ದೈವಸನ್ನಿಧಿಗೆ ಕಾಂಡೋಮ್, ಅವಹೇಳನಕಾರಿ ಬರಹ ಹಾಕಿ ಅಪಚಾರ ಮಾಡುತ್ತಿದ್ದ ವ್ಯಕ್ತಿಯ ಬಂಧನ| ಈತನ ವಿಕೃತ ಕೃತ್ಯ ಬಯಲಿಗೆಳೆದ ಮಂಗಳೂರು ಪೊಲೀಸರು|
ಮಂಗಳೂರು: ನಗರದ ಹಲವು ದೇವಸ್ಥಾನ ಹಾಗೂ ದೈವಸ್ಥಾನಗಳಲ್ಲಿ ಕಾಂಡೋಮ್, ಫ್ಯಾನ್ಸಿ ಕರೆನ್ಸಿ ನೋಟು ಹಾಗೂ ಅದರ ಮೇಲೆ ಅವಹೇಳನಕಾರಿ ಬರಹಗಳು ಹಾಗೂ ಬಿಳಿ ಚೀಟಿಯಲ್ಲಿ ಅವಹೇಳನಕಾರಿ ಬರಹಗಳನ್ನು ಹಾಕಿ ವಿಕೃತಿ ಮೆರೆಯುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಹಲವು ಪೋಲಿಸ್ ಠಾಣೆಗಳಲ್ಲಿ ಈ ಬಗ್ಗೆ ಪ್ರಕರಣಗಳು ದಾಖಲಾಗಿತ್ತು. ಇದೀಗ ಈ ಎಲ್ಲಾ ಕೃತ್ಯಗಳು ಒಬ್ಬನೇ ಮಾಡಿರುವುದು ಪೋಲಿಸರ ತನಿಖೆಯಲ್ಲಿ ಬಯಲಾಗಿದ್ದು, ಆರೋಪಿ ದೇವದಾಸ್ ದೇಸಾಯಿ (62 ವರ್ಷ) ಎಂಬಾತ ಬಂಧನಕ್ಕೆ ಒಳಗಾಗಿದ್ದಾನೆ. […]










