ಕ್ರೈಂ

ಸಂಪಾಜೆ: ಆನೆ ದಾಳಿಗೆ ವ್ಯಕ್ತಿ ಬಲಿ

ಸಂಪಾಜೆ: ತೋಟದ ಕೆಲಸಕ್ಕೆಂದು ತೆರಳಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತರನ್ನು ಸುಳ್ಯ ಸಮೀಪದ ಪೆರಾಜೆಯ ಶಿವಪ್ರಸಾದ್ ಎಂದು ಗುರುತಿಸಲಾಗಿದೆ. ಇವರು ಮದೆ ಗ್ರಾಮದ ಬೆಟ್ಟತ್ತೂರು ಭಾಗದಲ್ಲಿ ತೋಟದ ಕೆಲಸಕ್ಕೆ ತೆರಳಿದ ಈ ಘಟನೆ ನಡೆದಿದ್ದು, ಕಾಡಾನೆ ತುಳಿದು ಸಾಯಿಸಿರುವ ಘಟನೆ ನಡೆದಿದೆ.

ಸಂಪಾಜೆ: ಆನೆ ದಾಳಿಗೆ ವ್ಯಕ್ತಿ ಬಲಿ Read More »

ಚಾಲಕನ‌ ನಿಯಂತ್ರಣ ತಪ್ಪಿದ ಪೊಲೀಸ್ ಜೀಪ್| ಮಹಿಳಾ ಎಸ್ಐ ಜಖಂ

ಮಂಗಳೂರು: ಪೊಲೀಸ್ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಸ್ಟ್ಯಾಂಡ್ ಗೆ ಡಿಕ್ಕಿ ಹೊಡೆದ ಘಟನೆ ಎಡಪದವಿನ ವಿವೇಕಾನಂದ ಜೂನಿಯರ್ ಕಾಲೇಜು ಬಳಿ ನಡೆದಿದೆ. ನಗರದ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರೇವತಿ ಅವರಿದ್ದ ಪೊಲೀಸ್ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪ್ರಯಾಣಿಕರ ತಂಗುದಾಣಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದ ರೇವತಿ ಅವರಿಗೆ ಸಣ್ಣಪ್ರಮಾಣದ ಗಾಯವಾಗಿದೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಪೊಲೀಸ್ ಜೀಪ್ ಜಖಂ ಗೊಂಡಿದ್ದು. ಬಸ್ ಪ್ರಯಾಣಿಕರ ತಂಗುದಾಣಕ್ಕೆ ಹಾನಿಯಾಗಿದೆ.

ಚಾಲಕನ‌ ನಿಯಂತ್ರಣ ತಪ್ಪಿದ ಪೊಲೀಸ್ ಜೀಪ್| ಮಹಿಳಾ ಎಸ್ಐ ಜಖಂ Read More »

ಸುಳ್ಯ: ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ| ಆರೋಪಿ ವಿರುದ್ಧ ಸ್ವಯಂಪ್ರೇರಿತ ಎಫ್ ಐಆರ್ ದಾಖಲಿಸಿದ ಪೊಲೀಸರು|

ಸುಳ್ಯ: ಗೂನಡ್ಕ ಮಾರುತಿ ಶಾಲೆಯ ಆಡಳಿತ ಮಂಡಳಿ ಸದಸ್ಯರೊಬ್ಬರು 9 ವರ್ಷದ ವಿದ್ಯಾರ್ಥಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಶಾಲಾ ಆಡಳಿತ ಮಂಡಳಿ ಸದಸ್ಯ ಕಿಶೋರ್ ಎಂಬವರು ವಿದ್ಯಾರ್ಥಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಈ ಘಟನೆ ಜಾಲತಾಣಗೆ ಸದ್ದು ಮಾಡಿತ್ತು. ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬಗ್ಗೆ ಶಾಲಾ ಆಡಳಿತ ಮಂಡಳಿ ಪರವಾಗಿ ಡಾ| ಡಿ.ವಿ. ಲೀಲಾಧರ್ ಹಾಗೂ ಸಂಪಾಜೆ ಗ್ರಾಮ ಪಂಚಾಯತ್

ಸುಳ್ಯ: ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ| ಆರೋಪಿ ವಿರುದ್ಧ ಸ್ವಯಂಪ್ರೇರಿತ ಎಫ್ ಐಆರ್ ದಾಖಲಿಸಿದ ಪೊಲೀಸರು| Read More »

ಭೀಕರ ಅಪಘಾತ, ಮೂವರು ಸ್ಥಳದಲ್ಲಿ ಸಾವು

ಮಂಡ್ಯ: ಖಾಸಗಿ ಬಸ್​ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಅಪಘಾತ ಕೆಂಪನಕೊಪ್ಪಲು ಗೇಟ್ ಬಳಿ ಸಂಭವಿಸಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ಮೂಲದ ಸುದೀಪ್ (35), ಶ್ರೀಜಾ (30) ಹಾಗೂ ಸಂಗಮ್ಮ (55) ಮೃತ ದುರ್ದೈವಿಗಳು. ಕಾರಲ್ಲಿದ್ದ ಯುವತಿ ಸ್ಥಿತಿ ಗಂಭೀರವಾಗಿದೆ. ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಖಾಸಗಿ ಬಸ್​ ಚಾಲಕ ಸೇರಿದಂತೆ ನಾಲ್ವರಿಗೆ ಗಾಯವಾಗಿದೆ. ಗಾಯಾಳುಗಳು ನಾಗಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಾಗಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ಅಪಘಾತ, ಮೂವರು ಸ್ಥಳದಲ್ಲಿ ಸಾವು Read More »

ಆತನ ಫಸ್ಟ್ ನೈಟ್ ಆಯ್ತು‌ ಪ್ಲಾಪ್ ನೈಟ್! | ಪ್ರಸ್ತದ ದಿನವೇ ಆಕೆ 5 ತಿಂಗಳ ಗರ್ಭಿಣಿ ಎಂದು ತಿಳಿದ ಗಂಡ ಕಂಗಾಲು| ಅಷ್ಟಕ್ಕೂ ಆ ಮೊದಲ ರಾತ್ರಿ ಆಗಿದ್ದೇನು ಗೊತ್ತಾ? ಮಗಳ ಮದುವೆ ಮುಂಚೆ ತಿಳಿದುಕೊಳ್ಳಿ ಈ ವಿಚಾರ…

ಉತ್ತರ ಪ್ರದೇಶದ: ಮದುವೆಯಾಗಿ ಮೊದಲ ರಾತ್ರಿಯನ್ನು ಭರ್ಜರಿಯಾಗಿ ಕಳೆಯಲು ಸಜ್ಜಾಗಿದ್ದ ಗಂಡನಿಗೆ ಆಕೆ 5 ತಿಂಗಳ ಗರ್ಭಿಣಿ ಎಂಬ ವಿಷಯ ತಿಳಿದು ರಸಮಯವಾಗಿರಬೇಕಾಗಿದ್ದ ಆ ಸಮಯ ಕಹಿಸಮಯವಾಗಿ ಇಡೀ ಕುಟುಂಬದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಈ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದ್ದು, ಬೇರೆ ದಾರಿ ಕಾಣದೆ ಆ ವ್ಯಕ್ತಿ ತನ್ನ ಹೆಂಡತಿಯ ಮನೆಯವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾನೆ. ಮದುವೆಯ ರಾತ್ರಿಯೇ ವಧುವಿಗೆ ಜೋರಾಗಿ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಸ್ಕ್ಯಾನಿಂಗ್ ಮಾಡಿದ

ಆತನ ಫಸ್ಟ್ ನೈಟ್ ಆಯ್ತು‌ ಪ್ಲಾಪ್ ನೈಟ್! | ಪ್ರಸ್ತದ ದಿನವೇ ಆಕೆ 5 ತಿಂಗಳ ಗರ್ಭಿಣಿ ಎಂದು ತಿಳಿದ ಗಂಡ ಕಂಗಾಲು| ಅಷ್ಟಕ್ಕೂ ಆ ಮೊದಲ ರಾತ್ರಿ ಆಗಿದ್ದೇನು ಗೊತ್ತಾ? ಮಗಳ ಮದುವೆ ಮುಂಚೆ ತಿಳಿದುಕೊಳ್ಳಿ ಈ ವಿಚಾರ… Read More »

ಸುಳ್ಯ : ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಸುಳ್ಯ : ಐವರ್ನಾಡು ಗ್ರಾಮದ ಬಾಂಜಿಕೋಡಿಯಲ್ಲಿ ಬಾವಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಜ. 2 ರಂದು ನಡೆದಿದೆ . ಮೃತ ದೇಹವು ಬಾಂಜಿಕೋಡಿ ನಿವಾಸಿ ದಿವಂಗತ ಮಾಧವ ರವರ ಪುತ್ರ ಅರುಣ್ ಕುಮಾರ್ ಬಾಂಜಿಕೋಡಿಯವರದ್ದೆಂದು ಗುರುತಿಸಲಾಗಿದೆ. ಇವರು ಡಿ .31 ರಿಂದ ಮನೆಯಿಂದ ಕಾಣೆಯಾಗಿದ್ದು ಸ್ಥಳೀಯರು ಮತ್ತು ಕುಟುಂಬಸ್ಥರು ಇವರನ್ನು ಹುಡುಕಾಟದಲ್ಲಿ ತೊಡಗಿಕೊಂಡಿದ್ದರು. ಆದರೆ ಇಂದು ಮುಂಜಾನೆ ರವಿಕುಮಾರ್ ರವರ ಮನೆಯ ಮುಂಭಾಗದಲ್ಲಿರುವ ಬಾವಿಯಲ್ಲಿ ಇವರ ಮೃತದೇಹ ಕುಟುಂಬಸ್ಥರಿಗೆ ಕಂಡು ಬಂದಿದೆ. ಅರುಣ್ ಕುಮಾರ್ ರವರು ಉಪ್ಪಿನಂಗಡಿಯಲ್ಲಿ

ಸುಳ್ಯ : ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ Read More »

ಮಾಣಿ : ಯುವಕನಿಗೆ ಮಾರಣಾಂತಿಕ ಹಲ್ಲೆ

ಮಾಣಿ: ಯುವಕನೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವಿಟ್ಲದ ಮಾಣಿಯಲ್ಲಿ ನಡೆದಿದೆ. ಹುಸೇನ್ ಹಲ್ಲೆಗೊಳಗಾದ ಯುವಕ. ಅಂಗಡಿ ಕಟ್ಟಡವನ್ನು ಬಾಡಿಗೆಗೆ ಕೊಟ್ಟ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಈತನ ಮೇಲೆ ಬುಡೋಳಿಯ ಅಶ್ರಫ್ ಅನ್ವರ್, ಖಾದರ್ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಗಾಯಾಳು ಪುತ್ತೂರಿನ ಪ್ರಗತಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈ ಕುರಿತು ವಿಟ್ಲ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮಾಣಿ : ಯುವಕನಿಗೆ ಮಾರಣಾಂತಿಕ ಹಲ್ಲೆ Read More »

ಗುಂಡ್ಯ: ಕಾರಿನ ಮೇಲೆ ಮರಬಿದ್ದು ಚಾಲಕ ದುರ್ಮರಣ | ಕಾರಿನಲ್ಲಿನ ಸಮಸ್ಯೆ ಸಾವಾಗಿ ಪರಿವರ್ತನೆ|

ಗುಂಡ್ಯ: ಕಾರಿನ ಮೇಲೆ ಮರಬಿದ್ದು ಚಾಲಕ ಮೃತಪಟ್ಟ ಘಟನೆ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಅಡ್ಡಹೊಳೆಯಲ್ಲಿ ಜ.2 ರಂದು ಬೆಳಿಗ್ಗೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಶಬ್ದ ಬಂದ ಹಿನ್ನೆಲೆಯಲ್ಲಿ ಚಾಲಕ ಕಾರನ್ನು ನಿಲ್ಲಿಸಿ ಬಾನೆಟ್ ತೆಗೆಯುತ್ತಿದ್ದ ವೇಳೆ ಹೆದ್ದಾರಿ ಬದಿಯಲ್ಲಿದ್ದ ಹಾಲುಮಡ್ಡಿ ಮರವೊಂದು ಕಾರು ಹಾಗೂ ಅವರ ಮೇಲೆಯೇ ಬಿದ್ದಿದೆ ಎಂದು ವರದಿಯಾಗಿದೆ. ಇದು ಸಾವು ಬರುವ ಸಮಯಕ್ಕೆ ಸರಿಯಾಗಿ ಸೃಷ್ಟಿಯಾದ ಸಮಸ್ಯೆ ಎನ್ನುವಂತಾಗಿದೆ. ಘಟನೆಯಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು

ಗುಂಡ್ಯ: ಕಾರಿನ ಮೇಲೆ ಮರಬಿದ್ದು ಚಾಲಕ ದುರ್ಮರಣ | ಕಾರಿನಲ್ಲಿನ ಸಮಸ್ಯೆ ಸಾವಾಗಿ ಪರಿವರ್ತನೆ| Read More »

ಯುವಕನಿಂದ ಬಾಲಕನ ಅತ್ಯಾಚಾರ| ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು|

ವಿಜಯನಗರ: ಯುವಕನೋರ್ವ ಬಾಲಕನ ಮೇಲೆಯೇ ಅತ್ಯಾಚಾರ ಎಸಗಿದ ಪ್ರಕರಣ ವಿಜಯಪುರ ಜಿಲ್ಲೆಯ ಕೂಡ್ಲಿಗಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಏಳು ವರ್ಷದ ಬಾಲಕನ ಮೇಲೆ 18 ವರ್ಷದ ಯುವಕನೋರ್ವ ಅತ್ಯಾಚಾರ ಮಾಡಿದ್ದಾನೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಿಜಯನಗರ ಎಸ್​ಪಿ ಡಾ.ಕೆ.ಅರುಣ್ ಈ ಕುರಿತು ಮಾಹಿತಿಯನ್ನು ನೀಡಿದ್ದು, ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಯುವಕನಿಂದ ಬಾಲಕನ ಅತ್ಯಾಚಾರ| ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು| Read More »

ನ್ಯೂ ಇಯರ್ ಎಫೆಕ್ಟ್| ಸರ್ಕಾರಿ ಶಾಲೆಯಲ್ಲಿ ಕೊಠಡಿಯಲ್ಲಿ ”BP” ಕ್ವಾಟರ್ ಪ್ಯಾಕೆಟ್| ಮಕ್ಕಳಿಗೆ ಕೊಡುವ ಮೊಟ್ಟೆ ಕುಡುಕರ ಹೊಟ್ಟೆಗೆ..!

ರಾಯಚೂರು : ಹೊಸ ವರ್ಷದ ಹಿನ್ನೆಲೆ ಕಿಡಿಕೇಡಿಗಳು ಸರಕಾರಿ ಶಾಲೆಯಲ್ಲಿ ಎಣ್ಣೆ ಪಾರ್ಟಿ ಮಾಡಿದ ಘಟನೆಯೊಂದು ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ರಬ್ಬಣಕಲ್​ ಕ್ಯಾಂಪ್​​ನ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಾಲೆಯ ಬೀಗ ಒಡೆದು ಕೊಠಡಿಯೊಳಗೆ ನುಗ್ಗಿ ಎಣ್ಣೆ ಪಾರ್ಟಿ ಮಾಡಿದ್ದು ಮಾತ್ರವಲ್ಲದೇ ಬಿಸಿಯೂಟದ ಸಾಮಗ್ರಿಗಳನ್ನು ಬಳಕೆ ಮಾಡಿ ಮೊಟ್ಟೆ ಬೇಯಿಸಿಕೊಂಡು ಮಾಂಸಾಹಾರ ತಯಾರಿಸಿ ದುಷ್ಕೃತ್ಯ ಮೆರೆದಿದ್ದಾರೆ. ಪಾರ್ಟಿಗೆ ಬಳಸಲಾದ ವಸ್ತುಗಳು ಎಲ್ಲೆಂದರಲ್ಲಿ ಬಿಸಾಡಲಾಗಿದೆ. ಅಲ್ಲದೇ ಶಾಲೆಗೆ ಸೇರಿದ ದಾಖಲೆಗಳಿಗೂ ಹಾನಿ ಉಂಟು ಮಾಡಿದ್ದಾರೆ. ಬೆಳಗ್ಗೆ ಶಾಲೆಗೆ ಬರುತ್ತಿದ್ದಂತೆಯೇ

ನ್ಯೂ ಇಯರ್ ಎಫೆಕ್ಟ್| ಸರ್ಕಾರಿ ಶಾಲೆಯಲ್ಲಿ ಕೊಠಡಿಯಲ್ಲಿ ”BP” ಕ್ವಾಟರ್ ಪ್ಯಾಕೆಟ್| ಮಕ್ಕಳಿಗೆ ಕೊಡುವ ಮೊಟ್ಟೆ ಕುಡುಕರ ಹೊಟ್ಟೆಗೆ..! Read More »