ಕ್ರೈಂ

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ| ಕಾರಿನಲ್ಲಿದ್ದ ನಾಲ್ವರು ಟೆಕ್ಕಿಗಳು ಸ್ಥಳದಲ್ಲೇ ಸಾವು|

ಬೆಂಗಳೂರು: ಬನ್ನೇರುಘಟ್ಟ – ತುಮಕೂರು ನೈಸ್ ರಸ್ತೆಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಬನ್ನೇರುಘಟ್ಟದಿಂದ ತುಮಕೂರಿನ ಕಡೆ ಹೊರಟ್ಟಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಬಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪುರುಷರು, ಇಬ್ಬರು ಮಹಿಳೆಯರ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ವಿಷಯ ತಿಳಿದ ಕುಮಾರಸ್ವಾಮಿ ಲೇಔಟ್ ಪೊಲೀಸರು ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದ […]

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ| ಕಾರಿನಲ್ಲಿದ್ದ ನಾಲ್ವರು ಟೆಕ್ಕಿಗಳು ಸ್ಥಳದಲ್ಲೇ ಸಾವು| Read More »

ವಿದ್ಯಾರ್ಥಿನಿಯನ್ನು ಬೆತ್ತಲೆಗೊಳಿಸಿ ಹಲ್ಲೆಗೈದ ಶಿಕ್ಷಕಿಗೆ ಸಸ್ಪೆಂಡ್ ಶಿಕ್ಷೆ

ಮಂಡ್ಯ: ಇಲ್ಲಿನ ಶ್ರೀರಂಗಪಟ್ಟಣ ತಾಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಮುಖ್ಯ ಶಿಕ್ಷಕಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಅಮಾನತು ಮಾಡಿದ್ದಾರೆ. ಶಾಲೆಗೆ ಮೊಬೈಲ್ ತಂದಿದ್ದ ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿದ ಮುಖ್ಯಶಿಕ್ಷಕಿ ಹಲ್ಲೆ ಮಾಡಿ ಫ್ಯಾನ್ ಕೆಳಗೆ ಕೂರಿಸಿದ್ದರು. ಶಿಕ್ಷಕಿಯ ಈ ಕೃತ್ಯದ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಗ್ರಾಮಸ್ಥರು ಕೂಡ ಮುಖ್ಯಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು. ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಉನ್ನತ ಅಧಿಕಾರಿಗಳಿಗೆ ವರದಿ ನೀಡಿದ್ದರು.

ವಿದ್ಯಾರ್ಥಿನಿಯನ್ನು ಬೆತ್ತಲೆಗೊಳಿಸಿ ಹಲ್ಲೆಗೈದ ಶಿಕ್ಷಕಿಗೆ ಸಸ್ಪೆಂಡ್ ಶಿಕ್ಷೆ Read More »

ಸುದ್ದಿ ಪ್ರಸಾರ ಮಾಡುವುದಾಗಿ ಚಾನೆಲ್ ವರದಿಗಾರನಿಂದ ಬ್ಲ್ಯಾಕ್ ಮೇಲ್| 25 ಲಕ್ಷ ಹಣಕ್ಕಾಗಿ ಬೇಡಿಕೆಯಿಟ್ಟವ ಹಣ ಪಡೆಯುತ್ತಿರುವಾಗಲೇ ಅರೆಸ್ಟ್

ಬೆಂಗಳೂರು: ಮರಳು ಮಾಫಿಯಾದ ಸಂಬಂಧಿಸಿದಂತೆ ಸುದ್ದಿ ಪ್ರಸಾರ ತಡೆಗೆ 25 ಲಕ್ಷ ಹಣಕ್ಕೆ ಬೇಡಿಕೆಯಿಟ್ಟು 8 ಲಕ್ಷ ರೂ. ಹಣ ಪಡೆಯುತ್ತಿದ್ದಾಗ ಖಾಸಗಿ ವಾಹಿನಿಯ ಪತ್ರಕರ್ತನನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಖಾಸಗಿ ಚಾನೆಲ್​ ಸಿಬ್ಬಂದಿ ಬಂಧನಅನಿಲ್‌ಕುಮಾರ್, ಶ್ರೀಕಾಂತ್ ಕುಮಾರ್, ಸುನಿಲ್ ಕುಮಾರ್ ಎಂಬುವವರು ತಮಗೆ ಸುದ್ದಿ ಪ್ರಸಾರ ಮಾಡದಂತೆ ತಡೆಯಲು ಹಣ ಕೇಳುತ್ತಿದ್ದಾರೆ ಎಂದು ಆಡಿಯೋ ಮತ್ತು ವಿಡಿಯೋ ಸಮೇತ ದೂರು ನೀಡಿದ್ದಾರೆ.

ಸುದ್ದಿ ಪ್ರಸಾರ ಮಾಡುವುದಾಗಿ ಚಾನೆಲ್ ವರದಿಗಾರನಿಂದ ಬ್ಲ್ಯಾಕ್ ಮೇಲ್| 25 ಲಕ್ಷ ಹಣಕ್ಕಾಗಿ ಬೇಡಿಕೆಯಿಟ್ಟವ ಹಣ ಪಡೆಯುತ್ತಿರುವಾಗಲೇ ಅರೆಸ್ಟ್ Read More »

ಮುಸ್ಲಿಂ ಮದುಮಗನಿಂದ‌ ಕೊರಗಜ್ಜನ ವೇಷ ಧರಿಸಿ ಅವಮಾನ| ಮುಸ್ಲಿಂ ಸಮುದಾಯದಿಂದಲೇ ಆಕ್ರೋಶ

ಪುತ್ತೂರು: ಮುಸ್ಲಿಂ ಸಮುದಾಯದ ಮದುವೆ ಕಾರ್ಯಕ್ರಮದಲ್ಲಿ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ ವೇಷಭೂಷಣ ಧರಿಸಿ ಅವಮಾನ ಮಾಡಿರುವ ಘಟನೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಮುಸ್ಲಿಂ ಸಮುದಾಯದವರೇ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉಪ್ಪಳದ ಯುವಕನ ಜೊತೆ ನಡೆದಿದ್ದ ಕೊಳ್ನಾಡು ಗ್ರಾಮದ ಯುವತಿಯೊಬ್ಬರ ಜೊತೆ ಮದುವೆ ಕಾರ್ಯಕ್ರಮ ನಡೆದಿದ್ದು, ವಧುವಿನ‌

ಮುಸ್ಲಿಂ ಮದುಮಗನಿಂದ‌ ಕೊರಗಜ್ಜನ ವೇಷ ಧರಿಸಿ ಅವಮಾನ| ಮುಸ್ಲಿಂ ಸಮುದಾಯದಿಂದಲೇ ಆಕ್ರೋಶ Read More »

ಒಂಬತ್ತು ವರ್ಷದ ಬಾಲಕಿ‌ ಮೇಲೆ ಇಬ್ಬರು ಬಾಲಕರಿಂದ ಅತ್ಯಾಚಾರ

ಮುಜಾಫರ್‌ನಗರ: ಜಿಲ್ಲೆಯಲ್ಲಿ ಒಂಬತ್ತು ವರ್ಷದ ಬಾಲಕಿಯ ಮೇಲೆ ಇಬ್ಬರು ಹುಡುಗರು ಅತ್ಯಾಚಾರವೆಸಗಿದ ಕುರಿತು ಪ್ರಕರಣವೊಂದು ದಾಖಲಾಗಿದೆ. ಕಳವಳಕಾರಿ ಘಟನೆಯು ಕೆಲವು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಜನವರಿ 5 ರಂದು ದೂರು ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಸಂತ್ರಸ್ತೆಯ ಪೋಷಕರು ನೀಡಿದ ಪೊಲೀಸ್ ದೂರಿನ ಪ್ರಕಾರ, ಬಾಲಕಿ ತನ್ನ ಮನೆಯ ಬಳಿ ಆಟವಾಡುತ್ತಿದ್ದಾಗ ಆರೋಪಿಗಳಾದ 10 ಮತ್ತು 14 ವರ್ಷ ವಯಸ್ಸಿನ ಬಾಲಕರು ಆಕೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಬಾಲಕಿಯನ್ನು

ಒಂಬತ್ತು ವರ್ಷದ ಬಾಲಕಿ‌ ಮೇಲೆ ಇಬ್ಬರು ಬಾಲಕರಿಂದ ಅತ್ಯಾಚಾರ Read More »

ಮಂಗಳೂರು: ಟಿವಿ ನೋಡಲು ಬಂದಿದ್ದ ಬಾಲಕಿಗೆ ಲೈಂಗಿಕ ಕಿರುಕುಳ|ಆರೋಪಿ ಬಂಧನ

ಮಂಗಳೂರು : ಅಶೋಕನಗರ ಬಳಿ ಬಾಲಕಿಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಇಲ್ಲಿನ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತ ತನ್ನ‌ ಮನೆಗೆ ಟಿವಿ ನೋಡಲೆಂದು ಬಂದಿದ್ದ 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ತಿಳಿದುಬಂದಿದೆ. ಬಂಧಿತ ಆರೋಪಿಯನ್ನು ನಿತಿನ್ (19) ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಉರ್ವ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಟಿವಿ ನೋಡಲು ಬಂದಿದ್ದ ಬಾಲಕಿಗೆ ಲೈಂಗಿಕ ಕಿರುಕುಳ|ಆರೋಪಿ ಬಂಧನ Read More »

ಸಹಕಾರ ಬ್ಯಾಂಕ್ ನಲ್ಲಿ ಅವ್ಯವಹಾರ| ಸಿನಿಮಾ ನಿರ್ಮಾಪಕ ಆನಂದ ಅಪ್ಪುಗೋಳ್ ಬಂಧನ

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್‌ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್‌ ನಿರ್ಮಾಪಕ ಆನಂದ್‌ ಅಪ್ಪುಗೋಳ್‌ʼ ಇಡಿ ಅಧಿಕಾರಿಗಳ ಬಂಧನಕ್ಕೆ ಒಳಗಾಗಿದ್ದಾರೆ. ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್‌ ಅವ್ಯವಹಾರ ಆರೋಪದಲ್ಲಿ ಅಪ್ಪುಗೋಳ್‌ ವಿರುದ್ಧ 250 ಕೋಟಿ ರೂ ವಂಚನೆ ಆರೋಪವಿದ್ದು, ಪಿಎಂಎಲ್‌ಎ ಕಾಯ್ದೆಯಡಿ ಇಡಿ ದೂರು ದಾಖಲಿಸಿತ್ತು. ಸಧ್ಯ ಈ ಸಂಬಂಧ ಸ್ಯಾಂಡಲ್‌ವುಡ್‌ ನಿರ್ಮಾಪಕನನ್ನ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಆನಂದ ಅಪ್ಪುಗೋಳ ಮಾಲೀಕತ್ವದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬಹುಕೋಟಿ ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ

ಸಹಕಾರ ಬ್ಯಾಂಕ್ ನಲ್ಲಿ ಅವ್ಯವಹಾರ| ಸಿನಿಮಾ ನಿರ್ಮಾಪಕ ಆನಂದ ಅಪ್ಪುಗೋಳ್ ಬಂಧನ Read More »

ಮುಸ್ಲಿಂ ಮಹಿಳೆಯರನ್ನು ಹರಾಜಿಗಿಟ್ಟ ಆಪ್ ಕೇಸ್: ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ಅರೆಸ್ಟ್

ನವದೆಹಲಿ: ಮುಸ್ಲಿಂ ಮಹಿಳೆಯರನ್ನು ಅವಮಾನಿಸುವ ದೃಷ್ಟಿಯಿಂದ ಬುಲ್ಲಿ ಬಾಯ್ ಆಪ್ ಮೂಲಕ ಹರಾಜಿಗಿಟ್ಟ ಕೇಸ್ ಗೆ ಸಂಬಂಧಿಸಿ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿದ್ಯಾರ್ಥಿ ವಿರುದ್ಧ ಐಪಿಸಿ ಮತ್ತು ಐಟಿ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಮುಂಬೈನಲ್ಲಿ ವಿಚಾರಿಸುವುದಾಗಿ ತಿಳಿದು ಬಂದಿದೆ. ಆರೋಪಿಯ ಹೆಸರನ್ನು ಈವರೆಗೆ ಬಹಿರಂಗಪಡಿಸಿಲ್ಲ. ಮುಸ್ಲಿಂ ಮಹಿಳೆಯರ ಹರಾಜಿಗಿಟ್ಟ ಆಪ್ ವಿರುದ್ಧ ಹಲವರು ದೂರನ್ನು ದಾಖಲಿಸಿದ್ದರು.

ಮುಸ್ಲಿಂ ಮಹಿಳೆಯರನ್ನು ಹರಾಜಿಗಿಟ್ಟ ಆಪ್ ಕೇಸ್: ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ಅರೆಸ್ಟ್ Read More »

ಉಡುಪಿ: ಕೇಸರಿ ಶಾಲು v/s ಸ್ಕಾರ್ಫ್ ಕಿತ್ತಾಟ| ಕಾಲೇಜು ವಿದ್ಯಾರ್ಥಿಗಳ ನಡುವೆ ಮುಸುಕಿನ ಗುದ್ದಾಟ| ನಾ ಕೊಡೆ, ನೀ ಬಿಡೆ…!

ಕಿನ್ನಿಗೋಳಿ: ಉಡುಪಿ, ಚಿಕ್ಕಮಗಳೂರಿನ ಕಾಲೇಜುಗಳಲ್ಲಿ ಸ್ಕಾರ್ಫ್-ಕೇಸರಿ ಶಲ್ಯ ವಿವಾದಗಳು ಹಸಿಯಾಗಿರುವಾಗಲೇ, ಇತ್ತ ದಕ್ಷಿಣ ಕನ್ನಡ ಜಿಲ್ಲೆಯ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕಿನ್ನಿಗೋಳಿ ಸಮೀಪದ ದಾಮಸ್ಕಟ್ಟೆ ಪೊಂಪೈ ಕಾಲೇಜಿನಲ್ಲಿ ಸ್ಕಾರ್ಪ್ ವಿವಾದ ಪ್ರಾರಂಭವಾಗಿದೆ. ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಗಳು ಸ್ಕಾರ್ಪ್ ಹಾಕಿ ತರಗತಿ ಹಾಜರಾದ ಕಾರಣ, ಹಿಂದೂ ವಿದ್ಯಾರ್ಥಿ -ವಿದ್ಯಾರ್ಥಿನಿಯರು ಕೇಸರಿ ಶಾಲು ಹಾಕಿ ತರಗತಿ ಹಾಜರಾಗಿದ್ದಾರೆ. ವಿದ್ಯಾರ್ಥಿಗಳು ಸ್ಕಾರ್ಪ್ ವಿಚಾರ ಕುರಿತು ಶಾಲಾ ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದು, ಆಡಳಿತ ಮಂಡಳಿ ಸಭೆ ನಡೆದಿದೆ ಎನ್ನಲಾಗಿದೆ. ಮುಸ್ಲಿಂ

ಉಡುಪಿ: ಕೇಸರಿ ಶಾಲು v/s ಸ್ಕಾರ್ಫ್ ಕಿತ್ತಾಟ| ಕಾಲೇಜು ವಿದ್ಯಾರ್ಥಿಗಳ ನಡುವೆ ಮುಸುಕಿನ ಗುದ್ದಾಟ| ನಾ ಕೊಡೆ, ನೀ ಬಿಡೆ…! Read More »

ಮಲತಂದೆಯಿಂದ 5 ವರ್ಷದ ಮಗಳ ಮೇಲೆ ಅತ್ಯಾಚಾರ| ಆರೋಪಿಯನ್ನು ಬಂಧಿಸಿದ ಪೊಲೀಸರು|

ಚಾಮರಾಜನಗರ: ಮಲತಂದೆಯೇ 5 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಗರ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಘಟನೆ ಎಸಗಿರುವ ಆರೋಪಿ ಬಾಲಕಿಯ ತಾಯಿಯ ಎರಡನೇ ಗಂಡನಾಗಿದ್ದು, ಆತನ ವಿರುದ್ದ ಪತ್ನಿ ದೂರು ನೀಡಿದ್ದಾಳೆ. ಮೊದಲ ಗಂಡನ ಕಿರುಕುಳ ತಾಳಲಾರದೇ ಆತನಿಂದ ಎರಡು ವರ್ಷಗಳ ಹಿಂದೆ ಡೈವೋರ್ಸ್ ಪಡೆದಿದ್ದ ಮಹಿಳೆ ಆರೋಪಿಯೊಡನೆ ಮರು ವಿವಾಹವಾಗಿದ್ದರು. ಆಕೆಗೆ ಇಬ್ಬರು ಗಂಡು ಹಾಗೂ ಓರ್ವ ಹೆಣ್ಣು ಮಗಳಿದ್ದಾಳೆ. ಆರೋಪಿ

ಮಲತಂದೆಯಿಂದ 5 ವರ್ಷದ ಮಗಳ ಮೇಲೆ ಅತ್ಯಾಚಾರ| ಆರೋಪಿಯನ್ನು ಬಂಧಿಸಿದ ಪೊಲೀಸರು| Read More »