ಕ್ರೈಂ

ಸಹಕಾರ ಬ್ಯಾಂಕ್ ನಲ್ಲಿ ಅವ್ಯವಹಾರ| ಸಿನಿಮಾ ನಿರ್ಮಾಪಕ ಆನಂದ ಅಪ್ಪುಗೋಳ್ ಬಂಧನ

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್‌ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್‌ ನಿರ್ಮಾಪಕ ಆನಂದ್‌ ಅಪ್ಪುಗೋಳ್‌ʼ ಇಡಿ ಅಧಿಕಾರಿಗಳ ಬಂಧನಕ್ಕೆ ಒಳಗಾಗಿದ್ದಾರೆ. ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್‌ ಅವ್ಯವಹಾರ ಆರೋಪದಲ್ಲಿ ಅಪ್ಪುಗೋಳ್‌ ವಿರುದ್ಧ 250 ಕೋಟಿ ರೂ ವಂಚನೆ ಆರೋಪವಿದ್ದು, ಪಿಎಂಎಲ್‌ಎ ಕಾಯ್ದೆಯಡಿ ಇಡಿ ದೂರು ದಾಖಲಿಸಿತ್ತು. ಸಧ್ಯ ಈ ಸಂಬಂಧ ಸ್ಯಾಂಡಲ್‌ವುಡ್‌ ನಿರ್ಮಾಪಕನನ್ನ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಆನಂದ ಅಪ್ಪುಗೋಳ ಮಾಲೀಕತ್ವದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬಹುಕೋಟಿ ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ […]

ಸಹಕಾರ ಬ್ಯಾಂಕ್ ನಲ್ಲಿ ಅವ್ಯವಹಾರ| ಸಿನಿಮಾ ನಿರ್ಮಾಪಕ ಆನಂದ ಅಪ್ಪುಗೋಳ್ ಬಂಧನ Read More »

ಮುಸ್ಲಿಂ ಮಹಿಳೆಯರನ್ನು ಹರಾಜಿಗಿಟ್ಟ ಆಪ್ ಕೇಸ್: ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ಅರೆಸ್ಟ್

ನವದೆಹಲಿ: ಮುಸ್ಲಿಂ ಮಹಿಳೆಯರನ್ನು ಅವಮಾನಿಸುವ ದೃಷ್ಟಿಯಿಂದ ಬುಲ್ಲಿ ಬಾಯ್ ಆಪ್ ಮೂಲಕ ಹರಾಜಿಗಿಟ್ಟ ಕೇಸ್ ಗೆ ಸಂಬಂಧಿಸಿ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿದ್ಯಾರ್ಥಿ ವಿರುದ್ಧ ಐಪಿಸಿ ಮತ್ತು ಐಟಿ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಮುಂಬೈನಲ್ಲಿ ವಿಚಾರಿಸುವುದಾಗಿ ತಿಳಿದು ಬಂದಿದೆ. ಆರೋಪಿಯ ಹೆಸರನ್ನು ಈವರೆಗೆ ಬಹಿರಂಗಪಡಿಸಿಲ್ಲ. ಮುಸ್ಲಿಂ ಮಹಿಳೆಯರ ಹರಾಜಿಗಿಟ್ಟ ಆಪ್ ವಿರುದ್ಧ ಹಲವರು ದೂರನ್ನು ದಾಖಲಿಸಿದ್ದರು.

ಮುಸ್ಲಿಂ ಮಹಿಳೆಯರನ್ನು ಹರಾಜಿಗಿಟ್ಟ ಆಪ್ ಕೇಸ್: ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ಅರೆಸ್ಟ್ Read More »

ಉಡುಪಿ: ಕೇಸರಿ ಶಾಲು v/s ಸ್ಕಾರ್ಫ್ ಕಿತ್ತಾಟ| ಕಾಲೇಜು ವಿದ್ಯಾರ್ಥಿಗಳ ನಡುವೆ ಮುಸುಕಿನ ಗುದ್ದಾಟ| ನಾ ಕೊಡೆ, ನೀ ಬಿಡೆ…!

ಕಿನ್ನಿಗೋಳಿ: ಉಡುಪಿ, ಚಿಕ್ಕಮಗಳೂರಿನ ಕಾಲೇಜುಗಳಲ್ಲಿ ಸ್ಕಾರ್ಫ್-ಕೇಸರಿ ಶಲ್ಯ ವಿವಾದಗಳು ಹಸಿಯಾಗಿರುವಾಗಲೇ, ಇತ್ತ ದಕ್ಷಿಣ ಕನ್ನಡ ಜಿಲ್ಲೆಯ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕಿನ್ನಿಗೋಳಿ ಸಮೀಪದ ದಾಮಸ್ಕಟ್ಟೆ ಪೊಂಪೈ ಕಾಲೇಜಿನಲ್ಲಿ ಸ್ಕಾರ್ಪ್ ವಿವಾದ ಪ್ರಾರಂಭವಾಗಿದೆ. ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಗಳು ಸ್ಕಾರ್ಪ್ ಹಾಕಿ ತರಗತಿ ಹಾಜರಾದ ಕಾರಣ, ಹಿಂದೂ ವಿದ್ಯಾರ್ಥಿ -ವಿದ್ಯಾರ್ಥಿನಿಯರು ಕೇಸರಿ ಶಾಲು ಹಾಕಿ ತರಗತಿ ಹಾಜರಾಗಿದ್ದಾರೆ. ವಿದ್ಯಾರ್ಥಿಗಳು ಸ್ಕಾರ್ಪ್ ವಿಚಾರ ಕುರಿತು ಶಾಲಾ ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದು, ಆಡಳಿತ ಮಂಡಳಿ ಸಭೆ ನಡೆದಿದೆ ಎನ್ನಲಾಗಿದೆ. ಮುಸ್ಲಿಂ

ಉಡುಪಿ: ಕೇಸರಿ ಶಾಲು v/s ಸ್ಕಾರ್ಫ್ ಕಿತ್ತಾಟ| ಕಾಲೇಜು ವಿದ್ಯಾರ್ಥಿಗಳ ನಡುವೆ ಮುಸುಕಿನ ಗುದ್ದಾಟ| ನಾ ಕೊಡೆ, ನೀ ಬಿಡೆ…! Read More »

ಮಲತಂದೆಯಿಂದ 5 ವರ್ಷದ ಮಗಳ ಮೇಲೆ ಅತ್ಯಾಚಾರ| ಆರೋಪಿಯನ್ನು ಬಂಧಿಸಿದ ಪೊಲೀಸರು|

ಚಾಮರಾಜನಗರ: ಮಲತಂದೆಯೇ 5 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಗರ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಘಟನೆ ಎಸಗಿರುವ ಆರೋಪಿ ಬಾಲಕಿಯ ತಾಯಿಯ ಎರಡನೇ ಗಂಡನಾಗಿದ್ದು, ಆತನ ವಿರುದ್ದ ಪತ್ನಿ ದೂರು ನೀಡಿದ್ದಾಳೆ. ಮೊದಲ ಗಂಡನ ಕಿರುಕುಳ ತಾಳಲಾರದೇ ಆತನಿಂದ ಎರಡು ವರ್ಷಗಳ ಹಿಂದೆ ಡೈವೋರ್ಸ್ ಪಡೆದಿದ್ದ ಮಹಿಳೆ ಆರೋಪಿಯೊಡನೆ ಮರು ವಿವಾಹವಾಗಿದ್ದರು. ಆಕೆಗೆ ಇಬ್ಬರು ಗಂಡು ಹಾಗೂ ಓರ್ವ ಹೆಣ್ಣು ಮಗಳಿದ್ದಾಳೆ. ಆರೋಪಿ

ಮಲತಂದೆಯಿಂದ 5 ವರ್ಷದ ಮಗಳ ಮೇಲೆ ಅತ್ಯಾಚಾರ| ಆರೋಪಿಯನ್ನು ಬಂಧಿಸಿದ ಪೊಲೀಸರು| Read More »

ಸಂಪಾಜೆ: ಆನೆ ದಾಳಿಗೆ ವ್ಯಕ್ತಿ ಬಲಿ

ಸಂಪಾಜೆ: ತೋಟದ ಕೆಲಸಕ್ಕೆಂದು ತೆರಳಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತರನ್ನು ಸುಳ್ಯ ಸಮೀಪದ ಪೆರಾಜೆಯ ಶಿವಪ್ರಸಾದ್ ಎಂದು ಗುರುತಿಸಲಾಗಿದೆ. ಇವರು ಮದೆ ಗ್ರಾಮದ ಬೆಟ್ಟತ್ತೂರು ಭಾಗದಲ್ಲಿ ತೋಟದ ಕೆಲಸಕ್ಕೆ ತೆರಳಿದ ಈ ಘಟನೆ ನಡೆದಿದ್ದು, ಕಾಡಾನೆ ತುಳಿದು ಸಾಯಿಸಿರುವ ಘಟನೆ ನಡೆದಿದೆ.

ಸಂಪಾಜೆ: ಆನೆ ದಾಳಿಗೆ ವ್ಯಕ್ತಿ ಬಲಿ Read More »

ಚಾಲಕನ‌ ನಿಯಂತ್ರಣ ತಪ್ಪಿದ ಪೊಲೀಸ್ ಜೀಪ್| ಮಹಿಳಾ ಎಸ್ಐ ಜಖಂ

ಮಂಗಳೂರು: ಪೊಲೀಸ್ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಸ್ಟ್ಯಾಂಡ್ ಗೆ ಡಿಕ್ಕಿ ಹೊಡೆದ ಘಟನೆ ಎಡಪದವಿನ ವಿವೇಕಾನಂದ ಜೂನಿಯರ್ ಕಾಲೇಜು ಬಳಿ ನಡೆದಿದೆ. ನಗರದ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರೇವತಿ ಅವರಿದ್ದ ಪೊಲೀಸ್ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪ್ರಯಾಣಿಕರ ತಂಗುದಾಣಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದ ರೇವತಿ ಅವರಿಗೆ ಸಣ್ಣಪ್ರಮಾಣದ ಗಾಯವಾಗಿದೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಪೊಲೀಸ್ ಜೀಪ್ ಜಖಂ ಗೊಂಡಿದ್ದು. ಬಸ್ ಪ್ರಯಾಣಿಕರ ತಂಗುದಾಣಕ್ಕೆ ಹಾನಿಯಾಗಿದೆ.

ಚಾಲಕನ‌ ನಿಯಂತ್ರಣ ತಪ್ಪಿದ ಪೊಲೀಸ್ ಜೀಪ್| ಮಹಿಳಾ ಎಸ್ಐ ಜಖಂ Read More »

ಸುಳ್ಯ: ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ| ಆರೋಪಿ ವಿರುದ್ಧ ಸ್ವಯಂಪ್ರೇರಿತ ಎಫ್ ಐಆರ್ ದಾಖಲಿಸಿದ ಪೊಲೀಸರು|

ಸುಳ್ಯ: ಗೂನಡ್ಕ ಮಾರುತಿ ಶಾಲೆಯ ಆಡಳಿತ ಮಂಡಳಿ ಸದಸ್ಯರೊಬ್ಬರು 9 ವರ್ಷದ ವಿದ್ಯಾರ್ಥಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಶಾಲಾ ಆಡಳಿತ ಮಂಡಳಿ ಸದಸ್ಯ ಕಿಶೋರ್ ಎಂಬವರು ವಿದ್ಯಾರ್ಥಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಈ ಘಟನೆ ಜಾಲತಾಣಗೆ ಸದ್ದು ಮಾಡಿತ್ತು. ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬಗ್ಗೆ ಶಾಲಾ ಆಡಳಿತ ಮಂಡಳಿ ಪರವಾಗಿ ಡಾ| ಡಿ.ವಿ. ಲೀಲಾಧರ್ ಹಾಗೂ ಸಂಪಾಜೆ ಗ್ರಾಮ ಪಂಚಾಯತ್

ಸುಳ್ಯ: ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ| ಆರೋಪಿ ವಿರುದ್ಧ ಸ್ವಯಂಪ್ರೇರಿತ ಎಫ್ ಐಆರ್ ದಾಖಲಿಸಿದ ಪೊಲೀಸರು| Read More »

ಭೀಕರ ಅಪಘಾತ, ಮೂವರು ಸ್ಥಳದಲ್ಲಿ ಸಾವು

ಮಂಡ್ಯ: ಖಾಸಗಿ ಬಸ್​ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಅಪಘಾತ ಕೆಂಪನಕೊಪ್ಪಲು ಗೇಟ್ ಬಳಿ ಸಂಭವಿಸಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ಮೂಲದ ಸುದೀಪ್ (35), ಶ್ರೀಜಾ (30) ಹಾಗೂ ಸಂಗಮ್ಮ (55) ಮೃತ ದುರ್ದೈವಿಗಳು. ಕಾರಲ್ಲಿದ್ದ ಯುವತಿ ಸ್ಥಿತಿ ಗಂಭೀರವಾಗಿದೆ. ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಖಾಸಗಿ ಬಸ್​ ಚಾಲಕ ಸೇರಿದಂತೆ ನಾಲ್ವರಿಗೆ ಗಾಯವಾಗಿದೆ. ಗಾಯಾಳುಗಳು ನಾಗಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಾಗಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ಅಪಘಾತ, ಮೂವರು ಸ್ಥಳದಲ್ಲಿ ಸಾವು Read More »

ಆತನ ಫಸ್ಟ್ ನೈಟ್ ಆಯ್ತು‌ ಪ್ಲಾಪ್ ನೈಟ್! | ಪ್ರಸ್ತದ ದಿನವೇ ಆಕೆ 5 ತಿಂಗಳ ಗರ್ಭಿಣಿ ಎಂದು ತಿಳಿದ ಗಂಡ ಕಂಗಾಲು| ಅಷ್ಟಕ್ಕೂ ಆ ಮೊದಲ ರಾತ್ರಿ ಆಗಿದ್ದೇನು ಗೊತ್ತಾ? ಮಗಳ ಮದುವೆ ಮುಂಚೆ ತಿಳಿದುಕೊಳ್ಳಿ ಈ ವಿಚಾರ…

ಉತ್ತರ ಪ್ರದೇಶದ: ಮದುವೆಯಾಗಿ ಮೊದಲ ರಾತ್ರಿಯನ್ನು ಭರ್ಜರಿಯಾಗಿ ಕಳೆಯಲು ಸಜ್ಜಾಗಿದ್ದ ಗಂಡನಿಗೆ ಆಕೆ 5 ತಿಂಗಳ ಗರ್ಭಿಣಿ ಎಂಬ ವಿಷಯ ತಿಳಿದು ರಸಮಯವಾಗಿರಬೇಕಾಗಿದ್ದ ಆ ಸಮಯ ಕಹಿಸಮಯವಾಗಿ ಇಡೀ ಕುಟುಂಬದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಈ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದ್ದು, ಬೇರೆ ದಾರಿ ಕಾಣದೆ ಆ ವ್ಯಕ್ತಿ ತನ್ನ ಹೆಂಡತಿಯ ಮನೆಯವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾನೆ. ಮದುವೆಯ ರಾತ್ರಿಯೇ ವಧುವಿಗೆ ಜೋರಾಗಿ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಸ್ಕ್ಯಾನಿಂಗ್ ಮಾಡಿದ

ಆತನ ಫಸ್ಟ್ ನೈಟ್ ಆಯ್ತು‌ ಪ್ಲಾಪ್ ನೈಟ್! | ಪ್ರಸ್ತದ ದಿನವೇ ಆಕೆ 5 ತಿಂಗಳ ಗರ್ಭಿಣಿ ಎಂದು ತಿಳಿದ ಗಂಡ ಕಂಗಾಲು| ಅಷ್ಟಕ್ಕೂ ಆ ಮೊದಲ ರಾತ್ರಿ ಆಗಿದ್ದೇನು ಗೊತ್ತಾ? ಮಗಳ ಮದುವೆ ಮುಂಚೆ ತಿಳಿದುಕೊಳ್ಳಿ ಈ ವಿಚಾರ… Read More »

ಸುಳ್ಯ : ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಸುಳ್ಯ : ಐವರ್ನಾಡು ಗ್ರಾಮದ ಬಾಂಜಿಕೋಡಿಯಲ್ಲಿ ಬಾವಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಜ. 2 ರಂದು ನಡೆದಿದೆ . ಮೃತ ದೇಹವು ಬಾಂಜಿಕೋಡಿ ನಿವಾಸಿ ದಿವಂಗತ ಮಾಧವ ರವರ ಪುತ್ರ ಅರುಣ್ ಕುಮಾರ್ ಬಾಂಜಿಕೋಡಿಯವರದ್ದೆಂದು ಗುರುತಿಸಲಾಗಿದೆ. ಇವರು ಡಿ .31 ರಿಂದ ಮನೆಯಿಂದ ಕಾಣೆಯಾಗಿದ್ದು ಸ್ಥಳೀಯರು ಮತ್ತು ಕುಟುಂಬಸ್ಥರು ಇವರನ್ನು ಹುಡುಕಾಟದಲ್ಲಿ ತೊಡಗಿಕೊಂಡಿದ್ದರು. ಆದರೆ ಇಂದು ಮುಂಜಾನೆ ರವಿಕುಮಾರ್ ರವರ ಮನೆಯ ಮುಂಭಾಗದಲ್ಲಿರುವ ಬಾವಿಯಲ್ಲಿ ಇವರ ಮೃತದೇಹ ಕುಟುಂಬಸ್ಥರಿಗೆ ಕಂಡು ಬಂದಿದೆ. ಅರುಣ್ ಕುಮಾರ್ ರವರು ಉಪ್ಪಿನಂಗಡಿಯಲ್ಲಿ

ಸುಳ್ಯ : ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ Read More »