಪೊಲೀಸರಿಂದ ಲಾಠಿ ಪ್ರಹಾರ Read More »

ಚಿಕನ್ ಚಿಲ್ಲಿ, ಬಿರಿಯಾನಿ ತಿನ್ನುವ ಸ್ಪರ್ಧೆ| ಸ್ಪರ್ಧಾಳುಗಳ ಮೇಲೆ ಕೇಸು ದಾಖಲು

ಧರ್ಮಪುರಿ: 1 ಕೆ.ಜಿ. ಚಿಕನ್ ಚಿಲ್ಲಿ ಹಾಗೂ ಬಿರಿಯಾನಿ ತಿನ್ನುವ ಸ್ಪರ್ಧೆಯಲ್ಲಿ ಭಾಗವಹಿಸಿದವರ ಮೇಲೆ ಕೇಸು ದಾಖಲಿಸಿರುವ ಘಟನೆ ಧರ್ಮಪುರಿಯ ಮುಕ್ಕಲನಾಯಕನಪಟ್ಟಿ ಗ್ರಾಮದಲ್ಲಿ ನಡೆದಿದೆ. ಪೊಂಗಲ್ ಹಬ್ಬದ ಪ್ರಯುಕ್ತ ಗ್ರಾಮಸ್ಥರು ಪ್ರತಿ ವರ್ಷ ಈ ಸ್ಪರ್ಧೆಯನ್ನು ಇಲ್ಲಿ ಆಯೋಜಿಸುತ್ತಿದ್ದರು. ಸ್ಪರ್ಧೆಯಲ್ಲಿ 15 ಕೆ.ಜಿ. ಚಿಕನ್ ಫ್ರೈ ಮಾಡಿ, ಸ್ಪರ್ಧೆಯಲ್ಲಿ ಭಾಗವಹಿಸಿದ್ದ 15 ಯುವಕರಿಗೆ ಬಡಿಸಲಾಯಿತು. ಇನ್ನೂ ಬಿರಿಯಾನಿ ತಿನ್ನುವ ಸ್ಪರ್ಧೆಯಲ್ಲಿ ಒಟ್ಟು 21 ಮಂದಿ ಯುವಕರು ಭಾಗಿಯಾಗಿದ್ದರು. ಕೋವಿಡ್ ಹಿನ್ನೆಲೆಯಲ್ಲಿ ಭಾನುವಾರ ಲಾಕ್ ಡೌನ್ ಜಾರಿ ಮಾಡಲಾಗಿತ್ತು.

ಚಿಕನ್ ಚಿಲ್ಲಿ, ಬಿರಿಯಾನಿ ತಿನ್ನುವ ಸ್ಪರ್ಧೆ| ಸ್ಪರ್ಧಾಳುಗಳ ಮೇಲೆ ಕೇಸು ದಾಖಲು Read More »

ಬಂಟ್ವಾಳ: ರಾತ್ರೋರಾತ್ರಿ ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕಾರಾಜೆ ನಿವಾಸಿ ಜಲೀಲ್ ( 55) ಎಂದು ಗುರುತಿಸಲಾಗಿದೆ.ಇವರು ರಾತ್ರಿ ಸುಮಾರು 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಲ್ಲಿ ಬೈಕ್ ಚಪ್ಪಲಿ ಹಾಗೂ ಮೊಬೈಲ್ ಇಟ್ಟು ಯಾರು ಇಲ್ಲದ ಬಗ್ಗೆ ಸಂಶಯಗೊಂಡ ಸ್ಥಳೀಯ ಈಜುಗಾರರು ನದಿಯಲ್ಲಿ ಹುಡುಕಲು ಆರಂಭಿಸಿದರು. ಸ್ಥಳದಲ್ಲಿದ್ದ ಮೊಬೈಲ್ ಬಗ್ಗೆ

ಬಂಟ್ವಾಳ: ರಾತ್ರೋರಾತ್ರಿ ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ Read More »

ನಾಪತ್ತೆಯಾಗಿದ್ದ ನಟಿಯ ಹೆಣ ಗೋಣಿಚೀಲದಲ್ಲಿ ಪತ್ತೆ

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ನಟಿ ರೈಮಾ ಇಸ್ಲಾಂ ಶಿಮು ಢಾಕಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆಕೆಯ ಶವ ಕೆರಣಿಗಂಜ್‌ನ ಹಜರತ್‌ಪುರ ಸೇತುವೆಯ ಬಳಿ ಗೋಣಿಚೀಲದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಿಮು ನಾಪತ್ತೆಯಾದ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಭಾನುವಾರ ಕಲಬಾಗನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸ್ಥಳೀಯರು ಮಾಹಿತಿ ನೀಡಿದ ನಂತರ ಕೆರಣಿಗಂಜ್ ಮಾದರಿ ಠಾಣೆಯ ಪೊಲೀಸರ ತಂಡ ಮೃತದೇಹವನ್ನು ಹೊರತೆಗೆದಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ ಸಲೀಮುಲ್ಲಾ ವೈದ್ಯಕೀಯ ಕಾಲೇಜು

ನಾಪತ್ತೆಯಾಗಿದ್ದ ನಟಿಯ ಹೆಣ ಗೋಣಿಚೀಲದಲ್ಲಿ ಪತ್ತೆ Read More »

ಸಂಕ್ರಾಂತಿ ಆಚರಣೆ| ಕುಡಿದ ಮತ್ತಲ್ಲಿ ಮೇಕೆ ಬದಲು ಮನುಷ್ಯನ ತಲೆಯನ್ನೇ ಕಡಿದ!

ನವದೆಹಲಿ: ಮಕರ ಸಂಕ್ರಾಂತಿ ಹಬ್ಬದಂದು ಪ್ರಾಣಿ ಬಲಿ ನೀಡುವ ಸಂದರ್ಭದಲ್ಲಿ ಪ್ರಾಣಿಯ ಬದಲು ಮನುಷ್ಯನ ತಲೆಯನ್ನು ಕಡಿದ ಭೀಭತ್ಸ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಛಲಪತಿ ಪ್ರಾಣಿಬಲಿ ವೇಳೆ ಮೇಕೆ(ಆಡು)ಯ ತಲೆ ಕಡಿಯಬೇಕಾಗಿತ್ತು. ಆದರೆ ಛಲಪತಿ ವಿಪರೀತ ಮದ್ಯಪಾನ ಮಾಡಿದ್ದು, ಮೇಕೆಯ ತಲೆಯ ಬದಲು ಅದನ್ನು ಹಿಡಿದುಕೊಂಡಿದ್ದ ಸುರೇಶ್ ಎಂಬಾತನ ತಲೆ ಕತ್ತರಿಸಿರುವುದಾಗಿ ವರದಿ ಹೇಳಿದೆ. ಮಕರ ಸಂಕ್ರಾಂತಿಯಂದು ಸ್ಥಳೀಯ ಯೆಲ್ಲಮ್ಮಾ ದೇವಾಲಯ ಪ್ರಾಣಿ ಬಲಿಯನ್ನು ಆಯೋಜಿಸಿತ್ತು. ಸುರೇಶ್ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ರಕ್ತದ

ಸಂಕ್ರಾಂತಿ ಆಚರಣೆ| ಕುಡಿದ ಮತ್ತಲ್ಲಿ ಮೇಕೆ ಬದಲು ಮನುಷ್ಯನ ತಲೆಯನ್ನೇ ಕಡಿದ! Read More »

ಉಪ್ಪಿನಂಗಡಿ: ಪಿಗ್ಮಿ ಸಂಗ್ರಾಹಕ ನಾಪತ್ತೆ| ದೂರು ದಾಖಲು|

ಉಪ್ಪಿನಂಗಡಿ: ಇಲ್ಲಿನ ಸಮೀಪದ ನೆಲ್ಯಾಡಿಯ ಸಹಕಾರ ಸಂಘವೊಂದರ ಶಾಖೆಯಲ್ಲಿ ಪಿಗ್ಮಿ ಸಂಗ್ರಾಹಕರಾಗಿದ್ದ ಕೌಕ್ರಾಡಿ ಗ್ರಾಮದ ದೋಂತಿಲ ನಿವಾಸಿ ಪ್ರವೀಣ್ ಕುಮಾರ್ ಎಂಬವರು ಕಳೆದ 15 ದಿನಗಳಿಂದ ನಾಪತ್ತೆಯಾಗಿದ್ದು‌ ಈ ಕುರಿತು ‌ಉಪ್ಪಿನಂಗಡಿ‌ ಠಾಣೆಯಲ್ಲಿ ದೂರು ದಾಖಲಾಗಿದೆ. ನೆಲ್ಯಾಡಿ ಅಸುಪಾಸಿನಲ್ಲಿ ಹಲವು ಮಂದಿಯಿಂದ ಲಕ್ಷಾಂತರ ರೂ. ಸಾಲ ಪಡೆದುಕೊಂಡಿದ್ದು ಸಾಲ ಹಿಂತಿರುಗಿಸಲು ಸಾಧ್ಯವಾಗದೆ ನಾಪತ್ತೆಯಾಗಿರುವುದಾಗಿ ಹೇಳಲಾಗಿದ್ದು, ಜ.18ರಂದು ಮಧ್ಯಾಹ್ನದ ಮಾಧ್ಯಮ ಪ್ರತಿನಿಧಿಯೊಬ್ಬರಿಗೆ ವಾಟ್ಸಪ್ ಕರೆ ಮಾಡಿ , ನಾನು ಬಿಹಾರದಲ್ಲಿದ್ದು ಛೋಟಾ ರಾಜನ್ ಗ್ಯಾಂಗ್‌ನವರ ಜಾಲದೊಳಗೆ ಸಿಲುಕಿಕೊಂಡಿರುವುದಾಗಿ ತಿಳಿಸಿದ್ದಾರೆ

ಉಪ್ಪಿನಂಗಡಿ: ಪಿಗ್ಮಿ ಸಂಗ್ರಾಹಕ ನಾಪತ್ತೆ| ದೂರು ದಾಖಲು| Read More »