ಕ್ರೈಂ

ನೀವು ಅಡವಿಟ್ಟ ಚಿನ್ನದ ಡೀಟೈಲ್ಸ್ ನಿಮ್ಮಲ್ಲಿದೆಯಾ? ಇಲ್ಲವಾದಲ್ಲಿ ಖಂಡಿತಾ ಪಡಕೊಳ್ಳಿ. ಬ್ಯಾಂಕ್ ನವ್ರೂ ಹೀಗೂ ಮಾಡಬಹುದು…

ಕಡಬ : ಆಪತ್ಕಾಲದಲ್ಲಿ ಚಿನ್ನ ಅಡವಿಟ್ಟು ಹಣ ಪಡೆದುಕೊಳ್ಳುವುದು‌ ಸಾಮಾನ್ಯ. ಆದರೆ ಅಡವಿಡುವ ಚಿನ್ನದ ಬಗ್ಗೆ ನಮ್ಮಲ್ಲಿಯೂ‌ ಮಾಹಿತಿ ಇರುತ್ತಾ? ಅಂತ ಕೇಳಿದ್ರೆ ಬಹುಜನರ ಉತ್ತರ ಇಲ್ಲ ಎಂಬುದು. ಆದರೆ ನಾವು ಅಡವಿಟ್ಟ ಚಿನ್ನದ ಯಥಾವತ್ ಮಾಹಿತಿ ನಮ್ಮಲ್ಲಿ ಇರಲೇಬೇಕು. ಇಲ್ಲವಾದಲ್ಲಿ ಬ್ಯಾಂಕ್ ನವರು ಯಾಮಾರಿಸಬಹುದು ಎಂಬುದಕ್ಕೆ ಈ ಘಟನೆ ಸಾಕ್ಷಿ. ದ.ಕ ಜಿಲ್ಲೆಯ ಕಡಬದ ಕೆನರಾ ಬ್ಯಾಂಕ್​ ಶಾಖೆಯಲ್ಲಿ ಗ್ರಾಹಕರೊಬ್ಬರು ಅಡವಿಟ್ಟ ಚಿನ್ನದ ಪೈಕಿ ಕಿವಿಯೋಲೆಯೊಂದು ಬಿಡಿಸುವ ಸಂದರ್ಭದಲ್ಲಿ ನಾಪತ್ತೆಯಾಗಿದ್ದು, ಬಳಿಕ ವಾರಸುದಾರರು ಪೊಲೀಸ್ ಠಾಣೆಗೆ […]

ನೀವು ಅಡವಿಟ್ಟ ಚಿನ್ನದ ಡೀಟೈಲ್ಸ್ ನಿಮ್ಮಲ್ಲಿದೆಯಾ? ಇಲ್ಲವಾದಲ್ಲಿ ಖಂಡಿತಾ ಪಡಕೊಳ್ಳಿ. ಬ್ಯಾಂಕ್ ನವ್ರೂ ಹೀಗೂ ಮಾಡಬಹುದು… Read More »

ಉಪ್ಪಿನಂಗಡಿ: ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಮುಸುಕುಧಾರಿಗಳಿಂದ ಚೂರಿ ಇರಿತ| ಮಾರಣಾಂತಿಕ ಹಲ್ಲೆಯಿಂದ ಗಾಯಾಳು ಗಂಭೀರ|

ಉಪ್ಪಿನಂಗಡಿ : ಇಲ್ಲಿನ ಸಮೀಪದ ಹಳೇ ಗೇಟು ಎಂಬಲ್ಲಿ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತನ ಮೇಲೆ ಮುಸುಕುದಾರಿಗಳ ತಂಡವೊಂದು ದಾಳಿ ನಡೆಸಿ‌ ಚೂರಿ ಇರಿದ ಘಟನೆ ಇಂದು ಸಂಜೆ ನಡೆದಿರುವ ಬಗ್ಗೆ ವರದಿಯಾಗಿದೆ. ಉಪ್ಪಿನಂಗಡಿ ಕಜೆಕಾರು ನಿವಾಸಿ ಅಶೋಕ್‌ ಶೆಟ್ಟಿ ಹಲ್ಲೆಗೊಳಗಾದ ವ್ಯಕ್ತಿ. ಉಪ್ಪಿನಂಗಡಿಯ ಹಳೇ ಗೇಟು ಬಳಿ ಮೀನಿನ ವ್ಯಾಪಾರ ನಡೆಸುವ ಇವರು ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಎಂದು ಹೇಳಲಾಗುತ್ತಿದ್ದು,ಗಂಭೀರ ಗಾಯಗೊಂಡಿರುವ ಅವರಿಗೆ ಪುತ್ತೂರಿನ ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

ಉಪ್ಪಿನಂಗಡಿ: ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಮುಸುಕುಧಾರಿಗಳಿಂದ ಚೂರಿ ಇರಿತ| ಮಾರಣಾಂತಿಕ ಹಲ್ಲೆಯಿಂದ ಗಾಯಾಳು ಗಂಭೀರ| Read More »

ಕಾಸರಗೋಡು:ಕುಡಿತದ ಮತ್ತಲ್ಲಿ ಅಯ್ಯಪ್ಪ ವ್ರತದಾರಿಯಿಂದ ಪತ್ನಿಯ ಬರ್ಬರ ಹತ್ಯೆ

ಕಾಸರಗೋಡು: ಪತ್ನಿಯನ್ನು ಪತಿಯು ಕಡಿದು ಕೊಲೆಗೈದ ಘಟನೆ ಬೇಡಡ್ಕ ಠಾಣಾ ವ್ಯಾಪ್ತಿಯ ಪೆರ್ಲಡ್ಕದಲ್ಲಿ ನಡೆದಿದ್ದು, ಸೋಮವಾರ ಬೆಳಗ್ಗೆ ಕೃತ್ಯ ಬೆಳಕಿಗೆ ಬಂದಿದೆ. ಹತ್ಯೆಯಾದವರನ್ನು ಪೆರ್ಲಡ್ಕ ಪೇಟೆಯ ಕ್ವಾಟರ್ಸ್‌ನಲ್ಲಿ ವಾಸವಾಗಿರುವ ಉಷಾ (35) ಎಂದು ಗುರುತಿಸಲಾಗಿದೆ. ಆಕೆಯ ಪತಿ ಅಶೋಕ್ ಈ ಕೃತ್ಯ ನಡೆಸಿದ್ದಾರೆ. ಡಿ.5ರ ಭಾನುವಾರ ರಾತ್ರಿ ಕೃತ್ಯ ನಡೆದಿದೆ ಎನ್ನಲಾಗಿದೆ. ಕೃತ್ಯಕ್ಕೆ ಸಂಬಂಧಪಟ್ಟಂತೆ ಪತಿ ಅಶೋಕ್‌‌ ಅನ್ನು ಬೇಕಲ ಠಾಣಾ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಕೃತ್ಯದ ಬಳಿಕ ಕ್ವಾಟರ್ಸ್‌ಗೆ ಬೀಗ ಹಾಕಿ ಅಲ್ಲಿಂದ

ಕಾಸರಗೋಡು:ಕುಡಿತದ ಮತ್ತಲ್ಲಿ ಅಯ್ಯಪ್ಪ ವ್ರತದಾರಿಯಿಂದ ಪತ್ನಿಯ ಬರ್ಬರ ಹತ್ಯೆ Read More »

ಫ್ಯಾನ್ಸಿ ಸೆಕ್ಸ್ ಗೆ ಯುವಕ ಬಲಿ| ಮಹಿಳೆಯ ವಿಚಾರಣೆ|

ನಾಗಪುರ: ಮಾಡಬಾರದ್ದು ಮಾಡಲು ಹೋದರೆ ಆಗಬಾರದ್ದು ಆಗುತ್ತದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ. ಕೈ-ಕಾಲು, ಕುತ್ತಿಗೆಗೆ ಹಗ್ಗ ಕಟ್ಟಿಕೊಂಡು ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಾಗರದ ನಗರದ ಖಪರ್ಖೇಡಾ ಪ್ರದೇಶದ ಲಾಡ್ಜ್‌ನಲ್ಲಿ ಪ್ರಕರಣ ನಡೆದಿದೆ. ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ 30 ವರ್ಷದ ಯುವಕ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಆರಂಭಿಕ ಮಾಹಿತಿ ನೀಡಿದ್ದಾರೆ. ಮದುವೆಯಾಗಿ ಮಗು ಹೊಂದಿದ್ದ ಮಹಿಳೆಯೊಂದಿಗೆ ಯುವಕ 5 ವರ್ಷದಿಂದ ಸಂಬಂಧ ಇಟ್ಟುಕೊಂಡಿದ್ದ. ಇಬ್ಬರೂ ಒಟ್ಟಿಗೆ ಸಮಯ ಕಳೆಯಲು

ಫ್ಯಾನ್ಸಿ ಸೆಕ್ಸ್ ಗೆ ಯುವಕ ಬಲಿ| ಮಹಿಳೆಯ ವಿಚಾರಣೆ| Read More »

ಉಪ್ಪಿನಂಗಡಿ: ಮುಸ್ಲಿಂ ಯುವಕರ ಮೇಲೆ ತಲವಾರು ದಾಳಿ| 5 ಮಂದಿ ಆಸ್ಪತ್ರೆಗೆ| ಸಂಘ ಪರಿವಾರದ ಮೇಲೆ ಆರೋಪ|

ಮಂಗಳೂರು: ಪುತ್ತೂರು ಸಮೀಪದ ಉಪ್ಪಿನಂಗಡಿ ಬಳಿಯ ಇಳಂತಿಲ ಎಂಬಲ್ಲಿ ಐವರು ಮುಸ್ಲಿಂ ಯುವಕರ ಮೇಲೆ ತಲವಾರು ದಾಳಿ ನಡೆದಿರುವ ಘಟನೆ ವರದಿಯಾಗಿದೆ. ತಲವಾರು ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಐದು ಮಂದಿ ಯುವಕರನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ತಿಳಿದು ಬಂದಿದೆ. ಗಾಯಗೊಂಡ ಯುವಕರನ್ನು ಝಕರಿಯಾ ಇಳಂತಿಲ, ಸಿದ್ದೀಕ್, ಅಯ್ಯೂಬ್, ಫಯಾಝ್ ಮತ್ತು ಹಫೀಜ್ ಎಂದು ಗುರುತಿಸಲಾಗಿದೆ. ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದ ಎನ್ನಲಾದ ಜಯರಾಮ್ ಮತ್ತು ಆತನ ಸಹಚರರ ತಂಡ ಈ ತಲವಾರು ದಾಳಿ ನಡೆಸಿದ್ದಾಗಿ‌ ಹೇಳಲಾಗಿದೆ. ಈತನ ವಿರುದ್ದ

ಉಪ್ಪಿನಂಗಡಿ: ಮುಸ್ಲಿಂ ಯುವಕರ ಮೇಲೆ ತಲವಾರು ದಾಳಿ| 5 ಮಂದಿ ಆಸ್ಪತ್ರೆಗೆ| ಸಂಘ ಪರಿವಾರದ ಮೇಲೆ ಆರೋಪ| Read More »

ಒಮಿಕ್ರಾನ್ ಗೆ ಹೆದರಿ ಪತ್ನಿ ಮಕ್ಕಳನ್ನು ಕೊಲೆ ಮಾಡಿದನಾ ಪ್ರೊಫೆಸರ್? ಅನುಮಾನ ಮೂಡಿಸಿದ ಆತನ ನಡೆ…

ಕಾನ್ಪುರ್, ಡಿ.4 : ಕೋವಿಡ್ ರೂಪಾಂತರಿ ವರ್ಷ ವೈರಸ್ ಒಮಿಕ್ರಾನ್ ಸೋಂಕಿಗೆ ಹೆದರಿ ಮೆಡಿಕಲ್ ಕಾಲೇಜಿನ ವಿಧಿವಿಜ್ಞಾನ ವಿಭಾಗದ ಹಿರಿಯ ಪ್ರೊಫೆಸರ್ ಒಬ್ಬರು ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಹಾಕಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಒಮಿಕ್ರಾನ್ ಸೋಂಕು ಯಾರನ್ನೂ ಬಿಡುವುದಿಲ್ಲ. ಎಲ್ಲರನ್ನೂ ಕೊಲ್ಲುತ್ತದೆ. ನನ್ನ ಅಜಾಗ್ರತೆಯಿಂದಾಗಿ ಸಮಸ್ಯೆ ಆಗಿದ್ದು ಇದರಿಂದ ಪಾರಾಗುವುದು ಸಾಧ್ಯವಿಲ್ಲ ಎಂದು ಡೆತ್ ನೋಟ್ ಬರೆದಿಟ್ಟಿರುವುದು ಪತ್ತೆಯಾಗಿದೆ. ಪತ್ನಿ, ಮಕ್ಕಳನ್ನು ಕೊಂದು ಬಳಿಕ ತನ್ನ ಸಹೋದರನಿಗೆ ವಾಟ್ಸಪ್ ಮೆಸೇಜ್

ಒಮಿಕ್ರಾನ್ ಗೆ ಹೆದರಿ ಪತ್ನಿ ಮಕ್ಕಳನ್ನು ಕೊಲೆ ಮಾಡಿದನಾ ಪ್ರೊಫೆಸರ್? ಅನುಮಾನ ಮೂಡಿಸಿದ ಆತನ ನಡೆ… Read More »

ಕನ್ನಡದ ಹಿರಿಯ ನಟ ಶಿವರಾಂ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸ್ಯಾಂಡಲ್‍ವುಡ್‍ನ ‘ಶಿವರಾಮಣ್ಣ’ ಎಂದೇ ಖ್ಯಾತರಾಗಿದ್ದ ಶಿವರಾಂ ಇಂದು ವಿಧಿವಶಯಾಗಿದ್ದರೆ. ಕೆಲವು ದಿನಗಳಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡುಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದರು. ನಂತರ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬ್ರೇನ್ ಡ್ಯಾಮೇಜ್ ನಿಂದ ಕೋಮಾದಲ್ಲಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಶಿವರಾಂ ಅವರಿಗೆ 84

ಕನ್ನಡದ ಹಿರಿಯ ನಟ ಶಿವರಾಂ ವಿಧಿವಶ Read More »

ಪ್ರಪಂಚ ಅರಿಯದ ಹಸುಗೂಸನ್ನು ಪೊದೆಗೆ ಬಿಸಾಡಿದ ಹೆತ್ತವರು

ಕುಂದಾಪುರ: ತಾಲೂಕಿನ ಮುಚ್ಚಟ್ಟು ಸೇತುವೆ ಬಳಿ ಪೊದೆಯ ನಡುವೆ ವಾರದ ಹಸುಳೆಯನ್ನು ಬಿಟ್ಟು ಎಸೆದು ಪರಾರಿಯಾಗಿರುವ ಘಟನೆ ಪತ್ತೆಯಾಗಿದೆ. ಮುಂಜಾನೆ ಡೇರಿಗೆ ಹಾಲು ಹಾಕಲು ತೆರಳುತ್ತಿದ್ದ ಮಹಿಳೆಯೊಬ್ಬರಿಗೆ ಈ ದೃಶ್ಯ ಕಂಡುಬಂದಿದೆ. ಮುಂಜಾನೆ 4.30ರ ಸುಮಾರಿಗೆ ರಸ್ತೆ ಪಕ್ಕದ ಪೊದೆಯಲ್ಲಿ ಶಿಶುವಿನ ಅಳಲು ಮಹಿಳೆ ಗೀತಾ ಅವರಿಗೆ ಕೇಳಿದೆ. ಹೆಣ್ಣು ಶಿಶುವನ್ನು ರಕ್ಷಿಸಿ ಠಾಣೆಗೆ ಕರೆತಂದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗುವಿನ ಪೋಷಕರು ಉದ್ದೇಶಪೂರ್ವಕವಾಗಿ ಮಗುವನ್ನು ಅಪಾಯಕಾರಿ ಪರಿಸರದಲ್ಲಿ ಎಸೆದಿದ್ದಾರೆ ಎಂದು ಅಮಾಸೆಬೈಲ್ ಪೊಲೀಸ್ ಠಾಣೆಯ ಸಬ್

ಪ್ರಪಂಚ ಅರಿಯದ ಹಸುಗೂಸನ್ನು ಪೊದೆಗೆ ಬಿಸಾಡಿದ ಹೆತ್ತವರು Read More »

‘ಹೀಟ್’ನಲ್ಲಿದ್ದ ಶಿಕ್ಷಕನಿಂದ ‘ಕಿಸ್’ ಕೀಟಲೆ| ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಹಾಕಿದ ಪೋಲಿ ಮೇಷ್ಟ್ರು!

ಹಾವೇರಿ: ಆನ್​ಲೈನ್​ ಕ್ಲಾಸ್ ನೆಪದಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಗೆ ವಾಟ್ಸ್ ಆಪ್ ನಲ್ಲಿ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ರಾಣೆಬೆನ್ನೂರು ತಾಲೂಕು ದೇವರಗುಡ್ಡ ಸರ್ಕಾರಿ ಶಾಲೆಯ ಶಿಕ್ಷಕ ಮಲ್ಲಪ್ಪ ತಳವಾರ ಎಂಬಾತ ಪ್ರಕರಣದ ಆರೋಪಿಯಾಗಿದ್ದಾನೆ. ಈತ ಆನ್ ಲೈನ್ ಕ್ಲಾಸ್ ನೆಪದಲ್ಲಿ ವಿದ್ಯಾರ್ಥಿನಿಯ ಮೊಬೈಲ್ ನಂಬರ್ ಪಡೆದು ವಾಟ್ಸ್ ಆಪ್ ಮೂಲಕ ಚಾಟ್ ಮಾಡುತ್ತಿದ್ದ. ಕಿಸ್ ಕೊಡು ಅಂತ ಮೆಸೇಜ್ ಮಾಡಿ ಕಿರುಕುಳ

‘ಹೀಟ್’ನಲ್ಲಿದ್ದ ಶಿಕ್ಷಕನಿಂದ ‘ಕಿಸ್’ ಕೀಟಲೆ| ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಹಾಕಿದ ಪೋಲಿ ಮೇಷ್ಟ್ರು! Read More »

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆ ಸ್ಕೆಚ್..! ಇಲ್ಲಿದೆ ವಿಡಿಯೋ…

ಬೆಂಗಳೂರು: ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಅವರ ಹತ್ಯೆಗೆ ಸ್ಕೆಚ್ ಹಾಕಿರೋ ವೀಡಿಯೋ ಈಗ ಬಹಿರಂಗವಾಗಿದೆ. ಕೋಟಿ ಕೋಟಿ ಡೀಲ್ ಗೆ ಅವರ ಹತ್ಯೆಗೆ ಸಂಚು ರೂಪಿಸಿದ್ದಂತ ವೀಡಿಯೋ ಈಗ ವೈರಲ್ ಆಗಿದೆ. ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಗೋಪಾಲಕೃಷ್ಣ ಅವರ ನಿವಾಸದಲ್ಲಿ ನಡೆದಿರುವಂತ ಮಾತುಕತೆ ವೀಡಿಯೋ ಇದಾಗಿದ್ದು, ಈ ವೀಡಿಯೋದಲ್ಲಿ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಗೋಪಾಲಕೃಷ್ಣ ಅವರು ದೇವರಾಜ್ ಎಂಬುವರೊಂದಿಗೆ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಅವರ ಹತ್ಯೆ ಕುರಿತಂತೆ ಮಾತನಾಡುತ್ತಿರೋ

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆ ಸ್ಕೆಚ್..! ಇಲ್ಲಿದೆ ವಿಡಿಯೋ… Read More »