ಕ್ರೈಂ

ಹಿರಿಯ ಸಿನಿಮಾ ನಿರ್ದೇಶಕ ಕೆ.ವಿ ರಾಜು ಅಸ್ತಂಗತ

ಬೆಂಗಳೂರು: ಸ್ಯಾಂಡಲ್‌ವುಡ್‌ ನ ಹಿರಿಯ ನಿರ್ದೇಶಕ ಕೆ.ವಿ.ರಾಜು ಬದುಕಿನ ಯಾತ್ರೆ‌ ಮುಗಿಸಿದ್ದಾರೆ. ಕನ್ನಡ ಹಾಗೂ ಹಿಂದಿಯಲ್ಲಿ ತಮ್ಮದೇ ಚಾಪು ಮೂಡಿಸಿದ್ದ ಹಿರಿಯ ನಿರ್ದೇಶಕ ಕೆ.ವಿ.ರಾಜು ಇಹಲೋಕ ತ್ಯಜಿಸಿದ್ದಾರೆ. ಹುಲಿಯಾ, ಬೆಳ್ಳಿ ಮೋಡ, ಇಂದ್ರಜಿತ್, ಬೆಳ್ಳಿ ಕಾಲುಂಗುರ, ಯುದ್ಧಕಾಂಡ ಸೇರಿ ಹಲವು ಚಿತ್ರಗಳನ್ನು ಅವರು ನಿರ್ದೇಶಿಸಿದ್ದರು. ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ಚಿತ್ರಕ್ಕೂ ಅವರು ನಿರ್ದೇಶಿಸಿದ್ದರು. ಅನಾರೋಗ್ಯದ ಕಾರಣ ಕೆಲವು ದಿನಗಳಿಂದ ಮನೆಯಲ್ಲಿಯೇ ಅವರು ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಿಸದೆ ಇಂದು ರಾಜಾಜಿನಗರದ ನಿವಾಸದಲ್ಲಿ ನಿಧನರಾಗಿದ್ದಾರೆ. ರಾಜಾಜಿನಗರದ ನಿವಾಸದಲ್ಲಿ ರಾಜು […]

ಹಿರಿಯ ಸಿನಿಮಾ ನಿರ್ದೇಶಕ ಕೆ.ವಿ ರಾಜು ಅಸ್ತಂಗತ Read More »

ಬೈಕ್ ಗಳ ಮುಖಾಮುಖಿ ಢಿಕ್ಕಿ| ಮೂವರು ಸ್ಪಾಟ್ ಔಟ್|

ದಾವಣಗೆರೆ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ತಕ್ಕನಹಳ್ಳಿಯಲ್ಲಿ ನಡೆದಿದೆ. ತಕ್ಕನಹಳ್ಳಿ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಹೇಶಪ್ಪ, ಸಂಜು, ಪ್ರಶಾಂತ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಆನಂದ್ ಗೆ ಗಂಭೀರ ಗಾಯಗೊಂಡಿದ್ದು, ಶಿವಮೊಗ್ಗ ಅಸ್ಪತ್ರೆಗೆ ದಾಖಲಿಸಲಾಗಿದೆ. ಹೊನ್ನಾಳಿ ಪೊಲೀಸ್

ಬೈಕ್ ಗಳ ಮುಖಾಮುಖಿ ಢಿಕ್ಕಿ| ಮೂವರು ಸ್ಪಾಟ್ ಔಟ್| Read More »

ಅಕ್ರಮ ಸಂಬಂಧದಿಂದ ಹುಟ್ಟಿದ ಕಂದಮ್ಮನನ್ನು ಕೊಂದ ಹೆತ್ತಮ್ಮ|

ತ್ರಿಶೂರ್: ಅಕ್ರಮ ಸಂಬಂಧದಿಂದ ಗರ್ಭಧರಿಸಿ ನವಜಾತ ಶಿಶುವನ್ನು ಬಕೆಟ್‌ ನೀರಿನಲ್ಲಿ ಮುಳುಗಿಸಿ ಕೊಂದುಹಾಕಿದ ಹೀನ ಘಟನೆ ಕೇರಳದ ತ್ರಿಶೂರ್‌ನಲ್ಲಿ ನಡೆದಿದೆ.ಈ ಮಗುವನ್ನು ಕೊಂದು ಗೋಣಿಚೀಲದಲ್ಲಿ ಕಟ್ಟಿ ಕಾಲುವೆಗೆ ಬೀಸಾಕಿದ್ದ ಮೇಘಾ (23), ಆಕೆಯ ಪ್ರಿಯಕರ ಮ್ಯಾನುಯೆಲ್ (25) ಮತ್ತು ಆತನ ಸ್ನೇಹಿತ ಅಮಲ್‌ನನ್ನು (24) ಪೊಲೀಸರು ಬಂಧಿಸಿದ್ದಾರೆ. ಗೋಣಿಚೀಲದಲ್ಲಿ ಸತ್ತಿದ್ದ ಮಗುವನ್ನು ಜನರು ನೋಡಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ವೇಳೆ ಈ ಕೃತ್ಯ ಬೆಳಕಿಗೆ ಬಂದಿದೆ.

ಅಕ್ರಮ ಸಂಬಂಧದಿಂದ ಹುಟ್ಟಿದ ಕಂದಮ್ಮನನ್ನು ಕೊಂದ ಹೆತ್ತಮ್ಮ| Read More »

ಸುಳ್ಯ: ಪಾಣತ್ತೂರಿನಲ್ಲಿ ಟಿಂಬರ್ ಲಾರಿ ಪಲ್ಟಿ, 4 ಮಂದಿ ದುರ್ಮರಣ

ಸುಳ್ಯ: ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆಯ ಪರಿಯಾರಂ ಎಂಬಲ್ಲಿ ನಡೆದ ಭೀಕರ ಲಾರಿ ಅಪಘಾತದಲ್ಲಿ ನಾಲ್ಕು ಮಂದಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮರಗಳನ್ನು ತುಂಬಿ ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಟ್ಲಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ದುರ್ಘಟನೆಯಲ್ಲಿ ಲಾರಿಯಲ್ಲಿದ್ದ 4 ಮಂದಿ ಮೃತಪಟ್ಟಿದ್ದು ಮೃತಪಟ್ಟವರನ್ನು ಪಾಣತ್ತೂರು ಸಮೀಪದ ಕುಂಡುಪಳ್ಳಿಯವರು ಎಂದು ಗುರುತಿಸಲಾಗಿದೆ. ಲಾರಿಯಲ್ಲಿದ್ದವರ ಪೈಕಿ 5 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮರ ತುಂಬಿದ ಲಾರಿ ಕಲ್ಲಪಳ್ಳಿಯಿಂದ ಪಾಣತ್ತೂರು ಕಡೆಗೆ ತೆರಳುತ್ತಿತ್ತು.

ಸುಳ್ಯ: ಪಾಣತ್ತೂರಿನಲ್ಲಿ ಟಿಂಬರ್ ಲಾರಿ ಪಲ್ಟಿ, 4 ಮಂದಿ ದುರ್ಮರಣ Read More »

ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ| ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ಮಂಜೂರು

ಬೆಂಗಳೂರು : ಉಡುಪಿ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಉದ್ಯಮಿ ಬಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಯಾಗಿದ್ದ ರಾಜೇಶ್ವರಿ ಶೆಟ್ಟಿಗೆ ಇಂದು ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಉಡುಪಿ ಮೂಲದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ʼನಲ್ಲಿ ಮೂವರು ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಮತ್ತು ರಾಜೇಶ್ವರಿ ಗೆಳೆಯ ಹಾಗೂ ಅರ್ಚಕ ನಿರಂಜನ್ ಭಟ್ʼಗೆ ಉಡುಪಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು ಆದರೆ, ಅವರು ಜಾಮೀನು ಕೋರಿ

ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ| ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ಮಂಜೂರು Read More »

ಮಂಗಳೂರು: ಮೊಬೈಲ್ ಕದ್ದ ನೆಪದಲ್ಲಿ ಮೀನುಗಾರನಿಗೆ ಚಿತ್ರಹಿಂಸೆ| 6 ಮಂದಿಯನ್ನು ಬಂಧಿಸಿದ ‌ಪೊಲೀಸರು|

ಮಂಗಳೂರು: ನಗರದ ಬಂದರ್ ನಲ್ಲಿ ಮೀನುಗಾರನೊಬ್ಬನನ್ನು ಬೋಟ್ ನಲ್ಲಿ ತಲೆಕೆಳಗಾಗಿಸಿ ನೇತು ಹಾಕಿ ಹಲ್ಲೆ ಮಾಡಿರುವ ಘಟನೆಗೆ ಸಂಬಂಧಿಸಿ 6 ಮಂದಿ ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸ್ ಆಯುಕ್ತ ಶಶಿಕುಮಾರ್ ಗುರುವಾರ ತಿಳಿಸಿದ್ದಾರೆ. ಬಂಧಿತ ಆರೋಪಿಗಳು, ಕೊಂಡೂರು ಪೋಲಯ್ಯ (23), ಅವುಲ ರಾಜ್ ಕುಮಾರ್ (26), ಕಾಟಂಗರಿ ಮನೋಹರ್ (21), ವುಟುಕೋರಿ ಜಾಲಯ್ಯ (30), ಕರ್ಪಿಂಗಾರಿ ರವಿ (27) ಮತ್ತು ಪ್ರಳಯ ಕಾವೇರಿ ಗೋವಿಂದಯ್ಯ (47) ಎನ್ನುವವರಾಗಿದ್ದು, ಎಲ್ಲರೂ ಆಂಧ್ರಪ್ರದೇಶ ಮೂಲದ ಮೀನುಗಾರರಾಗಿದ್ದಾರೆ. ಆಂಧ್ರ ಪ್ರದೇಶ ಮೂಲದ ಮೀನುಗಾರ

ಮಂಗಳೂರು: ಮೊಬೈಲ್ ಕದ್ದ ನೆಪದಲ್ಲಿ ಮೀನುಗಾರನಿಗೆ ಚಿತ್ರಹಿಂಸೆ| 6 ಮಂದಿಯನ್ನು ಬಂಧಿಸಿದ ‌ಪೊಲೀಸರು| Read More »

ಮಂಗಳೂರು: ಮೀನುಗಾರನನ್ನು ಉಲ್ಟಾ ನೇತು ಹಾಕಿ ಹಲ್ಲೆ

ಮಂಗಳೂರು: ಮಂಗಳೂರಿನಲ್ಲಿ ಮೀನುಗಾರನೋರ್ವನನ್ನು ಉಲ್ಟಾ ನೇತು ಹಾಕಿ ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ ಮಂಗಳೂರಿನ ಧಕ್ಕೆಯಲ್ಲಿ ಈ ಘಟನೆ ನಡೆದಿದ್ದು ಮೊಬೈಲ್ ಕದ್ದಿದ್ದಾನೆ ಎಂಬ ಆರೋಪ ಮಾಡಿ ಆಂದ್ರಪ್ರದೇಶದ ಮೂಲದ ವೈಲ ಶೀನು (34) ಎಂಬಾತನಿಗೆ ಹಲ್ಲೆ ಮಾಡಲಾಗಿದೆ. ವೈಲ ಶೀನು ಎಂಬಾತನ ಕಾಲಿಗೆ ಹಗ್ಗದಿಂದ ಕಟ್ಟಿ ಆತನನ್ನು ತಲೆಕೆಳಗು ಮಾಡಿ ನೇತು ಹಾಕಿ ಹಲ್ಲೆ ನಡೆಸಲಾಗಿದೆ. ಈ ವಿಡಿಯೋ ಪೊಲೀಸರ ಕೈಗೆ ಸಿಕ್ಕಿದ್ದು ಇವರೆಲ್ಲರೂ ಆಂಧ್ರಪ್ರದೇಶದ ಮೀನುಗಾರರು ಎಂದು ತಿಳಿದುಬಂದಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ

ಮಂಗಳೂರು: ಮೀನುಗಾರನನ್ನು ಉಲ್ಟಾ ನೇತು ಹಾಕಿ ಹಲ್ಲೆ Read More »

1.5 ಕೋಟಿ ಮೌಲ್ಯದ ತಿಮಿಂಗಿಲ ವಾಂತಿ ವಶ| ಆರು ಮಂದಿ ಬಂಧನ

ಹೊಸಪೇಟೆ: ವಿಜಯನಗರ ಜಿಲ್ಲೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಂದೂವರೆ ಕೋಟಿ ರೂಪಾಯಿ ಮೌಲ್ಯದ ಅಂಬರ್ ಗ್ರೀಸ್(ತಿಮಿಂಗಿಲ ವಾಂತಿ) ವಶಕ್ಕೆ ಪಡೆಯಲಾಗಿದೆ. ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸುತ್ತಿದ್ದ ಆರು ಜನರನ್ನು ಹೊಸಪೇಟೆ ಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳದ ವೆಂಕಟೇಶ್, ಅಬ್ದುಲ್ ವಹಾಬ್, ಮಹೇಶ್, ಭಟ್ಕಳದ ಗಣಪತಿ, ಹುಬ್ಬಳ್ಳಿಯ ಪುಂಡಲೀಕ, ವಿಜಯಪುರದ ಶ್ರೀಧರ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಒಂದೂವರೆ ಕೆಜಿಯಷ್ಟು ತಿಮಿಂಗಿಲದ ವಾಂತಿ ವಶಕ್ಕೆ ಪಡೆದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

1.5 ಕೋಟಿ ಮೌಲ್ಯದ ತಿಮಿಂಗಿಲ ವಾಂತಿ ವಶ| ಆರು ಮಂದಿ ಬಂಧನ Read More »

ಖಾಸಗಿ ಚಿತ್ರಗಳನ್ನು ತೆಗೆದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾತನನ್ನು ಕೊಲೆಗೈದ ಬಾಲಕಿಯರು| ಆರೋಪಿತರು ಅಂದರ್

ಚೆನ್ನೈ: ಬಾಲಕಿಯರ ಖಾಸಗಿ ಚಿತ್ರಗಳನ್ನು ತೆಗೆದು ಬ್ಲಾಕ್ ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿರುವ ಆರೋಪದಲ್ಲಿ ಇಬ್ಬರು ವಿದ್ಯಾರ್ಥಿನಿಯರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಪ್ರೇಮ್ ಕುಮಾರ್ ಎಂದು ಗುರುತಿಸಲಾಗಿದೆ.ಸದ್ಯ ಬಂಧಿತರಾಗಿರುವ ಇಬ್ಬರು ಬಾಲಕಿಯರೊಂದಿಗೆ ಸತ್ತ ವ್ಯಕ್ತಿ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇಬ್ಬರ ಖಾಸಗಿ ಫೋಟೋಗಳನ್ನು ತೆಗೆದು, ಮೊಬೈಲ್ ನಲ್ಲಿ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿದ್ದಾನೆ. ಅಲ್ಲದೇ, ಇಬ್ಬರಿಗೂ 50 ಸಾವಿರ ರೂಪಾಯಿ ನೀಡುವಂತೆ ಕೇಳಿದ್ದಾನೆ. ಹಣ ಕೊಡಲು ವಿಫಲವಾದರೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಅಪ್ಲೋಡ್ ಮಾಡುವುದಾಗಿ

ಖಾಸಗಿ ಚಿತ್ರಗಳನ್ನು ತೆಗೆದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾತನನ್ನು ಕೊಲೆಗೈದ ಬಾಲಕಿಯರು| ಆರೋಪಿತರು ಅಂದರ್ Read More »

ಬೆಳಗಾವಿ: ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ಅರೆಸ್ಟ್

ಬೆಳಗಾವಿ: ತಾಲೂಕಿನ ಹಲಸಿ ಗ್ರಾಮದಲ್ಲಿ ಸೋಮವಾರ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಂಜು ಗುರವ, ಸಚಿನ್ ಗುರವ ಹಾಗೂ ಗಣೇಶ ಪೆಡ್ನೇಕರ ಬಂಧಿತ ಆರೋಪಿಗಳು. ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಸೋಮವಾರ ಕಿಡಿಗೇಡಿಗಳು ಕನ್ನಡ ಬಾವುಟ ಸುಟ್ಟಿದ್ದರಲ್ಲದೆ, ಜಗಜ್ಯೋತಿ ಬಸವೇಶ್ವರರ ಚಿತ್ರಕ್ಕೆ ಸೆಗಣಿ ಎರಚಿದ್ದರು.

ಬೆಳಗಾವಿ: ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ಅರೆಸ್ಟ್ Read More »