ಸುಳ್ಯ: ಪಾಣತ್ತೂರಿನಲ್ಲಿ ಟಿಂಬರ್ ಲಾರಿ ಪಲ್ಟಿ, 4 ಮಂದಿ ದುರ್ಮರಣ
ಸುಳ್ಯ: ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆಯ ಪರಿಯಾರಂ ಎಂಬಲ್ಲಿ ನಡೆದ ಭೀಕರ ಲಾರಿ ಅಪಘಾತದಲ್ಲಿ ನಾಲ್ಕು ಮಂದಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮರಗಳನ್ನು ತುಂಬಿ ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಟ್ಲಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ದುರ್ಘಟನೆಯಲ್ಲಿ ಲಾರಿಯಲ್ಲಿದ್ದ 4 ಮಂದಿ ಮೃತಪಟ್ಟಿದ್ದು ಮೃತಪಟ್ಟವರನ್ನು ಪಾಣತ್ತೂರು ಸಮೀಪದ ಕುಂಡುಪಳ್ಳಿಯವರು ಎಂದು ಗುರುತಿಸಲಾಗಿದೆ. ಲಾರಿಯಲ್ಲಿದ್ದವರ ಪೈಕಿ 5 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮರ ತುಂಬಿದ ಲಾರಿ ಕಲ್ಲಪಳ್ಳಿಯಿಂದ ಪಾಣತ್ತೂರು ಕಡೆಗೆ ತೆರಳುತ್ತಿತ್ತು. […]
ಸುಳ್ಯ: ಪಾಣತ್ತೂರಿನಲ್ಲಿ ಟಿಂಬರ್ ಲಾರಿ ಪಲ್ಟಿ, 4 ಮಂದಿ ದುರ್ಮರಣ Read More »










